Homeನಾನು ಗೌರಿಓದುಗರ ಪ್ರತಿಕ್ರಿಯೆ-ಸ್ಪಷ್ಟೀಕರಣ; ಸೂಕ್ತ ಉಲ್ಲೇಖಗಳನ್ನು ಕೊಟ್ಟಿದ್ದರೆ ಸ್ಪಷ್ಟವಾಗುತ್ತಿತ್ತು

ಓದುಗರ ಪ್ರತಿಕ್ರಿಯೆ-ಸ್ಪಷ್ಟೀಕರಣ; ಸೂಕ್ತ ಉಲ್ಲೇಖಗಳನ್ನು ಕೊಟ್ಟಿದ್ದರೆ ಸ್ಪಷ್ಟವಾಗುತ್ತಿತ್ತು

- Advertisement -
- Advertisement -

ಸೂಕ್ತ ಉಲ್ಲೇಖಗಳನ್ನು ಕೊಟ್ಟಿದ್ದರೆ ಸ್ಪಷ್ಟವಾಗುತ್ತಿತ್ತು..: ಪ್ರತಿಭಾ ನಂದಕುಮಾರ್

ಕಳೆದ ಸಂಚಿಕೆಯಲ್ಲಿ ಪ್ರಕಟವಾದ ಮಾತು ಮರೆತ ಭಾರತದ ಅಂಕಣದ ’ಕರ್ನಾಟಕದಲ್ಲಿ ಅಸ್ಪೃಶ್ಯತೆ’ (ಇಲ್ಲಿ ಕ್ಲಿಕ್ ಮಾಡಿ) ಬರಹಕ್ಕೆ ಸಂಬಂಧಿಸಿದಂತೆ ಕವಿ-ಬರಹಗಾರ್ತಿ ಪ್ರತಿಭಾ ನಂದಕುಮಾರ್ ಹೀಗೆ ಪ್ರತಿಕ್ರಿಯಿಸಿದ್ದರು: “ಹಲವು ಹೇಳಿಕೆಗಳಿಗೆ ಸೂಕ್ತ ಉಲ್ಲೇಖಗಳನ್ನು (ರೆಫೆರೆನ್ಸ್) ಕೊಟ್ಟಿದ್ದರೆ ಸ್ಪಷ್ಟವಾಗುತ್ತಿತ್ತು. ಉದಾಹರಣೆಗೆ ’ಮಾದಿಗರ ಗಲ್ಲೇಬಾನಿ (ಚಪ್ಪಲಿ ತೊಳೆದ ನೀರು) ನೀರಿಲ್ಲದೆ ಬ್ರಾಹ್ಮಣರ ಹೆಣ್ಣು ಮಕ್ಕಳ ಮದುವೆಯಾಗುತ್ತಿರಲಿಲ್ಲ’ ಇದು ಎಲ್ಲಿ ಹೇಳಿದೆ?

ಪ್ರತಿಭಾ ನಂದಕುಮಾರ್

ಮಹಾಭಾರತದಲ್ಲಿ ಕರ್ಣನು ಶಲ್ಯನನ್ನು ಹೀಯಾಳಿಸುವಾಗ ಮಾದ್ರಕರ ಹೆಂಗಸರ ಬಗ್ಗೆ ಕೀಳಾಗಿ ವರ್ಣಿಸುತ್ತಾನೆ. ಆದರೆ ಅಲ್ಲಿ ಅಸ್ಪೃಶ್ಯತೆಯ ಪ್ರಸ್ತಾಪವಿಲ್ಲ. ಮಾದ್ರಕ-ಮಾದ್ರ ರಾಜ್ಯ-ಮಾದ್ರಿ-ಅವಳ ಅಣ್ಣ ಶಲ್ಯ. ಭೀಷ್ಮ ಮಾದ್ರ ರಾಜ್ಯಕ್ಕೆ ಹೋಗಿ ಮಾದ್ರಿಯನ್ನು ಪಾಂಡುವಿಗೆ ವಧುವಾಗಲು ಕೋರಿದಾಗ ಶಲ್ಯ ’ಪಾಣಿಗ್ರಹಣ ತಮ್ಮಲ್ಲಿಲ್ಲ ’ತೆರ’ ಕೊಟ್ಟು ಕರೆದುಕೊಂಡು ಹೋಗು’ ಎಂದಾಗ ಭೀಷ್ಮ ಹಣ, ಚಿನ್ನ, ಆನೆ, ಕುದುರೆ ಇತ್ಯಾದಿ ಕೊಟ್ಟು ಅವಳನ್ನು ಕರೆದುಕೊಂಡು ಹೋಗುತ್ತಾನೆ. ಮಾದ್ರಕರು ಮಾದರುಗಳಾದರೆ (ಕರ್ಣನ ಹೀಯಾಳಿಕೆ ಅರ್ಥೈಸಿ) ಭೀಷ್ಮ ಪಾಂಡುವಿಗೆ ಮಾದ್ರಿಯನ್ನು ಮದುವೆಯಾಗಿಸಿದ ಅಂದರೆ ಅಲ್ಲಿ ವರ್ಣ ಸಂಕರ ಇರಲಿಲ್ಲ ಎಂದರ್ಥವೇ? ಉತ್ತರದಲ್ಲಿ ಮಹಾಭಾರತದ ಕಾಲಕ್ಕೆ (ಆಗಿನ ಆರ್ಯರ ಪದ್ಧತಿಯಂತೆ) ಅಸ್ಪೃಶ್ಯತೆ ಇರಲಿಲ್ಲ ಅಂದರೆ ಅಲ್ಲಿಂದ ದಕ್ಷಿಣಕ್ಕೆ ಬಂದ ’ಬ್ರಾಹ್ಮಣ ಪುರೋಹಿತರು ತಮ್ಮೊಂದಿಗೆ ಚಾತುರ್ವರ್ಣ ಧರ್ಮವನ್ನು ಹೊತ್ತುಕೊಂಡು ಹೋದರು ಹಾಗೂ ವಿಸ್ತರಿಸಿದರು. ಈ ಭಾಗವಾಗಿಯೇ ಕರ್ನಾಟಕಕ್ಕೂ ವರ್ಣವ್ಯವಸ್ಥೆ ಕಾಲಿಟ್ಟಿತು. ಅದರೊಂದಿಗೆ ಜಾತಿಪದ್ಧತಿ, ಅಸ್ಪೃಶ್ಯತೆಯೂ ಕಾಲಿಟ್ಟಿತು’ ಎನ್ನುವುದನ್ನು ಅರ್ಥೈಸುವಲ್ಲಿ ಸ್ವಲ್ಪ ಗೊಂದಲ ಇದೆ.

ಚಾತುರ್ವರ್ಣ ಪರಿಪಾಲಿಸದ ಶಲ್ಯ ವಂಶಸ್ಥರನ್ನು ಅಸ್ಪೃಶ್ಯರು ಎನ್ನಲಾಗುವುದಿಲ್ಲ: ಸಾಕ್ಯ ಸಮಗಾರ

ಪ್ರಶ್ನೆ 1. ’ಮಾದಿಗರ ಗಲ್ಲೇಬಾನಿ ನೀರಿಲ್ಲದೆ ಬ್ರಾಹ್ಮಣರ ಮಕ್ಕಳ ಮದುವೆಯಾಗುತ್ತಿರಲಿಲ್ಲ’ ಇದು ಎಲ್ಲಿ ಹೇಳಿದೆ?
ಸ್ಪಷ್ಟೀಕರಣ: ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪ್ರಖ್ಯಾತ ಸಂಸ್ಕೃತಿ ಚಿಂತಕ ಹಾಗೂ ಕವಿ ಕೆ. ಬಿ. ಸಿದ್ದಯ್ಯನವರು ತಮ್ಮ ಗಲ್ಲೇಬಾನಿ ಖಂಡಕಾವ್ಯಕ್ಕೆ ಮುನ್ನುಡಿ ಬರೆಯುತ್ತಾ ಹೀಗೆ ಉಲ್ಲೇಖಿಸುತ್ತಾರೆ. ’ಈ (ಗಲ್ಲೇಬಾನಿ) ನೀರನ್ನು ಶಾಸ್ತ್ರದ ನೀರು ಎಂದು ಕರೆಯುತ್ತಾರೆ. ವಿಪ್ರ ಬಂಧುಗಳು ಅವರಲ್ಲಿ ನಡೆಯುವ ವಿವಾಹ ಸಂದರ್ಭದಲ್ಲಿ ನವವಧುವರರ ನೆತ್ತಿಯ ಮೇಲೆ ’ಶಾಸ್ತ್ರದ ನೀರ’ನ್ನು ಚುಮುಕಿಸಿ, ಅರುಂಧತಿ ನಕ್ಷತ್ರ ದರ್ಶನ ಮಾಡಿಸಿದರೆ ಶುಭವಾಗುತ್ತದೆ ಎಂದು ಕಲ್ಲುನೀರು ಕರಗೋ ಹೊತ್ತಿನಲ್ಲಿ ಕಾಡಿಬೇಡಿ ’ಗಲ್ಲೇಬಾನಿ’ ನೀರನ್ನು ಚಮ್ಮಾರನ ಅನುಗ್ರಹದಿಂದ ಪಡೆದುಕೊಳ್ಳುತ್ತಾರೆಂಬುದು ಜನಪದರ ನಾಲಿಗೆ ಮೇಲಿನ ಸೋಜಿಗದ ಸಂಗತಿಯಾಗಿದೆ’ ಎನ್ನುತ್ತಾರೆ.

ಡಾ. ಎಂ. ಚಿದಾನಂದ ಮೂರ್ತಿಯವರು ಬರೆದಿರುವ ’ಮಧ್ಯಕಾಲೀನ ಕರ್ನಾಟಕ ಮತ್ತು ಅಸ್ಪೃಶ್ಯತೆ’ ಕೃತಿಯಲ್ಲಿ ’ಚಪ್ಪಲಿ ಹೊಲಿಯಲು ಅದ್ದುವ ನೀರನ್ನು ಪವಿತ್ರವೆಂದು ಭಾವಿಸುವ ಹೊಲೆಯರು ಅದು ಬ್ರಾಹ್ಮಣರ ಕೈಗೆ ಹೋಗದಂತೆ ಎಚ್ಚರ ವಹಿಸುತ್ತಾರೆ’ ಎಂದು ಬರೆಯುತ್ತಾ ಮುಂದುವರೆದು ’ಕೆಲವೆಡೆ ಬ್ರಾಹ್ಮಣರು ತಮ್ಮ ಮದುವೆಯ ದಿನ ರಾತ್ರಿ ಗುಟ್ಟಾಗಿ ಹೊಲೆಗೇರಿಗೆ ಬಂದು ’ಸುರೆಬಾನಿ’ ನೀರನ್ನು (ಚಪ್ಪಲಿ ಅದ್ದಿದ ನೀರನ್ನು) ತೆಗೆದುಕೊಂಡು ಹೋಗುತ್ತಾರೆ ಎಂಬ ವದಂತಿಗಳಿವೆ’ ಎನ್ನುತ್ತಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕೆಲವು ಬ್ರಾಹ್ಮಣರನ್ನು ’ಮಧ್ಯಾಹ್ನದ ಮಾದಿಗ’ರೆಂದು ಹಾಗೂ ಮೈಸೂರು ಜಿಲ್ಲೆಯ ಕೆಲವು ಬ್ರಾಹ್ಮಣರನ್ನು ’ಮಧ್ಯಾಹ್ನದ ಹೊಲೆಯ’ರೆಂದು ಕರೆಯುವ ವಾಡಿಕೆ ಇದೆ. ಇದಕ್ಕೂ ಮೂಲಕಾರಣ ಗಲ್ಲೇಬಾನಿಯ ನೀರನ್ನು ಬ್ರಾಹ್ಮಣರು ಕೊಂಡೊಯ್ಯುವುದಾಗಿದೆ.

ಕೆ. ಬಿ. ಸಿದ್ದಯ್ಯ

ಈ ಜನಪದ ಸ್ಮೃತಿಯ ಮೂಲ ಹಿಡಿದು ಹೊರಟಾಗ ಅದು ವಚನ ಚಳವಳಿಯ ಹರಳಯ್ಯ ದಂಪತಿ ಮತ್ತು ಬ್ರಾಹ್ಮಣ ಮಧುವರಸ ಪ್ರಸಂಗಕ್ಕೆ ಹೋಗಿ ನಿಲ್ಲುತ್ತದೆ. ಬಸವಣ್ಣನವರು ಹರಳಯ್ಯರಿಗೆ ಶರಣುಶರಣಾರ್ಥಿ ಎಂದುದನ್ನು ಋಣವೆಂದು ತಿಳಿದ ಹರಳಯ್ಯನ ತನ್ನ ಮಡದಿಗೆ ಹೋಗಿ ಈ ವಿಚಾರ ತಿಳಿಸಿದಾಗ ಇಬ್ಬರ ತೊಡೆ ಚರ್ಮದಿಂದ ಬಸವಣ್ಣನಿಗೆ ಚಪ್ಪಲಿ ಮಾಡಿಕೊಡಬೇಕೆಂಬ ತೀರ್ಮಾನಕ್ಕೆ ಬರುತ್ತಾರೆ ಹಾಗೂ ಹಾಗೆಯೇ ಮಾಡುತ್ತಾರೆ. ಹರಳಯ್ಯ ದಂಪತಿಗಳು ಅದನ್ನು ಹೊತ್ತು ಬಸವಣ್ಣನ ಬಳಿಗೆ ತೆರಳುವಾಗ ದಾರಿಯಲ್ಲಿ ಕಂಡ ಮಧುವರಸ ಆ ಚಪ್ಪಲಿಗಳನ್ನು ಬಲವಂತದಿಂದ ಕಸಿದು ಮೆಟ್ಟಿಕೊಳ್ಳುತ್ತಾನೆ. ತಕ್ಷಣವೇ ಆ ಚಪ್ಪಲಿಗಳು ಬೆಂಕಿಯಂತೆ ಉರಿಯಲಾರಂಭಿಸುತ್ತವೆ. ಉರಿಚಮ್ಮಾಳಿಗೆ ಆಗುತ್ತವೆ. ಚಪ್ಪಲಿಗಳನ್ನು ತೆಗೆದರೂ ಆ ಮೈ ಉರಿ ಕಾಣೆಯಾಗದೆ ತೀವ್ರವಾಗುತ್ತದೆ. ಅದೆಷ್ಟೇ ಔಷಧೋಪಚಾರ, ಪೂಜೆಗಳನ್ನು ಮಾಡಿದರೂ ಉರಿ ಕಡಿಮೆಯೇ ಆಗುವುದಿಲ್ಲ. ಕಡೆಗೆ ಹರಳಯ್ಯನ ಮನೆಯ ಮಗಳು ಗಲ್ಲೇಬಾನಿಯ ನೀರನ್ನು ಮಧುವರಸ ಮೈಮೇಲೆ ಸುರಿದಾಗ ಉರಿ ಕಡಿಮೆಯಾಗುತ್ತದೆ. ಅಂದಿನಿಂದ ಬ್ರಾಹ್ಮಣರಿಗೆ ಗಲ್ಲೇಬಾನಿಯ ನೀರು ಪವಿತ್ರ ಎಂಬ ಜಾನಪದ ಕತೆ ಜನಮಾನಸದಲ್ಲಿ ಬೆರೆತುಹೋಗಿದೆ. ಇದಕ್ಕೆ ಮಂಟೆಸ್ವಾಮಿ ಹಾಗೂ ಮಲೆ ಮಹದೇಶ್ವರ ಕಾವ್ಯಗಳೇ ಸಾಕ್ಷಿ.

ಇನ್ನು ಪುರಾಣಗಳನ್ನು ಶೋಧಿಸಿದಾಗ ವಸಿಷ್ಠ ತಾನು ಮದುವೆಯಾಗುವ ಹುಡುಗಿಯನ್ನು ಹುಡುಕಿಕೊಂಡು ಬರುವುದು ಮಾದಿಗರ ಕೇರಿಗೆಯೇ. ಅವನು ಮಾದಿಗ ಅರುಂಧತಿಯ ಮನೆಗೆ ಬರುತ್ತಾನೆ. ಅವಳ ಮೂಲ ಹೆಸರು ಆರಂಜ್ಯೋತಿ. ಅವಳು ಗಲ್ಲೇಬಾನಿಯ ನೀರಿನಿಂದ ಆತನನ್ನು ಪರಿಶುದ್ಧಗೊಳಿಸುತ್ತಾಳೆ ಹಾಗೂ ವಿವಾಹವಾಗುತ್ತಾಳೆ. ಇದರ ಬಗ್ಗೆ ಸಂಸ್ಕೃತಿ ಚಿಂತಕ ವಡ್ಡಗೆರೆ ನಾಗರಾಜರವರು ಸಂಪೂರ್ಣ ಅಧ್ಯಯನ ಮಾಡಿದ್ದಾರೆ.

ಕುತೂಹಲಕಾರಿ ಎಂದರೆ 1891ರ ಬ್ರಿಟಿಷ್ ಭಾರತದ ಮೊದಲ ಜನಗಣತಿಯಲ್ಲಿ ಮೈಸೂರಿನ ಮಾದಿಗರು ತಮ್ಮನ್ನು ’ಮಾತಂಗ ಬ್ರಾಹ್ಮಣರು’ ಎಂದು ಘೋಷಿಸಿಕೊಂಡಿರುವುದು ಸಹ ಇಲ್ಲಿ ಉಲ್ಲೇಖಾರ್ಹ (ದಕ್ಷಿಣ ಭಾರತದ ಜಾತಿ ಬುಡಕಟ್ಟುಗಳು – ಸಂಪುಟ 4 – ಎಡ್ಗರ್ ಥರ್ಸ್ಟನ್/ಕೆ. ರಂಗಾಚಾರಿ)

ಡಾ. ಎಂ. ಚಿದಾನಂದ ಮೂರ್ತಿ

ಒಟ್ಟಾರೆ ಚರ್ಮವನ್ನು ಹದಮಾಡಿ ಚಪ್ಪಲಿಯನ್ನು ಅದ್ದುವ ನೀರು ಪವಿತ್ರ. ಇದರಿಂದ ಬ್ರಾಹ್ಮಣರೂ ಪವಿತ್ರವಾಗುತ್ತಾರೆ ಎಂಬುದು ಐತಿಹ್ಯ. ಯಾವ ಕಾಯಕವೂ ಉಚ್ಚವಲ್ಲ, ನೀಚವಲ್ಲ ಎಂಬ ಸತ್ಯವನ್ನು ಸಾರುತ್ತದೆ ಈ ಆಚರಣೆ.

ಪ್ರಶ್ನೆ 2. ಮಹಾಭಾರತದ ಶಲ್ಯ ಮಾದಿಗನಲ್ಲವೇ?

ಸ್ಪಷ್ಟೀಕರಣ: ಅಲ್ಲ. ಮಹಾಭಾರತವು ರಾಮಾಯಣಕ್ಕಿಂತಲೂ ಹಿಂದಿನ ಮಹಾಕಾವ್ಯವಾಗಿದೆ. ರಾಮಾಯಣ ಬರೆದ ಕಾಲಘಟ್ಟದಲ್ಲಿಯೇ ಅಸ್ಪೃಶ್ಯತೆ ಕಂಡುಬರದೇ ಇರುವಾಗ ಮಹಾಭಾರತದಲ್ಲಿ ಅಸ್ಪೃಶ್ಯತೆಯ ಇರುವಿಕೆ ಸಾಧ್ಯವಿಲ್ಲ. ಮುಂದುವರೆದು, ಕರ್ಣನನ್ನೇ ಕ್ಷತ್ರಿಯನೆಂದು ಒಪ್ಪಿಕೊಳ್ಳದ ಪಾಂಡವರು ಶಲ್ಯನ ಸೋದರಿ ಮಾದ್ರಿಯನ್ನು ಪಾಂಡುರಾಜನಿಗೆ ವಿವಾಹವಾಗಿಸಲು ಸಾಧ್ಯವಿಲ್ಲ. ಮಾದ್ರಿಯ ಮಕ್ಕಳಾದ ನಕುಲ ಮತ್ತು ಸಹದೇವರಿಂದ ಯಾಗಗಳನ್ನು ನೆರವೇರಿಸಲೂ ಸಾಧ್ಯವಿಲ್ಲ. ಶಲ್ಯ ಕುರುಕ್ಷೇತ್ರದ ಕಡೆಯ ದಿನದ ಯುದ್ಧದಲ್ಲಿ ದಂಡನಾಯಕನಾಗಲೂ ಸಾಧ್ಯವಿಲ್ಲ. ಮಾದ್ರ ರಾಜ್ಯದ ಶಲ್ಯನ ವಂಶಸ್ಥರು ಚಾತುರ್ವರ್ಣ ಪರಿಪಾಲಕರಲ್ಲ ಎಂಬ ಕಾರಣದಿಂದ ಅವರನ್ನು ಅಸ್ಪೃಶ್ಯರೆಂದು ಬಗೆಯುವುದು ಐತಿಹಾಸಿಕವಾಗಿ ತಪ್ಪಾಗುತ್ತದೆ. ಏಕೆಂದರೆ ಅಂತಹ ಚಾತುರ್ವರ್ಣ ಪರಿಪಾಲಿಸದ ನೂರಾರು ರಾಜ್ಯಗಳು ಹಸ್ತಿನಾಪುರದ ಸುತ್ತಲೂ ಇರುತ್ತವೆ. ಇದರಷ್ಟೇ ಸತ್ಯ ಆರ್ಯವರ್ತವನ್ನು ಬಿಟ್ಟು ಮಿಕ್ಕ ಇನ್ನಾವ ಪ್ರಾಚೀನ ಭಾರತದಲ್ಲಿಯೂ ಚಾತುರ್ವರ್ಣ ವ್ಯವಸ್ಥೆ ಇಲ್ಲದಿದ್ದದ್ದು. ಘಟೋತ್ಗಜನದ್ದೂ ಅಂತಹದ್ದೇ ಬುಡಕಟ್ಟಿನ ಪ್ರಾಂತ್ಯ. ಹಾಗಾಗಿ ಕರ್ಣ ಹಾಗೂ ಶಲ್ಯರಿಬ್ಬರ ನಡುವೆ ನಡೆಯುವ ಸಂಭಾಷಣೆ ಒಬ್ಬರನ್ನೊಬ್ಬರೂ ಹೀಗಳೆಯಲಷ್ಟೇ ಆಗಿರುತ್ತದೆ. ಅದಕ್ಕೂ ಅಸ್ಪೃಶ್ಯತೆಗೂ ಸಂಬಂಧವಿಲ್ಲ. ಏಕೆಂದರೆ ಅಸ್ಪೃಶ್ಯತೆ ಕಾಣಿಸಿಕೊಂಡದ್ದು ಕ್ರಿ.ಶ 4ನೇ ಶತಮಾನದಲ್ಲಿ. ಇದರ ಬಗ್ಗೆ ಹೆಚ್ಚು ತಿಳಿಯಲು ದಯಮಾಡಿ ಈ ಅಂಕಣದ ’ಪ್ರಾಚೀನ ಭಾರತದಲ್ಲಿ ಅಸ್ಪೃಶ್ಯತೆ; ಹಾಗೂ ’ಮಧ್ಯಕಾಲೀನ ಭಾರತದಲ್ಲಿ ಅಸ್ಪೃಶ್ಯತೆ’ ಲೇಖನಗಳನ್ನು ಓದಿ.


ಇದನ್ನೂ ಓದಿ: ಮಾತು ಮರೆತ ಭಾರತ; ಅಸ್ಪೃಶ್ಯರು ಪರಿಶಿಷ್ಟ ಜಾತಿಗಳಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಾನೂ ಹಲವಾರು ಬ್ರಾಹ್ಮಣರನ್ನು ಕೇಳಿದೆ. ಯಾರಿಗೂ ಗಲ್ಲೇಬಾನಿಯ ನೀರನ್ನು ಬ್ರಾಹ್ಮಣರ ಮದುವೆಯಲ್ಲಿ ಬಳಸುವ ಬಗ್ಗೆ ಗೊತ್ತಿಲ್ಲ. ಪ್ರಚಲಿತದಲ್ಲಿ ಇಲ್ಲ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...