Homeನಾನು ಗೌರಿಓದುಗರ ಪ್ರತಿಕ್ರಿಯೆ-ಸ್ಪಷ್ಟೀಕರಣ; ಸೂಕ್ತ ಉಲ್ಲೇಖಗಳನ್ನು ಕೊಟ್ಟಿದ್ದರೆ ಸ್ಪಷ್ಟವಾಗುತ್ತಿತ್ತು

ಓದುಗರ ಪ್ರತಿಕ್ರಿಯೆ-ಸ್ಪಷ್ಟೀಕರಣ; ಸೂಕ್ತ ಉಲ್ಲೇಖಗಳನ್ನು ಕೊಟ್ಟಿದ್ದರೆ ಸ್ಪಷ್ಟವಾಗುತ್ತಿತ್ತು

- Advertisement -
- Advertisement -

ಸೂಕ್ತ ಉಲ್ಲೇಖಗಳನ್ನು ಕೊಟ್ಟಿದ್ದರೆ ಸ್ಪಷ್ಟವಾಗುತ್ತಿತ್ತು..: ಪ್ರತಿಭಾ ನಂದಕುಮಾರ್

ಕಳೆದ ಸಂಚಿಕೆಯಲ್ಲಿ ಪ್ರಕಟವಾದ ಮಾತು ಮರೆತ ಭಾರತದ ಅಂಕಣದ ’ಕರ್ನಾಟಕದಲ್ಲಿ ಅಸ್ಪೃಶ್ಯತೆ’ (ಇಲ್ಲಿ ಕ್ಲಿಕ್ ಮಾಡಿ) ಬರಹಕ್ಕೆ ಸಂಬಂಧಿಸಿದಂತೆ ಕವಿ-ಬರಹಗಾರ್ತಿ ಪ್ರತಿಭಾ ನಂದಕುಮಾರ್ ಹೀಗೆ ಪ್ರತಿಕ್ರಿಯಿಸಿದ್ದರು: “ಹಲವು ಹೇಳಿಕೆಗಳಿಗೆ ಸೂಕ್ತ ಉಲ್ಲೇಖಗಳನ್ನು (ರೆಫೆರೆನ್ಸ್) ಕೊಟ್ಟಿದ್ದರೆ ಸ್ಪಷ್ಟವಾಗುತ್ತಿತ್ತು. ಉದಾಹರಣೆಗೆ ’ಮಾದಿಗರ ಗಲ್ಲೇಬಾನಿ (ಚಪ್ಪಲಿ ತೊಳೆದ ನೀರು) ನೀರಿಲ್ಲದೆ ಬ್ರಾಹ್ಮಣರ ಹೆಣ್ಣು ಮಕ್ಕಳ ಮದುವೆಯಾಗುತ್ತಿರಲಿಲ್ಲ’ ಇದು ಎಲ್ಲಿ ಹೇಳಿದೆ?

ಪ್ರತಿಭಾ ನಂದಕುಮಾರ್

ಮಹಾಭಾರತದಲ್ಲಿ ಕರ್ಣನು ಶಲ್ಯನನ್ನು ಹೀಯಾಳಿಸುವಾಗ ಮಾದ್ರಕರ ಹೆಂಗಸರ ಬಗ್ಗೆ ಕೀಳಾಗಿ ವರ್ಣಿಸುತ್ತಾನೆ. ಆದರೆ ಅಲ್ಲಿ ಅಸ್ಪೃಶ್ಯತೆಯ ಪ್ರಸ್ತಾಪವಿಲ್ಲ. ಮಾದ್ರಕ-ಮಾದ್ರ ರಾಜ್ಯ-ಮಾದ್ರಿ-ಅವಳ ಅಣ್ಣ ಶಲ್ಯ. ಭೀಷ್ಮ ಮಾದ್ರ ರಾಜ್ಯಕ್ಕೆ ಹೋಗಿ ಮಾದ್ರಿಯನ್ನು ಪಾಂಡುವಿಗೆ ವಧುವಾಗಲು ಕೋರಿದಾಗ ಶಲ್ಯ ’ಪಾಣಿಗ್ರಹಣ ತಮ್ಮಲ್ಲಿಲ್ಲ ’ತೆರ’ ಕೊಟ್ಟು ಕರೆದುಕೊಂಡು ಹೋಗು’ ಎಂದಾಗ ಭೀಷ್ಮ ಹಣ, ಚಿನ್ನ, ಆನೆ, ಕುದುರೆ ಇತ್ಯಾದಿ ಕೊಟ್ಟು ಅವಳನ್ನು ಕರೆದುಕೊಂಡು ಹೋಗುತ್ತಾನೆ. ಮಾದ್ರಕರು ಮಾದರುಗಳಾದರೆ (ಕರ್ಣನ ಹೀಯಾಳಿಕೆ ಅರ್ಥೈಸಿ) ಭೀಷ್ಮ ಪಾಂಡುವಿಗೆ ಮಾದ್ರಿಯನ್ನು ಮದುವೆಯಾಗಿಸಿದ ಅಂದರೆ ಅಲ್ಲಿ ವರ್ಣ ಸಂಕರ ಇರಲಿಲ್ಲ ಎಂದರ್ಥವೇ? ಉತ್ತರದಲ್ಲಿ ಮಹಾಭಾರತದ ಕಾಲಕ್ಕೆ (ಆಗಿನ ಆರ್ಯರ ಪದ್ಧತಿಯಂತೆ) ಅಸ್ಪೃಶ್ಯತೆ ಇರಲಿಲ್ಲ ಅಂದರೆ ಅಲ್ಲಿಂದ ದಕ್ಷಿಣಕ್ಕೆ ಬಂದ ’ಬ್ರಾಹ್ಮಣ ಪುರೋಹಿತರು ತಮ್ಮೊಂದಿಗೆ ಚಾತುರ್ವರ್ಣ ಧರ್ಮವನ್ನು ಹೊತ್ತುಕೊಂಡು ಹೋದರು ಹಾಗೂ ವಿಸ್ತರಿಸಿದರು. ಈ ಭಾಗವಾಗಿಯೇ ಕರ್ನಾಟಕಕ್ಕೂ ವರ್ಣವ್ಯವಸ್ಥೆ ಕಾಲಿಟ್ಟಿತು. ಅದರೊಂದಿಗೆ ಜಾತಿಪದ್ಧತಿ, ಅಸ್ಪೃಶ್ಯತೆಯೂ ಕಾಲಿಟ್ಟಿತು’ ಎನ್ನುವುದನ್ನು ಅರ್ಥೈಸುವಲ್ಲಿ ಸ್ವಲ್ಪ ಗೊಂದಲ ಇದೆ.

ಚಾತುರ್ವರ್ಣ ಪರಿಪಾಲಿಸದ ಶಲ್ಯ ವಂಶಸ್ಥರನ್ನು ಅಸ್ಪೃಶ್ಯರು ಎನ್ನಲಾಗುವುದಿಲ್ಲ: ಸಾಕ್ಯ ಸಮಗಾರ

ಪ್ರಶ್ನೆ 1. ’ಮಾದಿಗರ ಗಲ್ಲೇಬಾನಿ ನೀರಿಲ್ಲದೆ ಬ್ರಾಹ್ಮಣರ ಮಕ್ಕಳ ಮದುವೆಯಾಗುತ್ತಿರಲಿಲ್ಲ’ ಇದು ಎಲ್ಲಿ ಹೇಳಿದೆ?
ಸ್ಪಷ್ಟೀಕರಣ: ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪ್ರಖ್ಯಾತ ಸಂಸ್ಕೃತಿ ಚಿಂತಕ ಹಾಗೂ ಕವಿ ಕೆ. ಬಿ. ಸಿದ್ದಯ್ಯನವರು ತಮ್ಮ ಗಲ್ಲೇಬಾನಿ ಖಂಡಕಾವ್ಯಕ್ಕೆ ಮುನ್ನುಡಿ ಬರೆಯುತ್ತಾ ಹೀಗೆ ಉಲ್ಲೇಖಿಸುತ್ತಾರೆ. ’ಈ (ಗಲ್ಲೇಬಾನಿ) ನೀರನ್ನು ಶಾಸ್ತ್ರದ ನೀರು ಎಂದು ಕರೆಯುತ್ತಾರೆ. ವಿಪ್ರ ಬಂಧುಗಳು ಅವರಲ್ಲಿ ನಡೆಯುವ ವಿವಾಹ ಸಂದರ್ಭದಲ್ಲಿ ನವವಧುವರರ ನೆತ್ತಿಯ ಮೇಲೆ ’ಶಾಸ್ತ್ರದ ನೀರ’ನ್ನು ಚುಮುಕಿಸಿ, ಅರುಂಧತಿ ನಕ್ಷತ್ರ ದರ್ಶನ ಮಾಡಿಸಿದರೆ ಶುಭವಾಗುತ್ತದೆ ಎಂದು ಕಲ್ಲುನೀರು ಕರಗೋ ಹೊತ್ತಿನಲ್ಲಿ ಕಾಡಿಬೇಡಿ ’ಗಲ್ಲೇಬಾನಿ’ ನೀರನ್ನು ಚಮ್ಮಾರನ ಅನುಗ್ರಹದಿಂದ ಪಡೆದುಕೊಳ್ಳುತ್ತಾರೆಂಬುದು ಜನಪದರ ನಾಲಿಗೆ ಮೇಲಿನ ಸೋಜಿಗದ ಸಂಗತಿಯಾಗಿದೆ’ ಎನ್ನುತ್ತಾರೆ.

ಡಾ. ಎಂ. ಚಿದಾನಂದ ಮೂರ್ತಿಯವರು ಬರೆದಿರುವ ’ಮಧ್ಯಕಾಲೀನ ಕರ್ನಾಟಕ ಮತ್ತು ಅಸ್ಪೃಶ್ಯತೆ’ ಕೃತಿಯಲ್ಲಿ ’ಚಪ್ಪಲಿ ಹೊಲಿಯಲು ಅದ್ದುವ ನೀರನ್ನು ಪವಿತ್ರವೆಂದು ಭಾವಿಸುವ ಹೊಲೆಯರು ಅದು ಬ್ರಾಹ್ಮಣರ ಕೈಗೆ ಹೋಗದಂತೆ ಎಚ್ಚರ ವಹಿಸುತ್ತಾರೆ’ ಎಂದು ಬರೆಯುತ್ತಾ ಮುಂದುವರೆದು ’ಕೆಲವೆಡೆ ಬ್ರಾಹ್ಮಣರು ತಮ್ಮ ಮದುವೆಯ ದಿನ ರಾತ್ರಿ ಗುಟ್ಟಾಗಿ ಹೊಲೆಗೇರಿಗೆ ಬಂದು ’ಸುರೆಬಾನಿ’ ನೀರನ್ನು (ಚಪ್ಪಲಿ ಅದ್ದಿದ ನೀರನ್ನು) ತೆಗೆದುಕೊಂಡು ಹೋಗುತ್ತಾರೆ ಎಂಬ ವದಂತಿಗಳಿವೆ’ ಎನ್ನುತ್ತಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕೆಲವು ಬ್ರಾಹ್ಮಣರನ್ನು ’ಮಧ್ಯಾಹ್ನದ ಮಾದಿಗ’ರೆಂದು ಹಾಗೂ ಮೈಸೂರು ಜಿಲ್ಲೆಯ ಕೆಲವು ಬ್ರಾಹ್ಮಣರನ್ನು ’ಮಧ್ಯಾಹ್ನದ ಹೊಲೆಯ’ರೆಂದು ಕರೆಯುವ ವಾಡಿಕೆ ಇದೆ. ಇದಕ್ಕೂ ಮೂಲಕಾರಣ ಗಲ್ಲೇಬಾನಿಯ ನೀರನ್ನು ಬ್ರಾಹ್ಮಣರು ಕೊಂಡೊಯ್ಯುವುದಾಗಿದೆ.

ಕೆ. ಬಿ. ಸಿದ್ದಯ್ಯ

ಈ ಜನಪದ ಸ್ಮೃತಿಯ ಮೂಲ ಹಿಡಿದು ಹೊರಟಾಗ ಅದು ವಚನ ಚಳವಳಿಯ ಹರಳಯ್ಯ ದಂಪತಿ ಮತ್ತು ಬ್ರಾಹ್ಮಣ ಮಧುವರಸ ಪ್ರಸಂಗಕ್ಕೆ ಹೋಗಿ ನಿಲ್ಲುತ್ತದೆ. ಬಸವಣ್ಣನವರು ಹರಳಯ್ಯರಿಗೆ ಶರಣುಶರಣಾರ್ಥಿ ಎಂದುದನ್ನು ಋಣವೆಂದು ತಿಳಿದ ಹರಳಯ್ಯನ ತನ್ನ ಮಡದಿಗೆ ಹೋಗಿ ಈ ವಿಚಾರ ತಿಳಿಸಿದಾಗ ಇಬ್ಬರ ತೊಡೆ ಚರ್ಮದಿಂದ ಬಸವಣ್ಣನಿಗೆ ಚಪ್ಪಲಿ ಮಾಡಿಕೊಡಬೇಕೆಂಬ ತೀರ್ಮಾನಕ್ಕೆ ಬರುತ್ತಾರೆ ಹಾಗೂ ಹಾಗೆಯೇ ಮಾಡುತ್ತಾರೆ. ಹರಳಯ್ಯ ದಂಪತಿಗಳು ಅದನ್ನು ಹೊತ್ತು ಬಸವಣ್ಣನ ಬಳಿಗೆ ತೆರಳುವಾಗ ದಾರಿಯಲ್ಲಿ ಕಂಡ ಮಧುವರಸ ಆ ಚಪ್ಪಲಿಗಳನ್ನು ಬಲವಂತದಿಂದ ಕಸಿದು ಮೆಟ್ಟಿಕೊಳ್ಳುತ್ತಾನೆ. ತಕ್ಷಣವೇ ಆ ಚಪ್ಪಲಿಗಳು ಬೆಂಕಿಯಂತೆ ಉರಿಯಲಾರಂಭಿಸುತ್ತವೆ. ಉರಿಚಮ್ಮಾಳಿಗೆ ಆಗುತ್ತವೆ. ಚಪ್ಪಲಿಗಳನ್ನು ತೆಗೆದರೂ ಆ ಮೈ ಉರಿ ಕಾಣೆಯಾಗದೆ ತೀವ್ರವಾಗುತ್ತದೆ. ಅದೆಷ್ಟೇ ಔಷಧೋಪಚಾರ, ಪೂಜೆಗಳನ್ನು ಮಾಡಿದರೂ ಉರಿ ಕಡಿಮೆಯೇ ಆಗುವುದಿಲ್ಲ. ಕಡೆಗೆ ಹರಳಯ್ಯನ ಮನೆಯ ಮಗಳು ಗಲ್ಲೇಬಾನಿಯ ನೀರನ್ನು ಮಧುವರಸ ಮೈಮೇಲೆ ಸುರಿದಾಗ ಉರಿ ಕಡಿಮೆಯಾಗುತ್ತದೆ. ಅಂದಿನಿಂದ ಬ್ರಾಹ್ಮಣರಿಗೆ ಗಲ್ಲೇಬಾನಿಯ ನೀರು ಪವಿತ್ರ ಎಂಬ ಜಾನಪದ ಕತೆ ಜನಮಾನಸದಲ್ಲಿ ಬೆರೆತುಹೋಗಿದೆ. ಇದಕ್ಕೆ ಮಂಟೆಸ್ವಾಮಿ ಹಾಗೂ ಮಲೆ ಮಹದೇಶ್ವರ ಕಾವ್ಯಗಳೇ ಸಾಕ್ಷಿ.

ಇನ್ನು ಪುರಾಣಗಳನ್ನು ಶೋಧಿಸಿದಾಗ ವಸಿಷ್ಠ ತಾನು ಮದುವೆಯಾಗುವ ಹುಡುಗಿಯನ್ನು ಹುಡುಕಿಕೊಂಡು ಬರುವುದು ಮಾದಿಗರ ಕೇರಿಗೆಯೇ. ಅವನು ಮಾದಿಗ ಅರುಂಧತಿಯ ಮನೆಗೆ ಬರುತ್ತಾನೆ. ಅವಳ ಮೂಲ ಹೆಸರು ಆರಂಜ್ಯೋತಿ. ಅವಳು ಗಲ್ಲೇಬಾನಿಯ ನೀರಿನಿಂದ ಆತನನ್ನು ಪರಿಶುದ್ಧಗೊಳಿಸುತ್ತಾಳೆ ಹಾಗೂ ವಿವಾಹವಾಗುತ್ತಾಳೆ. ಇದರ ಬಗ್ಗೆ ಸಂಸ್ಕೃತಿ ಚಿಂತಕ ವಡ್ಡಗೆರೆ ನಾಗರಾಜರವರು ಸಂಪೂರ್ಣ ಅಧ್ಯಯನ ಮಾಡಿದ್ದಾರೆ.

ಕುತೂಹಲಕಾರಿ ಎಂದರೆ 1891ರ ಬ್ರಿಟಿಷ್ ಭಾರತದ ಮೊದಲ ಜನಗಣತಿಯಲ್ಲಿ ಮೈಸೂರಿನ ಮಾದಿಗರು ತಮ್ಮನ್ನು ’ಮಾತಂಗ ಬ್ರಾಹ್ಮಣರು’ ಎಂದು ಘೋಷಿಸಿಕೊಂಡಿರುವುದು ಸಹ ಇಲ್ಲಿ ಉಲ್ಲೇಖಾರ್ಹ (ದಕ್ಷಿಣ ಭಾರತದ ಜಾತಿ ಬುಡಕಟ್ಟುಗಳು – ಸಂಪುಟ 4 – ಎಡ್ಗರ್ ಥರ್ಸ್ಟನ್/ಕೆ. ರಂಗಾಚಾರಿ)

ಡಾ. ಎಂ. ಚಿದಾನಂದ ಮೂರ್ತಿ

ಒಟ್ಟಾರೆ ಚರ್ಮವನ್ನು ಹದಮಾಡಿ ಚಪ್ಪಲಿಯನ್ನು ಅದ್ದುವ ನೀರು ಪವಿತ್ರ. ಇದರಿಂದ ಬ್ರಾಹ್ಮಣರೂ ಪವಿತ್ರವಾಗುತ್ತಾರೆ ಎಂಬುದು ಐತಿಹ್ಯ. ಯಾವ ಕಾಯಕವೂ ಉಚ್ಚವಲ್ಲ, ನೀಚವಲ್ಲ ಎಂಬ ಸತ್ಯವನ್ನು ಸಾರುತ್ತದೆ ಈ ಆಚರಣೆ.

ಪ್ರಶ್ನೆ 2. ಮಹಾಭಾರತದ ಶಲ್ಯ ಮಾದಿಗನಲ್ಲವೇ?

ಸ್ಪಷ್ಟೀಕರಣ: ಅಲ್ಲ. ಮಹಾಭಾರತವು ರಾಮಾಯಣಕ್ಕಿಂತಲೂ ಹಿಂದಿನ ಮಹಾಕಾವ್ಯವಾಗಿದೆ. ರಾಮಾಯಣ ಬರೆದ ಕಾಲಘಟ್ಟದಲ್ಲಿಯೇ ಅಸ್ಪೃಶ್ಯತೆ ಕಂಡುಬರದೇ ಇರುವಾಗ ಮಹಾಭಾರತದಲ್ಲಿ ಅಸ್ಪೃಶ್ಯತೆಯ ಇರುವಿಕೆ ಸಾಧ್ಯವಿಲ್ಲ. ಮುಂದುವರೆದು, ಕರ್ಣನನ್ನೇ ಕ್ಷತ್ರಿಯನೆಂದು ಒಪ್ಪಿಕೊಳ್ಳದ ಪಾಂಡವರು ಶಲ್ಯನ ಸೋದರಿ ಮಾದ್ರಿಯನ್ನು ಪಾಂಡುರಾಜನಿಗೆ ವಿವಾಹವಾಗಿಸಲು ಸಾಧ್ಯವಿಲ್ಲ. ಮಾದ್ರಿಯ ಮಕ್ಕಳಾದ ನಕುಲ ಮತ್ತು ಸಹದೇವರಿಂದ ಯಾಗಗಳನ್ನು ನೆರವೇರಿಸಲೂ ಸಾಧ್ಯವಿಲ್ಲ. ಶಲ್ಯ ಕುರುಕ್ಷೇತ್ರದ ಕಡೆಯ ದಿನದ ಯುದ್ಧದಲ್ಲಿ ದಂಡನಾಯಕನಾಗಲೂ ಸಾಧ್ಯವಿಲ್ಲ. ಮಾದ್ರ ರಾಜ್ಯದ ಶಲ್ಯನ ವಂಶಸ್ಥರು ಚಾತುರ್ವರ್ಣ ಪರಿಪಾಲಕರಲ್ಲ ಎಂಬ ಕಾರಣದಿಂದ ಅವರನ್ನು ಅಸ್ಪೃಶ್ಯರೆಂದು ಬಗೆಯುವುದು ಐತಿಹಾಸಿಕವಾಗಿ ತಪ್ಪಾಗುತ್ತದೆ. ಏಕೆಂದರೆ ಅಂತಹ ಚಾತುರ್ವರ್ಣ ಪರಿಪಾಲಿಸದ ನೂರಾರು ರಾಜ್ಯಗಳು ಹಸ್ತಿನಾಪುರದ ಸುತ್ತಲೂ ಇರುತ್ತವೆ. ಇದರಷ್ಟೇ ಸತ್ಯ ಆರ್ಯವರ್ತವನ್ನು ಬಿಟ್ಟು ಮಿಕ್ಕ ಇನ್ನಾವ ಪ್ರಾಚೀನ ಭಾರತದಲ್ಲಿಯೂ ಚಾತುರ್ವರ್ಣ ವ್ಯವಸ್ಥೆ ಇಲ್ಲದಿದ್ದದ್ದು. ಘಟೋತ್ಗಜನದ್ದೂ ಅಂತಹದ್ದೇ ಬುಡಕಟ್ಟಿನ ಪ್ರಾಂತ್ಯ. ಹಾಗಾಗಿ ಕರ್ಣ ಹಾಗೂ ಶಲ್ಯರಿಬ್ಬರ ನಡುವೆ ನಡೆಯುವ ಸಂಭಾಷಣೆ ಒಬ್ಬರನ್ನೊಬ್ಬರೂ ಹೀಗಳೆಯಲಷ್ಟೇ ಆಗಿರುತ್ತದೆ. ಅದಕ್ಕೂ ಅಸ್ಪೃಶ್ಯತೆಗೂ ಸಂಬಂಧವಿಲ್ಲ. ಏಕೆಂದರೆ ಅಸ್ಪೃಶ್ಯತೆ ಕಾಣಿಸಿಕೊಂಡದ್ದು ಕ್ರಿ.ಶ 4ನೇ ಶತಮಾನದಲ್ಲಿ. ಇದರ ಬಗ್ಗೆ ಹೆಚ್ಚು ತಿಳಿಯಲು ದಯಮಾಡಿ ಈ ಅಂಕಣದ ’ಪ್ರಾಚೀನ ಭಾರತದಲ್ಲಿ ಅಸ್ಪೃಶ್ಯತೆ; ಹಾಗೂ ’ಮಧ್ಯಕಾಲೀನ ಭಾರತದಲ್ಲಿ ಅಸ್ಪೃಶ್ಯತೆ’ ಲೇಖನಗಳನ್ನು ಓದಿ.


ಇದನ್ನೂ ಓದಿ: ಮಾತು ಮರೆತ ಭಾರತ; ಅಸ್ಪೃಶ್ಯರು ಪರಿಶಿಷ್ಟ ಜಾತಿಗಳಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಾನೂ ಹಲವಾರು ಬ್ರಾಹ್ಮಣರನ್ನು ಕೇಳಿದೆ. ಯಾರಿಗೂ ಗಲ್ಲೇಬಾನಿಯ ನೀರನ್ನು ಬ್ರಾಹ್ಮಣರ ಮದುವೆಯಲ್ಲಿ ಬಳಸುವ ಬಗ್ಗೆ ಗೊತ್ತಿಲ್ಲ. ಪ್ರಚಲಿತದಲ್ಲಿ ಇಲ್ಲ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....