Homeಮುಖಪುಟಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

ಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

- Advertisement -
- Advertisement -

ಕನ್ನಡ ಕಿರುತೆರೆಯಲ್ಲಿ ಭಾರಿ ಜನಪ್ರಿಯತೆ ಗಳಿಸಿ ಹೊಸ ಅಲೆಯನ್ನೇ ಸೃಷ್ಟಿಸಿದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಆಧಾರಿತ ಧಾರಾವಾಹಿ ಮಹಾನಾಯಕ. (ಹಿಂದಿಯ ಏಕ್ ಮಹಾನಾಯಕ್ ಧಾರಾವಾಹಿಯ ಡಬ್ಬಿಂಗ್). ಈ ಧಾರಾವಾಹಿ ಅಂಬೇಡ್ಕರ್ ಬದುಕಿನ ಹಲವು ಘಟ್ಟಗಳನ್ನು ಕನ್ನಡಿಗರಿಗೆ ತಿಳಿಸಲು ಸಹಕಾರಿಯಾಗಿತ್ತು. ನಗರ-ಗ್ರಾಮೀಣ ಪ್ರದೇಶಗಳಲ್ಲಿ ಈ ಧಾರಾವಾಹಿ ಬೀರಿದ ಪ್ರಭಾವ ಹಲವು ಬಗೆಯದ್ದು. ಇಂದಿಗೂ ಗ್ರಾಮಗಳ ಹೆಬ್ಬಾಗಿಲುಗಳಲ್ಲಿ ಈ ಧಾರಾವಾಹಿಯ ದೊಡ್ಡ ಭಿತ್ತಿಚಿತ್ರಗಳು ಕಾಣಿಸುತ್ತವೆ. ಇದರಿಂದ ಪ್ರೇರಣೆಗೊಂಡು ಅಂಬೇಡ್ಕರ್ ವಿಚಾರಗಳನ್ನು ಕನ್ನಡಿಗರ ಕಿವಿಗೆ ಅಪ್ಪಳಿಸುವಂತೆ ಮಾಡಲು ಅಂಬೇಡ್ಕರ್ ಓದು ಅಭಿಯಾನ ಆರಂಭಿಸಿದವರು ಅರುಣ್ ಜೋಳದಕೂಡ್ಲಿಗಿ.

ಮಹಾನಾಯಕ ಧಾರಾವಾಹಿ ಪ್ರಸಾರ ಆರಂಭಿಸಿದಂತೆ ಜನರು ಅಂತರ್ಜಾಲದಲ್ಲಿ ಹೆಚ್ಚಾಗಿ ಅಂಬೇಡ್ಕರ್ ಬರಹ ಭಾಷಣಗಳ ಹುಡುಕಾಟ ಶುರುಮಾಡಿದ್ದರು. ಇದರಲ್ಲಿ ಯೂಟ್ಯೂಬ್‌ನಲ್ಲಿ ಹುಡುಕಾಟ ಮಾಡುವವರ ಸಂಖ್ಯೆ ದೊಡ್ಡದು. ಆದರೆ ಕನ್ನಡದಲ್ಲಿ ಅಂಬೇಡ್ಕರ್ ವಿಚಾರಗಳನ್ನು ಪ್ರಸ್ತುತ ಪಡಿಸುವ ವಿಡಿಯೋ, ಆಡಿಯೋಗಳು ಬಹಳ ಕಡಿಮೆ. ಹೀಗಾಗಿ ಅಂಬೇಡ್ಕರ್ ವಿಚಾರ, ಚಿಂತನೆ, ಭಾಷಣಗಳನ್ನು ಸಾಮಾನ್ಯ ಜನರಿಗೆ ತಿಳಿಸುವ ಉದ್ದೇಶ ಈ ಓದು ಅಭಿಯಾನ ಸರಣಿಯದ್ದು.

ಅಂಬೇಡ್ಕರ್ ವೈಚಾರಿಕತೆ – ಚಿಂತನೆಯಲ್ಲಿ ನಂಬಿಕೆ ಇಟ್ಟವರಿಂದ ಅಂಬೇಡ್ಕರ್ ಬರಹ-ಭಾಷಣಗಳ ಆಯ್ದ ಭಾಗಗಳನ್ನು ಓದಿಸಿ ಈ ಯೂಟ್ಯೂಬ್ ಚಾನೆಲ್‌ನಲ್ಲಿ ಹಾಕಲಾಗುತ್ತಿದೆ. ಅಂಬೇಡ್ಕರ್ ಚಿಂತನೆಯನ್ನು ಸಾಧ್ಯವಾದಷ್ಟು ಸಾಮಾನ್ಯ ಜನರಿಗೆ ವಿಸ್ತರಿಸುವ ಕನಸು ಈ ಸರಣಿಯ ಹಿಂದಿದೆ. ಅಂತೆಯೇ ಬಾಬಾಸಾಹೇಬರ ಚಿಂತನೆಯ ಆಡಿಯೋ ರೂಪದ ಆರ್ಕೈವ್ ರೂಪಿಸುವ ಉದ್ದೇಶ ಅರುಣ್ ಜೋಳದಕೂಡ್ಲಿಗಿ ಅವರಿಗಿದೆ.

“ಅಂಬೇಡ್ಕರ್ ಕುರಿತ ಧಾರಾವಾಹಿ ಮಹಾನಾಯಕ ಪ್ರಸಾರವಾದಾಗ ಇಂಟರ್‌ನೆಟ್‌ನಲ್ಲಿ ಹೆಚ್ಚಾಗಿ ಜನ ಅಂಬೇಡ್ಕರ್ ಬಗ್ಗೆ ಹುಡುಕಾಡಿದ್ದಾರೆ. ಈ ಧಾರವಾಹಿ ಮೂಲಕ ಜನಪ್ರಿಯ ವಲಯದಲ್ಲಿ ಅಂಬೇಡ್ಕರ್ ಬಗ್ಗೆ ತಿಳಿಯುವ ಕುತೂಹಲ ಹೆಚ್ಚಾಯಿತು. ಹಾಗಾಗಿ ಹೆಚ್ಚು ಜನ ಹುಡುಕಾಡಿದ್ದಾರೆ. ನಾನುಗೌರಿ.ಕಾಂ ಕೂಡ ಈ ಬಗ್ಗೆ ಲೇಖನ ಮಾಡಿತ್ತು. ಅದನ್ನು ಓದಿದ ನಂತರ ನಾನು ಕೂಡ ಹುಡುಕಾಡಿದೆ. ಆದರೆ ಎಂಟತ್ತು ಭಾಷಣಗಳು ಹಾಗೂ ಕೆಲವು ಹಾಡುಗಳು ಮಾತ್ರ ಸಿಗುತ್ತಿತ್ತು. ಕನ್ನಡದಲ್ಲಿ ಅಂಬೇಡ್ಕರ್ ಅವರ ಚಿಂತನೆಗಳ ವಿಡಿಯೋ, ಆಡಿಯೋ ಅಷ್ಟಾಗಿ ಇಲ್ಲ ಎಂಬುದು ತಿಳಿಯಿತು. ಹಾಗಾಗಿ ಈ ಪ್ರಯತ್ನಕ್ಕೆ ಕೈಹಾಕಿದ್ದೇನೆ” ಎನ್ನುತ್ತಾರೆ ಅರುಣ್.

ಅರುಣ್ ಜೋಳದಕೂಡ್ಲಿಗಿ

ಪ್ರಸ್ತುತ ಜಾನಪದ ವಿಶ್ವವಿದ್ಯಾಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಅರುಣ್ ಈ ಅಭಿಯಾನದ ಬಗ್ಗೆ ಹೇಳಿದ್ದು ಹೀಗೆ: “ಅಂಬೇಡ್ಕರ್ ವಿಚಾರಗಳನ್ನು ಸಂಪುಟಗಳಲ್ಲಿ ಕೊಟ್ಟರೆ ಅದು ಹಾಗೆ ಮನೆಯ ಕಪಾಟುಗಳಲ್ಲಿ ಉಳಿದುಬಿಡುವ ಸಾಧ್ಯತೆ ಇದೆ. ಜನ ಅದನ್ನು ಮತ್ತೆ ತೆರೆದು ನೋಡುವುದು ಕಡಿಮೆ. ಬೇಸಿಕ್ ವಿಚಾರಗಳನ್ನು ಜನರಿಗೆ ಹಂಚುವ ಉದ್ದೇಶದಿಂದ ಮೊದಲು ಸುಮಾರು 300 ಜನರಿಗೆ ನನ್ನ ವಿಚಾರ ತಿಳಿಸಿದೆ. ಆದರೆ ಅಂತಹ ಸ್ಪಂದನೆ ಸಿಗಲಿಲ್ಲ. ಆಮೇಲೆ ನಾನು ವೈಯಕ್ತಿಕವಾಗಿ ಕರೆ ಮಾಡಿ ಕೇಳಿಕೊಂಡ ನಂತರ ಕೆಲವರು ಒಪ್ಪಿದರು” ಎನ್ನುತ್ತಾರೆ.

“ಮೊದಲು ನನಗೆ ಆಡಿಯೋ ಕಳಿಸಿದ್ದು ಲೇಖಕಿ ಎಚ್.ಎಸ್.ಅನುಪಮಾ ಅವರು. ಹಾಗಾಗಿ ಅವರದ್ದೇ ಆಡಿಯೋವನ್ನು 7 ಸೆಪ್ಟಂಬರ್ 2020ರಂದು ಮೊದಲ ಸಂಚಿಕೆಯಾಗಿ ಪ್ರಸಾರ ಮಾಡಿದೆ. ಈ ಅಭಿಯಾನದಲ್ಲಿ ಇಂತವರೇ ಓದಬೇಕು ಅನ್ನುವ ನಿಯಮಗಳಿಲ್ಲ. ಎಲ್ಲರೂ ಓದಬಹುದು. ಕನಿಷ್ಠ 10 ರಿಂದ 15 ನಿಮಿಷಗಳ ಆಡಿಯೋ ಮಾಡಿ ಕಳುಹಿಸಬಹುದು”.

“ಪ್ರತಿದಿನ ಹಾಕುವ ಈ ಆಡಿಯೋಗಳು ಎಷ್ಟು ಜನಕ್ಕೆ ತಲುಪುತ್ತದೋ ಗೊತ್ತಿಲ್ಲ. ಆದರೆ, ಒಳ್ಳೆಯ ಸ್ಪಂದನೆ ಸಿಗುತ್ತಿದೆ. ಹೆಚ್ಚು ಶೇರ್ ಆಗುತ್ತಿದೆ. ಒಟ್ಟು 100 ಗಂಟೆಗಳ ಆಡಿಯೋ ಮಾಡುವುದು ನನ್ನ ಉದ್ದೇಶ. ಇಲ್ಲಿಯವರೆಗೆ 160 ಆಡಿಯೋಗಳನ್ನು ಅಪ್ಲೋಡ್ ಮಾಡಲಾಗಿದೆ. ಮುಂದಕ್ಕೆ ಸುಮಾರು 700ಕ್ಕೂ ಹೆಚ್ಚು ಆಡಿಯೋ ಕ್ಲಿಪ್‌ಗಳು ಆಗಬಹುದು. ಒಟ್ಟಾರೆ ಕನ್ನಡದಲ್ಲಿ ಅಂಬೇಡ್ಕರ್ ವಿಚಾರಗಳು, ಅವರ ಭಾಷಣಗಳು ಜನರಿಗೆ ಸುಲಭವಾಗಿ ಸಿಗಬೇಕು. ಅದಕ್ಕೊಂದು ಆರ್ಕೈವ್ ಬೇಕು. ಅದನ್ನೂ ಮಾಡುವ ಕೆಲಸ ಮಾಡುತ್ತಿದ್ದೇನೆ” ಎನ್ನುತ್ತಾರೆ.

ಬೇರೆ ಭಾಷೆಗಳಲ್ಲಿ ಇಂತಹ ಒಂದು ಪ್ರಯತ್ನ ನಡೆದಿಲ್ಲ. ಹಾಗಾಗಿ ಕನ್ನಡ ಒಂದು ಮಾದರಿಯಾಗಲಿದೆ. ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಅಂಬೇಡ್ಕರ್ ಕೇಂದ್ರಗಳಿವೆ. ಕೋಟ್ಯಂತರ ರೂಪಾಯಿ ಅನುದಾನ ಬರುತ್ತೆ. ಆದರೆ, ವರ್ಷಕ್ಕೆ ಸುಮಾರು 3-4 ಲಕ್ಷ ಖರ್ಚು ಮಾಡಿ ಒಂದು ಕಾರ್ಯಕ್ರಮ ಮಾಡಿ ಸುಮ್ಮನಾಗುತ್ತಾರೆ. ಆದರೆ ಈ ಮೂಲಕ ಅಂಬೇಡ್ಕರ್ ಜನಸಾಮಾನ್ಯರಿಗೆ ದಕ್ಕುವುದಿಲ್ಲ. ಹಾಗಾಗಿ ಅವರನ್ನು ಬೈಯುತ್ತಾ, ವಿಮರ್ಶೆ ಮಾಡಿಕೊಂಡು ಕುಳಿತುಕೊಳ್ಳುವ ಬದಲು ನಾವೇ ಏನಾದರೂ ಮಾಡಬೇಕು ಅಲ್ಲವೇ ಎಂದು ಪ್ರಶ್ನಿಸುತ್ತಾರೆ ಅರುಣ್.

“ಬಿ.ಸುರೇಶ್, ಎಚ್.ಎಸ್.ಅನುಪಮಾ, ಎಚ್.ಎಸ್.ರಾಘವೇಂದ್ರ ರಾವ್, ದೇವನೂರು ಮಹಾದೇವ, ಮಂಜಮ್ಮ ಜೋಗತಿ ಹೀಗೆ ಹಲವು ಪ್ರಸಿದ್ಧರು ಓದು ಅಭಿಯಾನದ ಭಾಗವಾಗಿದ್ದಾರೆ. ಈಗಾಗಲೇ 160 ಸಂಚಿಕೆಗಳಾಗಿವೆ. 2ನೇ ಸರಣಿ ಆರಂಭವಾದಾಗ ಹೆಚ್ಚು ಜನ ಸಕ್ರಿಯರಾಗಿದ್ದಾರೆ. ತುಂಬಾ ಜನ ತಾವೇ ಮುಂದಾಗಿ ಓದು ಅಭಿಯಾನದ ಭಾಗವಾಗಲು ಬರುತ್ತಿದ್ದಾರೆ. ಅಂತಹವರನ್ನು ನಾವು ಪ್ರೋತ್ಸಾಹಿಸುತ್ತಿದ್ದೇವೆ. ಹೆಣ್ಣು ಮಕ್ಕಳಿಗೆ ಹೆಚ್ಚು ಪ್ರಾಮುಖ್ಯತೆಯಿದೆ. ಹೊಸ ಹೊಸ ವಿಚಾರಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ನಾನೇ ಸಂಪುಟಗಳಿಂದ ಪಠ್ಯವನ್ನು ಆರಿಸಿಕೊಡುತ್ತಿದ್ದೇನೆ” ಎಂದು ಅರುಣ್ ತಿಳಿಸುತ್ತಾರೆ.

“ಅಂಬೇಡ್ಕರ್ ಅವರ ಚಿಂತನೆಗಳು ಕೇವಲ ಜಾತಿ, ತಾರತಮ್ಯದ ವಿರುದ್ಧದ ಹೋರಾಟಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ವಿಜ್ಞಾನ, ತಂತ್ರಜ್ಞಾನದ ಕುರಿತು ಮಾತನಾಡಿದ್ದಾರೆ. ಹಲವು ವಿಚಾರಗಳನ್ನು ತಮ್ಮ ಭಾಷಣಗಳಲ್ಲಿ, ಬರಹಗಳಲ್ಲಿ ತಿಳಿಸಿದ್ದಾರೆ. ಹಾಗಾಗಿ ಇವುಗಳ ಮೂಲಕವೂ ಅಂಬೇಡ್ಕರ್ ಅವರ ಮಾತುಗಳನ್ನು ಜನರ ಕಿವಿಗೆ ತಲುಪಿಸುವ ಕೆಲಸವಾಗುತ್ತಿದೆ” ಎಂದು ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಓದು ಸರಣಿಯಲ್ಲಿ ಪಾಲ್ಗೊಂಡಿರುವ ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಹರ್ಷ ಕುಗ್ವೆ “ಇದೊಂದು ಉತ್ತಮ ಕೆಲಸ. ಭಾರತದಲ್ಲಿ ಯಾವ ಭಾಷೆಯಲ್ಲಿಯೂ ಅಂಬೇಡ್ಕರ್ ಅವರನ್ನು ಹೀಗೆ ಕಟ್ಟಿಕೊಡುವ ಕೆಲಸವಾಗಿಲ್ಲ. ಅರುಣ್ ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಈ ಕೆಲಸ ಬೇಕಾಗಿತ್ತು. ನಾನು ದೀರ್ಘವಾಗಿ ಒಂದು ಗಂಟೆ ಕಾಲ ಅಂಬೇಡ್ಕರ್ ವಿಚಾರಗಳನ್ನು ಓದಿದ್ದೇನೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಾರೆ ಒಂದು ಕಿರುತೆರೆಯ ಧಾರಾವಾಹಿ ಕೂಡ ಜನರ ಮೇಲೆ ಪ್ರಭಾವ ಬೀರಬಲ್ಲದು. ಕೇವಲ ಅತ್ತೆ ಸೊಸೆ ಜಗಳ, ಗಂಡಿಗಾಗಿ ಅಕ್ಕ-ತಂಗಿ ಜಗಳ ಮಾತ್ರವಲ್ಲದೆ, ಕೆಲವು ಧಾರಾವಾಹಿಗಳು ಉತ್ತಮ ಕೆಲಸಗಳಿಗೆ ಕಾರಣವಾಗುತ್ತದೆ ಎಂಬುದನ್ನು ಮಹಾನಾಯಕ ತಿಳಿಸಿಕೊಟ್ಟಿದೆ.


ಇದನ್ನೂ ಓದಿ: ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...