Homeಮುಖಪುಟಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

ಹಲವು ಧ್ವನಿಗಳಲ್ಲಿ ಅಂಬೇಡ್ಕರ್ ವಿಚಾರಗಳನ್ನು ಹಿಡಿದಿಡುತ್ತಿರುವ ಓದು ಅಭಿಯಾನ

- Advertisement -
- Advertisement -

ಕನ್ನಡ ಕಿರುತೆರೆಯಲ್ಲಿ ಭಾರಿ ಜನಪ್ರಿಯತೆ ಗಳಿಸಿ ಹೊಸ ಅಲೆಯನ್ನೇ ಸೃಷ್ಟಿಸಿದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನ ಆಧಾರಿತ ಧಾರಾವಾಹಿ ಮಹಾನಾಯಕ. (ಹಿಂದಿಯ ಏಕ್ ಮಹಾನಾಯಕ್ ಧಾರಾವಾಹಿಯ ಡಬ್ಬಿಂಗ್). ಈ ಧಾರಾವಾಹಿ ಅಂಬೇಡ್ಕರ್ ಬದುಕಿನ ಹಲವು ಘಟ್ಟಗಳನ್ನು ಕನ್ನಡಿಗರಿಗೆ ತಿಳಿಸಲು ಸಹಕಾರಿಯಾಗಿತ್ತು. ನಗರ-ಗ್ರಾಮೀಣ ಪ್ರದೇಶಗಳಲ್ಲಿ ಈ ಧಾರಾವಾಹಿ ಬೀರಿದ ಪ್ರಭಾವ ಹಲವು ಬಗೆಯದ್ದು. ಇಂದಿಗೂ ಗ್ರಾಮಗಳ ಹೆಬ್ಬಾಗಿಲುಗಳಲ್ಲಿ ಈ ಧಾರಾವಾಹಿಯ ದೊಡ್ಡ ಭಿತ್ತಿಚಿತ್ರಗಳು ಕಾಣಿಸುತ್ತವೆ. ಇದರಿಂದ ಪ್ರೇರಣೆಗೊಂಡು ಅಂಬೇಡ್ಕರ್ ವಿಚಾರಗಳನ್ನು ಕನ್ನಡಿಗರ ಕಿವಿಗೆ ಅಪ್ಪಳಿಸುವಂತೆ ಮಾಡಲು ಅಂಬೇಡ್ಕರ್ ಓದು ಅಭಿಯಾನ ಆರಂಭಿಸಿದವರು ಅರುಣ್ ಜೋಳದಕೂಡ್ಲಿಗಿ.

ಮಹಾನಾಯಕ ಧಾರಾವಾಹಿ ಪ್ರಸಾರ ಆರಂಭಿಸಿದಂತೆ ಜನರು ಅಂತರ್ಜಾಲದಲ್ಲಿ ಹೆಚ್ಚಾಗಿ ಅಂಬೇಡ್ಕರ್ ಬರಹ ಭಾಷಣಗಳ ಹುಡುಕಾಟ ಶುರುಮಾಡಿದ್ದರು. ಇದರಲ್ಲಿ ಯೂಟ್ಯೂಬ್‌ನಲ್ಲಿ ಹುಡುಕಾಟ ಮಾಡುವವರ ಸಂಖ್ಯೆ ದೊಡ್ಡದು. ಆದರೆ ಕನ್ನಡದಲ್ಲಿ ಅಂಬೇಡ್ಕರ್ ವಿಚಾರಗಳನ್ನು ಪ್ರಸ್ತುತ ಪಡಿಸುವ ವಿಡಿಯೋ, ಆಡಿಯೋಗಳು ಬಹಳ ಕಡಿಮೆ. ಹೀಗಾಗಿ ಅಂಬೇಡ್ಕರ್ ವಿಚಾರ, ಚಿಂತನೆ, ಭಾಷಣಗಳನ್ನು ಸಾಮಾನ್ಯ ಜನರಿಗೆ ತಿಳಿಸುವ ಉದ್ದೇಶ ಈ ಓದು ಅಭಿಯಾನ ಸರಣಿಯದ್ದು.

ಅಂಬೇಡ್ಕರ್ ವೈಚಾರಿಕತೆ – ಚಿಂತನೆಯಲ್ಲಿ ನಂಬಿಕೆ ಇಟ್ಟವರಿಂದ ಅಂಬೇಡ್ಕರ್ ಬರಹ-ಭಾಷಣಗಳ ಆಯ್ದ ಭಾಗಗಳನ್ನು ಓದಿಸಿ ಈ ಯೂಟ್ಯೂಬ್ ಚಾನೆಲ್‌ನಲ್ಲಿ ಹಾಕಲಾಗುತ್ತಿದೆ. ಅಂಬೇಡ್ಕರ್ ಚಿಂತನೆಯನ್ನು ಸಾಧ್ಯವಾದಷ್ಟು ಸಾಮಾನ್ಯ ಜನರಿಗೆ ವಿಸ್ತರಿಸುವ ಕನಸು ಈ ಸರಣಿಯ ಹಿಂದಿದೆ. ಅಂತೆಯೇ ಬಾಬಾಸಾಹೇಬರ ಚಿಂತನೆಯ ಆಡಿಯೋ ರೂಪದ ಆರ್ಕೈವ್ ರೂಪಿಸುವ ಉದ್ದೇಶ ಅರುಣ್ ಜೋಳದಕೂಡ್ಲಿಗಿ ಅವರಿಗಿದೆ.

“ಅಂಬೇಡ್ಕರ್ ಕುರಿತ ಧಾರಾವಾಹಿ ಮಹಾನಾಯಕ ಪ್ರಸಾರವಾದಾಗ ಇಂಟರ್‌ನೆಟ್‌ನಲ್ಲಿ ಹೆಚ್ಚಾಗಿ ಜನ ಅಂಬೇಡ್ಕರ್ ಬಗ್ಗೆ ಹುಡುಕಾಡಿದ್ದಾರೆ. ಈ ಧಾರವಾಹಿ ಮೂಲಕ ಜನಪ್ರಿಯ ವಲಯದಲ್ಲಿ ಅಂಬೇಡ್ಕರ್ ಬಗ್ಗೆ ತಿಳಿಯುವ ಕುತೂಹಲ ಹೆಚ್ಚಾಯಿತು. ಹಾಗಾಗಿ ಹೆಚ್ಚು ಜನ ಹುಡುಕಾಡಿದ್ದಾರೆ. ನಾನುಗೌರಿ.ಕಾಂ ಕೂಡ ಈ ಬಗ್ಗೆ ಲೇಖನ ಮಾಡಿತ್ತು. ಅದನ್ನು ಓದಿದ ನಂತರ ನಾನು ಕೂಡ ಹುಡುಕಾಡಿದೆ. ಆದರೆ ಎಂಟತ್ತು ಭಾಷಣಗಳು ಹಾಗೂ ಕೆಲವು ಹಾಡುಗಳು ಮಾತ್ರ ಸಿಗುತ್ತಿತ್ತು. ಕನ್ನಡದಲ್ಲಿ ಅಂಬೇಡ್ಕರ್ ಅವರ ಚಿಂತನೆಗಳ ವಿಡಿಯೋ, ಆಡಿಯೋ ಅಷ್ಟಾಗಿ ಇಲ್ಲ ಎಂಬುದು ತಿಳಿಯಿತು. ಹಾಗಾಗಿ ಈ ಪ್ರಯತ್ನಕ್ಕೆ ಕೈಹಾಕಿದ್ದೇನೆ” ಎನ್ನುತ್ತಾರೆ ಅರುಣ್.

ಅರುಣ್ ಜೋಳದಕೂಡ್ಲಿಗಿ

ಪ್ರಸ್ತುತ ಜಾನಪದ ವಿಶ್ವವಿದ್ಯಾಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಅರುಣ್ ಈ ಅಭಿಯಾನದ ಬಗ್ಗೆ ಹೇಳಿದ್ದು ಹೀಗೆ: “ಅಂಬೇಡ್ಕರ್ ವಿಚಾರಗಳನ್ನು ಸಂಪುಟಗಳಲ್ಲಿ ಕೊಟ್ಟರೆ ಅದು ಹಾಗೆ ಮನೆಯ ಕಪಾಟುಗಳಲ್ಲಿ ಉಳಿದುಬಿಡುವ ಸಾಧ್ಯತೆ ಇದೆ. ಜನ ಅದನ್ನು ಮತ್ತೆ ತೆರೆದು ನೋಡುವುದು ಕಡಿಮೆ. ಬೇಸಿಕ್ ವಿಚಾರಗಳನ್ನು ಜನರಿಗೆ ಹಂಚುವ ಉದ್ದೇಶದಿಂದ ಮೊದಲು ಸುಮಾರು 300 ಜನರಿಗೆ ನನ್ನ ವಿಚಾರ ತಿಳಿಸಿದೆ. ಆದರೆ ಅಂತಹ ಸ್ಪಂದನೆ ಸಿಗಲಿಲ್ಲ. ಆಮೇಲೆ ನಾನು ವೈಯಕ್ತಿಕವಾಗಿ ಕರೆ ಮಾಡಿ ಕೇಳಿಕೊಂಡ ನಂತರ ಕೆಲವರು ಒಪ್ಪಿದರು” ಎನ್ನುತ್ತಾರೆ.

“ಮೊದಲು ನನಗೆ ಆಡಿಯೋ ಕಳಿಸಿದ್ದು ಲೇಖಕಿ ಎಚ್.ಎಸ್.ಅನುಪಮಾ ಅವರು. ಹಾಗಾಗಿ ಅವರದ್ದೇ ಆಡಿಯೋವನ್ನು 7 ಸೆಪ್ಟಂಬರ್ 2020ರಂದು ಮೊದಲ ಸಂಚಿಕೆಯಾಗಿ ಪ್ರಸಾರ ಮಾಡಿದೆ. ಈ ಅಭಿಯಾನದಲ್ಲಿ ಇಂತವರೇ ಓದಬೇಕು ಅನ್ನುವ ನಿಯಮಗಳಿಲ್ಲ. ಎಲ್ಲರೂ ಓದಬಹುದು. ಕನಿಷ್ಠ 10 ರಿಂದ 15 ನಿಮಿಷಗಳ ಆಡಿಯೋ ಮಾಡಿ ಕಳುಹಿಸಬಹುದು”.

“ಪ್ರತಿದಿನ ಹಾಕುವ ಈ ಆಡಿಯೋಗಳು ಎಷ್ಟು ಜನಕ್ಕೆ ತಲುಪುತ್ತದೋ ಗೊತ್ತಿಲ್ಲ. ಆದರೆ, ಒಳ್ಳೆಯ ಸ್ಪಂದನೆ ಸಿಗುತ್ತಿದೆ. ಹೆಚ್ಚು ಶೇರ್ ಆಗುತ್ತಿದೆ. ಒಟ್ಟು 100 ಗಂಟೆಗಳ ಆಡಿಯೋ ಮಾಡುವುದು ನನ್ನ ಉದ್ದೇಶ. ಇಲ್ಲಿಯವರೆಗೆ 160 ಆಡಿಯೋಗಳನ್ನು ಅಪ್ಲೋಡ್ ಮಾಡಲಾಗಿದೆ. ಮುಂದಕ್ಕೆ ಸುಮಾರು 700ಕ್ಕೂ ಹೆಚ್ಚು ಆಡಿಯೋ ಕ್ಲಿಪ್‌ಗಳು ಆಗಬಹುದು. ಒಟ್ಟಾರೆ ಕನ್ನಡದಲ್ಲಿ ಅಂಬೇಡ್ಕರ್ ವಿಚಾರಗಳು, ಅವರ ಭಾಷಣಗಳು ಜನರಿಗೆ ಸುಲಭವಾಗಿ ಸಿಗಬೇಕು. ಅದಕ್ಕೊಂದು ಆರ್ಕೈವ್ ಬೇಕು. ಅದನ್ನೂ ಮಾಡುವ ಕೆಲಸ ಮಾಡುತ್ತಿದ್ದೇನೆ” ಎನ್ನುತ್ತಾರೆ.

ಬೇರೆ ಭಾಷೆಗಳಲ್ಲಿ ಇಂತಹ ಒಂದು ಪ್ರಯತ್ನ ನಡೆದಿಲ್ಲ. ಹಾಗಾಗಿ ಕನ್ನಡ ಒಂದು ಮಾದರಿಯಾಗಲಿದೆ. ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಅಂಬೇಡ್ಕರ್ ಕೇಂದ್ರಗಳಿವೆ. ಕೋಟ್ಯಂತರ ರೂಪಾಯಿ ಅನುದಾನ ಬರುತ್ತೆ. ಆದರೆ, ವರ್ಷಕ್ಕೆ ಸುಮಾರು 3-4 ಲಕ್ಷ ಖರ್ಚು ಮಾಡಿ ಒಂದು ಕಾರ್ಯಕ್ರಮ ಮಾಡಿ ಸುಮ್ಮನಾಗುತ್ತಾರೆ. ಆದರೆ ಈ ಮೂಲಕ ಅಂಬೇಡ್ಕರ್ ಜನಸಾಮಾನ್ಯರಿಗೆ ದಕ್ಕುವುದಿಲ್ಲ. ಹಾಗಾಗಿ ಅವರನ್ನು ಬೈಯುತ್ತಾ, ವಿಮರ್ಶೆ ಮಾಡಿಕೊಂಡು ಕುಳಿತುಕೊಳ್ಳುವ ಬದಲು ನಾವೇ ಏನಾದರೂ ಮಾಡಬೇಕು ಅಲ್ಲವೇ ಎಂದು ಪ್ರಶ್ನಿಸುತ್ತಾರೆ ಅರುಣ್.

“ಬಿ.ಸುರೇಶ್, ಎಚ್.ಎಸ್.ಅನುಪಮಾ, ಎಚ್.ಎಸ್.ರಾಘವೇಂದ್ರ ರಾವ್, ದೇವನೂರು ಮಹಾದೇವ, ಮಂಜಮ್ಮ ಜೋಗತಿ ಹೀಗೆ ಹಲವು ಪ್ರಸಿದ್ಧರು ಓದು ಅಭಿಯಾನದ ಭಾಗವಾಗಿದ್ದಾರೆ. ಈಗಾಗಲೇ 160 ಸಂಚಿಕೆಗಳಾಗಿವೆ. 2ನೇ ಸರಣಿ ಆರಂಭವಾದಾಗ ಹೆಚ್ಚು ಜನ ಸಕ್ರಿಯರಾಗಿದ್ದಾರೆ. ತುಂಬಾ ಜನ ತಾವೇ ಮುಂದಾಗಿ ಓದು ಅಭಿಯಾನದ ಭಾಗವಾಗಲು ಬರುತ್ತಿದ್ದಾರೆ. ಅಂತಹವರನ್ನು ನಾವು ಪ್ರೋತ್ಸಾಹಿಸುತ್ತಿದ್ದೇವೆ. ಹೆಣ್ಣು ಮಕ್ಕಳಿಗೆ ಹೆಚ್ಚು ಪ್ರಾಮುಖ್ಯತೆಯಿದೆ. ಹೊಸ ಹೊಸ ವಿಚಾರಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ನಾನೇ ಸಂಪುಟಗಳಿಂದ ಪಠ್ಯವನ್ನು ಆರಿಸಿಕೊಡುತ್ತಿದ್ದೇನೆ” ಎಂದು ಅರುಣ್ ತಿಳಿಸುತ್ತಾರೆ.

“ಅಂಬೇಡ್ಕರ್ ಅವರ ಚಿಂತನೆಗಳು ಕೇವಲ ಜಾತಿ, ತಾರತಮ್ಯದ ವಿರುದ್ಧದ ಹೋರಾಟಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ವಿಜ್ಞಾನ, ತಂತ್ರಜ್ಞಾನದ ಕುರಿತು ಮಾತನಾಡಿದ್ದಾರೆ. ಹಲವು ವಿಚಾರಗಳನ್ನು ತಮ್ಮ ಭಾಷಣಗಳಲ್ಲಿ, ಬರಹಗಳಲ್ಲಿ ತಿಳಿಸಿದ್ದಾರೆ. ಹಾಗಾಗಿ ಇವುಗಳ ಮೂಲಕವೂ ಅಂಬೇಡ್ಕರ್ ಅವರ ಮಾತುಗಳನ್ನು ಜನರ ಕಿವಿಗೆ ತಲುಪಿಸುವ ಕೆಲಸವಾಗುತ್ತಿದೆ” ಎಂದು ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಓದು ಸರಣಿಯಲ್ಲಿ ಪಾಲ್ಗೊಂಡಿರುವ ಬರಹಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಹರ್ಷ ಕುಗ್ವೆ “ಇದೊಂದು ಉತ್ತಮ ಕೆಲಸ. ಭಾರತದಲ್ಲಿ ಯಾವ ಭಾಷೆಯಲ್ಲಿಯೂ ಅಂಬೇಡ್ಕರ್ ಅವರನ್ನು ಹೀಗೆ ಕಟ್ಟಿಕೊಡುವ ಕೆಲಸವಾಗಿಲ್ಲ. ಅರುಣ್ ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅಂಬೇಡ್ಕರ್ ವಿಚಾರಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಈ ಕೆಲಸ ಬೇಕಾಗಿತ್ತು. ನಾನು ದೀರ್ಘವಾಗಿ ಒಂದು ಗಂಟೆ ಕಾಲ ಅಂಬೇಡ್ಕರ್ ವಿಚಾರಗಳನ್ನು ಓದಿದ್ದೇನೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಾರೆ ಒಂದು ಕಿರುತೆರೆಯ ಧಾರಾವಾಹಿ ಕೂಡ ಜನರ ಮೇಲೆ ಪ್ರಭಾವ ಬೀರಬಲ್ಲದು. ಕೇವಲ ಅತ್ತೆ ಸೊಸೆ ಜಗಳ, ಗಂಡಿಗಾಗಿ ಅಕ್ಕ-ತಂಗಿ ಜಗಳ ಮಾತ್ರವಲ್ಲದೆ, ಕೆಲವು ಧಾರಾವಾಹಿಗಳು ಉತ್ತಮ ಕೆಲಸಗಳಿಗೆ ಕಾರಣವಾಗುತ್ತದೆ ಎಂಬುದನ್ನು ಮಹಾನಾಯಕ ತಿಳಿಸಿಕೊಟ್ಟಿದೆ.


ಇದನ್ನೂ ಓದಿ: ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....