Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ...

- Advertisement -
- Advertisement -

“ಈ ವಿಡಿಯೊದಲ್ಲಿರುವ ಸಸ್ಯವು ಪ್ರಕೃತಿಯ ವಿಸ್ಮಯವಾಗಿದ್ದು, ಶಬ್ದದೊಂದಿಗೆ ಪರಾಗವನ್ನು ಹೊರಗೆ ಸೂಸಿಸುತ್ತಿದೆ. ಇದು ಊದು ಪಾವೈ ಎಂಬ ಔಷಧೀಯ ಸಸಿಯಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ, ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರಸೂಸುತ್ತದೆ” ಎಂಬ ಪ್ರತಿಪಾದನೆಯೊಂದಿಗೆ ಒಂದು ಪೋಸ್ಟ್‌ ವೈರಲ್‌ ಆಗಿದೆ. ಈ ವಿಡಿಯೋವನ್ನು ಇದೇ ಪ್ರತಿಪಾದನೆಯೊಂದಿಗೆ ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ.

ನಾವು ಸೂಕ್ಷ್ಮವಾಗಿ ನೋಡಿದರೆ ಈ ವಿಡಿಯೋದಲ್ಲಿ ‘LUKE PENRY EXR’ ಎಂದು ವಾಟರ್‌ ಮಾರ್ಕ್‌ ಇರುವುದು ಕಂಡು ಬರುತ್ತದೆ. ಈ ಸಾಕ್ಷಿಯ ಆಧಾರದಲ್ಲಿ ಗೂಗಲ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸರ್ಚ್ ಮಾಡಿದಾಗ ಲ್ಯೂಕ್‌ ಪೆನ್ರಿ ಎಂಬವರ ಟ್ವಿಟ್ಟರ್‌ ಖಾತೆ ಕಂಡುಬಂದಿದೆ. ಈಗ ಹರಿದಾಡಿರುವ ವಿಡಿಯೋ ರೀತಿಯಲ್ಲೇ ಇರುವ ವಿಡಿಯೋ 2021ರ ಸೆಪ್ಟೆಂಬರ್‌ 17ರಂದು ‘ನ್ಯೂ ಸೌಂಡ್‌ ಆನ್‌’ ಶೀರ್ಷಿಕೆಯೊಂದಿದೆ ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಈ ವಿಡಿಯೋವು 3ಡಿ ಕಲಾವಿದ ಲ್ಯೂಕ್‌ ಪೆನ್ರಿ ಎಂಬವರು ಸೃಷ್ಟಿಸಿದ್ದು, ವಾಸ್ತವವಾಗಿ ಇದು ಡಿಜಿಟಲ್‌ ಶಬ್ದ ಕಲೆಯಾಗಿದೆ. Foundation.appನಲ್ಲಿ ಲ್ಯೂಕ್‌ ಅವರು ಈ ಕಲೆಯನ್ನು ಹರಾಜಿಗೂ ಇರಿಸಿದ್ದರು. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ ಎಂದು ಫ್ಯಾಕ್ಟ್‌ಲಿ.ಕಾಮ್‌ ವರದಿ ಮಾಡಿದೆ.

ಲ್ಯೂಕ್‌‌ ಹೆನ್ರಿಯವರ ಟ್ವಿಟ್ಟರ್‌ ಖಾತೆಯ ವಿವರಣೆಯಲ್ಲಿ ಇವರು 3ಡಿ ಕಲಾವಿದ ಎಂದಿದೆ. ಸಾಕಷ್ಟು ಡಿಜಿಟಲ್ ಶಬ್ದಕಲೆಯ ವಿಡಿಯೋಗಳನ್ನು ಇವರ ಟೈಮ್‌ಲೈನ್‌‌ನಲ್ಲಿ ನೋಡಬಹುದು. ಡಿಜಿಟಲ್‌ ಕಲೆಗಳ ನೇರ ಹರಾಜು ವೇದಿಕೆಯಲ್ಲಿ ಒಂದಾದ Foundation.appನಲ್ಲಿ ಇದನ್ನು ಲ್ಯೂಕ್‌ ಹರಾಜಿಗೂ ಇರಿಸಿದ್ದರು. ಕಲಾಕೃತಿಯ ಮಾಹಿತಿ ವಿಭಾಗವು ಅದನ್ನು ಲೂಪಿಂಗ್ ಅನಿಮೇಷನ್ ಎಂದು ಗುರುತಿಸಲಾಗಿದೆ. ‘ಜಂಗಲ್ ಪೈಪ್ಸ್’ ಎಂಬ ಶೀರ್ಷಿಕೆ ನೀಡಲಾಗಿದೆ. ಇದಲ್ಲದೆ, ಮಾಹಿತಿ ವಿಭಾಗದಲ್ಲಿ ಲ್ಯೂಕ್‌ ಹೀಗೆ ಬರೆದಿದ್ದಾರೆ: “ವಿಡಿಯೋವು ಭಾರತದಲ್ಲಿ ಹೆಚ್ಚು ಗೊಂದಲಕ್ಕೆ ಕಾರಣವಾಯಿತು. ಶಬ್ದದೊಂದಿಗೆ ಹೊಗೆಯನ್ನು ಹೊರಗೆ ಸೂಸುವ ಊದು ಪಾವೈ ಎಂಬ ಔಷಧೀಯ ಸಸ್ಯ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ ಎಂದು ಹಲವು ಚಾನೆಲ್‌ಗಳು ವರದಿ ಮಾಡಿವೆ.”

ಮುಂದುವರಿದು, “ಐಎಫ್‌ಎಸ್ ಅಧಿಕಾರಿಯು ಅದೇ ವೀಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಹೀಗಾಗಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಯಿತು” ಎಂದು ಕಲಾವಿದ ತಮ್ಮ ಮಾಹಿತಿಯನ್ನು ಸೇರಿಸಿದ್ದಾರೆ.

 ಇದನ್ನೂ ಓದಿರಿ: ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು…

ಹೆಚ್ಚಿನ ಹುಡುಕಾಟ ನಡೆಸಿದಾಗ ವೈರಲ್‌ ಪ್ರತಿಪಾದನೆಯೊಂದಿಗೆಯೇ ಐಎಫ್‌ಎಸ್‌‌ ಅಧಿಕಾರಿಯ ಟ್ವೀಟ್‌ ಕಂಡು ಬಂದಿದೆ. ಅವರು ಕೂಡ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದು, “ಊದು ಪಾವೈ ಎಂಬ ಔಷಧೀಯ ಸಸಿ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ” ಎಂದಿದ್ದಾರೆ. ಆದರೆ ಈ ಟ್ವೀಟ್ ಅನ್ನು ಆನಂತರದಲ್ಲಿ ಡಿಲೀಟ್‌ ಮಾಡಿದ್ದಾರೆ.

ಆದಾಗ್ಯೂ, ವೀಡಿಯೊ ಡಿಜಿಟಲ್ ಕಲೆ ಮತ್ತು ಶಬ್ದಗಳನ್ನು ಉತ್ಪಾದಿಸುವ ನಿಜವಾದ ಸಸ್ಯವಲ್ಲ. ತನ್ನ ಟ್ವಿಟ್ಟರ್ ಟೈಮ್‌ಲೈನ್‌ನಲ್ಲಿ ಲ್ಯೂಕ್ ಪೆನ್ರಿ ಅವರು ತಮಿಳು ವ್ಯಕ್ತಿಯೊಬ್ಬರು ಸತ್ಯಾಂಶವನ್ನು ವಿವರಿಸಿರುವ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಮುಂದುವರಿದು ಹೇಳುವುದಾದರೆ ಇಲ್ಲಿ ಪ್ರತಿಪಾದಿಸಿರುವಂತೆ ಊದು ಪಾವೈ ಎಂಬ ಔಷಧೀಯ ಸಸಿಯ ಕುರಿತು ನಮಗೆ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋದಲ್ಲಿರುವುದು ಡಿಜಿಟಲ್ ಶಬ್ದ ಕಲೆ ಎಂಬುದು ಖಚಿತವಾಗಿದೆ, ಇದು ನಿಜವಾದ ಸಸಿಯಲ್ಲ ಎಂದು ತಿಳಿಯುತ್ತದೆ” ಎಂದು ಫ್ಯಾಕ್ಟ್‌ಲಿ ಹೇಳಿದೆ.

ಇದನ್ನೂ ಓದಿರಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...