Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ...

- Advertisement -
- Advertisement -

“ಈ ವಿಡಿಯೊದಲ್ಲಿರುವ ಸಸ್ಯವು ಪ್ರಕೃತಿಯ ವಿಸ್ಮಯವಾಗಿದ್ದು, ಶಬ್ದದೊಂದಿಗೆ ಪರಾಗವನ್ನು ಹೊರಗೆ ಸೂಸಿಸುತ್ತಿದೆ. ಇದು ಊದು ಪಾವೈ ಎಂಬ ಔಷಧೀಯ ಸಸಿಯಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ, ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರಸೂಸುತ್ತದೆ” ಎಂಬ ಪ್ರತಿಪಾದನೆಯೊಂದಿಗೆ ಒಂದು ಪೋಸ್ಟ್‌ ವೈರಲ್‌ ಆಗಿದೆ. ಈ ವಿಡಿಯೋವನ್ನು ಇದೇ ಪ್ರತಿಪಾದನೆಯೊಂದಿಗೆ ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ.

ನಾವು ಸೂಕ್ಷ್ಮವಾಗಿ ನೋಡಿದರೆ ಈ ವಿಡಿಯೋದಲ್ಲಿ ‘LUKE PENRY EXR’ ಎಂದು ವಾಟರ್‌ ಮಾರ್ಕ್‌ ಇರುವುದು ಕಂಡು ಬರುತ್ತದೆ. ಈ ಸಾಕ್ಷಿಯ ಆಧಾರದಲ್ಲಿ ಗೂಗಲ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸರ್ಚ್ ಮಾಡಿದಾಗ ಲ್ಯೂಕ್‌ ಪೆನ್ರಿ ಎಂಬವರ ಟ್ವಿಟ್ಟರ್‌ ಖಾತೆ ಕಂಡುಬಂದಿದೆ. ಈಗ ಹರಿದಾಡಿರುವ ವಿಡಿಯೋ ರೀತಿಯಲ್ಲೇ ಇರುವ ವಿಡಿಯೋ 2021ರ ಸೆಪ್ಟೆಂಬರ್‌ 17ರಂದು ‘ನ್ಯೂ ಸೌಂಡ್‌ ಆನ್‌’ ಶೀರ್ಷಿಕೆಯೊಂದಿದೆ ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಈ ವಿಡಿಯೋವು 3ಡಿ ಕಲಾವಿದ ಲ್ಯೂಕ್‌ ಪೆನ್ರಿ ಎಂಬವರು ಸೃಷ್ಟಿಸಿದ್ದು, ವಾಸ್ತವವಾಗಿ ಇದು ಡಿಜಿಟಲ್‌ ಶಬ್ದ ಕಲೆಯಾಗಿದೆ. Foundation.appನಲ್ಲಿ ಲ್ಯೂಕ್‌ ಅವರು ಈ ಕಲೆಯನ್ನು ಹರಾಜಿಗೂ ಇರಿಸಿದ್ದರು. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ ಎಂದು ಫ್ಯಾಕ್ಟ್‌ಲಿ.ಕಾಮ್‌ ವರದಿ ಮಾಡಿದೆ.

ಲ್ಯೂಕ್‌‌ ಹೆನ್ರಿಯವರ ಟ್ವಿಟ್ಟರ್‌ ಖಾತೆಯ ವಿವರಣೆಯಲ್ಲಿ ಇವರು 3ಡಿ ಕಲಾವಿದ ಎಂದಿದೆ. ಸಾಕಷ್ಟು ಡಿಜಿಟಲ್ ಶಬ್ದಕಲೆಯ ವಿಡಿಯೋಗಳನ್ನು ಇವರ ಟೈಮ್‌ಲೈನ್‌‌ನಲ್ಲಿ ನೋಡಬಹುದು. ಡಿಜಿಟಲ್‌ ಕಲೆಗಳ ನೇರ ಹರಾಜು ವೇದಿಕೆಯಲ್ಲಿ ಒಂದಾದ Foundation.appನಲ್ಲಿ ಇದನ್ನು ಲ್ಯೂಕ್‌ ಹರಾಜಿಗೂ ಇರಿಸಿದ್ದರು. ಕಲಾಕೃತಿಯ ಮಾಹಿತಿ ವಿಭಾಗವು ಅದನ್ನು ಲೂಪಿಂಗ್ ಅನಿಮೇಷನ್ ಎಂದು ಗುರುತಿಸಲಾಗಿದೆ. ‘ಜಂಗಲ್ ಪೈಪ್ಸ್’ ಎಂಬ ಶೀರ್ಷಿಕೆ ನೀಡಲಾಗಿದೆ. ಇದಲ್ಲದೆ, ಮಾಹಿತಿ ವಿಭಾಗದಲ್ಲಿ ಲ್ಯೂಕ್‌ ಹೀಗೆ ಬರೆದಿದ್ದಾರೆ: “ವಿಡಿಯೋವು ಭಾರತದಲ್ಲಿ ಹೆಚ್ಚು ಗೊಂದಲಕ್ಕೆ ಕಾರಣವಾಯಿತು. ಶಬ್ದದೊಂದಿಗೆ ಹೊಗೆಯನ್ನು ಹೊರಗೆ ಸೂಸುವ ಊದು ಪಾವೈ ಎಂಬ ಔಷಧೀಯ ಸಸ್ಯ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ ಎಂದು ಹಲವು ಚಾನೆಲ್‌ಗಳು ವರದಿ ಮಾಡಿವೆ.”

ಮುಂದುವರಿದು, “ಐಎಫ್‌ಎಸ್ ಅಧಿಕಾರಿಯು ಅದೇ ವೀಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಹೀಗಾಗಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಯಿತು” ಎಂದು ಕಲಾವಿದ ತಮ್ಮ ಮಾಹಿತಿಯನ್ನು ಸೇರಿಸಿದ್ದಾರೆ.

 ಇದನ್ನೂ ಓದಿರಿ: ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು…

ಹೆಚ್ಚಿನ ಹುಡುಕಾಟ ನಡೆಸಿದಾಗ ವೈರಲ್‌ ಪ್ರತಿಪಾದನೆಯೊಂದಿಗೆಯೇ ಐಎಫ್‌ಎಸ್‌‌ ಅಧಿಕಾರಿಯ ಟ್ವೀಟ್‌ ಕಂಡು ಬಂದಿದೆ. ಅವರು ಕೂಡ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದು, “ಊದು ಪಾವೈ ಎಂಬ ಔಷಧೀಯ ಸಸಿ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ” ಎಂದಿದ್ದಾರೆ. ಆದರೆ ಈ ಟ್ವೀಟ್ ಅನ್ನು ಆನಂತರದಲ್ಲಿ ಡಿಲೀಟ್‌ ಮಾಡಿದ್ದಾರೆ.

ಆದಾಗ್ಯೂ, ವೀಡಿಯೊ ಡಿಜಿಟಲ್ ಕಲೆ ಮತ್ತು ಶಬ್ದಗಳನ್ನು ಉತ್ಪಾದಿಸುವ ನಿಜವಾದ ಸಸ್ಯವಲ್ಲ. ತನ್ನ ಟ್ವಿಟ್ಟರ್ ಟೈಮ್‌ಲೈನ್‌ನಲ್ಲಿ ಲ್ಯೂಕ್ ಪೆನ್ರಿ ಅವರು ತಮಿಳು ವ್ಯಕ್ತಿಯೊಬ್ಬರು ಸತ್ಯಾಂಶವನ್ನು ವಿವರಿಸಿರುವ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಮುಂದುವರಿದು ಹೇಳುವುದಾದರೆ ಇಲ್ಲಿ ಪ್ರತಿಪಾದಿಸಿರುವಂತೆ ಊದು ಪಾವೈ ಎಂಬ ಔಷಧೀಯ ಸಸಿಯ ಕುರಿತು ನಮಗೆ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋದಲ್ಲಿರುವುದು ಡಿಜಿಟಲ್ ಶಬ್ದ ಕಲೆ ಎಂಬುದು ಖಚಿತವಾಗಿದೆ, ಇದು ನಿಜವಾದ ಸಸಿಯಲ್ಲ ಎಂದು ತಿಳಿಯುತ್ತದೆ” ಎಂದು ಫ್ಯಾಕ್ಟ್‌ಲಿ ಹೇಳಿದೆ.

ಇದನ್ನೂ ಓದಿರಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...