Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ...

- Advertisement -
- Advertisement -

“ಈ ವಿಡಿಯೊದಲ್ಲಿರುವ ಸಸ್ಯವು ಪ್ರಕೃತಿಯ ವಿಸ್ಮಯವಾಗಿದ್ದು, ಶಬ್ದದೊಂದಿಗೆ ಪರಾಗವನ್ನು ಹೊರಗೆ ಸೂಸಿಸುತ್ತಿದೆ. ಇದು ಊದು ಪಾವೈ ಎಂಬ ಔಷಧೀಯ ಸಸಿಯಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ, ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರಸೂಸುತ್ತದೆ” ಎಂಬ ಪ್ರತಿಪಾದನೆಯೊಂದಿಗೆ ಒಂದು ಪೋಸ್ಟ್‌ ವೈರಲ್‌ ಆಗಿದೆ. ಈ ವಿಡಿಯೋವನ್ನು ಇದೇ ಪ್ರತಿಪಾದನೆಯೊಂದಿಗೆ ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ.

ನಾವು ಸೂಕ್ಷ್ಮವಾಗಿ ನೋಡಿದರೆ ಈ ವಿಡಿಯೋದಲ್ಲಿ ‘LUKE PENRY EXR’ ಎಂದು ವಾಟರ್‌ ಮಾರ್ಕ್‌ ಇರುವುದು ಕಂಡು ಬರುತ್ತದೆ. ಈ ಸಾಕ್ಷಿಯ ಆಧಾರದಲ್ಲಿ ಗೂಗಲ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸರ್ಚ್ ಮಾಡಿದಾಗ ಲ್ಯೂಕ್‌ ಪೆನ್ರಿ ಎಂಬವರ ಟ್ವಿಟ್ಟರ್‌ ಖಾತೆ ಕಂಡುಬಂದಿದೆ. ಈಗ ಹರಿದಾಡಿರುವ ವಿಡಿಯೋ ರೀತಿಯಲ್ಲೇ ಇರುವ ವಿಡಿಯೋ 2021ರ ಸೆಪ್ಟೆಂಬರ್‌ 17ರಂದು ‘ನ್ಯೂ ಸೌಂಡ್‌ ಆನ್‌’ ಶೀರ್ಷಿಕೆಯೊಂದಿದೆ ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಈ ವಿಡಿಯೋವು 3ಡಿ ಕಲಾವಿದ ಲ್ಯೂಕ್‌ ಪೆನ್ರಿ ಎಂಬವರು ಸೃಷ್ಟಿಸಿದ್ದು, ವಾಸ್ತವವಾಗಿ ಇದು ಡಿಜಿಟಲ್‌ ಶಬ್ದ ಕಲೆಯಾಗಿದೆ. Foundation.appನಲ್ಲಿ ಲ್ಯೂಕ್‌ ಅವರು ಈ ಕಲೆಯನ್ನು ಹರಾಜಿಗೂ ಇರಿಸಿದ್ದರು. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ ಎಂದು ಫ್ಯಾಕ್ಟ್‌ಲಿ.ಕಾಮ್‌ ವರದಿ ಮಾಡಿದೆ.

ಲ್ಯೂಕ್‌‌ ಹೆನ್ರಿಯವರ ಟ್ವಿಟ್ಟರ್‌ ಖಾತೆಯ ವಿವರಣೆಯಲ್ಲಿ ಇವರು 3ಡಿ ಕಲಾವಿದ ಎಂದಿದೆ. ಸಾಕಷ್ಟು ಡಿಜಿಟಲ್ ಶಬ್ದಕಲೆಯ ವಿಡಿಯೋಗಳನ್ನು ಇವರ ಟೈಮ್‌ಲೈನ್‌‌ನಲ್ಲಿ ನೋಡಬಹುದು. ಡಿಜಿಟಲ್‌ ಕಲೆಗಳ ನೇರ ಹರಾಜು ವೇದಿಕೆಯಲ್ಲಿ ಒಂದಾದ Foundation.appನಲ್ಲಿ ಇದನ್ನು ಲ್ಯೂಕ್‌ ಹರಾಜಿಗೂ ಇರಿಸಿದ್ದರು. ಕಲಾಕೃತಿಯ ಮಾಹಿತಿ ವಿಭಾಗವು ಅದನ್ನು ಲೂಪಿಂಗ್ ಅನಿಮೇಷನ್ ಎಂದು ಗುರುತಿಸಲಾಗಿದೆ. ‘ಜಂಗಲ್ ಪೈಪ್ಸ್’ ಎಂಬ ಶೀರ್ಷಿಕೆ ನೀಡಲಾಗಿದೆ. ಇದಲ್ಲದೆ, ಮಾಹಿತಿ ವಿಭಾಗದಲ್ಲಿ ಲ್ಯೂಕ್‌ ಹೀಗೆ ಬರೆದಿದ್ದಾರೆ: “ವಿಡಿಯೋವು ಭಾರತದಲ್ಲಿ ಹೆಚ್ಚು ಗೊಂದಲಕ್ಕೆ ಕಾರಣವಾಯಿತು. ಶಬ್ದದೊಂದಿಗೆ ಹೊಗೆಯನ್ನು ಹೊರಗೆ ಸೂಸುವ ಊದು ಪಾವೈ ಎಂಬ ಔಷಧೀಯ ಸಸ್ಯ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ ಎಂದು ಹಲವು ಚಾನೆಲ್‌ಗಳು ವರದಿ ಮಾಡಿವೆ.”

ಮುಂದುವರಿದು, “ಐಎಫ್‌ಎಸ್ ಅಧಿಕಾರಿಯು ಅದೇ ವೀಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಹೀಗಾಗಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಯಿತು” ಎಂದು ಕಲಾವಿದ ತಮ್ಮ ಮಾಹಿತಿಯನ್ನು ಸೇರಿಸಿದ್ದಾರೆ.

 ಇದನ್ನೂ ಓದಿರಿ: ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು…

ಹೆಚ್ಚಿನ ಹುಡುಕಾಟ ನಡೆಸಿದಾಗ ವೈರಲ್‌ ಪ್ರತಿಪಾದನೆಯೊಂದಿಗೆಯೇ ಐಎಫ್‌ಎಸ್‌‌ ಅಧಿಕಾರಿಯ ಟ್ವೀಟ್‌ ಕಂಡು ಬಂದಿದೆ. ಅವರು ಕೂಡ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದು, “ಊದು ಪಾವೈ ಎಂಬ ಔಷಧೀಯ ಸಸಿ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ” ಎಂದಿದ್ದಾರೆ. ಆದರೆ ಈ ಟ್ವೀಟ್ ಅನ್ನು ಆನಂತರದಲ್ಲಿ ಡಿಲೀಟ್‌ ಮಾಡಿದ್ದಾರೆ.

ಆದಾಗ್ಯೂ, ವೀಡಿಯೊ ಡಿಜಿಟಲ್ ಕಲೆ ಮತ್ತು ಶಬ್ದಗಳನ್ನು ಉತ್ಪಾದಿಸುವ ನಿಜವಾದ ಸಸ್ಯವಲ್ಲ. ತನ್ನ ಟ್ವಿಟ್ಟರ್ ಟೈಮ್‌ಲೈನ್‌ನಲ್ಲಿ ಲ್ಯೂಕ್ ಪೆನ್ರಿ ಅವರು ತಮಿಳು ವ್ಯಕ್ತಿಯೊಬ್ಬರು ಸತ್ಯಾಂಶವನ್ನು ವಿವರಿಸಿರುವ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಮುಂದುವರಿದು ಹೇಳುವುದಾದರೆ ಇಲ್ಲಿ ಪ್ರತಿಪಾದಿಸಿರುವಂತೆ ಊದು ಪಾವೈ ಎಂಬ ಔಷಧೀಯ ಸಸಿಯ ಕುರಿತು ನಮಗೆ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋದಲ್ಲಿರುವುದು ಡಿಜಿಟಲ್ ಶಬ್ದ ಕಲೆ ಎಂಬುದು ಖಚಿತವಾಗಿದೆ, ಇದು ನಿಜವಾದ ಸಸಿಯಲ್ಲ ಎಂದು ತಿಳಿಯುತ್ತದೆ” ಎಂದು ಫ್ಯಾಕ್ಟ್‌ಲಿ ಹೇಳಿದೆ.

ಇದನ್ನೂ ಓದಿರಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...