Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ...

- Advertisement -
- Advertisement -

“ಈ ವಿಡಿಯೊದಲ್ಲಿರುವ ಸಸ್ಯವು ಪ್ರಕೃತಿಯ ವಿಸ್ಮಯವಾಗಿದ್ದು, ಶಬ್ದದೊಂದಿಗೆ ಪರಾಗವನ್ನು ಹೊರಗೆ ಸೂಸಿಸುತ್ತಿದೆ. ಇದು ಊದು ಪಾವೈ ಎಂಬ ಔಷಧೀಯ ಸಸಿಯಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ, ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರಸೂಸುತ್ತದೆ” ಎಂಬ ಪ್ರತಿಪಾದನೆಯೊಂದಿಗೆ ಒಂದು ಪೋಸ್ಟ್‌ ವೈರಲ್‌ ಆಗಿದೆ. ಈ ವಿಡಿಯೋವನ್ನು ಇದೇ ಪ್ರತಿಪಾದನೆಯೊಂದಿಗೆ ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ.

ನಾವು ಸೂಕ್ಷ್ಮವಾಗಿ ನೋಡಿದರೆ ಈ ವಿಡಿಯೋದಲ್ಲಿ ‘LUKE PENRY EXR’ ಎಂದು ವಾಟರ್‌ ಮಾರ್ಕ್‌ ಇರುವುದು ಕಂಡು ಬರುತ್ತದೆ. ಈ ಸಾಕ್ಷಿಯ ಆಧಾರದಲ್ಲಿ ಗೂಗಲ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸರ್ಚ್ ಮಾಡಿದಾಗ ಲ್ಯೂಕ್‌ ಪೆನ್ರಿ ಎಂಬವರ ಟ್ವಿಟ್ಟರ್‌ ಖಾತೆ ಕಂಡುಬಂದಿದೆ. ಈಗ ಹರಿದಾಡಿರುವ ವಿಡಿಯೋ ರೀತಿಯಲ್ಲೇ ಇರುವ ವಿಡಿಯೋ 2021ರ ಸೆಪ್ಟೆಂಬರ್‌ 17ರಂದು ‘ನ್ಯೂ ಸೌಂಡ್‌ ಆನ್‌’ ಶೀರ್ಷಿಕೆಯೊಂದಿದೆ ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಈ ವಿಡಿಯೋವು 3ಡಿ ಕಲಾವಿದ ಲ್ಯೂಕ್‌ ಪೆನ್ರಿ ಎಂಬವರು ಸೃಷ್ಟಿಸಿದ್ದು, ವಾಸ್ತವವಾಗಿ ಇದು ಡಿಜಿಟಲ್‌ ಶಬ್ದ ಕಲೆಯಾಗಿದೆ. Foundation.appನಲ್ಲಿ ಲ್ಯೂಕ್‌ ಅವರು ಈ ಕಲೆಯನ್ನು ಹರಾಜಿಗೂ ಇರಿಸಿದ್ದರು. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ ಎಂದು ಫ್ಯಾಕ್ಟ್‌ಲಿ.ಕಾಮ್‌ ವರದಿ ಮಾಡಿದೆ.

ಲ್ಯೂಕ್‌‌ ಹೆನ್ರಿಯವರ ಟ್ವಿಟ್ಟರ್‌ ಖಾತೆಯ ವಿವರಣೆಯಲ್ಲಿ ಇವರು 3ಡಿ ಕಲಾವಿದ ಎಂದಿದೆ. ಸಾಕಷ್ಟು ಡಿಜಿಟಲ್ ಶಬ್ದಕಲೆಯ ವಿಡಿಯೋಗಳನ್ನು ಇವರ ಟೈಮ್‌ಲೈನ್‌‌ನಲ್ಲಿ ನೋಡಬಹುದು. ಡಿಜಿಟಲ್‌ ಕಲೆಗಳ ನೇರ ಹರಾಜು ವೇದಿಕೆಯಲ್ಲಿ ಒಂದಾದ Foundation.appನಲ್ಲಿ ಇದನ್ನು ಲ್ಯೂಕ್‌ ಹರಾಜಿಗೂ ಇರಿಸಿದ್ದರು. ಕಲಾಕೃತಿಯ ಮಾಹಿತಿ ವಿಭಾಗವು ಅದನ್ನು ಲೂಪಿಂಗ್ ಅನಿಮೇಷನ್ ಎಂದು ಗುರುತಿಸಲಾಗಿದೆ. ‘ಜಂಗಲ್ ಪೈಪ್ಸ್’ ಎಂಬ ಶೀರ್ಷಿಕೆ ನೀಡಲಾಗಿದೆ. ಇದಲ್ಲದೆ, ಮಾಹಿತಿ ವಿಭಾಗದಲ್ಲಿ ಲ್ಯೂಕ್‌ ಹೀಗೆ ಬರೆದಿದ್ದಾರೆ: “ವಿಡಿಯೋವು ಭಾರತದಲ್ಲಿ ಹೆಚ್ಚು ಗೊಂದಲಕ್ಕೆ ಕಾರಣವಾಯಿತು. ಶಬ್ದದೊಂದಿಗೆ ಹೊಗೆಯನ್ನು ಹೊರಗೆ ಸೂಸುವ ಊದು ಪಾವೈ ಎಂಬ ಔಷಧೀಯ ಸಸ್ಯ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ ಎಂದು ಹಲವು ಚಾನೆಲ್‌ಗಳು ವರದಿ ಮಾಡಿವೆ.”

ಮುಂದುವರಿದು, “ಐಎಫ್‌ಎಸ್ ಅಧಿಕಾರಿಯು ಅದೇ ವೀಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಹೀಗಾಗಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಯಿತು” ಎಂದು ಕಲಾವಿದ ತಮ್ಮ ಮಾಹಿತಿಯನ್ನು ಸೇರಿಸಿದ್ದಾರೆ.

 ಇದನ್ನೂ ಓದಿರಿ: ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು…

ಹೆಚ್ಚಿನ ಹುಡುಕಾಟ ನಡೆಸಿದಾಗ ವೈರಲ್‌ ಪ್ರತಿಪಾದನೆಯೊಂದಿಗೆಯೇ ಐಎಫ್‌ಎಸ್‌‌ ಅಧಿಕಾರಿಯ ಟ್ವೀಟ್‌ ಕಂಡು ಬಂದಿದೆ. ಅವರು ಕೂಡ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದು, “ಊದು ಪಾವೈ ಎಂಬ ಔಷಧೀಯ ಸಸಿ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ” ಎಂದಿದ್ದಾರೆ. ಆದರೆ ಈ ಟ್ವೀಟ್ ಅನ್ನು ಆನಂತರದಲ್ಲಿ ಡಿಲೀಟ್‌ ಮಾಡಿದ್ದಾರೆ.

ಆದಾಗ್ಯೂ, ವೀಡಿಯೊ ಡಿಜಿಟಲ್ ಕಲೆ ಮತ್ತು ಶಬ್ದಗಳನ್ನು ಉತ್ಪಾದಿಸುವ ನಿಜವಾದ ಸಸ್ಯವಲ್ಲ. ತನ್ನ ಟ್ವಿಟ್ಟರ್ ಟೈಮ್‌ಲೈನ್‌ನಲ್ಲಿ ಲ್ಯೂಕ್ ಪೆನ್ರಿ ಅವರು ತಮಿಳು ವ್ಯಕ್ತಿಯೊಬ್ಬರು ಸತ್ಯಾಂಶವನ್ನು ವಿವರಿಸಿರುವ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಮುಂದುವರಿದು ಹೇಳುವುದಾದರೆ ಇಲ್ಲಿ ಪ್ರತಿಪಾದಿಸಿರುವಂತೆ ಊದು ಪಾವೈ ಎಂಬ ಔಷಧೀಯ ಸಸಿಯ ಕುರಿತು ನಮಗೆ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋದಲ್ಲಿರುವುದು ಡಿಜಿಟಲ್ ಶಬ್ದ ಕಲೆ ಎಂಬುದು ಖಚಿತವಾಗಿದೆ, ಇದು ನಿಜವಾದ ಸಸಿಯಲ್ಲ ಎಂದು ತಿಳಿಯುತ್ತದೆ” ಎಂದು ಫ್ಯಾಕ್ಟ್‌ಲಿ ಹೇಳಿದೆ.

ಇದನ್ನೂ ಓದಿರಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...