Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ...

- Advertisement -
- Advertisement -

“ಈ ವಿಡಿಯೊದಲ್ಲಿರುವ ಸಸ್ಯವು ಪ್ರಕೃತಿಯ ವಿಸ್ಮಯವಾಗಿದ್ದು, ಶಬ್ದದೊಂದಿಗೆ ಪರಾಗವನ್ನು ಹೊರಗೆ ಸೂಸಿಸುತ್ತಿದೆ. ಇದು ಊದು ಪಾವೈ ಎಂಬ ಔಷಧೀಯ ಸಸಿಯಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ, ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರಸೂಸುತ್ತದೆ” ಎಂಬ ಪ್ರತಿಪಾದನೆಯೊಂದಿಗೆ ಒಂದು ಪೋಸ್ಟ್‌ ವೈರಲ್‌ ಆಗಿದೆ. ಈ ವಿಡಿಯೋವನ್ನು ಇದೇ ಪ್ರತಿಪಾದನೆಯೊಂದಿಗೆ ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ.

ನಾವು ಸೂಕ್ಷ್ಮವಾಗಿ ನೋಡಿದರೆ ಈ ವಿಡಿಯೋದಲ್ಲಿ ‘LUKE PENRY EXR’ ಎಂದು ವಾಟರ್‌ ಮಾರ್ಕ್‌ ಇರುವುದು ಕಂಡು ಬರುತ್ತದೆ. ಈ ಸಾಕ್ಷಿಯ ಆಧಾರದಲ್ಲಿ ಗೂಗಲ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸರ್ಚ್ ಮಾಡಿದಾಗ ಲ್ಯೂಕ್‌ ಪೆನ್ರಿ ಎಂಬವರ ಟ್ವಿಟ್ಟರ್‌ ಖಾತೆ ಕಂಡುಬಂದಿದೆ. ಈಗ ಹರಿದಾಡಿರುವ ವಿಡಿಯೋ ರೀತಿಯಲ್ಲೇ ಇರುವ ವಿಡಿಯೋ 2021ರ ಸೆಪ್ಟೆಂಬರ್‌ 17ರಂದು ‘ನ್ಯೂ ಸೌಂಡ್‌ ಆನ್‌’ ಶೀರ್ಷಿಕೆಯೊಂದಿದೆ ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಈ ವಿಡಿಯೋವು 3ಡಿ ಕಲಾವಿದ ಲ್ಯೂಕ್‌ ಪೆನ್ರಿ ಎಂಬವರು ಸೃಷ್ಟಿಸಿದ್ದು, ವಾಸ್ತವವಾಗಿ ಇದು ಡಿಜಿಟಲ್‌ ಶಬ್ದ ಕಲೆಯಾಗಿದೆ. Foundation.appನಲ್ಲಿ ಲ್ಯೂಕ್‌ ಅವರು ಈ ಕಲೆಯನ್ನು ಹರಾಜಿಗೂ ಇರಿಸಿದ್ದರು. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ ಎಂದು ಫ್ಯಾಕ್ಟ್‌ಲಿ.ಕಾಮ್‌ ವರದಿ ಮಾಡಿದೆ.

ಲ್ಯೂಕ್‌‌ ಹೆನ್ರಿಯವರ ಟ್ವಿಟ್ಟರ್‌ ಖಾತೆಯ ವಿವರಣೆಯಲ್ಲಿ ಇವರು 3ಡಿ ಕಲಾವಿದ ಎಂದಿದೆ. ಸಾಕಷ್ಟು ಡಿಜಿಟಲ್ ಶಬ್ದಕಲೆಯ ವಿಡಿಯೋಗಳನ್ನು ಇವರ ಟೈಮ್‌ಲೈನ್‌‌ನಲ್ಲಿ ನೋಡಬಹುದು. ಡಿಜಿಟಲ್‌ ಕಲೆಗಳ ನೇರ ಹರಾಜು ವೇದಿಕೆಯಲ್ಲಿ ಒಂದಾದ Foundation.appನಲ್ಲಿ ಇದನ್ನು ಲ್ಯೂಕ್‌ ಹರಾಜಿಗೂ ಇರಿಸಿದ್ದರು. ಕಲಾಕೃತಿಯ ಮಾಹಿತಿ ವಿಭಾಗವು ಅದನ್ನು ಲೂಪಿಂಗ್ ಅನಿಮೇಷನ್ ಎಂದು ಗುರುತಿಸಲಾಗಿದೆ. ‘ಜಂಗಲ್ ಪೈಪ್ಸ್’ ಎಂಬ ಶೀರ್ಷಿಕೆ ನೀಡಲಾಗಿದೆ. ಇದಲ್ಲದೆ, ಮಾಹಿತಿ ವಿಭಾಗದಲ್ಲಿ ಲ್ಯೂಕ್‌ ಹೀಗೆ ಬರೆದಿದ್ದಾರೆ: “ವಿಡಿಯೋವು ಭಾರತದಲ್ಲಿ ಹೆಚ್ಚು ಗೊಂದಲಕ್ಕೆ ಕಾರಣವಾಯಿತು. ಶಬ್ದದೊಂದಿಗೆ ಹೊಗೆಯನ್ನು ಹೊರಗೆ ಸೂಸುವ ಊದು ಪಾವೈ ಎಂಬ ಔಷಧೀಯ ಸಸ್ಯ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ ಎಂದು ಹಲವು ಚಾನೆಲ್‌ಗಳು ವರದಿ ಮಾಡಿವೆ.”

ಮುಂದುವರಿದು, “ಐಎಫ್‌ಎಸ್ ಅಧಿಕಾರಿಯು ಅದೇ ವೀಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಹೀಗಾಗಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಯಿತು” ಎಂದು ಕಲಾವಿದ ತಮ್ಮ ಮಾಹಿತಿಯನ್ನು ಸೇರಿಸಿದ್ದಾರೆ.

 ಇದನ್ನೂ ಓದಿರಿ: ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು…

ಹೆಚ್ಚಿನ ಹುಡುಕಾಟ ನಡೆಸಿದಾಗ ವೈರಲ್‌ ಪ್ರತಿಪಾದನೆಯೊಂದಿಗೆಯೇ ಐಎಫ್‌ಎಸ್‌‌ ಅಧಿಕಾರಿಯ ಟ್ವೀಟ್‌ ಕಂಡು ಬಂದಿದೆ. ಅವರು ಕೂಡ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದು, “ಊದು ಪಾವೈ ಎಂಬ ಔಷಧೀಯ ಸಸಿ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ” ಎಂದಿದ್ದಾರೆ. ಆದರೆ ಈ ಟ್ವೀಟ್ ಅನ್ನು ಆನಂತರದಲ್ಲಿ ಡಿಲೀಟ್‌ ಮಾಡಿದ್ದಾರೆ.

ಆದಾಗ್ಯೂ, ವೀಡಿಯೊ ಡಿಜಿಟಲ್ ಕಲೆ ಮತ್ತು ಶಬ್ದಗಳನ್ನು ಉತ್ಪಾದಿಸುವ ನಿಜವಾದ ಸಸ್ಯವಲ್ಲ. ತನ್ನ ಟ್ವಿಟ್ಟರ್ ಟೈಮ್‌ಲೈನ್‌ನಲ್ಲಿ ಲ್ಯೂಕ್ ಪೆನ್ರಿ ಅವರು ತಮಿಳು ವ್ಯಕ್ತಿಯೊಬ್ಬರು ಸತ್ಯಾಂಶವನ್ನು ವಿವರಿಸಿರುವ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಮುಂದುವರಿದು ಹೇಳುವುದಾದರೆ ಇಲ್ಲಿ ಪ್ರತಿಪಾದಿಸಿರುವಂತೆ ಊದು ಪಾವೈ ಎಂಬ ಔಷಧೀಯ ಸಸಿಯ ಕುರಿತು ನಮಗೆ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋದಲ್ಲಿರುವುದು ಡಿಜಿಟಲ್ ಶಬ್ದ ಕಲೆ ಎಂಬುದು ಖಚಿತವಾಗಿದೆ, ಇದು ನಿಜವಾದ ಸಸಿಯಲ್ಲ ಎಂದು ತಿಳಿಯುತ್ತದೆ” ಎಂದು ಫ್ಯಾಕ್ಟ್‌ಲಿ ಹೇಳಿದೆ.

ಇದನ್ನೂ ಓದಿರಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...