Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ...

- Advertisement -
- Advertisement -

“ಈ ವಿಡಿಯೊದಲ್ಲಿರುವ ಸಸ್ಯವು ಪ್ರಕೃತಿಯ ವಿಸ್ಮಯವಾಗಿದ್ದು, ಶಬ್ದದೊಂದಿಗೆ ಪರಾಗವನ್ನು ಹೊರಗೆ ಸೂಸಿಸುತ್ತಿದೆ. ಇದು ಊದು ಪಾವೈ ಎಂಬ ಔಷಧೀಯ ಸಸಿಯಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ, ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರಸೂಸುತ್ತದೆ” ಎಂಬ ಪ್ರತಿಪಾದನೆಯೊಂದಿಗೆ ಒಂದು ಪೋಸ್ಟ್‌ ವೈರಲ್‌ ಆಗಿದೆ. ಈ ವಿಡಿಯೋವನ್ನು ಇದೇ ಪ್ರತಿಪಾದನೆಯೊಂದಿಗೆ ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ.

ನಾವು ಸೂಕ್ಷ್ಮವಾಗಿ ನೋಡಿದರೆ ಈ ವಿಡಿಯೋದಲ್ಲಿ ‘LUKE PENRY EXR’ ಎಂದು ವಾಟರ್‌ ಮಾರ್ಕ್‌ ಇರುವುದು ಕಂಡು ಬರುತ್ತದೆ. ಈ ಸಾಕ್ಷಿಯ ಆಧಾರದಲ್ಲಿ ಗೂಗಲ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸರ್ಚ್ ಮಾಡಿದಾಗ ಲ್ಯೂಕ್‌ ಪೆನ್ರಿ ಎಂಬವರ ಟ್ವಿಟ್ಟರ್‌ ಖಾತೆ ಕಂಡುಬಂದಿದೆ. ಈಗ ಹರಿದಾಡಿರುವ ವಿಡಿಯೋ ರೀತಿಯಲ್ಲೇ ಇರುವ ವಿಡಿಯೋ 2021ರ ಸೆಪ್ಟೆಂಬರ್‌ 17ರಂದು ‘ನ್ಯೂ ಸೌಂಡ್‌ ಆನ್‌’ ಶೀರ್ಷಿಕೆಯೊಂದಿದೆ ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಈ ವಿಡಿಯೋವು 3ಡಿ ಕಲಾವಿದ ಲ್ಯೂಕ್‌ ಪೆನ್ರಿ ಎಂಬವರು ಸೃಷ್ಟಿಸಿದ್ದು, ವಾಸ್ತವವಾಗಿ ಇದು ಡಿಜಿಟಲ್‌ ಶಬ್ದ ಕಲೆಯಾಗಿದೆ. Foundation.appನಲ್ಲಿ ಲ್ಯೂಕ್‌ ಅವರು ಈ ಕಲೆಯನ್ನು ಹರಾಜಿಗೂ ಇರಿಸಿದ್ದರು. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ ಎಂದು ಫ್ಯಾಕ್ಟ್‌ಲಿ.ಕಾಮ್‌ ವರದಿ ಮಾಡಿದೆ.

ಲ್ಯೂಕ್‌‌ ಹೆನ್ರಿಯವರ ಟ್ವಿಟ್ಟರ್‌ ಖಾತೆಯ ವಿವರಣೆಯಲ್ಲಿ ಇವರು 3ಡಿ ಕಲಾವಿದ ಎಂದಿದೆ. ಸಾಕಷ್ಟು ಡಿಜಿಟಲ್ ಶಬ್ದಕಲೆಯ ವಿಡಿಯೋಗಳನ್ನು ಇವರ ಟೈಮ್‌ಲೈನ್‌‌ನಲ್ಲಿ ನೋಡಬಹುದು. ಡಿಜಿಟಲ್‌ ಕಲೆಗಳ ನೇರ ಹರಾಜು ವೇದಿಕೆಯಲ್ಲಿ ಒಂದಾದ Foundation.appನಲ್ಲಿ ಇದನ್ನು ಲ್ಯೂಕ್‌ ಹರಾಜಿಗೂ ಇರಿಸಿದ್ದರು. ಕಲಾಕೃತಿಯ ಮಾಹಿತಿ ವಿಭಾಗವು ಅದನ್ನು ಲೂಪಿಂಗ್ ಅನಿಮೇಷನ್ ಎಂದು ಗುರುತಿಸಲಾಗಿದೆ. ‘ಜಂಗಲ್ ಪೈಪ್ಸ್’ ಎಂಬ ಶೀರ್ಷಿಕೆ ನೀಡಲಾಗಿದೆ. ಇದಲ್ಲದೆ, ಮಾಹಿತಿ ವಿಭಾಗದಲ್ಲಿ ಲ್ಯೂಕ್‌ ಹೀಗೆ ಬರೆದಿದ್ದಾರೆ: “ವಿಡಿಯೋವು ಭಾರತದಲ್ಲಿ ಹೆಚ್ಚು ಗೊಂದಲಕ್ಕೆ ಕಾರಣವಾಯಿತು. ಶಬ್ದದೊಂದಿಗೆ ಹೊಗೆಯನ್ನು ಹೊರಗೆ ಸೂಸುವ ಊದು ಪಾವೈ ಎಂಬ ಔಷಧೀಯ ಸಸ್ಯ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ ಎಂದು ಹಲವು ಚಾನೆಲ್‌ಗಳು ವರದಿ ಮಾಡಿವೆ.”

ಮುಂದುವರಿದು, “ಐಎಫ್‌ಎಸ್ ಅಧಿಕಾರಿಯು ಅದೇ ವೀಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಹೀಗಾಗಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಯಿತು” ಎಂದು ಕಲಾವಿದ ತಮ್ಮ ಮಾಹಿತಿಯನ್ನು ಸೇರಿಸಿದ್ದಾರೆ.

 ಇದನ್ನೂ ಓದಿರಿ: ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು…

ಹೆಚ್ಚಿನ ಹುಡುಕಾಟ ನಡೆಸಿದಾಗ ವೈರಲ್‌ ಪ್ರತಿಪಾದನೆಯೊಂದಿಗೆಯೇ ಐಎಫ್‌ಎಸ್‌‌ ಅಧಿಕಾರಿಯ ಟ್ವೀಟ್‌ ಕಂಡು ಬಂದಿದೆ. ಅವರು ಕೂಡ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದು, “ಊದು ಪಾವೈ ಎಂಬ ಔಷಧೀಯ ಸಸಿ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ” ಎಂದಿದ್ದಾರೆ. ಆದರೆ ಈ ಟ್ವೀಟ್ ಅನ್ನು ಆನಂತರದಲ್ಲಿ ಡಿಲೀಟ್‌ ಮಾಡಿದ್ದಾರೆ.

ಆದಾಗ್ಯೂ, ವೀಡಿಯೊ ಡಿಜಿಟಲ್ ಕಲೆ ಮತ್ತು ಶಬ್ದಗಳನ್ನು ಉತ್ಪಾದಿಸುವ ನಿಜವಾದ ಸಸ್ಯವಲ್ಲ. ತನ್ನ ಟ್ವಿಟ್ಟರ್ ಟೈಮ್‌ಲೈನ್‌ನಲ್ಲಿ ಲ್ಯೂಕ್ ಪೆನ್ರಿ ಅವರು ತಮಿಳು ವ್ಯಕ್ತಿಯೊಬ್ಬರು ಸತ್ಯಾಂಶವನ್ನು ವಿವರಿಸಿರುವ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಮುಂದುವರಿದು ಹೇಳುವುದಾದರೆ ಇಲ್ಲಿ ಪ್ರತಿಪಾದಿಸಿರುವಂತೆ ಊದು ಪಾವೈ ಎಂಬ ಔಷಧೀಯ ಸಸಿಯ ಕುರಿತು ನಮಗೆ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋದಲ್ಲಿರುವುದು ಡಿಜಿಟಲ್ ಶಬ್ದ ಕಲೆ ಎಂಬುದು ಖಚಿತವಾಗಿದೆ, ಇದು ನಿಜವಾದ ಸಸಿಯಲ್ಲ ಎಂದು ತಿಳಿಯುತ್ತದೆ” ಎಂದು ಫ್ಯಾಕ್ಟ್‌ಲಿ ಹೇಳಿದೆ.

ಇದನ್ನೂ ಓದಿರಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...