Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ...

- Advertisement -
- Advertisement -

“ಈ ವಿಡಿಯೊದಲ್ಲಿರುವ ಸಸ್ಯವು ಪ್ರಕೃತಿಯ ವಿಸ್ಮಯವಾಗಿದ್ದು, ಶಬ್ದದೊಂದಿಗೆ ಪರಾಗವನ್ನು ಹೊರಗೆ ಸೂಸಿಸುತ್ತಿದೆ. ಇದು ಊದು ಪಾವೈ ಎಂಬ ಔಷಧೀಯ ಸಸಿಯಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ, ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರಸೂಸುತ್ತದೆ” ಎಂಬ ಪ್ರತಿಪಾದನೆಯೊಂದಿಗೆ ಒಂದು ಪೋಸ್ಟ್‌ ವೈರಲ್‌ ಆಗಿದೆ. ಈ ವಿಡಿಯೋವನ್ನು ಇದೇ ಪ್ರತಿಪಾದನೆಯೊಂದಿಗೆ ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ.

ನಾವು ಸೂಕ್ಷ್ಮವಾಗಿ ನೋಡಿದರೆ ಈ ವಿಡಿಯೋದಲ್ಲಿ ‘LUKE PENRY EXR’ ಎಂದು ವಾಟರ್‌ ಮಾರ್ಕ್‌ ಇರುವುದು ಕಂಡು ಬರುತ್ತದೆ. ಈ ಸಾಕ್ಷಿಯ ಆಧಾರದಲ್ಲಿ ಗೂಗಲ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸರ್ಚ್ ಮಾಡಿದಾಗ ಲ್ಯೂಕ್‌ ಪೆನ್ರಿ ಎಂಬವರ ಟ್ವಿಟ್ಟರ್‌ ಖಾತೆ ಕಂಡುಬಂದಿದೆ. ಈಗ ಹರಿದಾಡಿರುವ ವಿಡಿಯೋ ರೀತಿಯಲ್ಲೇ ಇರುವ ವಿಡಿಯೋ 2021ರ ಸೆಪ್ಟೆಂಬರ್‌ 17ರಂದು ‘ನ್ಯೂ ಸೌಂಡ್‌ ಆನ್‌’ ಶೀರ್ಷಿಕೆಯೊಂದಿದೆ ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಈ ವಿಡಿಯೋವು 3ಡಿ ಕಲಾವಿದ ಲ್ಯೂಕ್‌ ಪೆನ್ರಿ ಎಂಬವರು ಸೃಷ್ಟಿಸಿದ್ದು, ವಾಸ್ತವವಾಗಿ ಇದು ಡಿಜಿಟಲ್‌ ಶಬ್ದ ಕಲೆಯಾಗಿದೆ. Foundation.appನಲ್ಲಿ ಲ್ಯೂಕ್‌ ಅವರು ಈ ಕಲೆಯನ್ನು ಹರಾಜಿಗೂ ಇರಿಸಿದ್ದರು. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ ಎಂದು ಫ್ಯಾಕ್ಟ್‌ಲಿ.ಕಾಮ್‌ ವರದಿ ಮಾಡಿದೆ.

ಲ್ಯೂಕ್‌‌ ಹೆನ್ರಿಯವರ ಟ್ವಿಟ್ಟರ್‌ ಖಾತೆಯ ವಿವರಣೆಯಲ್ಲಿ ಇವರು 3ಡಿ ಕಲಾವಿದ ಎಂದಿದೆ. ಸಾಕಷ್ಟು ಡಿಜಿಟಲ್ ಶಬ್ದಕಲೆಯ ವಿಡಿಯೋಗಳನ್ನು ಇವರ ಟೈಮ್‌ಲೈನ್‌‌ನಲ್ಲಿ ನೋಡಬಹುದು. ಡಿಜಿಟಲ್‌ ಕಲೆಗಳ ನೇರ ಹರಾಜು ವೇದಿಕೆಯಲ್ಲಿ ಒಂದಾದ Foundation.appನಲ್ಲಿ ಇದನ್ನು ಲ್ಯೂಕ್‌ ಹರಾಜಿಗೂ ಇರಿಸಿದ್ದರು. ಕಲಾಕೃತಿಯ ಮಾಹಿತಿ ವಿಭಾಗವು ಅದನ್ನು ಲೂಪಿಂಗ್ ಅನಿಮೇಷನ್ ಎಂದು ಗುರುತಿಸಲಾಗಿದೆ. ‘ಜಂಗಲ್ ಪೈಪ್ಸ್’ ಎಂಬ ಶೀರ್ಷಿಕೆ ನೀಡಲಾಗಿದೆ. ಇದಲ್ಲದೆ, ಮಾಹಿತಿ ವಿಭಾಗದಲ್ಲಿ ಲ್ಯೂಕ್‌ ಹೀಗೆ ಬರೆದಿದ್ದಾರೆ: “ವಿಡಿಯೋವು ಭಾರತದಲ್ಲಿ ಹೆಚ್ಚು ಗೊಂದಲಕ್ಕೆ ಕಾರಣವಾಯಿತು. ಶಬ್ದದೊಂದಿಗೆ ಹೊಗೆಯನ್ನು ಹೊರಗೆ ಸೂಸುವ ಊದು ಪಾವೈ ಎಂಬ ಔಷಧೀಯ ಸಸ್ಯ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ ಎಂದು ಹಲವು ಚಾನೆಲ್‌ಗಳು ವರದಿ ಮಾಡಿವೆ.”

ಮುಂದುವರಿದು, “ಐಎಫ್‌ಎಸ್ ಅಧಿಕಾರಿಯು ಅದೇ ವೀಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಹೀಗಾಗಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಯಿತು” ಎಂದು ಕಲಾವಿದ ತಮ್ಮ ಮಾಹಿತಿಯನ್ನು ಸೇರಿಸಿದ್ದಾರೆ.

 ಇದನ್ನೂ ಓದಿರಿ: ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು…

ಹೆಚ್ಚಿನ ಹುಡುಕಾಟ ನಡೆಸಿದಾಗ ವೈರಲ್‌ ಪ್ರತಿಪಾದನೆಯೊಂದಿಗೆಯೇ ಐಎಫ್‌ಎಸ್‌‌ ಅಧಿಕಾರಿಯ ಟ್ವೀಟ್‌ ಕಂಡು ಬಂದಿದೆ. ಅವರು ಕೂಡ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದು, “ಊದು ಪಾವೈ ಎಂಬ ಔಷಧೀಯ ಸಸಿ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ” ಎಂದಿದ್ದಾರೆ. ಆದರೆ ಈ ಟ್ವೀಟ್ ಅನ್ನು ಆನಂತರದಲ್ಲಿ ಡಿಲೀಟ್‌ ಮಾಡಿದ್ದಾರೆ.

ಆದಾಗ್ಯೂ, ವೀಡಿಯೊ ಡಿಜಿಟಲ್ ಕಲೆ ಮತ್ತು ಶಬ್ದಗಳನ್ನು ಉತ್ಪಾದಿಸುವ ನಿಜವಾದ ಸಸ್ಯವಲ್ಲ. ತನ್ನ ಟ್ವಿಟ್ಟರ್ ಟೈಮ್‌ಲೈನ್‌ನಲ್ಲಿ ಲ್ಯೂಕ್ ಪೆನ್ರಿ ಅವರು ತಮಿಳು ವ್ಯಕ್ತಿಯೊಬ್ಬರು ಸತ್ಯಾಂಶವನ್ನು ವಿವರಿಸಿರುವ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಮುಂದುವರಿದು ಹೇಳುವುದಾದರೆ ಇಲ್ಲಿ ಪ್ರತಿಪಾದಿಸಿರುವಂತೆ ಊದು ಪಾವೈ ಎಂಬ ಔಷಧೀಯ ಸಸಿಯ ಕುರಿತು ನಮಗೆ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋದಲ್ಲಿರುವುದು ಡಿಜಿಟಲ್ ಶಬ್ದ ಕಲೆ ಎಂಬುದು ಖಚಿತವಾಗಿದೆ, ಇದು ನಿಜವಾದ ಸಸಿಯಲ್ಲ ಎಂದು ತಿಳಿಯುತ್ತದೆ” ಎಂದು ಫ್ಯಾಕ್ಟ್‌ಲಿ ಹೇಳಿದೆ.

ಇದನ್ನೂ ಓದಿರಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...