Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ...

- Advertisement -
- Advertisement -

“ಈ ವಿಡಿಯೊದಲ್ಲಿರುವ ಸಸ್ಯವು ಪ್ರಕೃತಿಯ ವಿಸ್ಮಯವಾಗಿದ್ದು, ಶಬ್ದದೊಂದಿಗೆ ಪರಾಗವನ್ನು ಹೊರಗೆ ಸೂಸಿಸುತ್ತಿದೆ. ಇದು ಊದು ಪಾವೈ ಎಂಬ ಔಷಧೀಯ ಸಸಿಯಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ, ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರಸೂಸುತ್ತದೆ” ಎಂಬ ಪ್ರತಿಪಾದನೆಯೊಂದಿಗೆ ಒಂದು ಪೋಸ್ಟ್‌ ವೈರಲ್‌ ಆಗಿದೆ. ಈ ವಿಡಿಯೋವನ್ನು ಇದೇ ಪ್ರತಿಪಾದನೆಯೊಂದಿಗೆ ಐಎಫ್‌ಎಸ್‌ ಅಧಿಕಾರಿಯೊಬ್ಬರೂ ಟ್ವಿಟರ್‌ನಲ್ಲಿ ಹಂಚಿಕೊಂಡು, ಆನಂತರದಲ್ಲಿ ಡಿಲೀಟ್‌ ಮಾಡಿರುವ ಪ್ರಹಸನವೂ ನಡೆದಿದೆ.

ನಾವು ಸೂಕ್ಷ್ಮವಾಗಿ ನೋಡಿದರೆ ಈ ವಿಡಿಯೋದಲ್ಲಿ ‘LUKE PENRY EXR’ ಎಂದು ವಾಟರ್‌ ಮಾರ್ಕ್‌ ಇರುವುದು ಕಂಡು ಬರುತ್ತದೆ. ಈ ಸಾಕ್ಷಿಯ ಆಧಾರದಲ್ಲಿ ಗೂಗಲ್‌ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸರ್ಚ್ ಮಾಡಿದಾಗ ಲ್ಯೂಕ್‌ ಪೆನ್ರಿ ಎಂಬವರ ಟ್ವಿಟ್ಟರ್‌ ಖಾತೆ ಕಂಡುಬಂದಿದೆ. ಈಗ ಹರಿದಾಡಿರುವ ವಿಡಿಯೋ ರೀತಿಯಲ್ಲೇ ಇರುವ ವಿಡಿಯೋ 2021ರ ಸೆಪ್ಟೆಂಬರ್‌ 17ರಂದು ‘ನ್ಯೂ ಸೌಂಡ್‌ ಆನ್‌’ ಶೀರ್ಷಿಕೆಯೊಂದಿದೆ ಅವರ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಈ ವಿಡಿಯೋವು 3ಡಿ ಕಲಾವಿದ ಲ್ಯೂಕ್‌ ಪೆನ್ರಿ ಎಂಬವರು ಸೃಷ್ಟಿಸಿದ್ದು, ವಾಸ್ತವವಾಗಿ ಇದು ಡಿಜಿಟಲ್‌ ಶಬ್ದ ಕಲೆಯಾಗಿದೆ. Foundation.appನಲ್ಲಿ ಲ್ಯೂಕ್‌ ಅವರು ಈ ಕಲೆಯನ್ನು ಹರಾಜಿಗೂ ಇರಿಸಿದ್ದರು. ಆದುದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ ಎಂದು ಫ್ಯಾಕ್ಟ್‌ಲಿ.ಕಾಮ್‌ ವರದಿ ಮಾಡಿದೆ.

ಲ್ಯೂಕ್‌‌ ಹೆನ್ರಿಯವರ ಟ್ವಿಟ್ಟರ್‌ ಖಾತೆಯ ವಿವರಣೆಯಲ್ಲಿ ಇವರು 3ಡಿ ಕಲಾವಿದ ಎಂದಿದೆ. ಸಾಕಷ್ಟು ಡಿಜಿಟಲ್ ಶಬ್ದಕಲೆಯ ವಿಡಿಯೋಗಳನ್ನು ಇವರ ಟೈಮ್‌ಲೈನ್‌‌ನಲ್ಲಿ ನೋಡಬಹುದು. ಡಿಜಿಟಲ್‌ ಕಲೆಗಳ ನೇರ ಹರಾಜು ವೇದಿಕೆಯಲ್ಲಿ ಒಂದಾದ Foundation.appನಲ್ಲಿ ಇದನ್ನು ಲ್ಯೂಕ್‌ ಹರಾಜಿಗೂ ಇರಿಸಿದ್ದರು. ಕಲಾಕೃತಿಯ ಮಾಹಿತಿ ವಿಭಾಗವು ಅದನ್ನು ಲೂಪಿಂಗ್ ಅನಿಮೇಷನ್ ಎಂದು ಗುರುತಿಸಲಾಗಿದೆ. ‘ಜಂಗಲ್ ಪೈಪ್ಸ್’ ಎಂಬ ಶೀರ್ಷಿಕೆ ನೀಡಲಾಗಿದೆ. ಇದಲ್ಲದೆ, ಮಾಹಿತಿ ವಿಭಾಗದಲ್ಲಿ ಲ್ಯೂಕ್‌ ಹೀಗೆ ಬರೆದಿದ್ದಾರೆ: “ವಿಡಿಯೋವು ಭಾರತದಲ್ಲಿ ಹೆಚ್ಚು ಗೊಂದಲಕ್ಕೆ ಕಾರಣವಾಯಿತು. ಶಬ್ದದೊಂದಿಗೆ ಹೊಗೆಯನ್ನು ಹೊರಗೆ ಸೂಸುವ ಊದು ಪಾವೈ ಎಂಬ ಔಷಧೀಯ ಸಸ್ಯ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ ಎಂದು ಹಲವು ಚಾನೆಲ್‌ಗಳು ವರದಿ ಮಾಡಿವೆ.”

ಮುಂದುವರಿದು, “ಐಎಫ್‌ಎಸ್ ಅಧಿಕಾರಿಯು ಅದೇ ವೀಡಿಯೊವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ, ಹೀಗಾಗಿ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಯಿತು” ಎಂದು ಕಲಾವಿದ ತಮ್ಮ ಮಾಹಿತಿಯನ್ನು ಸೇರಿಸಿದ್ದಾರೆ.

 ಇದನ್ನೂ ಓದಿರಿ: ರಾಕೇಶ್ ಟಿಕಾಯತ್‌ ‘ಅಲ್ಲಾಹು ಅಕ್ಬರ್ ಎಂದರೆ.. ರೈತರು ಕೋಪದಿಂದ ‘ಹರಹರ ಮಹಾದೇವ’ ಎಂದು ಕೂಗಿದ್ದು…

ಹೆಚ್ಚಿನ ಹುಡುಕಾಟ ನಡೆಸಿದಾಗ ವೈರಲ್‌ ಪ್ರತಿಪಾದನೆಯೊಂದಿಗೆಯೇ ಐಎಫ್‌ಎಸ್‌‌ ಅಧಿಕಾರಿಯ ಟ್ವೀಟ್‌ ಕಂಡು ಬಂದಿದೆ. ಅವರು ಕೂಡ ಇದೇ ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದು, “ಊದು ಪಾವೈ ಎಂಬ ಔಷಧೀಯ ಸಸಿ ಇದಾಗಿದ್ದು, ದಟ್ಟವಾದ ಮಳೆ ಕಾಡುಗಳಲ್ಲಿ ಬೆಳೆಯುತ್ತದೆ. ಶಬ್ದವನ್ನು ಮಾಡುತ್ತಾ ಪರಾಗವನ್ನು ಹೊರ ಬಿಡುತ್ತದೆ” ಎಂದಿದ್ದಾರೆ. ಆದರೆ ಈ ಟ್ವೀಟ್ ಅನ್ನು ಆನಂತರದಲ್ಲಿ ಡಿಲೀಟ್‌ ಮಾಡಿದ್ದಾರೆ.

ಆದಾಗ್ಯೂ, ವೀಡಿಯೊ ಡಿಜಿಟಲ್ ಕಲೆ ಮತ್ತು ಶಬ್ದಗಳನ್ನು ಉತ್ಪಾದಿಸುವ ನಿಜವಾದ ಸಸ್ಯವಲ್ಲ. ತನ್ನ ಟ್ವಿಟ್ಟರ್ ಟೈಮ್‌ಲೈನ್‌ನಲ್ಲಿ ಲ್ಯೂಕ್ ಪೆನ್ರಿ ಅವರು ತಮಿಳು ವ್ಯಕ್ತಿಯೊಬ್ಬರು ಸತ್ಯಾಂಶವನ್ನು ವಿವರಿಸಿರುವ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

“ಮುಂದುವರಿದು ಹೇಳುವುದಾದರೆ ಇಲ್ಲಿ ಪ್ರತಿಪಾದಿಸಿರುವಂತೆ ಊದು ಪಾವೈ ಎಂಬ ಔಷಧೀಯ ಸಸಿಯ ಕುರಿತು ನಮಗೆ ಮಾಹಿತಿ ಲಭ್ಯವಾಗಿಲ್ಲ. ಈ ವಿಡಿಯೋದಲ್ಲಿರುವುದು ಡಿಜಿಟಲ್ ಶಬ್ದ ಕಲೆ ಎಂಬುದು ಖಚಿತವಾಗಿದೆ, ಇದು ನಿಜವಾದ ಸಸಿಯಲ್ಲ ಎಂದು ತಿಳಿಯುತ್ತದೆ” ಎಂದು ಫ್ಯಾಕ್ಟ್‌ಲಿ ಹೇಳಿದೆ.

ಇದನ್ನೂ ಓದಿರಿ: ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...