Homeಕರ್ನಾಟಕಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ...

ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ

- Advertisement -
- Advertisement -

ಈ ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ ಎಂದು ದಿ ವೈರ್ ಸಂಪಾದಕರಾದ ಸೀಮಾ ಚಿಸ್ತಿ ಅವರು ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ, ಆದರೆ ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ ದೇಶದಲ್ಲಿ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದು, ಇದು ಹೆಚ್ಚು ಆತಂಕದ ವಿಚಾರ ಎಂದು ಅವರು ಹೇಳಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

ಓದುಗರ ಸಮಾವೇಶದಲ್ಲಿ ಮಾತನಾಡಿದ ಅವರು, “ಈದಿನ.ಕಾಮ್ ಯಾಕೆ ಬೇಕು? ಯಾಕೆ ಡಿಜಿಟಲ್ ಸ್ವತಂತ್ರ ಮಾಧ್ಯಮ ಬೇಕು. ನಾವು ಆ ಮಾಧ್ಯಮವೇ ಆಗಿ ವಾದಿಸುವುದಾದರೆ, ಇದು ಕೇವಲ ಮಾಧ್ಯಮಗಳ ಕೆಲಸವಲ್ಲ. ನಾಗರೀಕರಾಗಿ ನಮ್ಮೆಲ್ಲರ ಕೆಲಸ. ಏಕೆಂದರೆ ಭಾರತದ ಸ್ವತಂತ್ರ ಅಸ್ತಿತ್ವ ನಮ್ಮ ಜನರು ಮಾಡುವ ಆಯ್ಕೆಗಳ ಮೇಲಿರುತ್ತದೆ ಹಾಗಾಗಿ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ದೊಡ್ಡ ಮಾಧ್ಯಮ ಎಂದು ಕರೆಯುವವರ ವಾಸ್ತವ ಏನು ಎಂಬುವುದು ನಮಗೆ ತಿಳಿದಿದೆ. ಆದ್ದರಿಂದಲೇ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ. ಕಳೆದ 11 ವರ್ಷಗಳಲ್ಲಿ ದೇಶದಲ್ಲಿ ಅವರು ಬಹುಸಂಖ್ಯಾತರ ಪಟ್ಟ ತಲುಪಿದ್ದಾರೆ. ಈ ಬಾರಿ ಸಣ್ಣ ಪ್ರಮಾಣದಲ್ಲಿ ವಿರೋಧ ಪಕ್ಷವಿದೆ. ಕ್ರೈಮ್, ಕ್ರಿಕೆಟ್ ಮತ್ತು ಸಿನೆಮಾದ ಗೀಳು ಮಾಧ್ಯಮಗಳನ್ನು ತುಂಬಿದ್ದು, ಬಹುತೇಕ ಮಾಧ್ಯಮಗಳಿಗೆ ಗ್ರಾಮೀಣ ವರದಿಗಾಗರೂ ಇಲ್ಲ” ಎಂದು ಅವರು ತಿಳಿಸಿದರು.

“100000 ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ. 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ. ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದಾರೆ. ಅದಾಗ್ಯೂ, 2014ರ ನಂತರ ಆಗಿರುವುದು ಪೂರ್ತಿ ಭಿನ್ನ ವಿಚಾರವಾಗಿದ್ದು, ಈಗ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಎಂಬುವು ಈಗ ಬೋರಿಂಗ್ ಪದಗಳಾಗಿವೆ. 2014ಕ್ಕೂ ಮೊದಲು ಮತ್ತು ಈಗ ಮಾಧ್ಯಮಗಳಲ್ಲಿ ಏನು ವ್ಯತ್ಯಾಸವಿದೆ ಎಂದರೆ, ಅವರು ಹಿಪಾಕ್ರಸಿಯನ್ನು ಇಷ್ಟಪಡುತ್ತಾ, ತಮ್ಮ ಕರ್ತವ್ಯ ಮರೆತಿದ್ದಾರೆ” ಎಂದು ಅತಂಕ ವ್ಯಕ್ತಪಡಿಸಿದರು.

“ಉದಾಹರಣೆಗೆ, ಹೊರಗೆ ಮಳೆ ಬರುತ್ತಿದ್ದರೆ ನಾರಾಯಣ್ ಅವರು ಮಳೆ ಬರುತ್ತಿದೆ ಎಂಬು ಹೇಳಿದರು ಅಥವಾ ಸಿಎಂ ಸಿದ್ಧರಾಮಯ್ಯ ಅವರು ಮಳೆ ಬರುತ್ತಿಲ್ಲ ಎಂದು ಹೇಳಿದರು ಎಂದು ವರದಿ ಮಾಡುವುದು ಮಾಧ್ಯಮದ ಕೆಲಸವಲ್ಲ. ಛತ್ರಿ ಹಿಡಿದು ಹೊರಗೆ ಹೋಗಿ 2 ಸೆಂ ಮೀ ಮಳೆ ಆಗಿದೆ ಎಂದು ಹೇಳುವುದು ನಮ್ಮ ಕೆಲಸ” ಎಂದು ಅವರು ಹೇಳಿದರು.

“ಖಬರ್ ಲೆಹರಿಯಾ, ವೈರ್, ಈದಿನ.ಕಾಮ್ ಸೇರಿ ನಾವೆಲ್ಲ ಇಂದು ಒಂದೇ ದಿಕ್ಕಿಗೆ ಹೊರಟಿದ್ದೇವೆ. ನಾವೆಲ್ಲ ಇದರಲ್ಲಿ ಮಾಡುತ್ತಿರುವ ಪ್ರಯತ್ನ ಜನರಿಗೆ ಆರೋಗ್ಯಕರವಾದ, ಸತ್ಯವಾದ ಮಾಹಿತಿಯನ್ನು ನೀಡುವುದಾಗಿದೆ. ನೀರಿನೊಳಗೆ ಬೇಯುತ್ತಿರುವ ಕಪ್ಪೆಗೆ ಹೇಗೆ ಬಿಸಿ ಗೊತ್ತಾಗುವುದಿಲ್ಲವೋ, ಹಾಗೆ ನಮ್ಮ ಜನರ ಸ್ಥಿತಿಯಿದೆ. 11 ವರ್ಷಗಳಲ್ಲಿ ಪ್ರಧಾನ ಮಂತ್ರಿ ಒಂದೂ ಪತ್ರಿಕಾಗೋಷ್ಠಿ ಮಾಡಿಲ್ಲ, ಟ್ರಂಪ್ ಕೂಡಾ ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸುತ್ತಾರೆ. ಆದರೆ ಇವರು ಅದನ್ನು ಮಾಡುತ್ತಿಲ್ಲ. ಕೋವಿಡ್ ಬಂತು, ಗಂಗಾನದಿಯಲ್ಲಿ ಹೆಣಗಳು ಬಂದವು, ಏನೇ ಬರಲಿ ಪ್ರಧಾನ ಮಂತ್ರಿ ಮಾಧ್ಯಮಗಳ ಮುಂದೆ ಬರಲಿಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

“ಹೊರಗೆ ಹೋಗಿ ರೈತರು ಹೋರಾಟದಲ್ಲಿದ್ದಾರೆ ಎಂಬುವುದನ್ನು ದಾಖಲಿಸುವುದು. ಯಾಕೆ ಕಾರ್ಮಿಕರ ಮುಷ್ಕರ ನಡೆಯುತ್ತಿದೆ ಎಂಬುದನ್ನು ವರದಿ ಮಾಡುವುದು ಇಂದು ಮಾಧ್ಯಮಗಳ ಕೆಲಸವಲ್ಲ ಎಂಬಂತಾಗಿದೆ. ಮೊದಲೆಲ್ಲ ದನಿಯೆತ್ತುತ್ತಿದ್ದ ಮಾಧ್ಯಮ ಸಂಸ್ಥೆಗಳು ಈ ಯಾವ ಸಂದರ್ಭಗಳಲ್ಲೂ ಒಂದೂ ಮಾತಾಡುತ್ತಿಲ್ಲ. ಮಾಧ್ಯಮ ಇರುವುದು ಜನರ ಒಳಿತಿಗಾಗಿ ಎಂಬುವುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು. ಬಿಬಿಸಿ ಸರ್ಕಾರದ ಸಂಸ್ಥೆಯಲ್ಲ ಜನರ ಪ್ರತಿನಿಧಿ. ಹಾಗೆಯೇ ಈದಿನದಂತಹ ಸಂಸ್ಥೆಗಳೂ ಕೂಡಾ. ಸರ್ಕಾರದ ದನಿಯಾಗಲು ದೂರದರ್ಶನ ಇದೆ, ಅದು ಮಾಧ್ಯಮಗಳ ಕೆಲಸವಲ್ಲ” ಎಂದು ಅವರು ಹೇಳಿದರು.

“ಮೂಲಭೂತ ಸತ್ಯಗಳನ್ನು ಹೇಳುವವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲೂ, ಹೊರಗೂ ದಾಳಿಗಳಾಗುತ್ತಿವೆ. ತಟಸ್ಥರಾಗಿರುವುದು ಸ್ವತಂತ್ರ ಮಾಧ್ಯಮಗಳ ಕೆಲಸವಲ್ಲ, ನಾವು ಜನರ ಪಕ್ಷಪಾತಿ ಆಗಿರಬೇಕು. ಟಿವಿ ಮಾಧ್ಯಮಗಳು ಒಂದು ಸುಳ್ಳಿನ ಪರದೆಯನ್ನು ಸೃಷ್ಟಿಸುತ್ತವೆ, ಅದರ ವಿರುದ್ಧ ನಾವು ಪ್ರವಾಹದ ವಿರುದ್ಧ ಈಜುತ್ತಿರುವಂತೆ ಈಜುತ್ತಿದ್ದೇವೆ. ಇದರ ಪರಿಣಾಮ ಏನೆ ಆದರೂ ನಾವು ನಮ್ಮ ಕೆಲಸ ಮಾಡಬೇಕು. ಅದು ನಾಳೆಯೇ ಬರದಿರಬಹುದು, ಆದರೂ ಇದು ದೀರ್ಘಕಾಲ ನಡೆಯಬೇಕಾದ ಕೆಲಸ. ಇದು ನಮ್ಮ ಭವಿಷ್ಯ, ವರ್ತಮಾನಕ್ಕೆ ಸಂಬಂಧಿಸಿದ ಹೋರಾಟ. ಇದು ಖಬರ್ ಲೆಹರಿಯಾ, ದ ವೈರ್, ಈದಿನ.ಕಾಮ್ ಎಲ್ಲರೂ ಸೇರಿ ನಡೆಸಬೇಕಾದ ಹೋರಾಟ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...