Homeಕರ್ನಾಟಕಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ...

ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ

- Advertisement -
- Advertisement -

ಈ ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ ಎಂದು ದಿ ವೈರ್ ಸಂಪಾದಕರಾದ ಸೀಮಾ ಚಿಸ್ತಿ ಅವರು ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ, ಆದರೆ ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ ದೇಶದಲ್ಲಿ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದು, ಇದು ಹೆಚ್ಚು ಆತಂಕದ ವಿಚಾರ ಎಂದು ಅವರು ಹೇಳಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

ಓದುಗರ ಸಮಾವೇಶದಲ್ಲಿ ಮಾತನಾಡಿದ ಅವರು, “ಈದಿನ.ಕಾಮ್ ಯಾಕೆ ಬೇಕು? ಯಾಕೆ ಡಿಜಿಟಲ್ ಸ್ವತಂತ್ರ ಮಾಧ್ಯಮ ಬೇಕು. ನಾವು ಆ ಮಾಧ್ಯಮವೇ ಆಗಿ ವಾದಿಸುವುದಾದರೆ, ಇದು ಕೇವಲ ಮಾಧ್ಯಮಗಳ ಕೆಲಸವಲ್ಲ. ನಾಗರೀಕರಾಗಿ ನಮ್ಮೆಲ್ಲರ ಕೆಲಸ. ಏಕೆಂದರೆ ಭಾರತದ ಸ್ವತಂತ್ರ ಅಸ್ತಿತ್ವ ನಮ್ಮ ಜನರು ಮಾಡುವ ಆಯ್ಕೆಗಳ ಮೇಲಿರುತ್ತದೆ ಹಾಗಾಗಿ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ದೊಡ್ಡ ಮಾಧ್ಯಮ ಎಂದು ಕರೆಯುವವರ ವಾಸ್ತವ ಏನು ಎಂಬುವುದು ನಮಗೆ ತಿಳಿದಿದೆ. ಆದ್ದರಿಂದಲೇ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ. ಕಳೆದ 11 ವರ್ಷಗಳಲ್ಲಿ ದೇಶದಲ್ಲಿ ಅವರು ಬಹುಸಂಖ್ಯಾತರ ಪಟ್ಟ ತಲುಪಿದ್ದಾರೆ. ಈ ಬಾರಿ ಸಣ್ಣ ಪ್ರಮಾಣದಲ್ಲಿ ವಿರೋಧ ಪಕ್ಷವಿದೆ. ಕ್ರೈಮ್, ಕ್ರಿಕೆಟ್ ಮತ್ತು ಸಿನೆಮಾದ ಗೀಳು ಮಾಧ್ಯಮಗಳನ್ನು ತುಂಬಿದ್ದು, ಬಹುತೇಕ ಮಾಧ್ಯಮಗಳಿಗೆ ಗ್ರಾಮೀಣ ವರದಿಗಾಗರೂ ಇಲ್ಲ” ಎಂದು ಅವರು ತಿಳಿಸಿದರು.

“100000 ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ. 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ. ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದಾರೆ. ಅದಾಗ್ಯೂ, 2014ರ ನಂತರ ಆಗಿರುವುದು ಪೂರ್ತಿ ಭಿನ್ನ ವಿಚಾರವಾಗಿದ್ದು, ಈಗ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಎಂಬುವು ಈಗ ಬೋರಿಂಗ್ ಪದಗಳಾಗಿವೆ. 2014ಕ್ಕೂ ಮೊದಲು ಮತ್ತು ಈಗ ಮಾಧ್ಯಮಗಳಲ್ಲಿ ಏನು ವ್ಯತ್ಯಾಸವಿದೆ ಎಂದರೆ, ಅವರು ಹಿಪಾಕ್ರಸಿಯನ್ನು ಇಷ್ಟಪಡುತ್ತಾ, ತಮ್ಮ ಕರ್ತವ್ಯ ಮರೆತಿದ್ದಾರೆ” ಎಂದು ಅತಂಕ ವ್ಯಕ್ತಪಡಿಸಿದರು.

“ಉದಾಹರಣೆಗೆ, ಹೊರಗೆ ಮಳೆ ಬರುತ್ತಿದ್ದರೆ ನಾರಾಯಣ್ ಅವರು ಮಳೆ ಬರುತ್ತಿದೆ ಎಂಬು ಹೇಳಿದರು ಅಥವಾ ಸಿಎಂ ಸಿದ್ಧರಾಮಯ್ಯ ಅವರು ಮಳೆ ಬರುತ್ತಿಲ್ಲ ಎಂದು ಹೇಳಿದರು ಎಂದು ವರದಿ ಮಾಡುವುದು ಮಾಧ್ಯಮದ ಕೆಲಸವಲ್ಲ. ಛತ್ರಿ ಹಿಡಿದು ಹೊರಗೆ ಹೋಗಿ 2 ಸೆಂ ಮೀ ಮಳೆ ಆಗಿದೆ ಎಂದು ಹೇಳುವುದು ನಮ್ಮ ಕೆಲಸ” ಎಂದು ಅವರು ಹೇಳಿದರು.

“ಖಬರ್ ಲೆಹರಿಯಾ, ವೈರ್, ಈದಿನ.ಕಾಮ್ ಸೇರಿ ನಾವೆಲ್ಲ ಇಂದು ಒಂದೇ ದಿಕ್ಕಿಗೆ ಹೊರಟಿದ್ದೇವೆ. ನಾವೆಲ್ಲ ಇದರಲ್ಲಿ ಮಾಡುತ್ತಿರುವ ಪ್ರಯತ್ನ ಜನರಿಗೆ ಆರೋಗ್ಯಕರವಾದ, ಸತ್ಯವಾದ ಮಾಹಿತಿಯನ್ನು ನೀಡುವುದಾಗಿದೆ. ನೀರಿನೊಳಗೆ ಬೇಯುತ್ತಿರುವ ಕಪ್ಪೆಗೆ ಹೇಗೆ ಬಿಸಿ ಗೊತ್ತಾಗುವುದಿಲ್ಲವೋ, ಹಾಗೆ ನಮ್ಮ ಜನರ ಸ್ಥಿತಿಯಿದೆ. 11 ವರ್ಷಗಳಲ್ಲಿ ಪ್ರಧಾನ ಮಂತ್ರಿ ಒಂದೂ ಪತ್ರಿಕಾಗೋಷ್ಠಿ ಮಾಡಿಲ್ಲ, ಟ್ರಂಪ್ ಕೂಡಾ ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸುತ್ತಾರೆ. ಆದರೆ ಇವರು ಅದನ್ನು ಮಾಡುತ್ತಿಲ್ಲ. ಕೋವಿಡ್ ಬಂತು, ಗಂಗಾನದಿಯಲ್ಲಿ ಹೆಣಗಳು ಬಂದವು, ಏನೇ ಬರಲಿ ಪ್ರಧಾನ ಮಂತ್ರಿ ಮಾಧ್ಯಮಗಳ ಮುಂದೆ ಬರಲಿಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

“ಹೊರಗೆ ಹೋಗಿ ರೈತರು ಹೋರಾಟದಲ್ಲಿದ್ದಾರೆ ಎಂಬುವುದನ್ನು ದಾಖಲಿಸುವುದು. ಯಾಕೆ ಕಾರ್ಮಿಕರ ಮುಷ್ಕರ ನಡೆಯುತ್ತಿದೆ ಎಂಬುದನ್ನು ವರದಿ ಮಾಡುವುದು ಇಂದು ಮಾಧ್ಯಮಗಳ ಕೆಲಸವಲ್ಲ ಎಂಬಂತಾಗಿದೆ. ಮೊದಲೆಲ್ಲ ದನಿಯೆತ್ತುತ್ತಿದ್ದ ಮಾಧ್ಯಮ ಸಂಸ್ಥೆಗಳು ಈ ಯಾವ ಸಂದರ್ಭಗಳಲ್ಲೂ ಒಂದೂ ಮಾತಾಡುತ್ತಿಲ್ಲ. ಮಾಧ್ಯಮ ಇರುವುದು ಜನರ ಒಳಿತಿಗಾಗಿ ಎಂಬುವುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು. ಬಿಬಿಸಿ ಸರ್ಕಾರದ ಸಂಸ್ಥೆಯಲ್ಲ ಜನರ ಪ್ರತಿನಿಧಿ. ಹಾಗೆಯೇ ಈದಿನದಂತಹ ಸಂಸ್ಥೆಗಳೂ ಕೂಡಾ. ಸರ್ಕಾರದ ದನಿಯಾಗಲು ದೂರದರ್ಶನ ಇದೆ, ಅದು ಮಾಧ್ಯಮಗಳ ಕೆಲಸವಲ್ಲ” ಎಂದು ಅವರು ಹೇಳಿದರು.

“ಮೂಲಭೂತ ಸತ್ಯಗಳನ್ನು ಹೇಳುವವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲೂ, ಹೊರಗೂ ದಾಳಿಗಳಾಗುತ್ತಿವೆ. ತಟಸ್ಥರಾಗಿರುವುದು ಸ್ವತಂತ್ರ ಮಾಧ್ಯಮಗಳ ಕೆಲಸವಲ್ಲ, ನಾವು ಜನರ ಪಕ್ಷಪಾತಿ ಆಗಿರಬೇಕು. ಟಿವಿ ಮಾಧ್ಯಮಗಳು ಒಂದು ಸುಳ್ಳಿನ ಪರದೆಯನ್ನು ಸೃಷ್ಟಿಸುತ್ತವೆ, ಅದರ ವಿರುದ್ಧ ನಾವು ಪ್ರವಾಹದ ವಿರುದ್ಧ ಈಜುತ್ತಿರುವಂತೆ ಈಜುತ್ತಿದ್ದೇವೆ. ಇದರ ಪರಿಣಾಮ ಏನೆ ಆದರೂ ನಾವು ನಮ್ಮ ಕೆಲಸ ಮಾಡಬೇಕು. ಅದು ನಾಳೆಯೇ ಬರದಿರಬಹುದು, ಆದರೂ ಇದು ದೀರ್ಘಕಾಲ ನಡೆಯಬೇಕಾದ ಕೆಲಸ. ಇದು ನಮ್ಮ ಭವಿಷ್ಯ, ವರ್ತಮಾನಕ್ಕೆ ಸಂಬಂಧಿಸಿದ ಹೋರಾಟ. ಇದು ಖಬರ್ ಲೆಹರಿಯಾ, ದ ವೈರ್, ಈದಿನ.ಕಾಮ್ ಎಲ್ಲರೂ ಸೇರಿ ನಡೆಸಬೇಕಾದ ಹೋರಾಟ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...