Homeಕರ್ನಾಟಕಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ...

ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ

- Advertisement -
- Advertisement -

ಈ ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ ಎಂದು ದಿ ವೈರ್ ಸಂಪಾದಕರಾದ ಸೀಮಾ ಚಿಸ್ತಿ ಅವರು ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ, ಆದರೆ ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ ದೇಶದಲ್ಲಿ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದು, ಇದು ಹೆಚ್ಚು ಆತಂಕದ ವಿಚಾರ ಎಂದು ಅವರು ಹೇಳಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

ಓದುಗರ ಸಮಾವೇಶದಲ್ಲಿ ಮಾತನಾಡಿದ ಅವರು, “ಈದಿನ.ಕಾಮ್ ಯಾಕೆ ಬೇಕು? ಯಾಕೆ ಡಿಜಿಟಲ್ ಸ್ವತಂತ್ರ ಮಾಧ್ಯಮ ಬೇಕು. ನಾವು ಆ ಮಾಧ್ಯಮವೇ ಆಗಿ ವಾದಿಸುವುದಾದರೆ, ಇದು ಕೇವಲ ಮಾಧ್ಯಮಗಳ ಕೆಲಸವಲ್ಲ. ನಾಗರೀಕರಾಗಿ ನಮ್ಮೆಲ್ಲರ ಕೆಲಸ. ಏಕೆಂದರೆ ಭಾರತದ ಸ್ವತಂತ್ರ ಅಸ್ತಿತ್ವ ನಮ್ಮ ಜನರು ಮಾಡುವ ಆಯ್ಕೆಗಳ ಮೇಲಿರುತ್ತದೆ ಹಾಗಾಗಿ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ದೊಡ್ಡ ಮಾಧ್ಯಮ ಎಂದು ಕರೆಯುವವರ ವಾಸ್ತವ ಏನು ಎಂಬುವುದು ನಮಗೆ ತಿಳಿದಿದೆ. ಆದ್ದರಿಂದಲೇ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ. ಕಳೆದ 11 ವರ್ಷಗಳಲ್ಲಿ ದೇಶದಲ್ಲಿ ಅವರು ಬಹುಸಂಖ್ಯಾತರ ಪಟ್ಟ ತಲುಪಿದ್ದಾರೆ. ಈ ಬಾರಿ ಸಣ್ಣ ಪ್ರಮಾಣದಲ್ಲಿ ವಿರೋಧ ಪಕ್ಷವಿದೆ. ಕ್ರೈಮ್, ಕ್ರಿಕೆಟ್ ಮತ್ತು ಸಿನೆಮಾದ ಗೀಳು ಮಾಧ್ಯಮಗಳನ್ನು ತುಂಬಿದ್ದು, ಬಹುತೇಕ ಮಾಧ್ಯಮಗಳಿಗೆ ಗ್ರಾಮೀಣ ವರದಿಗಾಗರೂ ಇಲ್ಲ” ಎಂದು ಅವರು ತಿಳಿಸಿದರು.

“100000 ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ. 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ. ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದಾರೆ. ಅದಾಗ್ಯೂ, 2014ರ ನಂತರ ಆಗಿರುವುದು ಪೂರ್ತಿ ಭಿನ್ನ ವಿಚಾರವಾಗಿದ್ದು, ಈಗ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಎಂಬುವು ಈಗ ಬೋರಿಂಗ್ ಪದಗಳಾಗಿವೆ. 2014ಕ್ಕೂ ಮೊದಲು ಮತ್ತು ಈಗ ಮಾಧ್ಯಮಗಳಲ್ಲಿ ಏನು ವ್ಯತ್ಯಾಸವಿದೆ ಎಂದರೆ, ಅವರು ಹಿಪಾಕ್ರಸಿಯನ್ನು ಇಷ್ಟಪಡುತ್ತಾ, ತಮ್ಮ ಕರ್ತವ್ಯ ಮರೆತಿದ್ದಾರೆ” ಎಂದು ಅತಂಕ ವ್ಯಕ್ತಪಡಿಸಿದರು.

“ಉದಾಹರಣೆಗೆ, ಹೊರಗೆ ಮಳೆ ಬರುತ್ತಿದ್ದರೆ ನಾರಾಯಣ್ ಅವರು ಮಳೆ ಬರುತ್ತಿದೆ ಎಂಬು ಹೇಳಿದರು ಅಥವಾ ಸಿಎಂ ಸಿದ್ಧರಾಮಯ್ಯ ಅವರು ಮಳೆ ಬರುತ್ತಿಲ್ಲ ಎಂದು ಹೇಳಿದರು ಎಂದು ವರದಿ ಮಾಡುವುದು ಮಾಧ್ಯಮದ ಕೆಲಸವಲ್ಲ. ಛತ್ರಿ ಹಿಡಿದು ಹೊರಗೆ ಹೋಗಿ 2 ಸೆಂ ಮೀ ಮಳೆ ಆಗಿದೆ ಎಂದು ಹೇಳುವುದು ನಮ್ಮ ಕೆಲಸ” ಎಂದು ಅವರು ಹೇಳಿದರು.

“ಖಬರ್ ಲೆಹರಿಯಾ, ವೈರ್, ಈದಿನ.ಕಾಮ್ ಸೇರಿ ನಾವೆಲ್ಲ ಇಂದು ಒಂದೇ ದಿಕ್ಕಿಗೆ ಹೊರಟಿದ್ದೇವೆ. ನಾವೆಲ್ಲ ಇದರಲ್ಲಿ ಮಾಡುತ್ತಿರುವ ಪ್ರಯತ್ನ ಜನರಿಗೆ ಆರೋಗ್ಯಕರವಾದ, ಸತ್ಯವಾದ ಮಾಹಿತಿಯನ್ನು ನೀಡುವುದಾಗಿದೆ. ನೀರಿನೊಳಗೆ ಬೇಯುತ್ತಿರುವ ಕಪ್ಪೆಗೆ ಹೇಗೆ ಬಿಸಿ ಗೊತ್ತಾಗುವುದಿಲ್ಲವೋ, ಹಾಗೆ ನಮ್ಮ ಜನರ ಸ್ಥಿತಿಯಿದೆ. 11 ವರ್ಷಗಳಲ್ಲಿ ಪ್ರಧಾನ ಮಂತ್ರಿ ಒಂದೂ ಪತ್ರಿಕಾಗೋಷ್ಠಿ ಮಾಡಿಲ್ಲ, ಟ್ರಂಪ್ ಕೂಡಾ ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸುತ್ತಾರೆ. ಆದರೆ ಇವರು ಅದನ್ನು ಮಾಡುತ್ತಿಲ್ಲ. ಕೋವಿಡ್ ಬಂತು, ಗಂಗಾನದಿಯಲ್ಲಿ ಹೆಣಗಳು ಬಂದವು, ಏನೇ ಬರಲಿ ಪ್ರಧಾನ ಮಂತ್ರಿ ಮಾಧ್ಯಮಗಳ ಮುಂದೆ ಬರಲಿಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

“ಹೊರಗೆ ಹೋಗಿ ರೈತರು ಹೋರಾಟದಲ್ಲಿದ್ದಾರೆ ಎಂಬುವುದನ್ನು ದಾಖಲಿಸುವುದು. ಯಾಕೆ ಕಾರ್ಮಿಕರ ಮುಷ್ಕರ ನಡೆಯುತ್ತಿದೆ ಎಂಬುದನ್ನು ವರದಿ ಮಾಡುವುದು ಇಂದು ಮಾಧ್ಯಮಗಳ ಕೆಲಸವಲ್ಲ ಎಂಬಂತಾಗಿದೆ. ಮೊದಲೆಲ್ಲ ದನಿಯೆತ್ತುತ್ತಿದ್ದ ಮಾಧ್ಯಮ ಸಂಸ್ಥೆಗಳು ಈ ಯಾವ ಸಂದರ್ಭಗಳಲ್ಲೂ ಒಂದೂ ಮಾತಾಡುತ್ತಿಲ್ಲ. ಮಾಧ್ಯಮ ಇರುವುದು ಜನರ ಒಳಿತಿಗಾಗಿ ಎಂಬುವುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು. ಬಿಬಿಸಿ ಸರ್ಕಾರದ ಸಂಸ್ಥೆಯಲ್ಲ ಜನರ ಪ್ರತಿನಿಧಿ. ಹಾಗೆಯೇ ಈದಿನದಂತಹ ಸಂಸ್ಥೆಗಳೂ ಕೂಡಾ. ಸರ್ಕಾರದ ದನಿಯಾಗಲು ದೂರದರ್ಶನ ಇದೆ, ಅದು ಮಾಧ್ಯಮಗಳ ಕೆಲಸವಲ್ಲ” ಎಂದು ಅವರು ಹೇಳಿದರು.

“ಮೂಲಭೂತ ಸತ್ಯಗಳನ್ನು ಹೇಳುವವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲೂ, ಹೊರಗೂ ದಾಳಿಗಳಾಗುತ್ತಿವೆ. ತಟಸ್ಥರಾಗಿರುವುದು ಸ್ವತಂತ್ರ ಮಾಧ್ಯಮಗಳ ಕೆಲಸವಲ್ಲ, ನಾವು ಜನರ ಪಕ್ಷಪಾತಿ ಆಗಿರಬೇಕು. ಟಿವಿ ಮಾಧ್ಯಮಗಳು ಒಂದು ಸುಳ್ಳಿನ ಪರದೆಯನ್ನು ಸೃಷ್ಟಿಸುತ್ತವೆ, ಅದರ ವಿರುದ್ಧ ನಾವು ಪ್ರವಾಹದ ವಿರುದ್ಧ ಈಜುತ್ತಿರುವಂತೆ ಈಜುತ್ತಿದ್ದೇವೆ. ಇದರ ಪರಿಣಾಮ ಏನೆ ಆದರೂ ನಾವು ನಮ್ಮ ಕೆಲಸ ಮಾಡಬೇಕು. ಅದು ನಾಳೆಯೇ ಬರದಿರಬಹುದು, ಆದರೂ ಇದು ದೀರ್ಘಕಾಲ ನಡೆಯಬೇಕಾದ ಕೆಲಸ. ಇದು ನಮ್ಮ ಭವಿಷ್ಯ, ವರ್ತಮಾನಕ್ಕೆ ಸಂಬಂಧಿಸಿದ ಹೋರಾಟ. ಇದು ಖಬರ್ ಲೆಹರಿಯಾ, ದ ವೈರ್, ಈದಿನ.ಕಾಮ್ ಎಲ್ಲರೂ ಸೇರಿ ನಡೆಸಬೇಕಾದ ಹೋರಾಟ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...