Homeಕರ್ನಾಟಕಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ...

ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ

- Advertisement -
- Advertisement -

ಈ ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ ಎಂದು ದಿ ವೈರ್ ಸಂಪಾದಕರಾದ ಸೀಮಾ ಚಿಸ್ತಿ ಅವರು ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ, ಆದರೆ ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ ದೇಶದಲ್ಲಿ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದು, ಇದು ಹೆಚ್ಚು ಆತಂಕದ ವಿಚಾರ ಎಂದು ಅವರು ಹೇಳಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

ಓದುಗರ ಸಮಾವೇಶದಲ್ಲಿ ಮಾತನಾಡಿದ ಅವರು, “ಈದಿನ.ಕಾಮ್ ಯಾಕೆ ಬೇಕು? ಯಾಕೆ ಡಿಜಿಟಲ್ ಸ್ವತಂತ್ರ ಮಾಧ್ಯಮ ಬೇಕು. ನಾವು ಆ ಮಾಧ್ಯಮವೇ ಆಗಿ ವಾದಿಸುವುದಾದರೆ, ಇದು ಕೇವಲ ಮಾಧ್ಯಮಗಳ ಕೆಲಸವಲ್ಲ. ನಾಗರೀಕರಾಗಿ ನಮ್ಮೆಲ್ಲರ ಕೆಲಸ. ಏಕೆಂದರೆ ಭಾರತದ ಸ್ವತಂತ್ರ ಅಸ್ತಿತ್ವ ನಮ್ಮ ಜನರು ಮಾಡುವ ಆಯ್ಕೆಗಳ ಮೇಲಿರುತ್ತದೆ ಹಾಗಾಗಿ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ದೊಡ್ಡ ಮಾಧ್ಯಮ ಎಂದು ಕರೆಯುವವರ ವಾಸ್ತವ ಏನು ಎಂಬುವುದು ನಮಗೆ ತಿಳಿದಿದೆ. ಆದ್ದರಿಂದಲೇ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ. ಕಳೆದ 11 ವರ್ಷಗಳಲ್ಲಿ ದೇಶದಲ್ಲಿ ಅವರು ಬಹುಸಂಖ್ಯಾತರ ಪಟ್ಟ ತಲುಪಿದ್ದಾರೆ. ಈ ಬಾರಿ ಸಣ್ಣ ಪ್ರಮಾಣದಲ್ಲಿ ವಿರೋಧ ಪಕ್ಷವಿದೆ. ಕ್ರೈಮ್, ಕ್ರಿಕೆಟ್ ಮತ್ತು ಸಿನೆಮಾದ ಗೀಳು ಮಾಧ್ಯಮಗಳನ್ನು ತುಂಬಿದ್ದು, ಬಹುತೇಕ ಮಾಧ್ಯಮಗಳಿಗೆ ಗ್ರಾಮೀಣ ವರದಿಗಾಗರೂ ಇಲ್ಲ” ಎಂದು ಅವರು ತಿಳಿಸಿದರು.

“100000 ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ. 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ. ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದಾರೆ. ಅದಾಗ್ಯೂ, 2014ರ ನಂತರ ಆಗಿರುವುದು ಪೂರ್ತಿ ಭಿನ್ನ ವಿಚಾರವಾಗಿದ್ದು, ಈಗ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಎಂಬುವು ಈಗ ಬೋರಿಂಗ್ ಪದಗಳಾಗಿವೆ. 2014ಕ್ಕೂ ಮೊದಲು ಮತ್ತು ಈಗ ಮಾಧ್ಯಮಗಳಲ್ಲಿ ಏನು ವ್ಯತ್ಯಾಸವಿದೆ ಎಂದರೆ, ಅವರು ಹಿಪಾಕ್ರಸಿಯನ್ನು ಇಷ್ಟಪಡುತ್ತಾ, ತಮ್ಮ ಕರ್ತವ್ಯ ಮರೆತಿದ್ದಾರೆ” ಎಂದು ಅತಂಕ ವ್ಯಕ್ತಪಡಿಸಿದರು.

“ಉದಾಹರಣೆಗೆ, ಹೊರಗೆ ಮಳೆ ಬರುತ್ತಿದ್ದರೆ ನಾರಾಯಣ್ ಅವರು ಮಳೆ ಬರುತ್ತಿದೆ ಎಂಬು ಹೇಳಿದರು ಅಥವಾ ಸಿಎಂ ಸಿದ್ಧರಾಮಯ್ಯ ಅವರು ಮಳೆ ಬರುತ್ತಿಲ್ಲ ಎಂದು ಹೇಳಿದರು ಎಂದು ವರದಿ ಮಾಡುವುದು ಮಾಧ್ಯಮದ ಕೆಲಸವಲ್ಲ. ಛತ್ರಿ ಹಿಡಿದು ಹೊರಗೆ ಹೋಗಿ 2 ಸೆಂ ಮೀ ಮಳೆ ಆಗಿದೆ ಎಂದು ಹೇಳುವುದು ನಮ್ಮ ಕೆಲಸ” ಎಂದು ಅವರು ಹೇಳಿದರು.

“ಖಬರ್ ಲೆಹರಿಯಾ, ವೈರ್, ಈದಿನ.ಕಾಮ್ ಸೇರಿ ನಾವೆಲ್ಲ ಇಂದು ಒಂದೇ ದಿಕ್ಕಿಗೆ ಹೊರಟಿದ್ದೇವೆ. ನಾವೆಲ್ಲ ಇದರಲ್ಲಿ ಮಾಡುತ್ತಿರುವ ಪ್ರಯತ್ನ ಜನರಿಗೆ ಆರೋಗ್ಯಕರವಾದ, ಸತ್ಯವಾದ ಮಾಹಿತಿಯನ್ನು ನೀಡುವುದಾಗಿದೆ. ನೀರಿನೊಳಗೆ ಬೇಯುತ್ತಿರುವ ಕಪ್ಪೆಗೆ ಹೇಗೆ ಬಿಸಿ ಗೊತ್ತಾಗುವುದಿಲ್ಲವೋ, ಹಾಗೆ ನಮ್ಮ ಜನರ ಸ್ಥಿತಿಯಿದೆ. 11 ವರ್ಷಗಳಲ್ಲಿ ಪ್ರಧಾನ ಮಂತ್ರಿ ಒಂದೂ ಪತ್ರಿಕಾಗೋಷ್ಠಿ ಮಾಡಿಲ್ಲ, ಟ್ರಂಪ್ ಕೂಡಾ ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸುತ್ತಾರೆ. ಆದರೆ ಇವರು ಅದನ್ನು ಮಾಡುತ್ತಿಲ್ಲ. ಕೋವಿಡ್ ಬಂತು, ಗಂಗಾನದಿಯಲ್ಲಿ ಹೆಣಗಳು ಬಂದವು, ಏನೇ ಬರಲಿ ಪ್ರಧಾನ ಮಂತ್ರಿ ಮಾಧ್ಯಮಗಳ ಮುಂದೆ ಬರಲಿಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

“ಹೊರಗೆ ಹೋಗಿ ರೈತರು ಹೋರಾಟದಲ್ಲಿದ್ದಾರೆ ಎಂಬುವುದನ್ನು ದಾಖಲಿಸುವುದು. ಯಾಕೆ ಕಾರ್ಮಿಕರ ಮುಷ್ಕರ ನಡೆಯುತ್ತಿದೆ ಎಂಬುದನ್ನು ವರದಿ ಮಾಡುವುದು ಇಂದು ಮಾಧ್ಯಮಗಳ ಕೆಲಸವಲ್ಲ ಎಂಬಂತಾಗಿದೆ. ಮೊದಲೆಲ್ಲ ದನಿಯೆತ್ತುತ್ತಿದ್ದ ಮಾಧ್ಯಮ ಸಂಸ್ಥೆಗಳು ಈ ಯಾವ ಸಂದರ್ಭಗಳಲ್ಲೂ ಒಂದೂ ಮಾತಾಡುತ್ತಿಲ್ಲ. ಮಾಧ್ಯಮ ಇರುವುದು ಜನರ ಒಳಿತಿಗಾಗಿ ಎಂಬುವುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು. ಬಿಬಿಸಿ ಸರ್ಕಾರದ ಸಂಸ್ಥೆಯಲ್ಲ ಜನರ ಪ್ರತಿನಿಧಿ. ಹಾಗೆಯೇ ಈದಿನದಂತಹ ಸಂಸ್ಥೆಗಳೂ ಕೂಡಾ. ಸರ್ಕಾರದ ದನಿಯಾಗಲು ದೂರದರ್ಶನ ಇದೆ, ಅದು ಮಾಧ್ಯಮಗಳ ಕೆಲಸವಲ್ಲ” ಎಂದು ಅವರು ಹೇಳಿದರು.

“ಮೂಲಭೂತ ಸತ್ಯಗಳನ್ನು ಹೇಳುವವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲೂ, ಹೊರಗೂ ದಾಳಿಗಳಾಗುತ್ತಿವೆ. ತಟಸ್ಥರಾಗಿರುವುದು ಸ್ವತಂತ್ರ ಮಾಧ್ಯಮಗಳ ಕೆಲಸವಲ್ಲ, ನಾವು ಜನರ ಪಕ್ಷಪಾತಿ ಆಗಿರಬೇಕು. ಟಿವಿ ಮಾಧ್ಯಮಗಳು ಒಂದು ಸುಳ್ಳಿನ ಪರದೆಯನ್ನು ಸೃಷ್ಟಿಸುತ್ತವೆ, ಅದರ ವಿರುದ್ಧ ನಾವು ಪ್ರವಾಹದ ವಿರುದ್ಧ ಈಜುತ್ತಿರುವಂತೆ ಈಜುತ್ತಿದ್ದೇವೆ. ಇದರ ಪರಿಣಾಮ ಏನೆ ಆದರೂ ನಾವು ನಮ್ಮ ಕೆಲಸ ಮಾಡಬೇಕು. ಅದು ನಾಳೆಯೇ ಬರದಿರಬಹುದು, ಆದರೂ ಇದು ದೀರ್ಘಕಾಲ ನಡೆಯಬೇಕಾದ ಕೆಲಸ. ಇದು ನಮ್ಮ ಭವಿಷ್ಯ, ವರ್ತಮಾನಕ್ಕೆ ಸಂಬಂಧಿಸಿದ ಹೋರಾಟ. ಇದು ಖಬರ್ ಲೆಹರಿಯಾ, ದ ವೈರ್, ಈದಿನ.ಕಾಮ್ ಎಲ್ಲರೂ ಸೇರಿ ನಡೆಸಬೇಕಾದ ಹೋರಾಟ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...