Homeಕರ್ನಾಟಕಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ...

ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ

- Advertisement -
- Advertisement -

ಈ ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ ಎಂದು ದಿ ವೈರ್ ಸಂಪಾದಕರಾದ ಸೀಮಾ ಚಿಸ್ತಿ ಅವರು ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ, ಆದರೆ ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ ದೇಶದಲ್ಲಿ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದು, ಇದು ಹೆಚ್ಚು ಆತಂಕದ ವಿಚಾರ ಎಂದು ಅವರು ಹೇಳಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

ಓದುಗರ ಸಮಾವೇಶದಲ್ಲಿ ಮಾತನಾಡಿದ ಅವರು, “ಈದಿನ.ಕಾಮ್ ಯಾಕೆ ಬೇಕು? ಯಾಕೆ ಡಿಜಿಟಲ್ ಸ್ವತಂತ್ರ ಮಾಧ್ಯಮ ಬೇಕು. ನಾವು ಆ ಮಾಧ್ಯಮವೇ ಆಗಿ ವಾದಿಸುವುದಾದರೆ, ಇದು ಕೇವಲ ಮಾಧ್ಯಮಗಳ ಕೆಲಸವಲ್ಲ. ನಾಗರೀಕರಾಗಿ ನಮ್ಮೆಲ್ಲರ ಕೆಲಸ. ಏಕೆಂದರೆ ಭಾರತದ ಸ್ವತಂತ್ರ ಅಸ್ತಿತ್ವ ನಮ್ಮ ಜನರು ಮಾಡುವ ಆಯ್ಕೆಗಳ ಮೇಲಿರುತ್ತದೆ ಹಾಗಾಗಿ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ದೊಡ್ಡ ಮಾಧ್ಯಮ ಎಂದು ಕರೆಯುವವರ ವಾಸ್ತವ ಏನು ಎಂಬುವುದು ನಮಗೆ ತಿಳಿದಿದೆ. ಆದ್ದರಿಂದಲೇ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ. ಕಳೆದ 11 ವರ್ಷಗಳಲ್ಲಿ ದೇಶದಲ್ಲಿ ಅವರು ಬಹುಸಂಖ್ಯಾತರ ಪಟ್ಟ ತಲುಪಿದ್ದಾರೆ. ಈ ಬಾರಿ ಸಣ್ಣ ಪ್ರಮಾಣದಲ್ಲಿ ವಿರೋಧ ಪಕ್ಷವಿದೆ. ಕ್ರೈಮ್, ಕ್ರಿಕೆಟ್ ಮತ್ತು ಸಿನೆಮಾದ ಗೀಳು ಮಾಧ್ಯಮಗಳನ್ನು ತುಂಬಿದ್ದು, ಬಹುತೇಕ ಮಾಧ್ಯಮಗಳಿಗೆ ಗ್ರಾಮೀಣ ವರದಿಗಾಗರೂ ಇಲ್ಲ” ಎಂದು ಅವರು ತಿಳಿಸಿದರು.

“100000 ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ. 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ. ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದಾರೆ. ಅದಾಗ್ಯೂ, 2014ರ ನಂತರ ಆಗಿರುವುದು ಪೂರ್ತಿ ಭಿನ್ನ ವಿಚಾರವಾಗಿದ್ದು, ಈಗ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಎಂಬುವು ಈಗ ಬೋರಿಂಗ್ ಪದಗಳಾಗಿವೆ. 2014ಕ್ಕೂ ಮೊದಲು ಮತ್ತು ಈಗ ಮಾಧ್ಯಮಗಳಲ್ಲಿ ಏನು ವ್ಯತ್ಯಾಸವಿದೆ ಎಂದರೆ, ಅವರು ಹಿಪಾಕ್ರಸಿಯನ್ನು ಇಷ್ಟಪಡುತ್ತಾ, ತಮ್ಮ ಕರ್ತವ್ಯ ಮರೆತಿದ್ದಾರೆ” ಎಂದು ಅತಂಕ ವ್ಯಕ್ತಪಡಿಸಿದರು.

“ಉದಾಹರಣೆಗೆ, ಹೊರಗೆ ಮಳೆ ಬರುತ್ತಿದ್ದರೆ ನಾರಾಯಣ್ ಅವರು ಮಳೆ ಬರುತ್ತಿದೆ ಎಂಬು ಹೇಳಿದರು ಅಥವಾ ಸಿಎಂ ಸಿದ್ಧರಾಮಯ್ಯ ಅವರು ಮಳೆ ಬರುತ್ತಿಲ್ಲ ಎಂದು ಹೇಳಿದರು ಎಂದು ವರದಿ ಮಾಡುವುದು ಮಾಧ್ಯಮದ ಕೆಲಸವಲ್ಲ. ಛತ್ರಿ ಹಿಡಿದು ಹೊರಗೆ ಹೋಗಿ 2 ಸೆಂ ಮೀ ಮಳೆ ಆಗಿದೆ ಎಂದು ಹೇಳುವುದು ನಮ್ಮ ಕೆಲಸ” ಎಂದು ಅವರು ಹೇಳಿದರು.

“ಖಬರ್ ಲೆಹರಿಯಾ, ವೈರ್, ಈದಿನ.ಕಾಮ್ ಸೇರಿ ನಾವೆಲ್ಲ ಇಂದು ಒಂದೇ ದಿಕ್ಕಿಗೆ ಹೊರಟಿದ್ದೇವೆ. ನಾವೆಲ್ಲ ಇದರಲ್ಲಿ ಮಾಡುತ್ತಿರುವ ಪ್ರಯತ್ನ ಜನರಿಗೆ ಆರೋಗ್ಯಕರವಾದ, ಸತ್ಯವಾದ ಮಾಹಿತಿಯನ್ನು ನೀಡುವುದಾಗಿದೆ. ನೀರಿನೊಳಗೆ ಬೇಯುತ್ತಿರುವ ಕಪ್ಪೆಗೆ ಹೇಗೆ ಬಿಸಿ ಗೊತ್ತಾಗುವುದಿಲ್ಲವೋ, ಹಾಗೆ ನಮ್ಮ ಜನರ ಸ್ಥಿತಿಯಿದೆ. 11 ವರ್ಷಗಳಲ್ಲಿ ಪ್ರಧಾನ ಮಂತ್ರಿ ಒಂದೂ ಪತ್ರಿಕಾಗೋಷ್ಠಿ ಮಾಡಿಲ್ಲ, ಟ್ರಂಪ್ ಕೂಡಾ ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸುತ್ತಾರೆ. ಆದರೆ ಇವರು ಅದನ್ನು ಮಾಡುತ್ತಿಲ್ಲ. ಕೋವಿಡ್ ಬಂತು, ಗಂಗಾನದಿಯಲ್ಲಿ ಹೆಣಗಳು ಬಂದವು, ಏನೇ ಬರಲಿ ಪ್ರಧಾನ ಮಂತ್ರಿ ಮಾಧ್ಯಮಗಳ ಮುಂದೆ ಬರಲಿಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

“ಹೊರಗೆ ಹೋಗಿ ರೈತರು ಹೋರಾಟದಲ್ಲಿದ್ದಾರೆ ಎಂಬುವುದನ್ನು ದಾಖಲಿಸುವುದು. ಯಾಕೆ ಕಾರ್ಮಿಕರ ಮುಷ್ಕರ ನಡೆಯುತ್ತಿದೆ ಎಂಬುದನ್ನು ವರದಿ ಮಾಡುವುದು ಇಂದು ಮಾಧ್ಯಮಗಳ ಕೆಲಸವಲ್ಲ ಎಂಬಂತಾಗಿದೆ. ಮೊದಲೆಲ್ಲ ದನಿಯೆತ್ತುತ್ತಿದ್ದ ಮಾಧ್ಯಮ ಸಂಸ್ಥೆಗಳು ಈ ಯಾವ ಸಂದರ್ಭಗಳಲ್ಲೂ ಒಂದೂ ಮಾತಾಡುತ್ತಿಲ್ಲ. ಮಾಧ್ಯಮ ಇರುವುದು ಜನರ ಒಳಿತಿಗಾಗಿ ಎಂಬುವುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು. ಬಿಬಿಸಿ ಸರ್ಕಾರದ ಸಂಸ್ಥೆಯಲ್ಲ ಜನರ ಪ್ರತಿನಿಧಿ. ಹಾಗೆಯೇ ಈದಿನದಂತಹ ಸಂಸ್ಥೆಗಳೂ ಕೂಡಾ. ಸರ್ಕಾರದ ದನಿಯಾಗಲು ದೂರದರ್ಶನ ಇದೆ, ಅದು ಮಾಧ್ಯಮಗಳ ಕೆಲಸವಲ್ಲ” ಎಂದು ಅವರು ಹೇಳಿದರು.

“ಮೂಲಭೂತ ಸತ್ಯಗಳನ್ನು ಹೇಳುವವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲೂ, ಹೊರಗೂ ದಾಳಿಗಳಾಗುತ್ತಿವೆ. ತಟಸ್ಥರಾಗಿರುವುದು ಸ್ವತಂತ್ರ ಮಾಧ್ಯಮಗಳ ಕೆಲಸವಲ್ಲ, ನಾವು ಜನರ ಪಕ್ಷಪಾತಿ ಆಗಿರಬೇಕು. ಟಿವಿ ಮಾಧ್ಯಮಗಳು ಒಂದು ಸುಳ್ಳಿನ ಪರದೆಯನ್ನು ಸೃಷ್ಟಿಸುತ್ತವೆ, ಅದರ ವಿರುದ್ಧ ನಾವು ಪ್ರವಾಹದ ವಿರುದ್ಧ ಈಜುತ್ತಿರುವಂತೆ ಈಜುತ್ತಿದ್ದೇವೆ. ಇದರ ಪರಿಣಾಮ ಏನೆ ಆದರೂ ನಾವು ನಮ್ಮ ಕೆಲಸ ಮಾಡಬೇಕು. ಅದು ನಾಳೆಯೇ ಬರದಿರಬಹುದು, ಆದರೂ ಇದು ದೀರ್ಘಕಾಲ ನಡೆಯಬೇಕಾದ ಕೆಲಸ. ಇದು ನಮ್ಮ ಭವಿಷ್ಯ, ವರ್ತಮಾನಕ್ಕೆ ಸಂಬಂಧಿಸಿದ ಹೋರಾಟ. ಇದು ಖಬರ್ ಲೆಹರಿಯಾ, ದ ವೈರ್, ಈದಿನ.ಕಾಮ್ ಎಲ್ಲರೂ ಸೇರಿ ನಡೆಸಬೇಕಾದ ಹೋರಾಟ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...