Homeಕರ್ನಾಟಕಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ...

ಈದಿನ.ಕಾಮ್ ಓದುಗರ ಸಮಾವೇಶ | ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ – ದಿ ವೈರ್ ಸಂಪಾದಕಿ ಸೀಮಾ ಚಿಸ್ತಿ ಪ್ರಶ್ನೆ

- Advertisement -
- Advertisement -

ಈ ದೇಶದಲ್ಲಿ ಲಕ್ಷ ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ ಎಂದು ದಿ ವೈರ್ ಸಂಪಾದಕರಾದ ಸೀಮಾ ಚಿಸ್ತಿ ಅವರು ಶನಿವಾರ ಹೇಳಿದರು. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಈದಿನ.ಕಾಮ್ ಎರಡನೇ ವರ್ಷದ ಓದುಗರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ, ಆದರೆ ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ ದೇಶದಲ್ಲಿ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದು, ಇದು ಹೆಚ್ಚು ಆತಂಕದ ವಿಚಾರ ಎಂದು ಅವರು ಹೇಳಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

ಓದುಗರ ಸಮಾವೇಶದಲ್ಲಿ ಮಾತನಾಡಿದ ಅವರು, “ಈದಿನ.ಕಾಮ್ ಯಾಕೆ ಬೇಕು? ಯಾಕೆ ಡಿಜಿಟಲ್ ಸ್ವತಂತ್ರ ಮಾಧ್ಯಮ ಬೇಕು. ನಾವು ಆ ಮಾಧ್ಯಮವೇ ಆಗಿ ವಾದಿಸುವುದಾದರೆ, ಇದು ಕೇವಲ ಮಾಧ್ಯಮಗಳ ಕೆಲಸವಲ್ಲ. ನಾಗರೀಕರಾಗಿ ನಮ್ಮೆಲ್ಲರ ಕೆಲಸ. ಏಕೆಂದರೆ ಭಾರತದ ಸ್ವತಂತ್ರ ಅಸ್ತಿತ್ವ ನಮ್ಮ ಜನರು ಮಾಡುವ ಆಯ್ಕೆಗಳ ಮೇಲಿರುತ್ತದೆ ಹಾಗಾಗಿ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ದೊಡ್ಡ ಮಾಧ್ಯಮ ಎಂದು ಕರೆಯುವವರ ವಾಸ್ತವ ಏನು ಎಂಬುವುದು ನಮಗೆ ತಿಳಿದಿದೆ. ಆದ್ದರಿಂದಲೇ ಸ್ವತಂತ್ರ ಮಾಧ್ಯಮ ಬಹಳ ಮುಖ್ಯ. ಕಳೆದ 11 ವರ್ಷಗಳಲ್ಲಿ ದೇಶದಲ್ಲಿ ಅವರು ಬಹುಸಂಖ್ಯಾತರ ಪಟ್ಟ ತಲುಪಿದ್ದಾರೆ. ಈ ಬಾರಿ ಸಣ್ಣ ಪ್ರಮಾಣದಲ್ಲಿ ವಿರೋಧ ಪಕ್ಷವಿದೆ. ಕ್ರೈಮ್, ಕ್ರಿಕೆಟ್ ಮತ್ತು ಸಿನೆಮಾದ ಗೀಳು ಮಾಧ್ಯಮಗಳನ್ನು ತುಂಬಿದ್ದು, ಬಹುತೇಕ ಮಾಧ್ಯಮಗಳಿಗೆ ಗ್ರಾಮೀಣ ವರದಿಗಾಗರೂ ಇಲ್ಲ” ಎಂದು ಅವರು ತಿಳಿಸಿದರು.

“100000 ಮಾಧ್ಯಮಗಳಿವೆ, ಆದರೆ ಎಷ್ಟರಲ್ಲಿ ವಾಸ್ತವ ಸಂಗತಿಗಳು ದೊರೆಯುತ್ತಿವೆ. 159 ದೇಶಗಳ ಪಟ್ಟಿಯಲ್ಲಿ 21ನೇ ಸ್ಥಾನದಲ್ಲಿ ಭಾರತ ಇದೆ. ಪತ್ರಿಕಾ ಸ್ವಾತಂತ್ರ್ಯದ ವಿಚಾರ ಬಂದಾಗ 1100 ಪತ್ರಕರ್ತರು ಈ ದೇಶದಲ್ಲಿ ಕೊಲೆ ಆಗಿದ್ದಾರೆ. ಅದಾಗ್ಯೂ, 2014ರ ನಂತರ ಆಗಿರುವುದು ಪೂರ್ತಿ ಭಿನ್ನ ವಿಚಾರವಾಗಿದ್ದು, ಈಗ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಎಂಬುವು ಈಗ ಬೋರಿಂಗ್ ಪದಗಳಾಗಿವೆ. 2014ಕ್ಕೂ ಮೊದಲು ಮತ್ತು ಈಗ ಮಾಧ್ಯಮಗಳಲ್ಲಿ ಏನು ವ್ಯತ್ಯಾಸವಿದೆ ಎಂದರೆ, ಅವರು ಹಿಪಾಕ್ರಸಿಯನ್ನು ಇಷ್ಟಪಡುತ್ತಾ, ತಮ್ಮ ಕರ್ತವ್ಯ ಮರೆತಿದ್ದಾರೆ” ಎಂದು ಅತಂಕ ವ್ಯಕ್ತಪಡಿಸಿದರು.

“ಉದಾಹರಣೆಗೆ, ಹೊರಗೆ ಮಳೆ ಬರುತ್ತಿದ್ದರೆ ನಾರಾಯಣ್ ಅವರು ಮಳೆ ಬರುತ್ತಿದೆ ಎಂಬು ಹೇಳಿದರು ಅಥವಾ ಸಿಎಂ ಸಿದ್ಧರಾಮಯ್ಯ ಅವರು ಮಳೆ ಬರುತ್ತಿಲ್ಲ ಎಂದು ಹೇಳಿದರು ಎಂದು ವರದಿ ಮಾಡುವುದು ಮಾಧ್ಯಮದ ಕೆಲಸವಲ್ಲ. ಛತ್ರಿ ಹಿಡಿದು ಹೊರಗೆ ಹೋಗಿ 2 ಸೆಂ ಮೀ ಮಳೆ ಆಗಿದೆ ಎಂದು ಹೇಳುವುದು ನಮ್ಮ ಕೆಲಸ” ಎಂದು ಅವರು ಹೇಳಿದರು.

“ಖಬರ್ ಲೆಹರಿಯಾ, ವೈರ್, ಈದಿನ.ಕಾಮ್ ಸೇರಿ ನಾವೆಲ್ಲ ಇಂದು ಒಂದೇ ದಿಕ್ಕಿಗೆ ಹೊರಟಿದ್ದೇವೆ. ನಾವೆಲ್ಲ ಇದರಲ್ಲಿ ಮಾಡುತ್ತಿರುವ ಪ್ರಯತ್ನ ಜನರಿಗೆ ಆರೋಗ್ಯಕರವಾದ, ಸತ್ಯವಾದ ಮಾಹಿತಿಯನ್ನು ನೀಡುವುದಾಗಿದೆ. ನೀರಿನೊಳಗೆ ಬೇಯುತ್ತಿರುವ ಕಪ್ಪೆಗೆ ಹೇಗೆ ಬಿಸಿ ಗೊತ್ತಾಗುವುದಿಲ್ಲವೋ, ಹಾಗೆ ನಮ್ಮ ಜನರ ಸ್ಥಿತಿಯಿದೆ. 11 ವರ್ಷಗಳಲ್ಲಿ ಪ್ರಧಾನ ಮಂತ್ರಿ ಒಂದೂ ಪತ್ರಿಕಾಗೋಷ್ಠಿ ಮಾಡಿಲ್ಲ, ಟ್ರಂಪ್ ಕೂಡಾ ಪತ್ರಕರ್ತರ ಪ್ರಶ್ನೆಗಳನ್ನು ಎದುರಿಸುತ್ತಾರೆ. ಆದರೆ ಇವರು ಅದನ್ನು ಮಾಡುತ್ತಿಲ್ಲ. ಕೋವಿಡ್ ಬಂತು, ಗಂಗಾನದಿಯಲ್ಲಿ ಹೆಣಗಳು ಬಂದವು, ಏನೇ ಬರಲಿ ಪ್ರಧಾನ ಮಂತ್ರಿ ಮಾಧ್ಯಮಗಳ ಮುಂದೆ ಬರಲಿಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದರು. ಎಷ್ಟು ಮಾಧ್ಯಮಗಳಲ್ಲಿ ವಾಸ್ತವ

“ಹೊರಗೆ ಹೋಗಿ ರೈತರು ಹೋರಾಟದಲ್ಲಿದ್ದಾರೆ ಎಂಬುವುದನ್ನು ದಾಖಲಿಸುವುದು. ಯಾಕೆ ಕಾರ್ಮಿಕರ ಮುಷ್ಕರ ನಡೆಯುತ್ತಿದೆ ಎಂಬುದನ್ನು ವರದಿ ಮಾಡುವುದು ಇಂದು ಮಾಧ್ಯಮಗಳ ಕೆಲಸವಲ್ಲ ಎಂಬಂತಾಗಿದೆ. ಮೊದಲೆಲ್ಲ ದನಿಯೆತ್ತುತ್ತಿದ್ದ ಮಾಧ್ಯಮ ಸಂಸ್ಥೆಗಳು ಈ ಯಾವ ಸಂದರ್ಭಗಳಲ್ಲೂ ಒಂದೂ ಮಾತಾಡುತ್ತಿಲ್ಲ. ಮಾಧ್ಯಮ ಇರುವುದು ಜನರ ಒಳಿತಿಗಾಗಿ ಎಂಬುವುದನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕು. ಬಿಬಿಸಿ ಸರ್ಕಾರದ ಸಂಸ್ಥೆಯಲ್ಲ ಜನರ ಪ್ರತಿನಿಧಿ. ಹಾಗೆಯೇ ಈದಿನದಂತಹ ಸಂಸ್ಥೆಗಳೂ ಕೂಡಾ. ಸರ್ಕಾರದ ದನಿಯಾಗಲು ದೂರದರ್ಶನ ಇದೆ, ಅದು ಮಾಧ್ಯಮಗಳ ಕೆಲಸವಲ್ಲ” ಎಂದು ಅವರು ಹೇಳಿದರು.

“ಮೂಲಭೂತ ಸತ್ಯಗಳನ್ನು ಹೇಳುವವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲೂ, ಹೊರಗೂ ದಾಳಿಗಳಾಗುತ್ತಿವೆ. ತಟಸ್ಥರಾಗಿರುವುದು ಸ್ವತಂತ್ರ ಮಾಧ್ಯಮಗಳ ಕೆಲಸವಲ್ಲ, ನಾವು ಜನರ ಪಕ್ಷಪಾತಿ ಆಗಿರಬೇಕು. ಟಿವಿ ಮಾಧ್ಯಮಗಳು ಒಂದು ಸುಳ್ಳಿನ ಪರದೆಯನ್ನು ಸೃಷ್ಟಿಸುತ್ತವೆ, ಅದರ ವಿರುದ್ಧ ನಾವು ಪ್ರವಾಹದ ವಿರುದ್ಧ ಈಜುತ್ತಿರುವಂತೆ ಈಜುತ್ತಿದ್ದೇವೆ. ಇದರ ಪರಿಣಾಮ ಏನೆ ಆದರೂ ನಾವು ನಮ್ಮ ಕೆಲಸ ಮಾಡಬೇಕು. ಅದು ನಾಳೆಯೇ ಬರದಿರಬಹುದು, ಆದರೂ ಇದು ದೀರ್ಘಕಾಲ ನಡೆಯಬೇಕಾದ ಕೆಲಸ. ಇದು ನಮ್ಮ ಭವಿಷ್ಯ, ವರ್ತಮಾನಕ್ಕೆ ಸಂಬಂಧಿಸಿದ ಹೋರಾಟ. ಇದು ಖಬರ್ ಲೆಹರಿಯಾ, ದ ವೈರ್, ಈದಿನ.ಕಾಮ್ ಎಲ್ಲರೂ ಸೇರಿ ನಡೆಸಬೇಕಾದ ಹೋರಾಟ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ಮಹಾಯುತಿಯಲ್ಲಿ ಸಿಎಂ ಹುದ್ದೆಗಾಗಿ ಮುಂದುವರಿದ ಹಗ್ಗಜಗ್ಗಾಟ; ಎರಡು ಪ್ರಮುಖ ಸಭೆಗಳನ್ನು ರದ್ದುಗೊಳಿಸಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...