Homeಸಾಹಿತ್ಯ-ಸಂಸ್ಕೃತಿಕಥೆಎಷ್ಟು ಉಂಡರೂ ಉಟ್ಟರೂ, ಇನ್ನೂ ಬೇಕೆಂಬ ದಾಹ

ಎಷ್ಟು ಉಂಡರೂ ಉಟ್ಟರೂ, ಇನ್ನೂ ಬೇಕೆಂಬ ದಾಹ

- Advertisement -
- Advertisement -

ಆಡಿದ ಮಾತು ಕಾಲ ಕಳೆದಂತೆ ಮರೆತು ಹೋಗಬಹುದು. ಆದರೆ ಪಾಲ್ಗೊಂಡ ಚಿತ್ರ ಮಾತ್ರ ಕಾಲಾನಂತರದಲ್ಲೂ ಉಳಿದುಬಿಡುತ್ತದೆ’- ಇತ್ತೀಚಿನ ದಿನಗಳಲ್ಲಿ ನನ್ನನ್ನು ಗಾಢವಾಗಿ ಕಲಕಿದ ಮಾತಿದು. ನಾಗಪುರದ ಸಂಘ ಪರಿವಾರದ ಸಮಾವೇಶದಲ್ಲಿ ಪಾಲ್ಗೊಂಡ ತನ್ನ ತಂದೆ, ಭಾರತದ ಮಾಜಿ ರಾಷ್ಟ್ರಪತಿಗಳಾಗಿದ್ದ ಪ್ರಣವ ಮುಖರ್ಜಿಯವರನ್ನು ಎಚ್ಚರಿಸಲು ಅವರ ಮಗಳು ಶರ್ಮಿಷ್ಠಾ ಮುಖರ್ಜಿ ಆಡಿದ ಮಾತುಗಳಿವು. ಮತೀಯವಾದಿ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದು ಮತ್ತು ಮತೀಯ ಭ್ರಷ್ಟ ವ್ಯಕ್ತಿಗಳು-ಚಿಂತನೆಗಳು ಸೇರಿಕೊಂಡ ಸಾಂಸ್ಕøತಿಕ-ಸಾಹಿತ್ಯಿಕ-ಶೈಕ್ಷಣಿಕ ವೇದಿಕೆಗಳಲ್ಲಿ ಪಾಲ್ಗೊಳ್ಳುವುದು ಎರಡೂ ಅಪಾಯಕಾರಿಯೇ. ಆದರೆ ಈ ಎರಡರ ಮಧ್ಯೆ ಕನಿಷ್ಠ ವ್ಯತ್ಯಾಸವಿದೆ. ಆ ವ್ಯತ್ಯಾಸ ಕೇಳುಗ ವರ್ಗಕ್ಕೆ ಸಂಬಂಧಿಸಿದ್ದು. ಮತೀಯ ಸಂಘಟನೆಗಳ ಕಾರ್ಯಕರ್ತರು ತಮ್ಮನ್ನು ಸಿದ್ಧಾಂತಕ್ಕೆ ಕೊಟ್ಟುಕೊಂಡವರು. ತಾವು ಸರಿ ಎಂದುಕೊಂಡಿದ್ದು ತಪ್ಪಿರಬಹುದು. ಲೋಕವನ್ನು ಕಾಣಬೇಕಾದ ಕ್ರಮ ಬೇರೆಯಿದ್ದೀತು ಎಂಬ ಉದಾರತೆ ಇರದವರು. ಇವರಿಗೆ ಜೀವ ಸಾಮರಸ್ಯದ ಚರಿತ್ರೆಯನ್ನು ನೆನಪಿಸುವುದಾಗಲಿ, ವರ್ತಮಾನದ ಬಗ್ಗೆ ನೆನಪಿಸುವುದಾಗಲಿ ವ್ಯರ್ಥ. ಹೆಚ್ಚೆಂದರೆ, ದಿನದ ಮಾತುಗಳಿಗಿಂತ ಬೇರೆಯಾದ ಮಾತುಗಳನ್ನು ಕೇಳಿಸಿಕೊಂಡ ಮುದ ಒಂದು ಗಳಿಗೆ ದೊರೆತೀತು. ಸಂಘ ಪರಿವಾರದ ಚರಿತ್ರೆಯನ್ನು ಗಮನಿಸಿದರೆ, ಅದು ತನ್ನನ್ನು ಕಟುವಾಗಿ ವಿರೋಧಿಸಿ ಎದುರು ಹಾಕಿಕೊಂಡವರನ್ನೂ ತನ್ನ ಚಹರೆಪಟ್ಟಿಗೆ ಸೇರಿಸಿಕೊಂಡು ಬೆಳೆದಿದೆ. ಬುದ್ಧ, ಬಸವ, ವಿವೇಕಾನಂದ, ಅಂಬೇಡ್ಕರ್, ಭಗತ್‍ಸಿಂಗ್ ಯಾರನ್ನು ಬೇಕಾದರೂ ನುಂಗಿ ನೊಣೆಯುತ್ತ ಬಂದಿದೆ. ಮಹಾನ್ ವ್ಯಕ್ತಿತ್ವಗಳಿಗೆ ಮರಣೋತ್ತರ ಅವಮಾನ ಮಾಡುತ್ತ ಬಂದಿದೆ. ಹಾಗಿರುವಾಗ, ಅಧಿಕಾರದಾಸೆಗೆ ಬೇರು ಸಡಿಲವಾಗಿಸಿಕೊಂಡರೆ, ತನ್ನ ಧೃತರಾಷ್ಟ್ರ ಆಲಿಂಗನದಿಂದ ಹೊರತುಪಡಿಸೀತೆ?
ಶರ್ಮಿಷ್ಠಾ ಮತ್ತು ಹಾಗೆ ಯೋಚಿಸುವವರ ಧಾಟಿ ದಿಟವಾದದ್ದೆನ್ನಲು ಕೆಲವು ಗಂಟೆಗಳಲ್ಲಿಯೇ ಪುರಾವೆಗಳೊದಗಿದ್ದವು. ಪ್ರಣವ ಮುಖರ್ಜಿ ಸಂಘ ಪರಿವಾರದ ಶೈಲಿಯಲ್ಲಿ ನಮಸ್ಕರಿಸಿ ನಿಂತ ಫೇಕ್ ಫೋಟೊ ಜಾಲತಾಣಗಳಲ್ಲಿ ಹರಿದಾಡಿದವು. ಒಂದಿಡೀ ದಿನ ದೇಶದ ಮಾಧ್ಯಮಗಳು, ಚಿಂತಕರು ಮಾಜಿ ರಾಷ್ಟ್ರಪತಿಗಳ ಭಾಷಣದಲ್ಲಿದ್ದ ದೇಶದ ಸಾಮರಸ್ಯ-ಸಹಬಾಳ್ವೆಯ ಪ್ರತಿಪಾದನೆಯ ಕುರಿತು ಚರ್ಚಿಸಿದರು. ಆದರೆ ಇಂತಹ ಮಾನವೀಯ ನುಡಿಗಳು ಮತೀಯವಾದಿಗಳನ್ನು ಅಲ್ಲಾಡಿಸಿಬಿಡುತ್ತವೆಯೇ? ಮೂಲಭೂತ ಜಡತೆಯ ಮನಸ್ಸು ಮಾನವೀಯತೆಯನ್ನು ಸ್ವೀಕರಿಸುವ ವಿಧಾನದಲ್ಲಿಯೇ ತಪ್ಪುಗಳಿವೆ. ಮತೀಯವಾದಿ ಸಂಘಟನೆಗಳು ಜನಸಮುದಾಯವನ್ನು ಸ್ವೀಕರಿಸುವ ವಿಧಾನದಲ್ಲಿಯೇ ಸ್ಪಷ್ಟ ವಿಭಾಜಕಗಳಿವೆ. ತನ್ನವರು-ಹೊರಗಿನವರು ಎಂಬ ವಿಂಗಡನೆ ಅಮಾನುಷವಾಗಿರುತ್ತದೆ. ‘ಸರ್ವೇ ಜನಾಃ ಸುಖಿನೋ ಭವಂತು’ ಎಂಬ ಮಾತು ಅದೆಷ್ಟೇ ಉದಾತ್ತವಾಗಿರಲಿ, ಅಲ್ಲಿ ‘ಜನ’ ಎಂದರೆ ತನ್ನ ಧರ್ಮ ಜಾತಿ-ಕುಲ ಬಾಂಧವರು ಎಂದು ಮಾತ್ರ ಆಗುತ್ತದೆ. ‘ಸಬ್‍ಕಾ ಸಾಥ್ ಸಬ್‍ಕಾ ವಿಕಾಸ’ ಎನ್ನುವುದೂ ಹೀಗೇ. ಅದರ ಪರಿಷ್ಕøತ ರೂಪ. ಇವು ನುಡಿಯಲ್ಲಿ ಉದಾತ್ತವಾಗಿದ್ದು, ನಡೆಯಲ್ಲಿ ತನ್ನ ಜಾತಿ-ಧರ್ಮಗಳ ಚೌಕಟ್ಟಿನೊಳಗೇ ವ್ಯವಹರಿಸುತ್ತವೆ. ಇಂತಹ ನುಡಿಸೋಂಕಿಗೆ ಬಲಿಯಾದ ಜನರು, ಪ್ರಣವ ಮುಖರ್ಜಿಯವರ ಮಾತಿನ ಜೇನನ್ನು ಅರಿವಿಗೆ ತಂದುಕೊಳ್ಳಲಾರರು. ಅಲ್ಲಿಗೆ ಪ್ರಣವ ಮುಖರ್ಜಿಯವರ ನುಡಿಜೇನು ತೊಟ್ಟಿಕ್ಕಿ ಮರಳು ಸೇರಿದಂತಾಯಿತು. ಇಂಥದ್ದೊಂದು ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾಗಿ ನಡೆದದ್ದಲ್ಲ. ಇದೊಂದು ಪ್ರಜ್ಞಾಪೂರ್ವಕ ಭಾಗೀದಾರಿಕೆ. ಸಂಘಪರಿವಾರದ ಸಿದ್ಧಾಂತಗಳಿಗಿಂತ ಬೇರೆಯಾದ ಪಕ್ಷ ರಾಜಕಾರಣದಲ್ಲಿದ್ದು ರಾಷ್ಟ್ರಪತಿ ಹುದ್ದೆಯವರೆಗೆ ಏರಿದವರು, ಮತ್ತೆ ಈ ವಯಸ್ಸಿನಲ್ಲಿ ಅಧಿಕಾರ ರಾಜಕಾರಣದಲ್ಲುಳಿಯುವ ಮನಸ್ಸು ಮಾಡಿದರು- ಎನ್ನುವ ವಿಶ್ಲೇಷಣೆಯೂ ಇದೆ.
ಇದು ನಿಜವಾಗಿದ್ದರೆ, ಸ್ವತಂತ್ರ ಭಾರತ, ರಾಜಕಾರಣಿಗಳ ಅನೈತಿಕ ಲೂಟಿಯ ಕಥನವಾಗಿ ಪ್ರಸಿದ್ಧಿ ಪಡೆದಂತಾಯಿತು. ಎಷ್ಟು ಉಂಡರೂ ಉಟ್ಟರೂ ತೊಟ್ಟರೂ ಇನ್ನೂ ಬೇಕು ಎಂಬ ಯಮ ಹಸಿವು ಇದು. ಅಪರೂಪದ ಅತ್ಯುನ್ನತ ಪದವಿಗಳನ್ನು ಪಡೆದ ಮೇಲೂ ಅತೃಪ್ತಿ, ಪಕ್ಷಾಂತರ, ಸ್ವ ಪಕ್ಷದ್ವೇಷ… ಮುಂತಾದ ಚಟುವಟಿಕೆಗಳು ನಡೆದೇ ಇವೆ. ಸದ್ಯದ ವಿಧಾನಸಭೆ ಚುನಾವಣೆಯ ಆಚೀಚೆ ಕರ್ನಾಟಕದ ರಾಜಕಾರಣಿಗಳು ನಡೆದುಕೊಂಡ ಬಗೆಯೂ ಅವಕಾಶವಾದದ ಮಾದರಿಯಂತಿತ್ತು. ಇಂತಹ ಭ್ರಷ್ಟ ರಾಜಕಾರಣವನ್ನು ಉಪೇಕ್ಷಿಸಲಾಗುತ್ತಿಲ್ಲ. ಯಾಕೆಂದರೆ ಇದು ವ್ಯವಸ್ಥೆಯನ್ನು ಸತತವಾಗಿ ಭ್ರಷ್ಟಗೊಳಿಸುತ್ತಿರುತ್ತದೆ.
ರಾಜಕಾರಣ ಮತ್ತು ಪ್ರಭುತ್ವ ತನ್ನ ನಾಗರಿಕರಿಗೆ ಅನ್ಯಾಯ ಮಾಡಿದಷ್ಟು ಇನ್ಯಾವುದೂ ಮಾಡಲು ಸಾಧ್ಯವಿಲ್ಲವೇನೋ. ತನ್ನ ರಾಜಕೀಯ ಲಾಭಕ್ಕಾಗಿ ಜನರನ್ನು ಮತ-ಧರ್ಮದ ಹೆಸರಿನಲ್ಲಿ ವಿಭಜಿಸುವ ರಾಜಕಾರಣಿ, ಸಮುದಾಯದ ಬದುಕನ್ನು ಮೂರು ರೀತಿಯಲ್ಲಿ ಈಡಾಡುತ್ತಾನೆ. ಮೊದಲನೆಯದು, ಒಂದು ಧರ್ಮದ, ಜಾತಿಯ ಜನರನ್ನು ಅಡ್ರೆಸ್ ಮಾಡಿ; ನೀವು ವೋಟ್ ಹಾಕಬೇಡಿ ಎಂದೋ ವೋಟ್ ಹಾಕಿ ಎಂದೋ ದಬಾಯಿಸುವುದು. ಸದ್ಯ, ಯತ್ನಾಳ ಎಂಬ ಬಿಜೆಪಿ ಪಕ್ಷದಿಂದ ಆಯ್ಕೆಯಾದ ಶಾಸಕರು, ತಮ್ಮ ಕ್ಷೇತ್ರದ ಕಾರ್ಪೊರೇಟರ್‍ಗಳಿಗೆ ‘ನೀವು ಹಿಂದೂಗಳ ಪರವಾಗಿ ಕೆಲಸ ಮಾಡಿ, ಮುಸ್ಲಿಮರ ಪರವಾಗಿ ಅಲ್ಲ’- ಎಂದು ಫರ್ಮಾನು ಕೊಡಲೂ ಹೇಸಲಿಲ್ಲ. ಅವರ ಮಾತು ಅನಂತಕುಮಾರ್ ಹೆಗಡೆಯವರಿಗೆ ಸರಿದೊರೆಯಾಗಿತ್ತು. ಇಂತಹ ಸಂವಿಧಾನ ವಿರೋಧಿಯಾದ ಉಡಾಫೆಯ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ ಯುವಕರು ಶಿಳ್ಳೆ ಹಾಕಿ, ಚಪ್ಪಾಳೆ ಹಾಕಿ, ಬಹು ಜೋಷ್‍ನಿಂದ ಆ ಮಾತುಗಳನ್ನು ಬರಮಾಡಿಕೊಂಡರು. ಅಲ್ಲಿಗೆ ಸಾಮಾಜಿಕ ಬದುಕಿನ ನೆಮ್ಮದಿಗೆ ಪೆಟ್ರೋಲ್ ಸುರಿಯಲಾಯಿತು ಎಂದೇ ಅರ್ಥ. ಪರಿಣಾಮವಾಗಿ ನೈತಿಕ ಭ್ರಷ್ಟತೆಯ ಪ್ರಜಾತಂತ್ರ ವಿರೋಧಿಯಾದ ಅಧಿಕಾರಶಾಹಿ ವರ್ಗವು ನಿರ್ಮಾಣಗೊಳ್ಳುತ್ತದೆ. ಇದರಿಂದ ಮತೀಯವಾದದ ಬೇರು ಭದ್ರಗೊಳ್ಳುತ್ತದೆ. ಕೋಮುಹಿಂಸೆ ವಿಜೃಂಭಿಸಿದಾಗೆಲ್ಲ ಅದರ ಪೋಷಕ ಸ್ಥಾನದಲ್ಲಿ ಅಧಿಕಾರಶಾಹಿಗಳಿರುವುದು ಪ್ರಜಾಪ್ರಭುತ್ವದ ಕರಾಳ ಸತ್ಯ. ಇತ್ತೀಚೆಗೆ ಕರಾವಳಿಯಲ್ಲಿ ಹುಸೇನಬ್ಬ ಎಂಬ ದನದ ವ್ಯಾಪಾರಿಯನ್ನು ಅಕಾರಣ ಮುಗಿಸಿದ ಕ್ರೌರ್ಯ ಪೊಲೀಸ್ ವ್ಯವಸ್ಥೆಗೂ ಇದೆ ಎನ್ನಲಾಗುತ್ತಿರುವ ಸಂಬಂಧ ಗಾಬರಿ ಬೀಳಿಸುವಂಥದ್ದು. ಈ ನೆಲ ಬದುಕಿಗೆ ಯೋಗ್ಯವಾಗುಳಿ ಯುವುದು ಇನ್ನೆಷ್ಟು ಕಾಲ? ಎನಿಸುತ್ತಿದೆ. ಕೋಮುವಾದ-ಮತೀಯವಾದದ ದುಷ್ಟ ವೈರಸ್‍ಗಳು ಅತ್ಯಂತ ಸುಸಂಪನ್ನ ಸ್ವಸಂಪೂರ್ಣ ವ್ಯವಸ್ಥೆಯಲ್ಲಿ ಬೆಳೆಯುತ್ತಿವೆ ಅಥವಾ ಬೆಳೆಸಲಾಗುತ್ತಿದೆ. ಇತ್ತೀಚೆಗೆ ನಾನು ಪರೀಕ್ಷಾ ಕೆಲಸಕ್ಕಾಗಿ ಒಂದು ಅನ್‍ಏಡೆಡ್ ಕಾಲೇಜಿನಲ್ಲಿ ಕೆಲ ದಿನಗಳನ್ನು ಕಳೆಯಬೇಕಾಯಿತು.
ಅಂತಾರಾಷ್ಟ್ರೀಯ ಗುಣಮಟ್ಟ ಎಂದು ಘೋಷಿಸಿಕೊಂಡಿರುವ ವ್ಯವಸ್ಥೆಯನ್ನು ಹೊಂದಿರುವ ಕಾಲೇಜದು. ಹೊರಗಣ್ಣಿಗೆ ತುಂಬಾ ಸಂಪನ್ನವೆನಿಸುತ್ತದೆ. ಒಳಗಿಳಿದರೆ ಅಧಃಪತನದ ಕೊರಕಲುಗಳೇ ಇವೆ. ಕಾಲೇಜಿನ ಮ್ಯಾನೇಜ್‍ಮೆಂಟ, ಕಚೇರಿ ಸಿಬ್ಬಂದಿಗಳು, ಪ್ರಾಧ್ಯಾಪಕರು ಮತ್ತು ಬಹುತೇಕ ವಿದ್ಯಾರ್ಥಿಗಳು ಮೇಲ್ಜಾತಿಯ ಒಂದು ಕಮ್ಯುನಿಟಿಗೆ ಸೇರಿದವರು. ಅಗತ್ಯವಿದ್ದರೆ ಜಾತಿಯಲ್ಲಿ ತಮಗಿಂತ ಉತ್ತಮರೆಂದು ಭಾವಿಸಿದ ಇನ್ನೊಂದು ಜಾತಿಯವರನ್ನು ಸೇರಿಸಿಕೊಳ್ಳಲಾಗಿದೆ ಅಷ್ಟೇ. ಶಿಕ್ಷಣ ವ್ಯವಸ್ಥೆಯ ಸಿಬ್ಬಂದಿಗಳಲ್ಲಿ ಇರಬೇಕಾದ ಪರಸ್ಪರ ಗೌರವಾದರಗಳಿಗಿಂತ, ಒಂದು ಮನೆಯ ಸದಸ್ಯರಂತಹ ಸಲುಗೆ; ಶಿಕ್ಷಕರು-ವಿದ್ಯಾರ್ಥಿಗಳ ಸಂಬಂಧವೂ ಹಾಗೇ. ಸರ್ಕಾರಿ ಸೆಕ್ಟರ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಅನಗತ್ಯವಾಗಿ ವಿಶೇಷ ಸೌಲಭ್ಯಗಳನ್ನು ಕೊಡಮಾಡಲಾಗುತ್ತದೆಂಬ ತಕರಾರು. ಶಿಕ್ಷಣದ ಗುಣಮಟ್ಟ ಕುಸಿಯಲು, ದೇಹದಿಂದ ದುಡಿಯಲು ಹುಟ್ಟಿದವರೂ ಕಲಿಯಲು ಬರುತ್ತಿರುವುದು ಕಾರಣ ಎಂಬ ತೀರ್ಮಾನ. ಸತತ ಏಳನೇ ಬಾರಿ ಪರೀಕ್ಷೆಗೆ ಕಟ್ಟಿದ ವಿದ್ಯಾರ್ಥಿಗಳೂ ಇದ್ದರು. ಅವರ ಧಿಮಾಕು, ನಿರ್ಲಕ್ಷ್ಯ ಹೇಳತೀರದ್ದು. ಕ್ರಮೇಣ ತಿಳಿದದ್ದೇನೆಂದರೆ, ಅದು ಒಂದು ರೀತಿಯಲ್ಲಿ ಮರಿ ರಾಜಕೀಯ ಪುಢಾರಿಗಳನ್ನು ತಯಾರು ಮಾಡುವ ಸೆಂಟರ್‍ನಂತಿತ್ತು. ತಮ್ಮ ಶಿಷ್ಯನೊಬ್ಬನಿಗೆ ಈ ಬಾರಿ ಟಿಕೆಟ್ ಸಿಕ್ಕಿದೆ- ಎಂಬ ಸಂಭ್ರಮದಲ್ಲಿದ್ದರು. ಯು.ಜಿ.ಸಿ.ಯ ಯಾವ ನಿಯಮವೂ ಅವರಿಗೆ ಅನ್ವಯವಾಗಬೇಕಿರಲಿಲ್ಲ. ಅವರು ಸರ್ಕಾರದಿಂದ ‘ಅನುದಾನ’ ತೆಗೆದುಕೊಳ್ತಿರಲಿಲ್ಲ. ಒಂದು ವಾರ ಕಳೆಯುವಷ್ಟರಲ್ಲಿ ದಣಿದುಬಿಟ್ಟಿದ್ದೆ. ನಾಗರಿಕ ಸಮಾಜದಲ್ಲಿ ಮೇಲ್ಜಾತಿ ವರ್ಗಗಳು ಪ್ರತ್ಯೇಕ ಅಪಾರ್ಟಮೆಂಟು, ಲೇಔಟು, ಶಾಪಿಂಗ್ ಮಾಲ್‍ಗಳು, ಆಸ್ಪತ್ರೆಗಳ ಸೌಲಭ್ಯಗಳನ್ನು ಮಾತ್ರವಲ್ಲದೆ; ಪ್ರತ್ಯೇಕ ಶಿಕ್ಷಣ ಸಂಸ್ಥೆಗಳನ್ನೂ ಕಟ್ಟಿಕೊಂಡು, ತಮ್ಮನ್ನು ಇನ್ನಿತರರಿಗಿಂತ ಶ್ರೇಷ್ಠರು ಎಂದು ಬಿಂಬಿಸಿಕೊಳ್ಳುತ್ತಿವೆ. ಮತೀಯವಾದದ ಗರಡಿಮನೆ ತುಂಬ ಸುಂದರವಾಗಿ ಕಂಗೊಳಿಸುತ್ತಿದೆ. ಇವುಗಳ ವಾರಸುದಾರರು ರಾಜಕಾರಣಿಗಳು ಅಥವಾ ರಾಜಕಾರಣಿಗಳ ಬಂಧುಗಳು. ಮತೀಯ ದ್ವೇಷದಿಂದ ಸಿಡಿವ ಬಾಂಬರ್‍ಗಳಾಗಿ ಯುವ ಸಮುದಾಯವನ್ನು ತಯಾರು ಮಾಡಿದ ಮೇಲೆ ಸಾಮಾಜಿಕ ಸ್ವಾಸ್ಥ್ಯದ ಮಾತೆಲ್ಲಿ? ಕೋಮುವಾದ ಆರ್ಭಟಿಸುತ್ತಲೇ ಇದೆ- ರಾಜಕಾರಣಿಗಳ ಸಾಕುನಾಯಿಯಂತೆ.

– ವಿನಯಾ ಒಕ್ಕುಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...