Homeಮುಖಪುಟಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಯಾವಾಗ ಎಂಬುದನ್ನು ಹೇಳಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದ ಹೇಳಿಕೆ

ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಯಾವಾಗ ಎಂಬುದನ್ನು ಹೇಳಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದ ಹೇಳಿಕೆ

- Advertisement -
- Advertisement -

”ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ದರಿದ್ದೇವೆ ಆದರೆ ರಾಜ್ಯದ ಸ್ಥಾನಮಾನವನ್ನು ಯಾವಾಗ ಮರುಸ್ಥಾಪಿಸಲಾಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಲು ಸಾಧ್ಯವಿಲ್ಲ” ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು, 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡಿರುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸುತ್ತಿದೆ.

ಮಂಗಳವಾರ ನ್ಯಾಯಾಲಯವು, ಜಮ್ಮು ಮತ್ತು ಕಾಶ್ಮೀರವನ್ನು ಮತ್ತೆ ಯಾವಾಗ ರಾಜ್ಯವನ್ನಾಗಿ ಮಾಡುತ್ತೀರಿ ಎಂಬುದನ್ನು ತಿಳಿಸಿ ಎಂದು ಕೇಂದ್ರ ಸರ್ಕಾರಕ್ಕೆ ಹೇಳಿತ್ತು.

ಈ ವಿಚಾರವಾಗಿ ಗುರುವಾರ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ”ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ತಾತ್ಕಾಲಿಕವಾಗಿದೆ ಎಂದು ಪುನರುಚ್ಚರಿಸಿದರು. ಆದಾಗ್ಯೂ, ಸಂಪೂರ್ಣ ರಾಜ್ಯವಾಗಿ ಮರುಸ್ಥಾಪಿಸಲು ನಿಖರವಾದ ಅವಧಿಯನ್ನು ನೀಡಲು ನನಗೆ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾರರ ಪಟ್ಟಿಯನ್ನು ನವೀಕರಿಸುವ ಪ್ರಕ್ರಿಯೆಯು ಮುಗಿದಿದೆ. ಜಮ್ಮು ಮತ್ತು ಕಾಶ್ಮೀರದ ಪಂಚಾಯತ, ಪುರಸಭೆ ಮತ್ತು ವಿಧಾನಸಭೆಗೆ ಕೇಂದ್ರವು ಮೂರು ಹಂತದ ಚುನಾವಣೆಗಳನ್ನು ನಡೆಸಲಿದೆ” ಎಂದು ಮೆಹ್ತಾ ಹೇಳಿದರು.

“ಕೇಂದ್ರ ಸರ್ಕಾರವು ಈಗ ಅಲ್ಲಿ ಯಾವುದೇ ಸಮಯದಲ್ಲಾದರೂ ಚುನಾವಣೆ ನಡೆಸಲು ಸಿದ್ಧವಾಗಿದೆ” ಎಂದು ಅವರು ಹೇಳಿದರು.

”ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಗುಂಪುಗಳು ಕಲ್ಲು ತೂರಾಟ ಮತ್ತು ಬಂದ್‌ಗಳಿಗೆ ಕರೆ ನೀಡುವ ಘಟನೆಗಳು ಕಡಿಮೆಯಾಗಿವೆ ಮತ್ತು 370ನೇ ವಿಧಿಯನ್ನು ರದ್ದುಗೊಳಿಸಿದಾಗಿನಿಂದ ಪ್ರವಾಸೋದ್ಯಮವು ಪ್ರವರ್ಧಮಾನಕ್ಕೆ ಬಂದಿದೆ. ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿಗೆ ಮರಳಿರುವುದನ್ನು ತೋರಿಸುತ್ತದೆ ಎಂದು ಮೆಹ್ತಾ ಸರ್ಕಾರಿ ಡೇಟಾವನ್ನು ಉಲ್ಲೇಖಿಸಿದ್ದಾರೆ.

ಇದಕ್ಕೆ ಪ್ರತಿವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ”ಸರ್ಕಾರ ಬಲವಂತದ ಕ್ರಮ ಕೈಗೊಳ್ಳುತ್ತಿದೆ. ನೀವು 5000 ಜನರನ್ನು ಗೃಹಬಂಧನದಲ್ಲಿಟ್ಟಿದ್ದೀರಿ. ರಾಜ್ಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಹೇಇರದ್ದೀರಿ” ಎಂದು ಅವರು ಹೇಳಿದರು.

ಇದನ್ನೂ ಓದಿ: ಜಮ್ಮು, ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಯಾವಾಗ ಮರು ಸ್ಥಾಪಿಸುತ್ತೀರಿ?: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...