Homeಕರ್ನಾಟಕವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

- Advertisement -
- Advertisement -

ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ‘ಕ್ಷಮೆ ಕೇಳಲು ಸಿದ್ದ’ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ (ಆ.26) ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಮಗೆ ಕ್ಷಮೆ ಬೇಕಾ?..ಓಕೆ…ಎಲ್ಲಾ ಕಾಂಗ್ರೆಸಿಗರಿಗೆ, ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಗೆಳೆಯರಿಗೆ ಬೇಜಾರಾಗಿದ್ರೆ, ನಾನು ತಪ್ಪು ಮಾಡಿದ್ದೇನೆ ಎಂದನಿಸಿದ್ದರೆ ‘ನಾನು ಕ್ಷಮೆ ಕೇಳಲು ಮತ್ತು ಅವರ ಸಲಹೆಗಳನ್ನು ಸ್ವೀಕರಿಸಲು ಸಿದ್ದ” ಎಂದಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯವರು ಮಾತನಾಡಿದಂತಹ ಸಂದರ್ಭದಲ್ಲಿ, ಅವರ ಪಕ್ಷ, ಸಿದ್ದಾಂತ ಎಲ್ಲದರ ಬಗ್ಗೆ ನನಗೆ ಅರಿವಿದೆ ಎಂದು ಕಾಲೆಳೆದಿದ್ದೆ. ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ವಿಧಾನಸಭೆಯಲ್ಲೇ ನಾನು ನನ್ನ ಆಚಾರ-ವಿಚಾರಗಳನ್ನು ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.

1980ರಿಂದ ಸತತವಾಗಿ ವಿದ್ಯಾರ್ಥಿ ನಾಯಕನಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು, ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡು ಬಂದವನು. ನಾನೇನು ಹೊಸದಾಗಿ ಪಕ್ಷಕ್ಕೆ ಸೇರಿದವನಲ್ಲ. ಯಾರಿಂದ ಪಾಠ ಕೂಡ ನನಗೆ ಅವಶ್ಯಕತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಆರ್. ಅಶೋಕ್ ಮಾತನಾಡಿದಂತಹ ಸಂದರ್ಭದಲ್ಲಿ “ನಿನ್ನ ಇತಿಹಾಸ ಗೊತ್ತಿದೆಯಪ್ಪ, ನೀನು ಯಾವಾಗಿಂದ ಬಂದೇ ಗೊತ್ತಿದೆ” ಎಂದು ಪರಮೇಶ್ವರ್ ಅವರ ಪಕ್ಕದಲ್ಲಿ ಕುಳಿತು ಮಾತನಾಡದ್ದೆ. ಆ ಸಂದರ್ಭದಲ್ಲಿ  ಭೂಮಿಗೆ ಹೇಗೆ ಪ್ರಾರ್ಥನೆ ಮಾಡ್ತಾರೆ ಎಂದು ನಾನು ತಿಳಿದುಕೊಂಡ ಎರಡು ಲೇನ್ ಹೇಳಿದ್ದೆ. ಅದನ್ನು ಕಟ್ ಮಾಡಿ, ಪೇಸ್ಟ್ ಮಾಡಿ, ಎಲ್ಲೆಲ್ಲಿಗೋ ಲಿಂಕ್ ಮಾಡಿ ನ್ಯಾಷನಲ್ ನ್ಯೂಸ್, ಇಂಟರ್‌ನ್ಯಾಷನಲ್ ನ್ಯೂಸ್, ಎಲ್ಲಾ ಭಾಷೆಗಳಲ್ಲಿ ಸುದ್ದಿ ಮಾಡಿಬಿಟ್ರು ಎಂದಿದ್ದಾರೆ.

ನಾನು ಮೊನ್ನೆ ಬಿಹಾರಕ್ಕೆ ಹೋದಾಗ ಕೆಲವರು ನನ್ನ ಹೇಳಿಕೆ ಬಗ್ಗೆ ಕೇಳಿದ್ರು. ಒಬ್ಬರು ನಮ್ಮ ಪಕ್ಷದ ಹಿರಿಯ ನಾಯಕ, ನನ್ನ ಗೆಳೆಯ ಬಹಳ ದೊಡ್ಡ ದೊಡ್ಡ ಸಲಹೆಗಳನ್ನೆಲ್ಲಾ ನೀಡಿದ್ದಾರೆ. ಅದು ಬಹಳ ಸಂತೋಷದ ವಿಷಯ. ನಾನು ಯಾರಿಗಿಂತಲೂ ದೊಡ್ಡವನಲ್ಲ. ಅವರಿಗಿಂತ ದೊಡ್ಡವನಲ್ಲ. ಇರಲಿ, ಆ ಬಗ್ಗೆ ಸಂತೋಷವಿದೆ ಎಂದು ಡಿಕೆಶಿ ಹೇಳಿದ್ದಾರೆ.

ನನ್ನ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ. ನೀವು ಕಾಂಗ್ರೆಸ್ ಕಚೇರಿಗೆ ಬನ್ನಿ, ಸಭೆ ಮಾಡಿ ಚರ್ಚೆ ಮಾಡೋಣ. ಮಾಧ್ಯಮ ಹೇಳಿಕೆಗಳಿಂದ ನಿಮಗೆ ಸಮಾಧಾನ ಆಗಬಹುದು, ಯಾವುದೇ ಲಾಭ ಆಗುವುದಿಲ್ಲ. ಹಲವರು ಸಲಹೆ ಕೊಟ್ಟಿದ್ದಾರೆ. ಖಂಡಿತ ನಾನು ನಿಮ್ಮ ಸಲಹೆಗಳಿಗಿಂದ ದೊಡ್ಡವನಲ್ಲ ಎಂದು ಕುಟುಕಿದ್ದಾರೆ.

ನಾನು ಎಲ್ಲರ ಕಷ್ಟ ಕಾಲದಲ್ಲಿ ಅವರ ಜೊತೆ ನಿಂತವನು. ಈಗಲೂ ನಾನು ಅವರ ಜೊತೆ ನಿಲ್ಲುತ್ತೇನೆ. ನಾನು ಏನೇ ಆಗಿಬರಹುದು, ಏನೋ ಆಗಬಹುದು. ಯಾವುದೇ ಹುದ್ದೆಯಲ್ಲಿರಬಹುದು. ಅದು ಮುಖ್ಯ ಅಲ್ಲ. ನಾನೊಬ್ಬ ನಿಷ್ಠಾವಂತ ಕಾಂಗ್ರೆಸಿಗನಾಗಿ ಯಾರ ಮನಸ್ಸಿಗೂ ನೋಯಿಸುವ ಅಗತ್ಯವಿಲ್ಲ. ನನ್ನ ಜೀವನ ನಿಮ್ಮಗಳ ಬದುಕಿಗೆ ಒಂದು ಅಡಿಪಾಯ ಹಾಕಬೇಕು, ನಿಮ್ಮ ಜೀವನಕ್ಕೆ ಮೆಟ್ಟಿಲಾಗಬೇಕು. ಅದಲ್ಲದೆ, ನಾನು ಯಾರ ಭಾವನೆಗೂ ನೋವುಂಟು ಮಾಡಲು ಬಯಸುವುದಿಲ್ಲ. ನಾನು ಹುಟ್ಟು ಕಾಂಗ್ರೆಸಿಗ, ನಾನು ಕಾಂಗ್ರೆಸಿಗನಾಗಿಯೇ ಸಾಯುತ್ತೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...