Homeಕರ್ನಾಟಕವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

- Advertisement -
- Advertisement -

ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ‘ಕ್ಷಮೆ ಕೇಳಲು ಸಿದ್ದ’ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ (ಆ.26) ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಮಗೆ ಕ್ಷಮೆ ಬೇಕಾ?..ಓಕೆ…ಎಲ್ಲಾ ಕಾಂಗ್ರೆಸಿಗರಿಗೆ, ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಗೆಳೆಯರಿಗೆ ಬೇಜಾರಾಗಿದ್ರೆ, ನಾನು ತಪ್ಪು ಮಾಡಿದ್ದೇನೆ ಎಂದನಿಸಿದ್ದರೆ ‘ನಾನು ಕ್ಷಮೆ ಕೇಳಲು ಮತ್ತು ಅವರ ಸಲಹೆಗಳನ್ನು ಸ್ವೀಕರಿಸಲು ಸಿದ್ದ” ಎಂದಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯವರು ಮಾತನಾಡಿದಂತಹ ಸಂದರ್ಭದಲ್ಲಿ, ಅವರ ಪಕ್ಷ, ಸಿದ್ದಾಂತ ಎಲ್ಲದರ ಬಗ್ಗೆ ನನಗೆ ಅರಿವಿದೆ ಎಂದು ಕಾಲೆಳೆದಿದ್ದೆ. ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ವಿಧಾನಸಭೆಯಲ್ಲೇ ನಾನು ನನ್ನ ಆಚಾರ-ವಿಚಾರಗಳನ್ನು ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.

1980ರಿಂದ ಸತತವಾಗಿ ವಿದ್ಯಾರ್ಥಿ ನಾಯಕನಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು, ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡು ಬಂದವನು. ನಾನೇನು ಹೊಸದಾಗಿ ಪಕ್ಷಕ್ಕೆ ಸೇರಿದವನಲ್ಲ. ಯಾರಿಂದ ಪಾಠ ಕೂಡ ನನಗೆ ಅವಶ್ಯಕತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಆರ್. ಅಶೋಕ್ ಮಾತನಾಡಿದಂತಹ ಸಂದರ್ಭದಲ್ಲಿ “ನಿನ್ನ ಇತಿಹಾಸ ಗೊತ್ತಿದೆಯಪ್ಪ, ನೀನು ಯಾವಾಗಿಂದ ಬಂದೇ ಗೊತ್ತಿದೆ” ಎಂದು ಪರಮೇಶ್ವರ್ ಅವರ ಪಕ್ಕದಲ್ಲಿ ಕುಳಿತು ಮಾತನಾಡದ್ದೆ. ಆ ಸಂದರ್ಭದಲ್ಲಿ  ಭೂಮಿಗೆ ಹೇಗೆ ಪ್ರಾರ್ಥನೆ ಮಾಡ್ತಾರೆ ಎಂದು ನಾನು ತಿಳಿದುಕೊಂಡ ಎರಡು ಲೇನ್ ಹೇಳಿದ್ದೆ. ಅದನ್ನು ಕಟ್ ಮಾಡಿ, ಪೇಸ್ಟ್ ಮಾಡಿ, ಎಲ್ಲೆಲ್ಲಿಗೋ ಲಿಂಕ್ ಮಾಡಿ ನ್ಯಾಷನಲ್ ನ್ಯೂಸ್, ಇಂಟರ್‌ನ್ಯಾಷನಲ್ ನ್ಯೂಸ್, ಎಲ್ಲಾ ಭಾಷೆಗಳಲ್ಲಿ ಸುದ್ದಿ ಮಾಡಿಬಿಟ್ರು ಎಂದಿದ್ದಾರೆ.

ನಾನು ಮೊನ್ನೆ ಬಿಹಾರಕ್ಕೆ ಹೋದಾಗ ಕೆಲವರು ನನ್ನ ಹೇಳಿಕೆ ಬಗ್ಗೆ ಕೇಳಿದ್ರು. ಒಬ್ಬರು ನಮ್ಮ ಪಕ್ಷದ ಹಿರಿಯ ನಾಯಕ, ನನ್ನ ಗೆಳೆಯ ಬಹಳ ದೊಡ್ಡ ದೊಡ್ಡ ಸಲಹೆಗಳನ್ನೆಲ್ಲಾ ನೀಡಿದ್ದಾರೆ. ಅದು ಬಹಳ ಸಂತೋಷದ ವಿಷಯ. ನಾನು ಯಾರಿಗಿಂತಲೂ ದೊಡ್ಡವನಲ್ಲ. ಅವರಿಗಿಂತ ದೊಡ್ಡವನಲ್ಲ. ಇರಲಿ, ಆ ಬಗ್ಗೆ ಸಂತೋಷವಿದೆ ಎಂದು ಡಿಕೆಶಿ ಹೇಳಿದ್ದಾರೆ.

ನನ್ನ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ. ನೀವು ಕಾಂಗ್ರೆಸ್ ಕಚೇರಿಗೆ ಬನ್ನಿ, ಸಭೆ ಮಾಡಿ ಚರ್ಚೆ ಮಾಡೋಣ. ಮಾಧ್ಯಮ ಹೇಳಿಕೆಗಳಿಂದ ನಿಮಗೆ ಸಮಾಧಾನ ಆಗಬಹುದು, ಯಾವುದೇ ಲಾಭ ಆಗುವುದಿಲ್ಲ. ಹಲವರು ಸಲಹೆ ಕೊಟ್ಟಿದ್ದಾರೆ. ಖಂಡಿತ ನಾನು ನಿಮ್ಮ ಸಲಹೆಗಳಿಗಿಂದ ದೊಡ್ಡವನಲ್ಲ ಎಂದು ಕುಟುಕಿದ್ದಾರೆ.

ನಾನು ಎಲ್ಲರ ಕಷ್ಟ ಕಾಲದಲ್ಲಿ ಅವರ ಜೊತೆ ನಿಂತವನು. ಈಗಲೂ ನಾನು ಅವರ ಜೊತೆ ನಿಲ್ಲುತ್ತೇನೆ. ನಾನು ಏನೇ ಆಗಿಬರಹುದು, ಏನೋ ಆಗಬಹುದು. ಯಾವುದೇ ಹುದ್ದೆಯಲ್ಲಿರಬಹುದು. ಅದು ಮುಖ್ಯ ಅಲ್ಲ. ನಾನೊಬ್ಬ ನಿಷ್ಠಾವಂತ ಕಾಂಗ್ರೆಸಿಗನಾಗಿ ಯಾರ ಮನಸ್ಸಿಗೂ ನೋಯಿಸುವ ಅಗತ್ಯವಿಲ್ಲ. ನನ್ನ ಜೀವನ ನಿಮ್ಮಗಳ ಬದುಕಿಗೆ ಒಂದು ಅಡಿಪಾಯ ಹಾಕಬೇಕು, ನಿಮ್ಮ ಜೀವನಕ್ಕೆ ಮೆಟ್ಟಿಲಾಗಬೇಕು. ಅದಲ್ಲದೆ, ನಾನು ಯಾರ ಭಾವನೆಗೂ ನೋವುಂಟು ಮಾಡಲು ಬಯಸುವುದಿಲ್ಲ. ನಾನು ಹುಟ್ಟು ಕಾಂಗ್ರೆಸಿಗ, ನಾನು ಕಾಂಗ್ರೆಸಿಗನಾಗಿಯೇ ಸಾಯುತ್ತೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...