Homeಕರ್ನಾಟಕವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

- Advertisement -
- Advertisement -

ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ‘ಕ್ಷಮೆ ಕೇಳಲು ಸಿದ್ದ’ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ (ಆ.26) ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಮಗೆ ಕ್ಷಮೆ ಬೇಕಾ?..ಓಕೆ…ಎಲ್ಲಾ ಕಾಂಗ್ರೆಸಿಗರಿಗೆ, ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಗೆಳೆಯರಿಗೆ ಬೇಜಾರಾಗಿದ್ರೆ, ನಾನು ತಪ್ಪು ಮಾಡಿದ್ದೇನೆ ಎಂದನಿಸಿದ್ದರೆ ‘ನಾನು ಕ್ಷಮೆ ಕೇಳಲು ಮತ್ತು ಅವರ ಸಲಹೆಗಳನ್ನು ಸ್ವೀಕರಿಸಲು ಸಿದ್ದ” ಎಂದಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯವರು ಮಾತನಾಡಿದಂತಹ ಸಂದರ್ಭದಲ್ಲಿ, ಅವರ ಪಕ್ಷ, ಸಿದ್ದಾಂತ ಎಲ್ಲದರ ಬಗ್ಗೆ ನನಗೆ ಅರಿವಿದೆ ಎಂದು ಕಾಲೆಳೆದಿದ್ದೆ. ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ವಿಧಾನಸಭೆಯಲ್ಲೇ ನಾನು ನನ್ನ ಆಚಾರ-ವಿಚಾರಗಳನ್ನು ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.

1980ರಿಂದ ಸತತವಾಗಿ ವಿದ್ಯಾರ್ಥಿ ನಾಯಕನಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು, ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡು ಬಂದವನು. ನಾನೇನು ಹೊಸದಾಗಿ ಪಕ್ಷಕ್ಕೆ ಸೇರಿದವನಲ್ಲ. ಯಾರಿಂದ ಪಾಠ ಕೂಡ ನನಗೆ ಅವಶ್ಯಕತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಆರ್. ಅಶೋಕ್ ಮಾತನಾಡಿದಂತಹ ಸಂದರ್ಭದಲ್ಲಿ “ನಿನ್ನ ಇತಿಹಾಸ ಗೊತ್ತಿದೆಯಪ್ಪ, ನೀನು ಯಾವಾಗಿಂದ ಬಂದೇ ಗೊತ್ತಿದೆ” ಎಂದು ಪರಮೇಶ್ವರ್ ಅವರ ಪಕ್ಕದಲ್ಲಿ ಕುಳಿತು ಮಾತನಾಡದ್ದೆ. ಆ ಸಂದರ್ಭದಲ್ಲಿ  ಭೂಮಿಗೆ ಹೇಗೆ ಪ್ರಾರ್ಥನೆ ಮಾಡ್ತಾರೆ ಎಂದು ನಾನು ತಿಳಿದುಕೊಂಡ ಎರಡು ಲೇನ್ ಹೇಳಿದ್ದೆ. ಅದನ್ನು ಕಟ್ ಮಾಡಿ, ಪೇಸ್ಟ್ ಮಾಡಿ, ಎಲ್ಲೆಲ್ಲಿಗೋ ಲಿಂಕ್ ಮಾಡಿ ನ್ಯಾಷನಲ್ ನ್ಯೂಸ್, ಇಂಟರ್‌ನ್ಯಾಷನಲ್ ನ್ಯೂಸ್, ಎಲ್ಲಾ ಭಾಷೆಗಳಲ್ಲಿ ಸುದ್ದಿ ಮಾಡಿಬಿಟ್ರು ಎಂದಿದ್ದಾರೆ.

ನಾನು ಮೊನ್ನೆ ಬಿಹಾರಕ್ಕೆ ಹೋದಾಗ ಕೆಲವರು ನನ್ನ ಹೇಳಿಕೆ ಬಗ್ಗೆ ಕೇಳಿದ್ರು. ಒಬ್ಬರು ನಮ್ಮ ಪಕ್ಷದ ಹಿರಿಯ ನಾಯಕ, ನನ್ನ ಗೆಳೆಯ ಬಹಳ ದೊಡ್ಡ ದೊಡ್ಡ ಸಲಹೆಗಳನ್ನೆಲ್ಲಾ ನೀಡಿದ್ದಾರೆ. ಅದು ಬಹಳ ಸಂತೋಷದ ವಿಷಯ. ನಾನು ಯಾರಿಗಿಂತಲೂ ದೊಡ್ಡವನಲ್ಲ. ಅವರಿಗಿಂತ ದೊಡ್ಡವನಲ್ಲ. ಇರಲಿ, ಆ ಬಗ್ಗೆ ಸಂತೋಷವಿದೆ ಎಂದು ಡಿಕೆಶಿ ಹೇಳಿದ್ದಾರೆ.

ನನ್ನ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ. ನೀವು ಕಾಂಗ್ರೆಸ್ ಕಚೇರಿಗೆ ಬನ್ನಿ, ಸಭೆ ಮಾಡಿ ಚರ್ಚೆ ಮಾಡೋಣ. ಮಾಧ್ಯಮ ಹೇಳಿಕೆಗಳಿಂದ ನಿಮಗೆ ಸಮಾಧಾನ ಆಗಬಹುದು, ಯಾವುದೇ ಲಾಭ ಆಗುವುದಿಲ್ಲ. ಹಲವರು ಸಲಹೆ ಕೊಟ್ಟಿದ್ದಾರೆ. ಖಂಡಿತ ನಾನು ನಿಮ್ಮ ಸಲಹೆಗಳಿಗಿಂದ ದೊಡ್ಡವನಲ್ಲ ಎಂದು ಕುಟುಕಿದ್ದಾರೆ.

ನಾನು ಎಲ್ಲರ ಕಷ್ಟ ಕಾಲದಲ್ಲಿ ಅವರ ಜೊತೆ ನಿಂತವನು. ಈಗಲೂ ನಾನು ಅವರ ಜೊತೆ ನಿಲ್ಲುತ್ತೇನೆ. ನಾನು ಏನೇ ಆಗಿಬರಹುದು, ಏನೋ ಆಗಬಹುದು. ಯಾವುದೇ ಹುದ್ದೆಯಲ್ಲಿರಬಹುದು. ಅದು ಮುಖ್ಯ ಅಲ್ಲ. ನಾನೊಬ್ಬ ನಿಷ್ಠಾವಂತ ಕಾಂಗ್ರೆಸಿಗನಾಗಿ ಯಾರ ಮನಸ್ಸಿಗೂ ನೋಯಿಸುವ ಅಗತ್ಯವಿಲ್ಲ. ನನ್ನ ಜೀವನ ನಿಮ್ಮಗಳ ಬದುಕಿಗೆ ಒಂದು ಅಡಿಪಾಯ ಹಾಕಬೇಕು, ನಿಮ್ಮ ಜೀವನಕ್ಕೆ ಮೆಟ್ಟಿಲಾಗಬೇಕು. ಅದಲ್ಲದೆ, ನಾನು ಯಾರ ಭಾವನೆಗೂ ನೋವುಂಟು ಮಾಡಲು ಬಯಸುವುದಿಲ್ಲ. ನಾನು ಹುಟ್ಟು ಕಾಂಗ್ರೆಸಿಗ, ನಾನು ಕಾಂಗ್ರೆಸಿಗನಾಗಿಯೇ ಸಾಯುತ್ತೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...