Homeಕರ್ನಾಟಕವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

- Advertisement -
- Advertisement -

ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ‘ಕ್ಷಮೆ ಕೇಳಲು ಸಿದ್ದ’ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ (ಆ.26) ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಮಗೆ ಕ್ಷಮೆ ಬೇಕಾ?..ಓಕೆ…ಎಲ್ಲಾ ಕಾಂಗ್ರೆಸಿಗರಿಗೆ, ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಗೆಳೆಯರಿಗೆ ಬೇಜಾರಾಗಿದ್ರೆ, ನಾನು ತಪ್ಪು ಮಾಡಿದ್ದೇನೆ ಎಂದನಿಸಿದ್ದರೆ ‘ನಾನು ಕ್ಷಮೆ ಕೇಳಲು ಮತ್ತು ಅವರ ಸಲಹೆಗಳನ್ನು ಸ್ವೀಕರಿಸಲು ಸಿದ್ದ” ಎಂದಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯವರು ಮಾತನಾಡಿದಂತಹ ಸಂದರ್ಭದಲ್ಲಿ, ಅವರ ಪಕ್ಷ, ಸಿದ್ದಾಂತ ಎಲ್ಲದರ ಬಗ್ಗೆ ನನಗೆ ಅರಿವಿದೆ ಎಂದು ಕಾಲೆಳೆದಿದ್ದೆ. ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ವಿಧಾನಸಭೆಯಲ್ಲೇ ನಾನು ನನ್ನ ಆಚಾರ-ವಿಚಾರಗಳನ್ನು ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.

1980ರಿಂದ ಸತತವಾಗಿ ವಿದ್ಯಾರ್ಥಿ ನಾಯಕನಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು, ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡು ಬಂದವನು. ನಾನೇನು ಹೊಸದಾಗಿ ಪಕ್ಷಕ್ಕೆ ಸೇರಿದವನಲ್ಲ. ಯಾರಿಂದ ಪಾಠ ಕೂಡ ನನಗೆ ಅವಶ್ಯಕತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಆರ್. ಅಶೋಕ್ ಮಾತನಾಡಿದಂತಹ ಸಂದರ್ಭದಲ್ಲಿ “ನಿನ್ನ ಇತಿಹಾಸ ಗೊತ್ತಿದೆಯಪ್ಪ, ನೀನು ಯಾವಾಗಿಂದ ಬಂದೇ ಗೊತ್ತಿದೆ” ಎಂದು ಪರಮೇಶ್ವರ್ ಅವರ ಪಕ್ಕದಲ್ಲಿ ಕುಳಿತು ಮಾತನಾಡದ್ದೆ. ಆ ಸಂದರ್ಭದಲ್ಲಿ  ಭೂಮಿಗೆ ಹೇಗೆ ಪ್ರಾರ್ಥನೆ ಮಾಡ್ತಾರೆ ಎಂದು ನಾನು ತಿಳಿದುಕೊಂಡ ಎರಡು ಲೇನ್ ಹೇಳಿದ್ದೆ. ಅದನ್ನು ಕಟ್ ಮಾಡಿ, ಪೇಸ್ಟ್ ಮಾಡಿ, ಎಲ್ಲೆಲ್ಲಿಗೋ ಲಿಂಕ್ ಮಾಡಿ ನ್ಯಾಷನಲ್ ನ್ಯೂಸ್, ಇಂಟರ್‌ನ್ಯಾಷನಲ್ ನ್ಯೂಸ್, ಎಲ್ಲಾ ಭಾಷೆಗಳಲ್ಲಿ ಸುದ್ದಿ ಮಾಡಿಬಿಟ್ರು ಎಂದಿದ್ದಾರೆ.

ನಾನು ಮೊನ್ನೆ ಬಿಹಾರಕ್ಕೆ ಹೋದಾಗ ಕೆಲವರು ನನ್ನ ಹೇಳಿಕೆ ಬಗ್ಗೆ ಕೇಳಿದ್ರು. ಒಬ್ಬರು ನಮ್ಮ ಪಕ್ಷದ ಹಿರಿಯ ನಾಯಕ, ನನ್ನ ಗೆಳೆಯ ಬಹಳ ದೊಡ್ಡ ದೊಡ್ಡ ಸಲಹೆಗಳನ್ನೆಲ್ಲಾ ನೀಡಿದ್ದಾರೆ. ಅದು ಬಹಳ ಸಂತೋಷದ ವಿಷಯ. ನಾನು ಯಾರಿಗಿಂತಲೂ ದೊಡ್ಡವನಲ್ಲ. ಅವರಿಗಿಂತ ದೊಡ್ಡವನಲ್ಲ. ಇರಲಿ, ಆ ಬಗ್ಗೆ ಸಂತೋಷವಿದೆ ಎಂದು ಡಿಕೆಶಿ ಹೇಳಿದ್ದಾರೆ.

ನನ್ನ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ. ನೀವು ಕಾಂಗ್ರೆಸ್ ಕಚೇರಿಗೆ ಬನ್ನಿ, ಸಭೆ ಮಾಡಿ ಚರ್ಚೆ ಮಾಡೋಣ. ಮಾಧ್ಯಮ ಹೇಳಿಕೆಗಳಿಂದ ನಿಮಗೆ ಸಮಾಧಾನ ಆಗಬಹುದು, ಯಾವುದೇ ಲಾಭ ಆಗುವುದಿಲ್ಲ. ಹಲವರು ಸಲಹೆ ಕೊಟ್ಟಿದ್ದಾರೆ. ಖಂಡಿತ ನಾನು ನಿಮ್ಮ ಸಲಹೆಗಳಿಗಿಂದ ದೊಡ್ಡವನಲ್ಲ ಎಂದು ಕುಟುಕಿದ್ದಾರೆ.

ನಾನು ಎಲ್ಲರ ಕಷ್ಟ ಕಾಲದಲ್ಲಿ ಅವರ ಜೊತೆ ನಿಂತವನು. ಈಗಲೂ ನಾನು ಅವರ ಜೊತೆ ನಿಲ್ಲುತ್ತೇನೆ. ನಾನು ಏನೇ ಆಗಿಬರಹುದು, ಏನೋ ಆಗಬಹುದು. ಯಾವುದೇ ಹುದ್ದೆಯಲ್ಲಿರಬಹುದು. ಅದು ಮುಖ್ಯ ಅಲ್ಲ. ನಾನೊಬ್ಬ ನಿಷ್ಠಾವಂತ ಕಾಂಗ್ರೆಸಿಗನಾಗಿ ಯಾರ ಮನಸ್ಸಿಗೂ ನೋಯಿಸುವ ಅಗತ್ಯವಿಲ್ಲ. ನನ್ನ ಜೀವನ ನಿಮ್ಮಗಳ ಬದುಕಿಗೆ ಒಂದು ಅಡಿಪಾಯ ಹಾಕಬೇಕು, ನಿಮ್ಮ ಜೀವನಕ್ಕೆ ಮೆಟ್ಟಿಲಾಗಬೇಕು. ಅದಲ್ಲದೆ, ನಾನು ಯಾರ ಭಾವನೆಗೂ ನೋವುಂಟು ಮಾಡಲು ಬಯಸುವುದಿಲ್ಲ. ನಾನು ಹುಟ್ಟು ಕಾಂಗ್ರೆಸಿಗ, ನಾನು ಕಾಂಗ್ರೆಸಿಗನಾಗಿಯೇ ಸಾಯುತ್ತೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...