Homeಕರ್ನಾಟಕವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ: ಕ್ಷಮೆ ಕೇಳುತ್ತೇನೆ ಎಂದ ಡಿ.ಕೆ ಶಿವಕುಮಾರ್

- Advertisement -
- Advertisement -

ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ‘ಕ್ಷಮೆ ಕೇಳಲು ಸಿದ್ದ’ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ (ಆ.26) ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಿಮಗೆ ಕ್ಷಮೆ ಬೇಕಾ?..ಓಕೆ…ಎಲ್ಲಾ ಕಾಂಗ್ರೆಸಿಗರಿಗೆ, ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಗೆಳೆಯರಿಗೆ ಬೇಜಾರಾಗಿದ್ರೆ, ನಾನು ತಪ್ಪು ಮಾಡಿದ್ದೇನೆ ಎಂದನಿಸಿದ್ದರೆ ‘ನಾನು ಕ್ಷಮೆ ಕೇಳಲು ಮತ್ತು ಅವರ ಸಲಹೆಗಳನ್ನು ಸ್ವೀಕರಿಸಲು ಸಿದ್ದ” ಎಂದಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿಯವರು ಮಾತನಾಡಿದಂತಹ ಸಂದರ್ಭದಲ್ಲಿ, ಅವರ ಪಕ್ಷ, ಸಿದ್ದಾಂತ ಎಲ್ಲದರ ಬಗ್ಗೆ ನನಗೆ ಅರಿವಿದೆ ಎಂದು ಕಾಲೆಳೆದಿದ್ದೆ. ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ವಿಧಾನಸಭೆಯಲ್ಲೇ ನಾನು ನನ್ನ ಆಚಾರ-ವಿಚಾರಗಳನ್ನು ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.

1980ರಿಂದ ಸತತವಾಗಿ ವಿದ್ಯಾರ್ಥಿ ನಾಯಕನಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು, ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡು ಬಂದವನು. ನಾನೇನು ಹೊಸದಾಗಿ ಪಕ್ಷಕ್ಕೆ ಸೇರಿದವನಲ್ಲ. ಯಾರಿಂದ ಪಾಠ ಕೂಡ ನನಗೆ ಅವಶ್ಯಕತೆಯಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಆರ್. ಅಶೋಕ್ ಮಾತನಾಡಿದಂತಹ ಸಂದರ್ಭದಲ್ಲಿ “ನಿನ್ನ ಇತಿಹಾಸ ಗೊತ್ತಿದೆಯಪ್ಪ, ನೀನು ಯಾವಾಗಿಂದ ಬಂದೇ ಗೊತ್ತಿದೆ” ಎಂದು ಪರಮೇಶ್ವರ್ ಅವರ ಪಕ್ಕದಲ್ಲಿ ಕುಳಿತು ಮಾತನಾಡದ್ದೆ. ಆ ಸಂದರ್ಭದಲ್ಲಿ  ಭೂಮಿಗೆ ಹೇಗೆ ಪ್ರಾರ್ಥನೆ ಮಾಡ್ತಾರೆ ಎಂದು ನಾನು ತಿಳಿದುಕೊಂಡ ಎರಡು ಲೇನ್ ಹೇಳಿದ್ದೆ. ಅದನ್ನು ಕಟ್ ಮಾಡಿ, ಪೇಸ್ಟ್ ಮಾಡಿ, ಎಲ್ಲೆಲ್ಲಿಗೋ ಲಿಂಕ್ ಮಾಡಿ ನ್ಯಾಷನಲ್ ನ್ಯೂಸ್, ಇಂಟರ್‌ನ್ಯಾಷನಲ್ ನ್ಯೂಸ್, ಎಲ್ಲಾ ಭಾಷೆಗಳಲ್ಲಿ ಸುದ್ದಿ ಮಾಡಿಬಿಟ್ರು ಎಂದಿದ್ದಾರೆ.

ನಾನು ಮೊನ್ನೆ ಬಿಹಾರಕ್ಕೆ ಹೋದಾಗ ಕೆಲವರು ನನ್ನ ಹೇಳಿಕೆ ಬಗ್ಗೆ ಕೇಳಿದ್ರು. ಒಬ್ಬರು ನಮ್ಮ ಪಕ್ಷದ ಹಿರಿಯ ನಾಯಕ, ನನ್ನ ಗೆಳೆಯ ಬಹಳ ದೊಡ್ಡ ದೊಡ್ಡ ಸಲಹೆಗಳನ್ನೆಲ್ಲಾ ನೀಡಿದ್ದಾರೆ. ಅದು ಬಹಳ ಸಂತೋಷದ ವಿಷಯ. ನಾನು ಯಾರಿಗಿಂತಲೂ ದೊಡ್ಡವನಲ್ಲ. ಅವರಿಗಿಂತ ದೊಡ್ಡವನಲ್ಲ. ಇರಲಿ, ಆ ಬಗ್ಗೆ ಸಂತೋಷವಿದೆ ಎಂದು ಡಿಕೆಶಿ ಹೇಳಿದ್ದಾರೆ.

ನನ್ನ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಹೇಳಿಕೆ ಕೊಡುವ ಅವಶ್ಯಕತೆ ಇಲ್ಲ. ನೀವು ಕಾಂಗ್ರೆಸ್ ಕಚೇರಿಗೆ ಬನ್ನಿ, ಸಭೆ ಮಾಡಿ ಚರ್ಚೆ ಮಾಡೋಣ. ಮಾಧ್ಯಮ ಹೇಳಿಕೆಗಳಿಂದ ನಿಮಗೆ ಸಮಾಧಾನ ಆಗಬಹುದು, ಯಾವುದೇ ಲಾಭ ಆಗುವುದಿಲ್ಲ. ಹಲವರು ಸಲಹೆ ಕೊಟ್ಟಿದ್ದಾರೆ. ಖಂಡಿತ ನಾನು ನಿಮ್ಮ ಸಲಹೆಗಳಿಗಿಂದ ದೊಡ್ಡವನಲ್ಲ ಎಂದು ಕುಟುಕಿದ್ದಾರೆ.

ನಾನು ಎಲ್ಲರ ಕಷ್ಟ ಕಾಲದಲ್ಲಿ ಅವರ ಜೊತೆ ನಿಂತವನು. ಈಗಲೂ ನಾನು ಅವರ ಜೊತೆ ನಿಲ್ಲುತ್ತೇನೆ. ನಾನು ಏನೇ ಆಗಿಬರಹುದು, ಏನೋ ಆಗಬಹುದು. ಯಾವುದೇ ಹುದ್ದೆಯಲ್ಲಿರಬಹುದು. ಅದು ಮುಖ್ಯ ಅಲ್ಲ. ನಾನೊಬ್ಬ ನಿಷ್ಠಾವಂತ ಕಾಂಗ್ರೆಸಿಗನಾಗಿ ಯಾರ ಮನಸ್ಸಿಗೂ ನೋಯಿಸುವ ಅಗತ್ಯವಿಲ್ಲ. ನನ್ನ ಜೀವನ ನಿಮ್ಮಗಳ ಬದುಕಿಗೆ ಒಂದು ಅಡಿಪಾಯ ಹಾಕಬೇಕು, ನಿಮ್ಮ ಜೀವನಕ್ಕೆ ಮೆಟ್ಟಿಲಾಗಬೇಕು. ಅದಲ್ಲದೆ, ನಾನು ಯಾರ ಭಾವನೆಗೂ ನೋವುಂಟು ಮಾಡಲು ಬಯಸುವುದಿಲ್ಲ. ನಾನು ಹುಟ್ಟು ಕಾಂಗ್ರೆಸಿಗ, ನಾನು ಕಾಂಗ್ರೆಸಿಗನಾಗಿಯೇ ಸಾಯುತ್ತೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6635 ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...