Homeಮುಖಪುಟಸರ್ಕಾರದ ಅಹಂ ಮುರಿಯಲು ಸಜ್ಜಾಗಿದ್ದೇವೆ: ಕೃಷಿ ಸಚಿವರಿಗೆ ಸಂಯುಕ್ತ ಮೋರ್ಚಾ ಎಚ್ಚರಿಕೆ

ಸರ್ಕಾರದ ಅಹಂ ಮುರಿಯಲು ಸಜ್ಜಾಗಿದ್ದೇವೆ: ಕೃಷಿ ಸಚಿವರಿಗೆ ಸಂಯುಕ್ತ ಮೋರ್ಚಾ ಎಚ್ಚರಿಕೆ

"ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ತೋಮರ್ ಹೇಳಿದ್ದರು.

- Advertisement -
- Advertisement -

“ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ರೈತ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ, “ಸರ್ಕಾರದ ಅಹಂ ಮುರಿಯಲು ಎಲ್ಲಾ ಸಮಯದಲ್ಲಿಯೂ ಸಜ್ಜಾಗಿದ್ದೇವೆ” ಎಂದು ಎಚ್ಚರಿಕೆ ನೀಡಿದೆ.

ಇಂದು ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತೋಮರ್, “ನಾವು ಕೃಷಿ ತಿದ್ದುಪಡಿ ಕಾನೂನುಗಳನ್ನು ಜಾರಿಗೆ ತಂದೆವು. ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರದಲ್ಲಿ ಸುಧಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೆ ತಂದ ಈ ಕಾನೂನುಗಳನ್ನು ಕೆಲವು ಜನರು ಇಷ್ಟಪಡಲಿಲ್ಲ. ಆದರೆ ಸರ್ಕಾರ ನಿರಾಶೆಗೊಂಡಿಲ್ಲ. ನಾವು ಒಂದು ಹೆಜ್ಜೆ ಹಿಂದೆ ಸರಿದಿದ್ದೇವೆ ಮತ್ತು ನಾವು ಮತ್ತೆ ಮುಂದುವರಿಯುತ್ತೇವೆ. ಏಕೆಂದರೆ ರೈತರು ಭಾರತದ ಬೆನ್ನೆಲುಬು” ಎಂದು ಹೇಳಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ “ಕೃಷಿ ಸಚಿವ ನರೇಂದ್ರ ತೋಮರ್ ಅವರ ಈ ಹೇಳಿಕೆ ದುರಹಂಕಾರದಿಂದ ಕೂಡಿದೆ. ಬಿಜೆಪಿ ಸರ್ಕಾರ ಒಂದು ಹೆಜ್ಜೆ ಹಿಂದೆ ಸರಿದು ಮತ್ತು ಎರಡು ಹೆಜ್ಜೆ ಮುಂದೆ ಹೋಗಬೇಕೆಂದು ಭಾವಿಸಿದರೆ ಅದು ಸಾಧ್ಯವಿಲ್ಲ. ರೈತರು ಮತ್ತು ರೈತ ಸಂಘಟನೆಗಳು ಎಂಎಸ್‌ಪಿ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಒಗ್ಗಟ್ಟಾಗಿವೆ ಮತ್ತು ಈ ಸರ್ಕಾರದ ಅಹಂ ಮುರಿಯಲು ಎಲ್ಲಾ ಸಮಯದಲ್ಲೂ ಸಿದ್ಧವಾಗಿದ್ದೇವೆ” ಎಂದು ಹೇಳಿದೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸುಗ್ರೀವಾಜ್ಞೆ ಮೂಲಕ ವಿವಾದಿತ 3 ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿತ್ತು. ನಂತರ ಎರಡೂ ಸದನಗಳಲ್ಲಿ ಅಂಗೀಕರಿಸಿತ್ತು. ಈ ಕುರಿತು ದೇಶಾದ್ಯಂತದ ರೈತರು 15 ತಿಂಗಳಿಗೂ ಹೆಚ್ಚು ಕಾಲ ಹೋರಾಟ ನಡೆಸಿದ್ದರು. ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದ ರೈತರು ದೆಹಲಿಯ ಗಡಗಳಲ್ಲಿ ಮೊಕ್ಕಾಂ ಹೂಡಿದ್ದರು. ಕೊನೆಗೂ ರೈತರ ಸುಧೀರ್ಘ ಹೋರಾಟಕ್ಕೆ ಮಣಿದ ಸರ್ಕಾರ ನವೆಂಬರ್ 29 ರಂದು ಸಂಸತ್ತಿನ ಅಧಿವೇಶನದಲ್ಲಿ 3 ಕಾಯ್ದೆಗಳನ್ನು ವಾಪಸ್ ಪಡೆದಿದೆ. ರೈತರ ಎಲ್ಲಾ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡು ಎಂಎಸ್‌ಪಿ ಜಾರಿಗಾಗಿ ಕಾನೂನು ರಚಿಸುವುದಾಗಿ ರೈತರಿಗೆ ಲಿಖಿತ ಭರವಸೆ ನೀಡಿದೆ. ತದನಂತರ ರೈತರು ತಮ್ಮ ಐತಿಹಾಸಿಕ ರೈತ ಹೋರಾಟವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದ್ದಾರೆ.


ವಿವಾದಿತ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಸೂಚನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...