Homeಕರ್ನಾಟಕಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

“ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ” ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಕೃಷ್ಣ ಬೈರೇಗೌಡ ವಿರುದ್ದ ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪದ ಬಗ್ಗೆ ಚರ್ಚಿಸಲು ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದರು.

ಈ ವೇಳೆ ಸ್ವತಃ ಮಧ್ಯ ಪ್ರವೇಶಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಅಧಿವೇಶನದ ಸಂದರ್ಭದಲ್ಲಿ ಸದನದ ಸದಸ್ಯರ ಬಗ್ಗೆ ಯಾವುದೇ ವೈಯಕ್ತಿಕ ವಿಚಾರ ಪ್ರಸ್ತಾಪ ಮಾಡಬೇಕಿದ್ದರೆ ಅದಕ್ಕೊಂದು ನಿಯಮಾವಳಿ ಇದೆ. ಕನಿಷ್ಟ ವಾರಕ್ಕೂ ಮುಂಚೆಯೇ ಸದಸ್ಯರಿಗೆ ನೋಟೀಸ್ ನೀಡಬೇಕು. ಆದರೆ, ಈ ವಿಚಾರದಲ್ಲಿ ದಿಢೀರನೆ ಆರೋಪ ಮಾಡಿ ಚರ್ಚೆಗೆ ಅವಕಾಶ ಕೇಳುತ್ತಿದ್ದಾರೆ. ಆದರೂ ನಾನು ಸದನದ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಮೇಲಿನ ಆರೋಪದ ಬಗ್ಗೆ ಸದನದಲ್ಲಿ ಚರ್ಚಿಸಲು ಹಾಗೂ ಉತ್ತರ ನೀಡಲು ನನ್ನದೇನೂ ಅಭ್ಯಂತರ ಇಲ್ಲ. ಈ ವಿಚಾರ ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟದ್ದು” ಎಂದರು.

ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಇನ್ನೂ ಸಾಕಷ್ಟು ವಿಧೇಯಕಗಳು ಮಂಡನೆಗೆ ಬಾಕಿ ಇದ್ದು, ತದನಂತರ ಈ ವಿಚಾರವನ್ನು ಚರ್ಚಿಸಲು ಅವಕಾಶ ನೀಡುವುದಾಗಿ ತಿಳಿಸಿದರು.

ಕೃಷ್ಣ ಬೈರೇಗೌಡ ವಿರುದ್ಧ ಬಿಜೆಪಿ ನಾಯಕರಿಂದ ಆರೋಪ

ನಕಲಿ ದಾಖಲೆ ಸೃಷ್ಟಿಸಿ 21 ಎಕರೆ ಕೆರೆ ಹಾಗೂ ಸ್ಮಶಾನದ ಭೂಮಿಯನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಹಾಗೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೃಷ್ಣ ಬೈರೇಗೌಡ ಅವರು ಕೋಲಾರ ಜಿಲ್ಲೆಯ ನರಸಾಪುರ ಹೋಬಳಿ ಗರುಡನಪಾಳ್ಯದಲ್ಲಿ 21 ಎಕರೆ ಜಮೀನು ಕಬಳಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ಮುಖಂಡ ತಮ್ಮೇಶ ಗೌಡ ಆರೋಪಿಸಿದ್ದಾರೆ.

ಬುಧವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, 1978ರ ದಾಖಲೆಯಲ್ಲಿ ಕೆರೆ ಅಂತ ಇತ್ತು. ಈಗ ಎಲ್ಲಾ ದಾಖಲೆಗಳನ್ನು ತಿದ್ದುಪಡಿ ಮಾಡಲಾಗಿದೆ.‌ ಈ ಜಮೀನಿನ ಮಾರುಕಟ್ಟೆ ಮೌಲ್ಯ ಪ್ರಸ್ತುತ ಐದಾರು ಕೋಟಿ ಇದೆ. ಆರೋಪದ ಹಿನ್ನೆಲೆ ಸಚಿವ ಸ್ಥಾನಕ್ಕೆ ಕೃಷ್ಣ ಬೈರೇಗೌಡ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...