Homeಮುಖಪುಟಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧ, ಪೊಲೀಸರು ಅನುಮತಿ ನೀಡುತ್ತಿಲ್ಲ: ರಾಹುಲ್ ಗಾಂಧಿ

ಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧ, ಪೊಲೀಸರು ಅನುಮತಿ ನೀಡುತ್ತಿಲ್ಲ: ರಾಹುಲ್ ಗಾಂಧಿ

- Advertisement -
- Advertisement -

ಮಸೀದಿ ಸಮೀಕ್ಷೆ ಸಂಧರ್ಭದಲ್ಲಿ ಹಿಂಸಾಚಾರ ನಡೆದ ಸಂಭಾಲ್‌ಗೆ ತೆರಳುತ್ತಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬುಧವಾರ ಇಲ್ಲಿನ ಗಾಜಿಪುರ ಗಡಿಯಲ್ಲಿ ತಡೆದಿದ್ದಾರೆ.

“ನಾನು ಪೊಲೀಸರೊಂದಿಗೆ ಸಂಭಾಲ್‌ಗೆ ಏಕಾಂಗಿಯಾಗಿ ಹೋಗಲು ಸಿದ್ಧನಿದ್ದೇನೆ. ಆದರೆ, ಅವರು ಅನುಮತಿಸಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಯ್ ಬರೇಲಿ ಸಂಸದ ರಾಹುಲ್ ಗಾಂಧಿ, ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಬೆಳಿಗ್ಗೆ ಘಾಜಿಪುರ ಗಡಿಯನ್ನು ತಲುಪಿದರು. ಅಲ್ಲಿ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸಂಭಾಲ್‌ಗೆ ಪ್ರವೇಶಿಸುವುದನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಕಲಾಯಿತು. ಹಲವು ಹೊತ್ತಿನ ಮಾತುಕತೆ ಬಳಿಕ ರಾಹುಲ್ ಗಾಂಧಿ ದೆಹಲಿಗೆ ತೆರಳಿದರು.

ನಂತರ ಮಾತನಾಡಿದ ಅವರು, “ನಾವು ಸಂಭಾಲ್‌ಗೆ ಹೋಗಲು ಪ್ರಯತ್ನಿಸುತ್ತಿದ್ದೇವೆ, ಪೊಲೀಸರು ನಿರಾಕರಿಸುತ್ತಿದ್ದು, ನಮಗೆ ಅವಕಾಶ ನೀಡುತ್ತಿಲ್ಲ. ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ಸ್ಥಳಕ್ಕೆ ಹೋಗುವುದು ನನ್ನ ಹಕ್ಕು.. ನಾನು ಒಬ್ಬನೇ ಹೋಗಲು ಸಿದ್ಧ ಎಂದು ಪೊಲೀಸರೊಂದಿಗೆ ಹೇಳಿದೆ. ಆದರೆ ಅವರು ಅದನ್ನು ಸ್ವೀಕರಿಸಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

“ಕೆಲವು ದಿನಗಳಲ್ಲಿ ಹಿಂತಿರುಗಿದರೆ, ಅವರು ನಮ್ಮನ್ನು ಬಿಡುತ್ತಾರೆ ಎಂದು ಹೇಳುತ್ತಿದ್ದಾರೆ. ವಾಸ್ತವವಾಗಿ ಇದು ಲೋಕಸಭೆಯ ವಿರೋಧ ಪಕ್ಷದ ನಾಯಕನ ಹಕ್ಕಿಗೆ ವಿರುದ್ಧವಾಗಿದೆ. ನನಗೆ ಹೋಗಲು ಅವಕಾಶ ನೀಡಬೇಕು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡ ಗಾಂಧಿ, ಪೊಲೀಸರ ನಿರ್ಧಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

“ನಾವು ಸಂಭಾಲ್‌ಗೆ ಹೋಗಿ ಅಲ್ಲಿ ಏನಾಯಿತು ಎಂಬುದನ್ನು ನೋಡಲು ಬಯಸುತ್ತೇವೆ. ನಾವು ಜನರನ್ನು ಭೇಟಿಯಾಗಲು ಬಯಸುತ್ತೇವೆ. ಆದರೆ, ನನ್ನ ಸಾಂವಿಧಾನಿಕ ಹಕ್ಕನ್ನು ನನಗೆ ಅನುಮತಿಸಲಾಗುತ್ತಿಲ್ಲ.  ಸಂವಿಧಾನವನ್ನು ಕೊನೆಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ, ನಾವು ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದರು.

ವಯನಾಡ್ ಸಂಸದೆ ಪ್ರಿಯಾಂಕಾ ವಾದ್ರಾ ಮಾತನಾಡಿ, “ಸಂಭಾಲ್‌ನಲ್ಲಿ ನಡೆದದ್ದು ತಪ್ಪಾಗಿದೆ. ರಾಹುಲ್ ವಿರೋಧ ಪಕ್ಷದ ನಾಯಕ. ಅವರಿಗೆ ಸಾಂವಿಧಾನಿಕ ಹಕ್ಕಿದೆ. ಅವರು ಇತರ ಜನರಿಗಿಂತ ಭಿನ್ನರು. ಅವರನ್ನು ತಡೆಯಲು ಸಾಧ್ಯವಿಲ್ಲ, ಸಂತ್ರಸ್ತರನ್ನು ಭೇಟಿ ಮಾಡಲು ಸಾಂವಿಧಾನಿಕ ಹಕ್ಕು ಇದೆ; ಅವರಿಗೆ ಅವಕಾಶ ನೀಡಬೇಕು” ಎಂದರು.

ಸಂಭಾಲ್‌ನಲ್ಲಿ ಭಾನುವಾರದಂದು ಮುಕ್ತಾಯಗೊಳ್ಳಲಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್ 163 (ಉಪದ್ರವ ಅಥವಾ ಅಪಾಯದ ತುರ್ತು ಪ್ರಕರಣಗಳಲ್ಲಿ ಆದೇಶವನ್ನು ನೀಡುವ ಅಧಿಕಾರ) ಅಡಿಯಲ್ಲಿ ನಿರ್ಬಂಧಗಳನ್ನು ಈಗ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಅವರು ಮಂಗಳವಾರ ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ನ ಪೊಲೀಸ್ ಕಮಿಷನರ್‌ಗಳು, ಅಮ್ರೋಹಾ ಮತ್ತು ಬುಲಂದ್‌ಶಹರ್ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದು ರಾಹುಲ್ ಗಾಂಧಿಯನ್ನು ತಮ್ಮ ಜಿಲ್ಲೆಗಳ ಗಡಿಯಲ್ಲಿ ನಿಲ್ಲಿಸುವಂತೆ ಸೂಚಿಸಿದ್ದಾರೆ.

“ನಾವು ರಾಹುಲ್ ಗಾಂಧಿಯವರನ್ನು ಸಂಭಾಲ್‌ ಪ್ರವೇಶಕ್ಕೆ ಅನುಮತಿಸುವುದಿಲ್ಲ. ಏಕೆಂದರೆ, ಅಲ್ಲಿನ ಆಡಳಿತವು ನಿಷೇಧಾಜ್ಞೆಗಳನ್ನು ಹೊರಡಿಸಿದೆ. ಪೊಲೀಸರು ಅವರನ್ನು ಯುಪಿ ಗೇಟ್‌ನಲ್ಲಿ ನಿಲ್ಲಿಸುತ್ತಾರೆ” ಎಂದು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳದಲ್ಲಿ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು.

ನವೆಂಬರ್ 19 ರಿಂದ ಸಂಭಾಲ್‌ನಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಮೊಘಲರ ಕಾಲದ ಮಸೀದಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಈ ಹಿಂದೆ ಹರಿಹರ ದೇವಾಲಯವೊಂದು ಆ ಸ್ಥಳದಲ್ಲಿತ್ತು ಎಂಬ ಹೇಳಿಕೆಯ ಮೇರೆಗೆ ಸಮೀಕ್ಷೆ ನಡೆಸಲಾಯಿತು.

ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದರು. ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ; ಸಂಭಾಲ್‌ ಹಿಂಸಾಚಾರ: ಪರಿಸ್ಥಿತಿ ಅವಲೋಕಿಸಲು ಘಟನಾ ಸ್ಥಳಕ್ಕೆ ಹೊರಟ ರಾಹುಲ್-ಪ್ರಿಯಾಂಕಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...