Homeಮುಖಪುಟವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

ವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

- Advertisement -
- Advertisement -

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಯಲು  “ಸಂಪೂರ್ಣ ಲಾಕ್‌ಡೌನ್”ನಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದು ದೆಹಲಿ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇದರ ಜೊತೆಗೆ ನೆರೆಯ ರಾಜ್ಯಗಳ ಕುರಿತು ಉಲ್ಲೇಖಿಸಿರುವ ದೆಹಲಿ ಸರ್ಕಾರವು, “ಅಂತಹ ಕ್ರಮವು ನೆರೆಯ ರಾಜ್ಯಗಳ ಎನ್‌ಸಿಆರ್‌ನಲ್ಲಿ (ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ) ಜಾರಿಗೆ ಬಂದರೆ ಅರ್ಥಪೂರ್ಣವಾಗಿರುತ್ತದೆ” ಎಂದೂ ಹೇಳಿದೆ.

“ಇಂಗಾಲ ಹೊರಸೂಸುವಿಕೆ ನಿಯಂತ್ರಿಸಲು ಸ್ಥಳೀಯವಾಗಿ ಸಂಪೂರ್ಣ ಲಾಕ್‌ಡೌನ್‌ನಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧವಿದ್ದೇವೆ. ಆದಾಗ್ಯೂ, ನೆರೆಯ ರಾಜ್ಯಗಳ ಎನ್‌ಸಿಆರ್ ಪ್ರದೇಶಗಳಾದ್ಯಂತ ಇದನ್ನು ಜಾರಿಗೊಳಿಸಿದರೆ ಲಾಕ್‌ಡೌನ್‌‌ ಅರ್ಥಪೂರ್ಣವಾಗಿರುತ್ತದೆ. ದೆಹಲಿಯಲ್ಲಿನ ಲಾಕ್‌ಡೌನ್ ವಾಯುಮಾಲಿನ್ಯದ ಮೇಲೆ ಸೀಮಿತ ಪರಿಣಾಮ ಬೀರುತ್ತದೆ” ಎಂದು ಸರ್ಕಾರ ತಿಳಿಸಿದೆ.

“ಭಾರತ ಸರ್ಕಾರದಿಂದ ಅಥವಾ ವಾಯು ಗುಣಮಟ್ಟ ನಿರ್ವಹಣಾ ಆಯೋಗದಿಂದ ಸಂಪೂರ್ಣ ಲಾಕ್‌ಡೌನ್‌ ಎನ್‌ಸಿಆರ್ ಪ್ರದೇಶಗಳಿಗೆ ಕಡ್ಡಾಯಗೊಳಿಸಿದರೆ ಈ ಹಂತವನ್ನು ಪರಿಗಣಿಸಲು ನಾವು ಸಿದ್ಧರಿದ್ದೇವೆ” ಎಂದು ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ವಿಚಾರಣೆಗೆ ಮುನ್ನ ಸೋಮವಾರ ದೆಹಲಿ ಸರ್ಕಾರ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಪರಿಸರ ಕಾರ್ಯಕರ್ತ ಆದಿತ್ಯ ದುಬೆ ಮತ್ತು ಕಾನೂನು ವಿದ್ಯಾರ್ಥಿ ಅಮನ್ ಬಂಕಾ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಹುಲ್ಲು ತೆಗೆಯುವ ಯಂತ್ರಗಳನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.

ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಶನಿವಾರ, ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯದ ಹೆಚ್ಚಳವನ್ನು “ತುರ್ತು” ಪರಿಸ್ಥಿತಿ ಎಂದು ಬಣ್ಣಿಸಿತ್ತು. ಪರಿಸ್ಥಿತಿ ಸುಧಾರಿಸಲು ಎರಡು ದಿನಗಳ ಲಾಕ್‌ಡೌನ್ ಸೇರಿದಂತೆ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ಕೇಳಿತ್ತು. ದೆಹಲಿಯಲ್ಲಿನ ಪರಿಸ್ಥಿತಿಗೆ ಪಂಜಾಬ್‌ನಲ್ಲಿ ಹುಲ್ಲು ಸುಡುವ ಸಮಸ್ಯೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ದೂಷಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿಹೇಳಿದೆ. ನಗರದಲ್ಲಿ ಶಾಲೆಗಳು ತೆರೆದಿದ್ದು, ಮಕ್ಕಳು ತೀವ್ರ ಮಾಲಿನ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

ಈ ವಿಷಯದ ಕುರಿತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗಾಳಿಯ ಗುಣಮಟ್ಟದ ಬಿಕ್ಕಟ್ಟನ್ನು ಎದುರಿಸಲು ಹಲವು ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಒಂದು ವಾರ ಶಾಲೆಗಳನ್ನು ಮುಚ್ಚುವುದು, ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸುವುದು ಮತ್ತು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುವುದಾಗಿ ಕೇಜ್ರಿವಾಲ್‌ ಘೋಷಿಸಿದ್ದಾರೆ. 


ಇದನ್ನೂ ಓದಿರಿ: ಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...