Homeಮುಖಪುಟವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

ವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

- Advertisement -
- Advertisement -

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಯಲು  “ಸಂಪೂರ್ಣ ಲಾಕ್‌ಡೌನ್”ನಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದು ದೆಹಲಿ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇದರ ಜೊತೆಗೆ ನೆರೆಯ ರಾಜ್ಯಗಳ ಕುರಿತು ಉಲ್ಲೇಖಿಸಿರುವ ದೆಹಲಿ ಸರ್ಕಾರವು, “ಅಂತಹ ಕ್ರಮವು ನೆರೆಯ ರಾಜ್ಯಗಳ ಎನ್‌ಸಿಆರ್‌ನಲ್ಲಿ (ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ) ಜಾರಿಗೆ ಬಂದರೆ ಅರ್ಥಪೂರ್ಣವಾಗಿರುತ್ತದೆ” ಎಂದೂ ಹೇಳಿದೆ.

“ಇಂಗಾಲ ಹೊರಸೂಸುವಿಕೆ ನಿಯಂತ್ರಿಸಲು ಸ್ಥಳೀಯವಾಗಿ ಸಂಪೂರ್ಣ ಲಾಕ್‌ಡೌನ್‌ನಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧವಿದ್ದೇವೆ. ಆದಾಗ್ಯೂ, ನೆರೆಯ ರಾಜ್ಯಗಳ ಎನ್‌ಸಿಆರ್ ಪ್ರದೇಶಗಳಾದ್ಯಂತ ಇದನ್ನು ಜಾರಿಗೊಳಿಸಿದರೆ ಲಾಕ್‌ಡೌನ್‌‌ ಅರ್ಥಪೂರ್ಣವಾಗಿರುತ್ತದೆ. ದೆಹಲಿಯಲ್ಲಿನ ಲಾಕ್‌ಡೌನ್ ವಾಯುಮಾಲಿನ್ಯದ ಮೇಲೆ ಸೀಮಿತ ಪರಿಣಾಮ ಬೀರುತ್ತದೆ” ಎಂದು ಸರ್ಕಾರ ತಿಳಿಸಿದೆ.

“ಭಾರತ ಸರ್ಕಾರದಿಂದ ಅಥವಾ ವಾಯು ಗುಣಮಟ್ಟ ನಿರ್ವಹಣಾ ಆಯೋಗದಿಂದ ಸಂಪೂರ್ಣ ಲಾಕ್‌ಡೌನ್‌ ಎನ್‌ಸಿಆರ್ ಪ್ರದೇಶಗಳಿಗೆ ಕಡ್ಡಾಯಗೊಳಿಸಿದರೆ ಈ ಹಂತವನ್ನು ಪರಿಗಣಿಸಲು ನಾವು ಸಿದ್ಧರಿದ್ದೇವೆ” ಎಂದು ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ವಿಚಾರಣೆಗೆ ಮುನ್ನ ಸೋಮವಾರ ದೆಹಲಿ ಸರ್ಕಾರ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಪರಿಸರ ಕಾರ್ಯಕರ್ತ ಆದಿತ್ಯ ದುಬೆ ಮತ್ತು ಕಾನೂನು ವಿದ್ಯಾರ್ಥಿ ಅಮನ್ ಬಂಕಾ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಹುಲ್ಲು ತೆಗೆಯುವ ಯಂತ್ರಗಳನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.

ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಶನಿವಾರ, ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯದ ಹೆಚ್ಚಳವನ್ನು “ತುರ್ತು” ಪರಿಸ್ಥಿತಿ ಎಂದು ಬಣ್ಣಿಸಿತ್ತು. ಪರಿಸ್ಥಿತಿ ಸುಧಾರಿಸಲು ಎರಡು ದಿನಗಳ ಲಾಕ್‌ಡೌನ್ ಸೇರಿದಂತೆ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ಕೇಳಿತ್ತು. ದೆಹಲಿಯಲ್ಲಿನ ಪರಿಸ್ಥಿತಿಗೆ ಪಂಜಾಬ್‌ನಲ್ಲಿ ಹುಲ್ಲು ಸುಡುವ ಸಮಸ್ಯೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ದೂಷಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿಹೇಳಿದೆ. ನಗರದಲ್ಲಿ ಶಾಲೆಗಳು ತೆರೆದಿದ್ದು, ಮಕ್ಕಳು ತೀವ್ರ ಮಾಲಿನ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

ಈ ವಿಷಯದ ಕುರಿತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗಾಳಿಯ ಗುಣಮಟ್ಟದ ಬಿಕ್ಕಟ್ಟನ್ನು ಎದುರಿಸಲು ಹಲವು ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಒಂದು ವಾರ ಶಾಲೆಗಳನ್ನು ಮುಚ್ಚುವುದು, ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸುವುದು ಮತ್ತು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುವುದಾಗಿ ಕೇಜ್ರಿವಾಲ್‌ ಘೋಷಿಸಿದ್ದಾರೆ. 


ಇದನ್ನೂ ಓದಿರಿ: ಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...