Homeಮುಖಪುಟಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸಲು ಸಿದ್ಧ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸಲು ಸಿದ್ಧ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯು ಫೆಬ್ರವರಿ 27ರಂದು ನಡೆಯುತ್ತಿದ್ದು, ಈ ಚುನಾವಣೆಯಲ್ಲಿ ತಮ್ಮ ಪಕ್ಷ ಉತ್ತಮ ಪ್ರದರ್ಶನ ನೀಡಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ತಮ್ಮ ಪಕ್ಷವು ಒಗ್ಗೂಡಲಿದೆ ಎಂದು ಮಂಗಳವಾರ ಅವರು ಹೇಳಿದ್ದಾರೆ.

ದಿಮಾಪುರ್‌ನ ದೀಪುಪರ್ ವಿಲೇಜ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಬಿಜೆಪಿಯನ್ನು ಟೀಕಿಸಿದ ಖರ್ಗೆ, ”ನೀವು ನಿರಂಕುಶಾಧಿಕಾರಿ ಅಲ್ಲ, ಸರ್ವಾಧಿಕಾರಿಯೂ ಅಲ್ಲ. ನೀವು ಪ್ರಜಾಪ್ರಭುತ್ವದಲ್ಲಿದ್ದೀರಿ ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು.. ಜನರಿಂದ ಚುನಾಯಿತರಾಗಿದ್ದೀರಿ ಮತ್ತು ಜನರು 2024ರಲ್ಲಿ (ಸಾಮಾನ್ಯ ಚುನಾವಣೆ) ನಿಮಗೆ ತಕ್ಕ ಪಾಠ ಕಲಿಸುತ್ತಾರೆ” ಎಂದರು.

ನಾಗಾಲ್ಯಾಂಡ್ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ಕೇಸರಿ ಪಕ್ಷವು ಪರಿಸ್ಥಿತಿಯ ಲಾಭ ಪಡೆದುಕೊಂಡು ಇಲ್ಲಿ ರಾತ್ರೋರಾತ್ರಿ ಸರ್ಕಾರವನ್ನು ಉರುಳಿಸಿತು. ಬಿಜೆಪಿಯಿಂದ ಮೋಸ ಮಾಡಲಾಗಿದೆ, ನಾಗಾಲ್ಯಾಂಡ್ ಜನತೆ ಮತ್ತೊಮ್ಮೆ ಮೋಸ ಹೋಗಿದ್ದಾರೆ” ಎಂದು ಖರ್ಗೆ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

“ಬಿಜೆಪಿಯು ಇಲ್ಲಿ ಮುಖ್ಯಮಂತ್ರಿಯನ್ನು ಬ್ಲಾಕ್ ಮೇಲ್ ಮಾಡುವ ಮೂಲಕ ಸರ್ಕಾರವನ್ನು ರಚಿಸಿತು. ಇಲ್ಲಿ ಮಾತ್ರವಲ್ಲದೆ 6-7 ರಾಜ್ಯಗಳಲ್ಲಿ ಅವರು ಶಾಸಕರ ಮೇಲೆ ಒತ್ತಡ ಹೇರಿ, ಆಮಿಷ ಒಡ್ಡಿ ಅಲ್ಲಿನ ಸರ್ಕಾರಗಳನ್ನು ಉರುಳಿಸಿದ್ದಾರೆ” ಎಂದು ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.

2024 ರ ಸಾರ್ವತ್ರಿಕ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ಬಿಜೆಪಿ ಇತರ ಸಮಾನ ಮನಸ್ಕ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಆದರೆ, ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂದು ಖರ್ಗೆ ಭವಿಷ್ಯ ನುಡಿದರು.

”ನಾವು ಬಹುಮತ ಪಡೆಯುತ್ತೇವೆ, ಕಾಂಗ್ರೆಸ್ ಈ ದೇಶವನ್ನು ಮುನ್ನಡೆಸುತ್ತದೆ. ನಾವು ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಅನುಸರಿಸುತ್ತೇವೆ” ಎಂದು ಅವರು ಹೇಳಿದರು.

ಬಿಜೆಪಿಯವರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ ಆದರೆ ಅವರ ಕಾರ್ಯಗಳು ಪ್ರಜಾಪ್ರಭುತ್ವ ವಿರೋಧಿಯಾಗಿರುತ್ತವೆ ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...