Homeಮುಖಪುಟಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹತೆ ಬಳಿಕ ರಾಹುಲ್ ಹೇಳಿಕೆ

ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹತೆ ಬಳಿಕ ರಾಹುಲ್ ಹೇಳಿಕೆ

ರಾಹುಲ್ ಗಾಂಧಿಯವರ ಅನರ್ಹತೆಗೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

“ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಯಾವುದೇ ಬೆಲೆ ತೆರಲು ಸಿದ್ದನಿದ್ದೇನೆ” ಎಂದು ಲೋಕಸಭಾ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ಕೇರಳದ ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಅನರ್ಹಗೊಳಿಸಲಾಗಿದೆ.

ಲೋಕಸಭಾ ಸೆಕ್ರೆಟರಿಯೇಟ್‌ರವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, “ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ರಾಹುಲ್ ಗಾಂಧಿಯವರನ್ನು ಸೂರತ್‌ನ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದ ನಂತರ, 1951ರ ಪ್ರಜಾಪ್ರತಿನಿಧಿ ಕಾಯ್ದೆಯ 8ನೇ ಪರಿಚ್ಛೇದದೊಂದಿಗೆ, ಭಾರತದ ಸಂವಿಧಾನದ 102(1)(ಇ) ವಿಧಿಯ ನಿಬಂಧನೆಗಳ ಪ್ರಕಾರ, ಮಾರ್ಚ್ 23, 2023 ರಿಂದ (ಶಿಕ್ಷೆಯಾದ ದಿನಾಂಕದಿಂದ) ಅವರು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ” ಎಂದು ಆದೇಶಿಸಲಾಗಿದೆ. ಈ ಸಂಬಂಧ ರಾಹುಲ್ ಪ್ರತಿಕ್ರಿಯಿಸಿ, “ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ” ಎಂದಿದ್ದಾರೆ.

ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಈ ವಿದ್ಯಮಾನಕ್ಕೆ ಪ್ರತಿಕ್ರಿಯಿಸಿದ್ದು, “ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ತರಾತುರಿಯಲ್ಲಿ ರದ್ದುಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲೆ ಸಂಘಪರಿವಾರ ನಡೆಸುತ್ತಿರುವ ಹಿಂಸಾತ್ಮಕ ದಾಳಿಯ ಅತ್ಯಂತ ಹೊಸ ಅಧ್ಯಾಯವಾಗಿದೆ” ಎಂದು ಟೀಕಿಸಿದ್ದಾರೆ.

“ಅಧಿಕಾರ ಬಳಸಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವುದು ಫ್ಯಾಸಿಸ್ಟ್ ವಿಧಾನವಾಗಿದೆ. ವಿರೋಧ ಪಕ್ಷದ ಪ್ರಮುಖ ನಾಯಕನ ಮೇಲೆಯೆ ಈ ರೀತಿಯಾಗಿ ದಾಳಿ ನಡೆಸಲಾಗಿದೆ. ಹೀಗಿರುವಾಗ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಜನ ಸಾಮಾನ್ಯರಿಗೆ ಇಲ್ಲಿ ರಕ್ಷಣೆಯಿದೆಯೆ? ಇವರು ಸಾಂವಿಧಾನಿಕ ಮೌಲ್ಯಗಳಿಗೆ ನೀಡುವ ಬೆಲೆ ಏನಿದೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

“ಟೀಕೆಗಳ ಬಗ್ಗೆ ಇರುವ ತೀವ್ರ ಅಸಹಿಷ್ಣುತೆ ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡುತ್ತಿದೆ. ರಾಹುಲ್ ಗಾಂಧಿ ಅವರ ವಿರುದ್ಧ ನಡೆದ ಕ್ರಮಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗಿದ್ದು ಮತ್ತು ಈ ಕ್ರಮದ ವಿರುದ್ಧ ತೀವ್ರವಾಗಿ ಪ್ರತಿರೋಧಿಸಲು ಪ್ರಜಾಪ್ರಭುತ್ವವಾದಿಗಳು ಒಗ್ಗೂಡಿ ಮುಂದೆ ಬರಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯೇತರ ರಾಜ್ಯಗಳಲ್ಲಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ನಡೆಸಿದ ರಾಜಕೀಯ ಹಸ್ತಕ್ಷೇಪದಲ್ಲಿ ಮನೀಶ್ ಸಿಸೋಡಿಯಾ ಮತ್ತು ರಾಹುಲ್ ಗಾಂಧಿ ವಿರುದ್ಧದ ಪ್ರಕರಣಗಳಿಗೆ ದೆಹಲಿಯಲ್ಲಿ ವಿರೋಧ ವ್ಯಕ್ತಪಡಿಸಿದ ವಿರೋಧ ಪಕ್ಷದ ಸಂಸದರನ್ನು ಬಂಧಿಸಿರುವುದು ಕೂಡಾ ಇದರ ಇನ್ನೊಂದು ಭಾಗವಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕಾಗಿ ದೆಹಲಿಯಲ್ಲಿ ಗುಂಪು ಗುಂಪಾಗಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಕೇಂದ್ರ ಸರ್ಕಾರದ ಈ ಯಾವುದೇ ಕ್ರಮಗಳು ನಮ್ಮ ಪ್ರಜಾಸತ್ತಾತ್ಮಕ ಸಮಾಜ ಮತ್ತು ಸಂವಿಧಾನದ ಮೌಲ್ಯಗಳಿಗೆ ಹೊಂದಿಕೆಯಾಗುವುದಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...