Homeಮುಖಪುಟಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹತೆ ಬಳಿಕ ರಾಹುಲ್ ಹೇಳಿಕೆ

ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹತೆ ಬಳಿಕ ರಾಹುಲ್ ಹೇಳಿಕೆ

ರಾಹುಲ್ ಗಾಂಧಿಯವರ ಅನರ್ಹತೆಗೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

“ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಯಾವುದೇ ಬೆಲೆ ತೆರಲು ಸಿದ್ದನಿದ್ದೇನೆ” ಎಂದು ಲೋಕಸಭಾ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ಕೇರಳದ ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಅನರ್ಹಗೊಳಿಸಲಾಗಿದೆ.

ಲೋಕಸಭಾ ಸೆಕ್ರೆಟರಿಯೇಟ್‌ರವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, “ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ರಾಹುಲ್ ಗಾಂಧಿಯವರನ್ನು ಸೂರತ್‌ನ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದ ನಂತರ, 1951ರ ಪ್ರಜಾಪ್ರತಿನಿಧಿ ಕಾಯ್ದೆಯ 8ನೇ ಪರಿಚ್ಛೇದದೊಂದಿಗೆ, ಭಾರತದ ಸಂವಿಧಾನದ 102(1)(ಇ) ವಿಧಿಯ ನಿಬಂಧನೆಗಳ ಪ್ರಕಾರ, ಮಾರ್ಚ್ 23, 2023 ರಿಂದ (ಶಿಕ್ಷೆಯಾದ ದಿನಾಂಕದಿಂದ) ಅವರು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ” ಎಂದು ಆದೇಶಿಸಲಾಗಿದೆ. ಈ ಸಂಬಂಧ ರಾಹುಲ್ ಪ್ರತಿಕ್ರಿಯಿಸಿ, “ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ” ಎಂದಿದ್ದಾರೆ.

ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಈ ವಿದ್ಯಮಾನಕ್ಕೆ ಪ್ರತಿಕ್ರಿಯಿಸಿದ್ದು, “ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ತರಾತುರಿಯಲ್ಲಿ ರದ್ದುಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲೆ ಸಂಘಪರಿವಾರ ನಡೆಸುತ್ತಿರುವ ಹಿಂಸಾತ್ಮಕ ದಾಳಿಯ ಅತ್ಯಂತ ಹೊಸ ಅಧ್ಯಾಯವಾಗಿದೆ” ಎಂದು ಟೀಕಿಸಿದ್ದಾರೆ.

“ಅಧಿಕಾರ ಬಳಸಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವುದು ಫ್ಯಾಸಿಸ್ಟ್ ವಿಧಾನವಾಗಿದೆ. ವಿರೋಧ ಪಕ್ಷದ ಪ್ರಮುಖ ನಾಯಕನ ಮೇಲೆಯೆ ಈ ರೀತಿಯಾಗಿ ದಾಳಿ ನಡೆಸಲಾಗಿದೆ. ಹೀಗಿರುವಾಗ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಜನ ಸಾಮಾನ್ಯರಿಗೆ ಇಲ್ಲಿ ರಕ್ಷಣೆಯಿದೆಯೆ? ಇವರು ಸಾಂವಿಧಾನಿಕ ಮೌಲ್ಯಗಳಿಗೆ ನೀಡುವ ಬೆಲೆ ಏನಿದೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

“ಟೀಕೆಗಳ ಬಗ್ಗೆ ಇರುವ ತೀವ್ರ ಅಸಹಿಷ್ಣುತೆ ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡುತ್ತಿದೆ. ರಾಹುಲ್ ಗಾಂಧಿ ಅವರ ವಿರುದ್ಧ ನಡೆದ ಕ್ರಮಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗಿದ್ದು ಮತ್ತು ಈ ಕ್ರಮದ ವಿರುದ್ಧ ತೀವ್ರವಾಗಿ ಪ್ರತಿರೋಧಿಸಲು ಪ್ರಜಾಪ್ರಭುತ್ವವಾದಿಗಳು ಒಗ್ಗೂಡಿ ಮುಂದೆ ಬರಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯೇತರ ರಾಜ್ಯಗಳಲ್ಲಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ನಡೆಸಿದ ರಾಜಕೀಯ ಹಸ್ತಕ್ಷೇಪದಲ್ಲಿ ಮನೀಶ್ ಸಿಸೋಡಿಯಾ ಮತ್ತು ರಾಹುಲ್ ಗಾಂಧಿ ವಿರುದ್ಧದ ಪ್ರಕರಣಗಳಿಗೆ ದೆಹಲಿಯಲ್ಲಿ ವಿರೋಧ ವ್ಯಕ್ತಪಡಿಸಿದ ವಿರೋಧ ಪಕ್ಷದ ಸಂಸದರನ್ನು ಬಂಧಿಸಿರುವುದು ಕೂಡಾ ಇದರ ಇನ್ನೊಂದು ಭಾಗವಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕಾಗಿ ದೆಹಲಿಯಲ್ಲಿ ಗುಂಪು ಗುಂಪಾಗಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಕೇಂದ್ರ ಸರ್ಕಾರದ ಈ ಯಾವುದೇ ಕ್ರಮಗಳು ನಮ್ಮ ಪ್ರಜಾಸತ್ತಾತ್ಮಕ ಸಮಾಜ ಮತ್ತು ಸಂವಿಧಾನದ ಮೌಲ್ಯಗಳಿಗೆ ಹೊಂದಿಕೆಯಾಗುವುದಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...