Homeಕರ್ನಾಟಕಕೆಆರ್‌ಎಸ್ ಅಣೆಕಟ್ಟಿಗಾಗಿ ಜೀವ ತ್ಯಾಗಕ್ಕೂ ಸಿದ್ಧ: ರೈತ ಸಂಘಟನೆಗಳು

ಕೆಆರ್‌ಎಸ್ ಅಣೆಕಟ್ಟಿಗಾಗಿ ಜೀವ ತ್ಯಾಗಕ್ಕೂ ಸಿದ್ಧ: ರೈತ ಸಂಘಟನೆಗಳು

- Advertisement -
- Advertisement -

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟು ಬಳಿಯ ಬೃಂದಾವನ ಉದ್ಯಾನದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ವಿರೋಧಿಸಿರುವ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ಕೆಆರ್‌ಎಸ್‌ ಅಣೆಕಟ್ಟು ಉಳಿಸಲು ಜೀವ ತ್ಯಾಗ ಮಾಡಲು ತಯಾರಿದ್ದೇವೆ ಎಂದು ಹೇಳಿದೆ. ಬುಧವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ತೀವ್ರ ಆಕ್ರೋಶ ಮತ್ತು ಗದ್ದಲ ಉಂಟಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಕೆಆರ್‌ಎಸ್ ಅಣೆಕಟ್ಟಿಗಾಗಿ

ರೈತ ನಾಯಕಿ ಸುನಂದಾ ಜಯರಾಮ್ ಮಾತನಾಡಿ, “ನಾವು ಉಪವಾಸ ಸತ್ಯಾಗ್ರಹ ನಡೆಸಿದ್ದೇವೆ, ರಕ್ತ ಕೊಟ್ಟೇವು.. ನೀರು ಕೊಡೇವು. ಕೆಆರ್‌ಎಸ್ ಅಣೆಕಟ್ಟಿಗೆ ಅಪಾಯವಿದ್ದರೆ ನಾವು ಸುಮ್ಮನಿರು ಹೇಗೆ?” ಎಂದು ಹೇಳಿದ್ದಾರೆ.

“ಜೂನ್ 6 ರಂದು ನಡೆದ ಸಭೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಸಿಎಂ ಮತ್ತು ಡಿಸಿಎಂ ಜೊತೆ ಮಾತನಾಡಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ನಾವು ಅವರ ಮಾತುಗಳನ್ನು ಗೌರವಿಸಿ ಕಾಯುತ್ತಿದ್ದೆವು. ಆದರೆ, ಕಾವೇರಿ ನೀರಾವರಿ ನಿಗಮ (ಸಿಎನ್‌ಎನ್) ಅಧಿಕಾರಿಗಳು ಮೌನವಾಗಿ ಕಾವೇರಿ ‘ಆರತಿ’ಗಾಗಿ ಕೆಲಸಗಳನ್ನು ಕೈಗೆತ್ತಿಕೊಂಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜೈಲಿನಲ್ಲಿ ಇರಬೇಕಾದವರು ವಿಧಾನಸೌಧದೊಳಗೆ ಇದ್ದಾರೆ. ವಿಧಾನಸೌಧ ಸುಳ್ಳಿನ ಮನೆ. ಅಪರಾಧ ಎಸಗಿದವರನ್ನು ಶಿಕ್ಷಿಸಲು ಜನರು ಸಿದ್ಧರಿದ್ದಾರೆ” ಎಂದು ಅವರು ಹೇಳಿದ್ದಾರೆ.

“ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು. ಅಣೆಕಟ್ಟು ಬಳಿ ಮರಗಳನ್ನು ಕಡಿದು ಕಾವೇರಿ ನದಿಗೆ ಲೋಡ್ ಗಟ್ಟಲೆ ಮಣ್ಣನ್ನು ಸುರಿದಿದ್ದು ಏಕೆ? ಈ ಬಗ್ಗೆ ಸಿಎನ್‌ಎನ್, ಶ್ರೀರಂಗಪಟ್ಟಣ ಮತ್ತು ಮೇಲುಕೋಟೆ ಶಾಸಕರು ಸ್ಥಳಕ್ಕೆ ಬಂದು ಸ್ಪಷ್ಟಪಡಿಸಬೇಕು” ಎಂದು ರೈತರು ಒತ್ತಾಯಿಸಿದ್ದಾರೆ.

“ಕಾವೇರಿ ‘ಆರತಿ’ಗಾಗಿ ಅಣೆಕಟ್ಟೆಯ ಬೋಟಿಂಗ್ ಪಾಯಿಂಟ್ ಬಳಿ ಪ್ರಾಥಮಿಕ ಕಾಮಗಾರಿಗಳನ್ನು ಕೈಗೊಳ್ಳಲಾಯಿತು. ಜಿಲ್ಲಾ ಸಚಿವರು ಮತ್ತು ಉನ್ನತ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಯಿತು. ಹಳೆಯ ಮತ್ತು ಅಪಾಯ ಒಡ್ಡುವ ಮರಗಳನ್ನು ಮಾತ್ರ ಕಡಿಯಲಾಯಿತು.” ಎಂದು ಕಾವೇರಿ ನೀರಾವರಿ ನಿಗಮ ಕಾರ್ಯನಿರ್ವಾಹಕ ಎಂಜಿನಿಯರ್ ಜಯಂತ್ ಹೇಳಿದ್ದಾರೆ ಎಂದು ವರದಿಯಾಗಿದೆ.

ಟೆಂಡರ್ ಕರೆಯುವ ಮೊದಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ರೈತರು ಮತ್ತು ಇತರರು ಆರೋಪಿಸಿದ್ದು, ಟೆಂಡರ್ ಪ್ರತಿಯನ್ನು ತೋರಿಸುವಂತೆ ಅಧಿಕಾರಿಗಳಿಗೆ ರೈತರು ಕೇಳಿದ್ದಾರೆ.

ಬುಧವಾರ ಅಣೆಕಟ್ಟು ಬಳಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು ಎಂದು ವರದಿ ಹೇಳಿದೆ. ಪೊಲೀಸರು ರೈತರನ್ನು ತಡೆದು, ಪ್ರತಿ ಗುಂಪಿನಿಂದ ಕೇವಲ 10 ಪ್ರತಿನಿಧಿಗಳಿಗೆ ಕಾವೇರಿ ‘ಆರತಿ’ ಸ್ಥಳಕ್ಕೆ ಹೋಗಲು ಅವಕಾಶ ನೀಡಿದ್ದಾರೆ.

ರೈತ, ದಲಿತ ಮತ್ತು ವಿವಿಧ ಸಂಘಟನೆಗಳ ಸದಸ್ಯರು, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರು ಒಟ್ಟುಗೂಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅಣೆಕಟ್ಟು ಬಳಿ ಕಾವೇರಿ ‘ಆರತಿ’ ಮತ್ತು ಮನೋರಂಜನಾ ಉದ್ಯಾನವನಕ್ಕೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಘೋಷಣೆಗಳನ್ನು ಕೂಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಕೆಆರ್‌ಎಸ್ ಅಣೆಕಟ್ಟಿಗಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...