Homeಕರ್ನಾಟಕಕೆಆರ್‌ಎಸ್ ಅಣೆಕಟ್ಟಿಗಾಗಿ ಜೀವ ತ್ಯಾಗಕ್ಕೂ ಸಿದ್ಧ: ರೈತ ಸಂಘಟನೆಗಳು

ಕೆಆರ್‌ಎಸ್ ಅಣೆಕಟ್ಟಿಗಾಗಿ ಜೀವ ತ್ಯಾಗಕ್ಕೂ ಸಿದ್ಧ: ರೈತ ಸಂಘಟನೆಗಳು

- Advertisement -
- Advertisement -

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟು ಬಳಿಯ ಬೃಂದಾವನ ಉದ್ಯಾನದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ವಿರೋಧಿಸಿರುವ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ಕೆಆರ್‌ಎಸ್‌ ಅಣೆಕಟ್ಟು ಉಳಿಸಲು ಜೀವ ತ್ಯಾಗ ಮಾಡಲು ತಯಾರಿದ್ದೇವೆ ಎಂದು ಹೇಳಿದೆ. ಬುಧವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ತೀವ್ರ ಆಕ್ರೋಶ ಮತ್ತು ಗದ್ದಲ ಉಂಟಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಕೆಆರ್‌ಎಸ್ ಅಣೆಕಟ್ಟಿಗಾಗಿ

ರೈತ ನಾಯಕಿ ಸುನಂದಾ ಜಯರಾಮ್ ಮಾತನಾಡಿ, “ನಾವು ಉಪವಾಸ ಸತ್ಯಾಗ್ರಹ ನಡೆಸಿದ್ದೇವೆ, ರಕ್ತ ಕೊಟ್ಟೇವು.. ನೀರು ಕೊಡೇವು. ಕೆಆರ್‌ಎಸ್ ಅಣೆಕಟ್ಟಿಗೆ ಅಪಾಯವಿದ್ದರೆ ನಾವು ಸುಮ್ಮನಿರು ಹೇಗೆ?” ಎಂದು ಹೇಳಿದ್ದಾರೆ.

“ಜೂನ್ 6 ರಂದು ನಡೆದ ಸಭೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಸಿಎಂ ಮತ್ತು ಡಿಸಿಎಂ ಜೊತೆ ಮಾತನಾಡಿ ಈ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ನಾವು ಅವರ ಮಾತುಗಳನ್ನು ಗೌರವಿಸಿ ಕಾಯುತ್ತಿದ್ದೆವು. ಆದರೆ, ಕಾವೇರಿ ನೀರಾವರಿ ನಿಗಮ (ಸಿಎನ್‌ಎನ್) ಅಧಿಕಾರಿಗಳು ಮೌನವಾಗಿ ಕಾವೇರಿ ‘ಆರತಿ’ಗಾಗಿ ಕೆಲಸಗಳನ್ನು ಕೈಗೆತ್ತಿಕೊಂಡಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜೈಲಿನಲ್ಲಿ ಇರಬೇಕಾದವರು ವಿಧಾನಸೌಧದೊಳಗೆ ಇದ್ದಾರೆ. ವಿಧಾನಸೌಧ ಸುಳ್ಳಿನ ಮನೆ. ಅಪರಾಧ ಎಸಗಿದವರನ್ನು ಶಿಕ್ಷಿಸಲು ಜನರು ಸಿದ್ಧರಿದ್ದಾರೆ” ಎಂದು ಅವರು ಹೇಳಿದ್ದಾರೆ.

“ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು. ಅಣೆಕಟ್ಟು ಬಳಿ ಮರಗಳನ್ನು ಕಡಿದು ಕಾವೇರಿ ನದಿಗೆ ಲೋಡ್ ಗಟ್ಟಲೆ ಮಣ್ಣನ್ನು ಸುರಿದಿದ್ದು ಏಕೆ? ಈ ಬಗ್ಗೆ ಸಿಎನ್‌ಎನ್, ಶ್ರೀರಂಗಪಟ್ಟಣ ಮತ್ತು ಮೇಲುಕೋಟೆ ಶಾಸಕರು ಸ್ಥಳಕ್ಕೆ ಬಂದು ಸ್ಪಷ್ಟಪಡಿಸಬೇಕು” ಎಂದು ರೈತರು ಒತ್ತಾಯಿಸಿದ್ದಾರೆ.

“ಕಾವೇರಿ ‘ಆರತಿ’ಗಾಗಿ ಅಣೆಕಟ್ಟೆಯ ಬೋಟಿಂಗ್ ಪಾಯಿಂಟ್ ಬಳಿ ಪ್ರಾಥಮಿಕ ಕಾಮಗಾರಿಗಳನ್ನು ಕೈಗೊಳ್ಳಲಾಯಿತು. ಜಿಲ್ಲಾ ಸಚಿವರು ಮತ್ತು ಉನ್ನತ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಯಿತು. ಹಳೆಯ ಮತ್ತು ಅಪಾಯ ಒಡ್ಡುವ ಮರಗಳನ್ನು ಮಾತ್ರ ಕಡಿಯಲಾಯಿತು.” ಎಂದು ಕಾವೇರಿ ನೀರಾವರಿ ನಿಗಮ ಕಾರ್ಯನಿರ್ವಾಹಕ ಎಂಜಿನಿಯರ್ ಜಯಂತ್ ಹೇಳಿದ್ದಾರೆ ಎಂದು ವರದಿಯಾಗಿದೆ.

ಟೆಂಡರ್ ಕರೆಯುವ ಮೊದಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ರೈತರು ಮತ್ತು ಇತರರು ಆರೋಪಿಸಿದ್ದು, ಟೆಂಡರ್ ಪ್ರತಿಯನ್ನು ತೋರಿಸುವಂತೆ ಅಧಿಕಾರಿಗಳಿಗೆ ರೈತರು ಕೇಳಿದ್ದಾರೆ.

ಬುಧವಾರ ಅಣೆಕಟ್ಟು ಬಳಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು ಎಂದು ವರದಿ ಹೇಳಿದೆ. ಪೊಲೀಸರು ರೈತರನ್ನು ತಡೆದು, ಪ್ರತಿ ಗುಂಪಿನಿಂದ ಕೇವಲ 10 ಪ್ರತಿನಿಧಿಗಳಿಗೆ ಕಾವೇರಿ ‘ಆರತಿ’ ಸ್ಥಳಕ್ಕೆ ಹೋಗಲು ಅವಕಾಶ ನೀಡಿದ್ದಾರೆ.

ರೈತ, ದಲಿತ ಮತ್ತು ವಿವಿಧ ಸಂಘಟನೆಗಳ ಸದಸ್ಯರು, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರು ಒಟ್ಟುಗೂಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅಣೆಕಟ್ಟು ಬಳಿ ಕಾವೇರಿ ‘ಆರತಿ’ ಮತ್ತು ಮನೋರಂಜನಾ ಉದ್ಯಾನವನಕ್ಕೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಘೋಷಣೆಗಳನ್ನು ಕೂಗಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಕೆಆರ್‌ಎಸ್ ಅಣೆಕಟ್ಟಿಗಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...