Homeಮುಖಪುಟಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡರೆ ಜೆಡಿಯುಗೆ ಬೆಂಬಲ ನೀಡಲು ಸಿದ್ದ: ಆರ್‌ಜೆಡಿ

ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡರೆ ಜೆಡಿಯುಗೆ ಬೆಂಬಲ ನೀಡಲು ಸಿದ್ದ: ಆರ್‌ಜೆಡಿ

ಜೆಡಿಯು ಆರ್‌ಜೆಡಿ ಸೇರಿದರೆ 125 ಸ್ಥಾನಗಳೊಂದಿಗೆ ಸುಲಭವಾಗಿ ಬಹುಮತ ಸಾಧಿಸಬಹುದಾಗಿದೆ

- Advertisement -
- Advertisement -

ಬಿಹಾರದಲ್ಲಿ ಉಂಟಾಗಿರುವ ಬಿಜೆಪಿ-ಜೆಡಿಯು ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ರಾಜ್ಯದ ವಿಧಾನಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಆರ್‌ಜೆಡಿಯು, ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡರೆ ಜೆಡಿಯುಗೆ ಬೆಂಬಲ ನೀಡಲು ಸಿದ್ದ ಎಂದಿದೆ.

ಆರ್‌ಜೆಡಿ ಪಕ್ಷದ ಹಿರಿಯ ಮುಖಂಡರು “ಜೆಡಿಯು ಜೊತೆಗೂಡಿ ಸರ್ಕಾರ ರಚಿಸಿಲು ತೇಜಸ್ವಿ ಯಾದವ್ ಸಿದ್ದವಿದ್ದಾರೆ. ಆದರೆ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡು ಹೊರಬರಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಬಿಹಾರ ಅಸೆಂಬ್ಲಿಯಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು ಸದ್ಯ ಎನ್‌ಡಿಎ ಮೈತ್ರಿ 127 ಸ್ಥಾನ ಹೊಂದುವ ಮೂಲಕ ಸರ್ಕಾರ ರಚಿಸಿದೆ. ಅದರಲ್ಲಿ ಬಿಜೆಪಿ 77, ಜೆಡಿಯು 45, ಹಿಂದೂಸ್ತಾನ್ ಅವಾಜ್ ಮೋರ್ಚಾ 04 ಮತ್ತು ಒಬ್ಬರು ಪಕ್ಷೇತರರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ವಿರೋಧ ಪಕ್ಷಗಳ ಪಾಳಯದಲ್ಲಿ ಮಹಾಘಟಬಂಧನ್ ಮೈತ್ರಿಯಲ್ಲಿ ಆರ್‌ಜೆಡಿ 80, ಸಿಪಿಐ-ಎಂಎಲ್ 12, ಸಿಪಿಐ(ಎಂ)-02, ಸಿಪಿಐ 02 ಸ್ಥಾನದೊಂದಿಗೆ ಒಟ್ಟು 96 ಸ್ಥಾನ ಹೊಂದಿವೆ. ಅಲ್ಲದೆ ಕಾಂಗ್ರೆಸ್ 19 ಮತ್ತು ಎಐಎಂಐಎಂ ಪಕ್ಷವು 01 ಸ್ಥಾನ ಹೊಂದಿದೆ. ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

ಇಂದು ರಾಜಕೀಯ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಿಎಂ ನಿತೀಶ್ ಕುಮಾರ್ ಬಿಜೆಪಿಯ ಉಪ ಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್ ರನ್ನು ಭೇಟಿಯಾಗಲಿದ್ದಾರೆ.

ಬಿಜೆಪಿ ವರ್ಸಸ್ ಜೆಡಿಯು – ದಶಕಗಳ ಭಿನ್ನಮತ

2013ರವರೆಗೆ ಬಿಜೆಪಿ ಜೊತೆಗಿದ್ದ ಜೆಡಿಯು ಆ ಸಂಬಂಧಕ್ಕೆ ತಿಲಾಂಜಲಿ ಆಡಿ ಮಹಾಘಟಬಂಧನ್ ಜೊತೆಗೂಡಿ 2015ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಿತ್ತು. ಆರ್‌ಜೆಡಿ ಮತ್ತು ಕಾಂಗ್ರೆಸ್‌ ಜೊತೆಗೂಡಿ ಅಧಿಕಾರ ಹಿಡಿದಿದ್ದ ಅದು 2017ರಲ್ಲಿ ಮೈತ್ರಿ ತೊರೆದು ಬಿಜೆಪಿ ಪಾಳಯ ಸೇರಿತ್ತು. 2020ರಲ್ಲಿ ಕೇವಲ 45 ಸೀಟು ಗೆದ್ದರೂ ಸಹ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಈಗ ಮತ್ತು ಬಿಜೆಪಿ ತೊರೆದು ಮಹಾ ಘಟಬಂಧನ್‌ ಕಡೆ ಮುಖ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...