Homeಮುಖಪುಟಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡರೆ ಜೆಡಿಯುಗೆ ಬೆಂಬಲ ನೀಡಲು ಸಿದ್ದ: ಆರ್‌ಜೆಡಿ

ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡರೆ ಜೆಡಿಯುಗೆ ಬೆಂಬಲ ನೀಡಲು ಸಿದ್ದ: ಆರ್‌ಜೆಡಿ

ಜೆಡಿಯು ಆರ್‌ಜೆಡಿ ಸೇರಿದರೆ 125 ಸ್ಥಾನಗಳೊಂದಿಗೆ ಸುಲಭವಾಗಿ ಬಹುಮತ ಸಾಧಿಸಬಹುದಾಗಿದೆ

- Advertisement -
- Advertisement -

ಬಿಹಾರದಲ್ಲಿ ಉಂಟಾಗಿರುವ ಬಿಜೆಪಿ-ಜೆಡಿಯು ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ರಾಜ್ಯದ ವಿಧಾನಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಆರ್‌ಜೆಡಿಯು, ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡರೆ ಜೆಡಿಯುಗೆ ಬೆಂಬಲ ನೀಡಲು ಸಿದ್ದ ಎಂದಿದೆ.

ಆರ್‌ಜೆಡಿ ಪಕ್ಷದ ಹಿರಿಯ ಮುಖಂಡರು “ಜೆಡಿಯು ಜೊತೆಗೂಡಿ ಸರ್ಕಾರ ರಚಿಸಿಲು ತೇಜಸ್ವಿ ಯಾದವ್ ಸಿದ್ದವಿದ್ದಾರೆ. ಆದರೆ ಜೆಡಿಯು ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡು ಹೊರಬರಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಬಿಹಾರ ಅಸೆಂಬ್ಲಿಯಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು ಸದ್ಯ ಎನ್‌ಡಿಎ ಮೈತ್ರಿ 127 ಸ್ಥಾನ ಹೊಂದುವ ಮೂಲಕ ಸರ್ಕಾರ ರಚಿಸಿದೆ. ಅದರಲ್ಲಿ ಬಿಜೆಪಿ 77, ಜೆಡಿಯು 45, ಹಿಂದೂಸ್ತಾನ್ ಅವಾಜ್ ಮೋರ್ಚಾ 04 ಮತ್ತು ಒಬ್ಬರು ಪಕ್ಷೇತರರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ವಿರೋಧ ಪಕ್ಷಗಳ ಪಾಳಯದಲ್ಲಿ ಮಹಾಘಟಬಂಧನ್ ಮೈತ್ರಿಯಲ್ಲಿ ಆರ್‌ಜೆಡಿ 80, ಸಿಪಿಐ-ಎಂಎಲ್ 12, ಸಿಪಿಐ(ಎಂ)-02, ಸಿಪಿಐ 02 ಸ್ಥಾನದೊಂದಿಗೆ ಒಟ್ಟು 96 ಸ್ಥಾನ ಹೊಂದಿವೆ. ಅಲ್ಲದೆ ಕಾಂಗ್ರೆಸ್ 19 ಮತ್ತು ಎಐಎಂಐಎಂ ಪಕ್ಷವು 01 ಸ್ಥಾನ ಹೊಂದಿದೆ. ಒಂದು ವೇಳೆ ಜೆಡಿಯು ಎನ್‌ಡಿಎ ಮೈತ್ರಿಯಿಂದ ಹೊರಬಂದಲ್ಲಿ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಬಹುದಾಗಿದೆ.

ಇಂದು ರಾಜಕೀಯ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಿಎಂ ನಿತೀಶ್ ಕುಮಾರ್ ಬಿಜೆಪಿಯ ಉಪ ಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್ ರನ್ನು ಭೇಟಿಯಾಗಲಿದ್ದಾರೆ.

ಬಿಜೆಪಿ ವರ್ಸಸ್ ಜೆಡಿಯು – ದಶಕಗಳ ಭಿನ್ನಮತ

2013ರವರೆಗೆ ಬಿಜೆಪಿ ಜೊತೆಗಿದ್ದ ಜೆಡಿಯು ಆ ಸಂಬಂಧಕ್ಕೆ ತಿಲಾಂಜಲಿ ಆಡಿ ಮಹಾಘಟಬಂಧನ್ ಜೊತೆಗೂಡಿ 2015ರಲ್ಲಿ ವಿಧಾನಸಭಾ ಚುನಾವಣೆ ಎದುರಿಸಿತ್ತು. ಆರ್‌ಜೆಡಿ ಮತ್ತು ಕಾಂಗ್ರೆಸ್‌ ಜೊತೆಗೂಡಿ ಅಧಿಕಾರ ಹಿಡಿದಿದ್ದ ಅದು 2017ರಲ್ಲಿ ಮೈತ್ರಿ ತೊರೆದು ಬಿಜೆಪಿ ಪಾಳಯ ಸೇರಿತ್ತು. 2020ರಲ್ಲಿ ಕೇವಲ 45 ಸೀಟು ಗೆದ್ದರೂ ಸಹ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ಈಗ ಮತ್ತು ಬಿಜೆಪಿ ತೊರೆದು ಮಹಾ ಘಟಬಂಧನ್‌ ಕಡೆ ಮುಖ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಬಿಕ್ಕಟ್ಟು: ಬಿಜೆಪಿ ವಿರುದ್ಧ ನಿತೀಶ್‌ ಬಂಡೇಳಲು ಕಾರಣವಾದ ಐದು ಈ ಅಂಶಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....