Homeಅಂತರಾಷ್ಟ್ರೀಯಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಸಿದ್ಧ: ಅಮೆರಿಕಾ

ಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಸಿದ್ಧ: ಅಮೆರಿಕಾ

ಚೀನಾವು ಹಾಂಗ್ ಕಾಂಗ್‌ನಲ್ಲಿ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಹೇರಿದೆ. ಅಮೆರಿಕಾದ ಪತ್ರಕರ್ತರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ. ಉಯ್ಘರ್ಸ್ ಮುಸ್ಲಿಮರ ಚಿಕಿತ್ಸೆ ಮತ್ತು ಟಿಬೆಟ್‌ನಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಉಭಯ ದೇಶಗಳು ಕಿಡಿಕಾರಿವೆ.

- Advertisement -
- Advertisement -

ಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಅಮೆರಿಕಾ ಸಿದ್ಧತೆ ನಡೆಸುತ್ತಿದೆ ಎಂದು ಶ್ವೇತಭವನ ಹೇಳಿದೆ. ಆದರೂ ಅಧ್ಯಕ್ಷೀಯ ಕ್ರಮಗಳು ಏನಾಗಿರಲಿವೆ ಎಂಬುದರ ಬಗ್ಗೆ ಅದು ಸ್ಪಷ್ಟನೆ ನೀಡಿಲ್ಲ.

ಕೊರೊನಾ ಪ್ರಾರಂಭವಾದಾಗಿನಿಂದ ವಾಷಿಂಗ್ಟನ್ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಕ್ಷೀಣಿಸುತ್ತಿವೆ. ಕೊರೊನಾವನ್ನು ಹರಡಿದ್ದಾರೆಂದು ಚೀನಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ.

ಚೀನಾವು ಹಾಂಗ್ ಕಾಂಗ್‌ನಲ್ಲಿ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಹೇರಿದೆ. ಅಮೆರಿಕಾದ ಪತ್ರಕರ್ತರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ. ಉಯ್ಘರ್ಸ್ ಮುಸ್ಲಿಮರ ಚಿಕಿತ್ಸೆ ಮತ್ತು ಟಿಬೆಟ್‌ನಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಉಭಯ ದೇಶಗಳು ಪರಸ್ಪರ ಕಿಡಿಕಾರಿವೆ.

ಬುಧವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೇಯ್ಲೀ ಮೆಕ್ ಎನಾನಿ “ಚೀನಾದ ಬಗ್ಗೆ ನಮ್ಮ ಕ್ರಮಗಳು ಏನೆಂಬುದರ ಬಗ್ಗೆ ಹೇಳುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಚೀನಾಕ್ಕೆ ಸಂಬಂಧಿಸಿದ ಕೆಲವು  ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು  ಹೇಳಿದ್ದಾರೆ.

ಶ್ವೇತಭವನದ ಮುಖ್ಯಸ್ಥರು, ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ರಾಜ್ಯ ಕಾರ್ಯದರ್ಶಿ ಸೇರಿದಂತೆ ಉನ್ನತ ಆಡಳಿತ ಅಧಿಕಾರಿಗಳು ಇತ್ತೀಚೆಗೆ ನೀಡಿದ ಹೇಳಿಕೆಗಳಿಗೆ, ಮೆಕ್ ಎನಾನಿ ಪ್ರತಿಕ್ರಿಯಿಸಿದ್ದು, ಮುಂದಿನ ದಿನಗಳಲ್ಲಿ ಅಧ್ಯಕ್ಷರು ಚೀನಾ ವಿರುದ್ಧ ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಸುಳಿವು ನೀಡಿದ್ದಾರೆ.

ಹಿಂದಿನ ಬ್ರಿಟಿಷ್ ವಸಾಹತು ಪ್ರದೇಶದ ಹೊಸ ಭದ್ರತಾ ಕಾನೂನನ್ನು ಉಲ್ಲೇಖಿಸಿ ಚೀನಾ ಹಾಂಗ್ ಕಾಂಗ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರಿಯೆನ್ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮುಂಬರುವ ದಿನಗಳು ಮತ್ತು ವಾರಗಳಲ್ಲಿ ನೀವು ಚೀನಾಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮಗಳನ್ನು ನೋಡಲಿದ್ದೀರಿ ಎಂದು ನಾನು ಭಾವಿಸುತ್ತೇನೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರೀತಿಯಲ್ಲಿ ಚೀನಾದ ವಿರುದ್ಧ ನಿಲ್ಲುವ ಯಾವುದೇ ಅಧ್ಯಕ್ಷರು ಇಲ್ಲ. ಇವರು ವ್ಯಾಪಾರ ಅಸಮತೋಲನವನ್ನು ತಡೆಯಲು ಚೀನಿಯರ ಮೇಲೆ ಹೆಚ್ಚಿನ ಸುಂಕ ವಿಧಿಸಿದ ಮೊದಲ ಅಧ್ಯಕ್ಷರು” ಒಬ್ರಿಯೆನ್ ಹೇಳಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರ ಕಳೆದ ವಾರದ ಕಾಮೆಂಟ್‌ಗಳನ್ನು ಉಲ್ಲೇಖಿಸಿ ಒಬ್ರಿಯೆನ್, “ಟಿಕ್‌ಟಾಕ್, ವೀಚಾಟ್ ಮತ್ತು ಅಮೆರಿಕನ್ನರ ವೈಯಕ್ತಿಕ ಮತ್ತು ಖಾಸಗಿ ಡೇಟಾವನ್ನು ಪಡೆಯಲು ಚೀನಾ ಸರ್ಕಾರ ಬಳಸುತ್ತಿರುವ ಕೆಲವು ಇತರ ಅಪ್ಲಿಕೇಶನ್‌ಗಳನ್ನು ಅಮೆರಿಕ ಅಧ್ಯಕ್ಷರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ : ತುರ್ತುಪರಿಸ್ಥಿತಿಯ ವಿರುದ್ಧ ವಾಷಿಂಗ್ಟನ್‍ನಲ್ಲಿ ಪ್ರತಿಭಟಿಸಿದ್ದೆ: ಎಸ್.ಆರ್ ಹಿರೇಮಠ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...