Homeಅಂತರಾಷ್ಟ್ರೀಯಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಸಿದ್ಧ: ಅಮೆರಿಕಾ

ಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಸಿದ್ಧ: ಅಮೆರಿಕಾ

ಚೀನಾವು ಹಾಂಗ್ ಕಾಂಗ್‌ನಲ್ಲಿ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಹೇರಿದೆ. ಅಮೆರಿಕಾದ ಪತ್ರಕರ್ತರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ. ಉಯ್ಘರ್ಸ್ ಮುಸ್ಲಿಮರ ಚಿಕಿತ್ಸೆ ಮತ್ತು ಟಿಬೆಟ್‌ನಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಉಭಯ ದೇಶಗಳು ಕಿಡಿಕಾರಿವೆ.

- Advertisement -
- Advertisement -

ಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಅಮೆರಿಕಾ ಸಿದ್ಧತೆ ನಡೆಸುತ್ತಿದೆ ಎಂದು ಶ್ವೇತಭವನ ಹೇಳಿದೆ. ಆದರೂ ಅಧ್ಯಕ್ಷೀಯ ಕ್ರಮಗಳು ಏನಾಗಿರಲಿವೆ ಎಂಬುದರ ಬಗ್ಗೆ ಅದು ಸ್ಪಷ್ಟನೆ ನೀಡಿಲ್ಲ.

ಕೊರೊನಾ ಪ್ರಾರಂಭವಾದಾಗಿನಿಂದ ವಾಷಿಂಗ್ಟನ್ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಕ್ಷೀಣಿಸುತ್ತಿವೆ. ಕೊರೊನಾವನ್ನು ಹರಡಿದ್ದಾರೆಂದು ಚೀನಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ.

ಚೀನಾವು ಹಾಂಗ್ ಕಾಂಗ್‌ನಲ್ಲಿ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಹೇರಿದೆ. ಅಮೆರಿಕಾದ ಪತ್ರಕರ್ತರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ. ಉಯ್ಘರ್ಸ್ ಮುಸ್ಲಿಮರ ಚಿಕಿತ್ಸೆ ಮತ್ತು ಟಿಬೆಟ್‌ನಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಉಭಯ ದೇಶಗಳು ಪರಸ್ಪರ ಕಿಡಿಕಾರಿವೆ.

ಬುಧವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೇಯ್ಲೀ ಮೆಕ್ ಎನಾನಿ “ಚೀನಾದ ಬಗ್ಗೆ ನಮ್ಮ ಕ್ರಮಗಳು ಏನೆಂಬುದರ ಬಗ್ಗೆ ಹೇಳುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಚೀನಾಕ್ಕೆ ಸಂಬಂಧಿಸಿದ ಕೆಲವು  ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು  ಹೇಳಿದ್ದಾರೆ.

ಶ್ವೇತಭವನದ ಮುಖ್ಯಸ್ಥರು, ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ರಾಜ್ಯ ಕಾರ್ಯದರ್ಶಿ ಸೇರಿದಂತೆ ಉನ್ನತ ಆಡಳಿತ ಅಧಿಕಾರಿಗಳು ಇತ್ತೀಚೆಗೆ ನೀಡಿದ ಹೇಳಿಕೆಗಳಿಗೆ, ಮೆಕ್ ಎನಾನಿ ಪ್ರತಿಕ್ರಿಯಿಸಿದ್ದು, ಮುಂದಿನ ದಿನಗಳಲ್ಲಿ ಅಧ್ಯಕ್ಷರು ಚೀನಾ ವಿರುದ್ಧ ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಸುಳಿವು ನೀಡಿದ್ದಾರೆ.

ಹಿಂದಿನ ಬ್ರಿಟಿಷ್ ವಸಾಹತು ಪ್ರದೇಶದ ಹೊಸ ಭದ್ರತಾ ಕಾನೂನನ್ನು ಉಲ್ಲೇಖಿಸಿ ಚೀನಾ ಹಾಂಗ್ ಕಾಂಗ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರಿಯೆನ್ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮುಂಬರುವ ದಿನಗಳು ಮತ್ತು ವಾರಗಳಲ್ಲಿ ನೀವು ಚೀನಾಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮಗಳನ್ನು ನೋಡಲಿದ್ದೀರಿ ಎಂದು ನಾನು ಭಾವಿಸುತ್ತೇನೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರೀತಿಯಲ್ಲಿ ಚೀನಾದ ವಿರುದ್ಧ ನಿಲ್ಲುವ ಯಾವುದೇ ಅಧ್ಯಕ್ಷರು ಇಲ್ಲ. ಇವರು ವ್ಯಾಪಾರ ಅಸಮತೋಲನವನ್ನು ತಡೆಯಲು ಚೀನಿಯರ ಮೇಲೆ ಹೆಚ್ಚಿನ ಸುಂಕ ವಿಧಿಸಿದ ಮೊದಲ ಅಧ್ಯಕ್ಷರು” ಒಬ್ರಿಯೆನ್ ಹೇಳಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರ ಕಳೆದ ವಾರದ ಕಾಮೆಂಟ್‌ಗಳನ್ನು ಉಲ್ಲೇಖಿಸಿ ಒಬ್ರಿಯೆನ್, “ಟಿಕ್‌ಟಾಕ್, ವೀಚಾಟ್ ಮತ್ತು ಅಮೆರಿಕನ್ನರ ವೈಯಕ್ತಿಕ ಮತ್ತು ಖಾಸಗಿ ಡೇಟಾವನ್ನು ಪಡೆಯಲು ಚೀನಾ ಸರ್ಕಾರ ಬಳಸುತ್ತಿರುವ ಕೆಲವು ಇತರ ಅಪ್ಲಿಕೇಶನ್‌ಗಳನ್ನು ಅಮೆರಿಕ ಅಧ್ಯಕ್ಷರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ : ತುರ್ತುಪರಿಸ್ಥಿತಿಯ ವಿರುದ್ಧ ವಾಷಿಂಗ್ಟನ್‍ನಲ್ಲಿ ಪ್ರತಿಭಟಿಸಿದ್ದೆ: ಎಸ್.ಆರ್ ಹಿರೇಮಠ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...