Homeಅಂತರಾಷ್ಟ್ರೀಯಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಸಿದ್ಧ: ಅಮೆರಿಕಾ

ಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಸಿದ್ಧ: ಅಮೆರಿಕಾ

ಚೀನಾವು ಹಾಂಗ್ ಕಾಂಗ್‌ನಲ್ಲಿ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಹೇರಿದೆ. ಅಮೆರಿಕಾದ ಪತ್ರಕರ್ತರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ. ಉಯ್ಘರ್ಸ್ ಮುಸ್ಲಿಮರ ಚಿಕಿತ್ಸೆ ಮತ್ತು ಟಿಬೆಟ್‌ನಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಉಭಯ ದೇಶಗಳು ಕಿಡಿಕಾರಿವೆ.

- Advertisement -
- Advertisement -

ಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಅಮೆರಿಕಾ ಸಿದ್ಧತೆ ನಡೆಸುತ್ತಿದೆ ಎಂದು ಶ್ವೇತಭವನ ಹೇಳಿದೆ. ಆದರೂ ಅಧ್ಯಕ್ಷೀಯ ಕ್ರಮಗಳು ಏನಾಗಿರಲಿವೆ ಎಂಬುದರ ಬಗ್ಗೆ ಅದು ಸ್ಪಷ್ಟನೆ ನೀಡಿಲ್ಲ.

ಕೊರೊನಾ ಪ್ರಾರಂಭವಾದಾಗಿನಿಂದ ವಾಷಿಂಗ್ಟನ್ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಕ್ಷೀಣಿಸುತ್ತಿವೆ. ಕೊರೊನಾವನ್ನು ಹರಡಿದ್ದಾರೆಂದು ಚೀನಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ.

ಚೀನಾವು ಹಾಂಗ್ ಕಾಂಗ್‌ನಲ್ಲಿ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಹೇರಿದೆ. ಅಮೆರಿಕಾದ ಪತ್ರಕರ್ತರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ. ಉಯ್ಘರ್ಸ್ ಮುಸ್ಲಿಮರ ಚಿಕಿತ್ಸೆ ಮತ್ತು ಟಿಬೆಟ್‌ನಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಉಭಯ ದೇಶಗಳು ಪರಸ್ಪರ ಕಿಡಿಕಾರಿವೆ.

ಬುಧವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೇಯ್ಲೀ ಮೆಕ್ ಎನಾನಿ “ಚೀನಾದ ಬಗ್ಗೆ ನಮ್ಮ ಕ್ರಮಗಳು ಏನೆಂಬುದರ ಬಗ್ಗೆ ಹೇಳುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಚೀನಾಕ್ಕೆ ಸಂಬಂಧಿಸಿದ ಕೆಲವು  ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು  ಹೇಳಿದ್ದಾರೆ.

ಶ್ವೇತಭವನದ ಮುಖ್ಯಸ್ಥರು, ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ರಾಜ್ಯ ಕಾರ್ಯದರ್ಶಿ ಸೇರಿದಂತೆ ಉನ್ನತ ಆಡಳಿತ ಅಧಿಕಾರಿಗಳು ಇತ್ತೀಚೆಗೆ ನೀಡಿದ ಹೇಳಿಕೆಗಳಿಗೆ, ಮೆಕ್ ಎನಾನಿ ಪ್ರತಿಕ್ರಿಯಿಸಿದ್ದು, ಮುಂದಿನ ದಿನಗಳಲ್ಲಿ ಅಧ್ಯಕ್ಷರು ಚೀನಾ ವಿರುದ್ಧ ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಸುಳಿವು ನೀಡಿದ್ದಾರೆ.

ಹಿಂದಿನ ಬ್ರಿಟಿಷ್ ವಸಾಹತು ಪ್ರದೇಶದ ಹೊಸ ಭದ್ರತಾ ಕಾನೂನನ್ನು ಉಲ್ಲೇಖಿಸಿ ಚೀನಾ ಹಾಂಗ್ ಕಾಂಗ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರಿಯೆನ್ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮುಂಬರುವ ದಿನಗಳು ಮತ್ತು ವಾರಗಳಲ್ಲಿ ನೀವು ಚೀನಾಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮಗಳನ್ನು ನೋಡಲಿದ್ದೀರಿ ಎಂದು ನಾನು ಭಾವಿಸುತ್ತೇನೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರೀತಿಯಲ್ಲಿ ಚೀನಾದ ವಿರುದ್ಧ ನಿಲ್ಲುವ ಯಾವುದೇ ಅಧ್ಯಕ್ಷರು ಇಲ್ಲ. ಇವರು ವ್ಯಾಪಾರ ಅಸಮತೋಲನವನ್ನು ತಡೆಯಲು ಚೀನಿಯರ ಮೇಲೆ ಹೆಚ್ಚಿನ ಸುಂಕ ವಿಧಿಸಿದ ಮೊದಲ ಅಧ್ಯಕ್ಷರು” ಒಬ್ರಿಯೆನ್ ಹೇಳಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರ ಕಳೆದ ವಾರದ ಕಾಮೆಂಟ್‌ಗಳನ್ನು ಉಲ್ಲೇಖಿಸಿ ಒಬ್ರಿಯೆನ್, “ಟಿಕ್‌ಟಾಕ್, ವೀಚಾಟ್ ಮತ್ತು ಅಮೆರಿಕನ್ನರ ವೈಯಕ್ತಿಕ ಮತ್ತು ಖಾಸಗಿ ಡೇಟಾವನ್ನು ಪಡೆಯಲು ಚೀನಾ ಸರ್ಕಾರ ಬಳಸುತ್ತಿರುವ ಕೆಲವು ಇತರ ಅಪ್ಲಿಕೇಶನ್‌ಗಳನ್ನು ಅಮೆರಿಕ ಅಧ್ಯಕ್ಷರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ : ತುರ್ತುಪರಿಸ್ಥಿತಿಯ ವಿರುದ್ಧ ವಾಷಿಂಗ್ಟನ್‍ನಲ್ಲಿ ಪ್ರತಿಭಟಿಸಿದ್ದೆ: ಎಸ್.ಆರ್ ಹಿರೇಮಠ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...