Homeಅಂತರಾಷ್ಟ್ರೀಯಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಸಿದ್ಧ: ಅಮೆರಿಕಾ

ಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಸಿದ್ಧ: ಅಮೆರಿಕಾ

ಚೀನಾವು ಹಾಂಗ್ ಕಾಂಗ್‌ನಲ್ಲಿ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಹೇರಿದೆ. ಅಮೆರಿಕಾದ ಪತ್ರಕರ್ತರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ. ಉಯ್ಘರ್ಸ್ ಮುಸ್ಲಿಮರ ಚಿಕಿತ್ಸೆ ಮತ್ತು ಟಿಬೆಟ್‌ನಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಉಭಯ ದೇಶಗಳು ಕಿಡಿಕಾರಿವೆ.

- Advertisement -
- Advertisement -

ಚೀನಾ ವಿರುದ್ಧ ಹೆಚ್ಚಿನ ಕ್ರಮ ತೆಗೆದುಕೊಳ್ಳಲು ಅಮೆರಿಕಾ ಸಿದ್ಧತೆ ನಡೆಸುತ್ತಿದೆ ಎಂದು ಶ್ವೇತಭವನ ಹೇಳಿದೆ. ಆದರೂ ಅಧ್ಯಕ್ಷೀಯ ಕ್ರಮಗಳು ಏನಾಗಿರಲಿವೆ ಎಂಬುದರ ಬಗ್ಗೆ ಅದು ಸ್ಪಷ್ಟನೆ ನೀಡಿಲ್ಲ.

ಕೊರೊನಾ ಪ್ರಾರಂಭವಾದಾಗಿನಿಂದ ವಾಷಿಂಗ್ಟನ್ ಮತ್ತು ಬೀಜಿಂಗ್ ನಡುವಿನ ಸಂಬಂಧಗಳು ಕ್ಷೀಣಿಸುತ್ತಿವೆ. ಕೊರೊನಾವನ್ನು ಹರಡಿದ್ದಾರೆಂದು ಚೀನಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ಬಾರಿ ಹೇಳಿಕೆ ನೀಡಿದ್ದಾರೆ.

ಚೀನಾವು ಹಾಂಗ್ ಕಾಂಗ್‌ನಲ್ಲಿ ಹೊಸ ರಾಷ್ಟ್ರೀಯ ಭದ್ರತಾ ಕಾನೂನು ಹೇರಿದೆ. ಅಮೆರಿಕಾದ ಪತ್ರಕರ್ತರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ. ಉಯ್ಘರ್ಸ್ ಮುಸ್ಲಿಮರ ಚಿಕಿತ್ಸೆ ಮತ್ತು ಟಿಬೆಟ್‌ನಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಉಭಯ ದೇಶಗಳು ಪರಸ್ಪರ ಕಿಡಿಕಾರಿವೆ.

ಬುಧವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೇಯ್ಲೀ ಮೆಕ್ ಎನಾನಿ “ಚೀನಾದ ಬಗ್ಗೆ ನಮ್ಮ ಕ್ರಮಗಳು ಏನೆಂಬುದರ ಬಗ್ಗೆ ಹೇಳುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಚೀನಾಕ್ಕೆ ಸಂಬಂಧಿಸಿದ ಕೆಲವು  ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು  ಹೇಳಿದ್ದಾರೆ.

ಶ್ವೇತಭವನದ ಮುಖ್ಯಸ್ಥರು, ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ರಾಜ್ಯ ಕಾರ್ಯದರ್ಶಿ ಸೇರಿದಂತೆ ಉನ್ನತ ಆಡಳಿತ ಅಧಿಕಾರಿಗಳು ಇತ್ತೀಚೆಗೆ ನೀಡಿದ ಹೇಳಿಕೆಗಳಿಗೆ, ಮೆಕ್ ಎನಾನಿ ಪ್ರತಿಕ್ರಿಯಿಸಿದ್ದು, ಮುಂದಿನ ದಿನಗಳಲ್ಲಿ ಅಧ್ಯಕ್ಷರು ಚೀನಾ ವಿರುದ್ಧ ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಸುಳಿವು ನೀಡಿದ್ದಾರೆ.

ಹಿಂದಿನ ಬ್ರಿಟಿಷ್ ವಸಾಹತು ಪ್ರದೇಶದ ಹೊಸ ಭದ್ರತಾ ಕಾನೂನನ್ನು ಉಲ್ಲೇಖಿಸಿ ಚೀನಾ ಹಾಂಗ್ ಕಾಂಗ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರಿಯೆನ್ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಮುಂಬರುವ ದಿನಗಳು ಮತ್ತು ವಾರಗಳಲ್ಲಿ ನೀವು ಚೀನಾಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮಗಳನ್ನು ನೋಡಲಿದ್ದೀರಿ ಎಂದು ನಾನು ಭಾವಿಸುತ್ತೇನೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರೀತಿಯಲ್ಲಿ ಚೀನಾದ ವಿರುದ್ಧ ನಿಲ್ಲುವ ಯಾವುದೇ ಅಧ್ಯಕ್ಷರು ಇಲ್ಲ. ಇವರು ವ್ಯಾಪಾರ ಅಸಮತೋಲನವನ್ನು ತಡೆಯಲು ಚೀನಿಯರ ಮೇಲೆ ಹೆಚ್ಚಿನ ಸುಂಕ ವಿಧಿಸಿದ ಮೊದಲ ಅಧ್ಯಕ್ಷರು” ಒಬ್ರಿಯೆನ್ ಹೇಳಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರ ಕಳೆದ ವಾರದ ಕಾಮೆಂಟ್‌ಗಳನ್ನು ಉಲ್ಲೇಖಿಸಿ ಒಬ್ರಿಯೆನ್, “ಟಿಕ್‌ಟಾಕ್, ವೀಚಾಟ್ ಮತ್ತು ಅಮೆರಿಕನ್ನರ ವೈಯಕ್ತಿಕ ಮತ್ತು ಖಾಸಗಿ ಡೇಟಾವನ್ನು ಪಡೆಯಲು ಚೀನಾ ಸರ್ಕಾರ ಬಳಸುತ್ತಿರುವ ಕೆಲವು ಇತರ ಅಪ್ಲಿಕೇಶನ್‌ಗಳನ್ನು ಅಮೆರಿಕ ಅಧ್ಯಕ್ಷರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ : ತುರ್ತುಪರಿಸ್ಥಿತಿಯ ವಿರುದ್ಧ ವಾಷಿಂಗ್ಟನ್‍ನಲ್ಲಿ ಪ್ರತಿಭಟಿಸಿದ್ದೆ: ಎಸ್.ಆರ್ ಹಿರೇಮಠ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...