Homeಮುಖಪುಟ‘ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ, ಅವು ಪ್ರತಿದಿನ ಜನರನ್ನು ಕಚ್ಚುತ್ತಿವೆ’: ಸಂಸದೆ ರೇಣುಕಾ ಚೌಧರಿ

‘ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ, ಅವು ಪ್ರತಿದಿನ ಜನರನ್ನು ಕಚ್ಚುತ್ತಿವೆ’: ಸಂಸದೆ ರೇಣುಕಾ ಚೌಧರಿ

- Advertisement -
- Advertisement -

ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿನ ಆವರಣಕ್ಕೆ ನಾಯಿಯೊಂದನ್ನು ಕರೆತಂದಿದ್ದು, ಕೆಲವು ಸಂಸದರು ಬೀದಿನಾಯಿಯನ್ನು ಕರೆತಂದಿದ್ದಾರೆ ಎಂದು ಆಕ್ಷೇಪಿಸಿದ್ದಾರೆ, ಮಾಧ್ಯಮಗಳ ಎದಿರು ಈ ಆಕ್ಷೇಪಣೆಗಳನ್ನು ತಳ್ಳಿಹಾಕಿರುವ ರೇಣುಕಾ ಚೌಧರಿ ‘ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ, ಅವು ಪ್ರತಿದಿನ ಜನರನ್ನು ಕಚ್ಚುತ್ತಿವೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ರಸ್ತೆಯಲ್ಲಿ ಸ್ಕೂಟರ್-ಕಾರು ಡಿಕ್ಕಿ ಹೊಡೆದಿದ್ದರಿಂದ ಗಾಯಗೊಂಡಿದ್ದ ನಾಯಿಮರಿಯನ್ನು ಗಮನಿಸಿದ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ, ಅದನ್ನು ತಮ್ಮ ಕಾರಿನಲ್ಲಿ ಸಂಸತ್ತಿಗೆ ಕರೆ ತಂದಿದ್ದಾರೆ. ಸ್ವಲ್ಪ ಸಮಯದ ಆ ನಾಯಿಮರಿ ಕಾಂಗ್ರೆಸ್ ಸಂಸದೆ ಕಾರಿನಿಂದ ಇಳಿದು ಹೊರಟುಹೋಗಿದೆ. ಈ ವಿಚಾರವನ್ನು ಹಲವು ಸಂಸದರು ಆಕ್ಷೇಪಿಸಿದ್ದಾರೆ. ಇದರಿಂದ ಕೋಪಗೊಂಡ ರೇಣುಕಾ ಚೌಧರಿ “ಏನಾದರೂ ಕಾನೂನು ಇದೆಯೇ? ನಾನು ದಾರಿಯಲ್ಲಿ ಹೋಗುತ್ತಿದ್ದೆ. ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ಈ ಪುಟ್ಟ ನಾಯಿಮರಿ ರಸ್ತೆಯಲ್ಲಿ ಅಲೆದಾಡುತ್ತಿತ್ತು. ಅದು ಮತ್ತೊಂದು ವಾಹನದ ಚಕ್ರಕ್ಕೆ ಸಿಲುಕಬಹುದು ಎಂದು ನಾನು ಅದನ್ನು ಎತ್ತಿಕೊಂಡು, ಕಾರಿನಲ್ಲಿ ಇರಿಸಿ, ಸಂಸತ್ತಿಗೆ ಕರೆತಂದೆ. ಕಾರು ಹೊರಟುಹೋಯಿತು ಆದರೆ ನಾಯಿಯೂ ಹಾಗೆಯೇ ಇತ್ತು” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. 

ಈ ವೇಳೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(ಎನ್‌ಡಿಎ) ಯಾವುದೇ ಸಂಸದರನ್ನು ಹೆಸರಿಸದೆ, ಆಡಳಿತ ಪಕ್ಷವನ್ನು ಟೀಕಿಸಿದ ಚೌಧರಿ, “ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ” ಮತ್ತು ಅದರ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ ಎಂದಿದ್ದಾರೆ.

“ಕಚ್ಚುವ ನಿಜವಾದ ನಾಯಿಗಳು ಸಂಸತ್ತಿನಲ್ಲಿ ಕುಳಿತಿವೆ. ಅವು ಸರ್ಕಾರವನ್ನು ನಡೆಸುತ್ತವೆ. ನಾವು ಮೂಕ ಪ್ರಾಣಿಯನ್ನು ನೋಡಿಕೊಳ್ಳುತ್ತೇವೆ ಮತ್ತು ಇದು ದೊಡ್ಡ ವಿಷಯ ಮತ್ತು ಚರ್ಚೆಯ ವಿಷಯವಾಗಿದೆ. ಸರ್ಕಾರಕ್ಕೆ ಬೇರೆ ಕೆಲಸವಿಲ್ಲವೇ? ನಾನು ನಾಯಿಯನ್ನು ಮನೆಗೆ ಕಳುಹಿಸಿ ಮನೆಯಲ್ಲಿಯೇ ಇಟ್ಟುಕೊಳ್ಳಲು ಹೇಳಿದೆ… ಸಂಸತ್ತಿನಲ್ಲಿ ಕುಳಿತು ಪ್ರತಿದಿನ ನಮ್ಮನ್ನು ಕಚ್ಚುವವರ ಬಗ್ಗೆ ನಾವು ಮಾತನಾಡುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ವಿಶೇಷವಾಗಿ ಲೋಕಸಭೆಯಲ್ಲಿ, ದೇಶಾದ್ಯಂತ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಪದೇ ಪದೇ ಸರ್ಕಾರದ ಘೋಷಣೆಗಳನ್ನು ಕೂಗಿದರು ಮತ್ತು ಪ್ರತಿಭಟನೆ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...