Homeಕರೋನಾ ತಲ್ಲಣಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್...

ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

- Advertisement -
- Advertisement -

“ಮಹಾರಾಷ್ಟ್ರದ ಮುಖ್ಯಮಂತ್ರಿ ಆಕ್ಸಿಜನ್ ಪೂರೈಸುವಂತೆ ಪ್ರಧಾನಿಗೆ ಕೇಳಿಕೊಂಡರು. ದೆಹಲಿ ಮುಖ್ಯಮಂತ್ರಿ ಪ್ರಧಾನಿಯನ್ನು ಕೈಮುಗಿದು ಕೇಳಿಕೊಂಡರು. ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗರೂ ಕೇಳಿಕೊಂಡರು. ಅದರೆ ಉತ್ತರ ಪ್ರದೇಶ ಸಂತ ಕಾವಿಧಾರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಎಂಟರಿಂದ ಹತ್ತು ಆಕ್ಸಿಜನ್ ಘಟಕಗಳನ್ನೇ ಸ್ಥಾಪಿಸಿದರು” ಎಂದು ಪೋಸ್ಟ್ ಕಾರ್ಡ್ ಮಹೇಂದ್ರ ಹೆಗಡೆ ಪೋಸ್ಟರ್ ಮಾಡಿದ್ದಾರೆ. ಅನಕ್ಷರಸ್ಥ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಅದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ಆದರೆ ವಾಸ್ತವ ಬೇರೆಯೇ ಇದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಕ್ಸಿಜನ್ ಕೊಡಿ ಎಂದು ಕೇಂದ್ರವನ್ನು ಕೇಳದೇ ಇದ್ದರೆ ಅವರಂತಹ ಬೇಜವಾಬ್ದಾರಿ, ಅಮಾನವೀಯ, ಕ್ರೂರಿ ಮುಖ್ಯಮಂತ್ರಿ ಇನ್ನೊಬ್ಬರು ಇರಲು ಸಾಧ್ಯವಿಲ್ಲ. ಯಾಕೆಂದರೆ ದೇಶದ ಉಳಿದ ಭಾಗಗಳಿಗಿಂತ ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿ ಚಿಂತಾಜನಕವಾಗಿದೆ. ಎರಡು ಆಸ್ಪತ್ರೆಗಳಂತೂ ಉತ್ತರ ಪ್ರದೇಶದ ಸಿಎಂ ಕಾರ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ನೋಟಿಸ್ ಬೋರ್ಡಿನಲ್ಲಿ ನೋಟಿಸ್ ಅಂಟಿಸಿದೆ ಎಂದರೆ ವೈದ್ಯರ ಸಮೂಹ ಯಾವ ಪರಿ ಯೋಗಿ ಆದಿತ್ಯನಾಥ್ ಕಾರ್ಯನಿರ್ವಹಣೆಯ ಬಗ್ಗೆ ಅಸಮಾದಾನ ಹೊಂದಿದೆ ಎಂಬುದನ್ನು ಊಹಿಸಬಹುದು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಲಕ್ನೋದ ಮಯೋ ಆಸ್ಪತ್ರೆ ಮತ್ತು ಮೇಕ್ ವೆಲ್ ಆಸ್ಪತ್ರೆ ಒಂದೋ ಅಕ್ಸಿಜನ್ ಸಿಲಿಂಡರ್ ನೀಡಿ, ಇಲ್ಲಾಂದ್ರೆ ಕೊರೊನಾ ರೋಗಿಗಳನ್ನು ನಮ್ಮ ಆಸ್ಪತ್ರೆಯಿಂದ ಸ್ಥಳಾಂತರಿಸಿ ಎಂದು ನೋಟಿಸ್ ನೀಡಿದೆ.

ಮಾಯೊ ವೈದ್ಯಕೀಯ ಕೇಂದ್ರ ಮತ್ತು ಮೇಕ್‌ವೆಲ್ ಆಸ್ಪತ್ರೆಯಲ್ಲಿನ 160 ಕೊರೊದನಾ ರೋಗಿಗಳು ಆಮ್ಲಜನಕದ ಬೆಂಬಲದಿಂದ ಬದುಕಿದ್ದಾರೆ. ಆದರೆ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ರೋಗಿಗಳನ್ನು ಕರೆದೊಯ್ಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ರೋಗಿಗಳ ಮನೆಯವರಿಗೆ ಸೂಚಿಸಿದೆ.

ಆಸ್ಪತ್ರೆಯ ಗೋಡೆಯಲ್ಲಿ ಅಂಟಿಸಲಾಗಿರುವ ಅಧಿಕೃತ ನೋಟಿಸಿನಲ್ಲಿ “ಉತ್ತರ ಪ್ರದೇಶ ಸಿಎಂ ಮತ್ತು ಕೇಂದ್ರ ಸರ್ಕಾರಕ್ಕೆ ಪದೇ ಪದೇ ವಿನಂತಿಸಿದ ನಂತರವೂ ನಮಗೆ ಸಾಕಷ್ಟು ಆಮ್ಲಜನಕ ಪೂರೈಕೆ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ದಯವಿಟ್ಟು ರೋಗಿಗಳನ್ನು ಇಲ್ಲಿಂದ ವಾಪಸ್ ಕರೆದೊಯ್ಯಿರಿ ಎಂದು ನಾವು ಆಮ್ಲಜನಕ ಬೆಂಬಲದಲ್ಲಿರುವ ರೋಗಿಗಳ ಕುಟುಂಬ ಸದಸ್ಯರನ್ನು ವಿನಂತಿಸುತ್ತಿದ್ದೇವೆ. ಅನಾನುಕೂಲತೆಗಾಗಿ ನಾವು ತುಂಬಾ ವಿಷಾದಿಸುತ್ತೇವೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಲಖನೌ ಮುಖ್ಯ ವೈದ್ಯಕೀಯ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್ ಕಚೇರಿಗೆ ಬರೆದ ಪತ್ರದಲ್ಲಿ, “ಲಕ್ನೋದ ಗೋಯೋ ನಗರದ, ಮೇಯೊ ಕೇಂದ್ರವು ಆಮ್ಲಜನಕದ ಪೂರೈಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಇದು ಕೊರೊನಾ ರೋಗಿಯ ಚಿಕಿತ್ಸೆಗೆ ತೀವ್ರವಾಗಿ ಅಡ್ಡಿಪಡಿಸುತ್ತಿದೆ ಎಂದು ನಿಮ್ಮ ಗಮನಕ್ಕೆ ತರಲಾಗಿದೆ. ನಮ್ಮ ಪ್ರಯತ್ನಗಳ ಹೊರತಾಗಿಯೂ, ಲಕ್ನೋದಲ್ಲಿ ಎಲ್ಲಿಯೂ ಆಮ್ಲಜನಕ ಲಭ್ಯವಿಲ್ಲದ ಕಾರಣ ಅಸಹಾಯಕರಾಗಿದ್ದೇವೆ. ಸರ್ಕಾರಿ ಆರೋಗ್ಯ ಕೇಂದ್ರದ ನಮ್ಮ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳನ್ನು ತುರ್ತು ಸ್ಥಳಾಂತರಿಸಲು / ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ CMO ಗೆ ವಿನಂತಿಸಿದೆ” ಎಂದು ಬರೆಯಲಾಗಿದೆ. ಅದರ ಅರ್ಥ ಲಕ್ನೋದ ಯಾವ ಸರಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಇಲ್ಲದಾಗಿದೆ.

“ಕಳೆದ ಒಂದು ವಾರದಿಂದ ನಾವು ಆಮ್ಲಜನಕದ ಪೂರೈಕೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇಂದು, ನಮ್ಮ ವಾಹನಗಳು ಏಳು ಗಂಟೆಗಳ ಕಾಲ ಸರಬರಾಜುದಾರರ ಬಳಿ ನಿಂತಿದ್ದಾವೆ. ಆದರೂ ಒಂದೇ ಒಂದು ಸಿಲಿಂಡರ್ ನಮಗೆ ಸಿಕ್ಕಿಲ್ಲ. ಕೊನೆಗೆ ದಾರಿಯಿಲ್ಲದೆ, ನಾವು ಈ ನೋಟಿಸ್ ಅನ್ನು ಅಂಟಿಸಬೇಕಾಯಿತು” ಎಂದು ಗೋಮತಿ ನಗರದ ಮೇಕ್‌ವೆಲ್ ಆಸ್ಪತ್ರೆಯ ಮಾಲೀಕ ವಿನಯ್ ಪ್ರತಾಪ್ ಸಿಂಗ್ ಹೇಳುತ್ತಾರೆ.

ಲಕ್ನೋದ ಎಲ್ಲಾ ಆಸ್ಪತ್ರೆಯ ವಾಹನಗಳನ್ನು ವಿವಿಧ ಆಮ್ಲಜನಕ ಪೂರೈಕೆದಾರರು ಮತ್ತು ಏಜೆನ್ಸಿಗಳ ಎದುರು ನಿಲ್ಲಿಸಲಾಗಿದೆ. ಈ ಮಧ್ಯೆ ವಜೀರ್‌ಗಂಜ್‌ನ ಆಲ್ಮೈಟಿ ಆಸ್ಪತ್ರೆಗೆ ದಾಖಲಾದ 50 ವರ್ಷದ ಮಹಿಳೆ ಆಮ್ಲಜನಕದ ಕೊರತೆಯಿಂದಾಗಿ ಬುಧವಾರ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

“ಕಳೆದ ಕೆಲವು ದಿನಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕನಿಷ್ಠ 10-15 ಜನರು ಸಾವನ್ನಪ್ಪಿದ್ದಾರೆ. ಕಳೆದ 10 ದಿನಗಳಿಂದ, ನನ್ನ ಚಿಕ್ಕಮ್ಮ ವೆಂಟಿಲೇಟರ್ ಬೆಂಬಲದಲ್ಲಿದ್ದರು. ನಾನು ವೈದ್ಯನಾಗಿರುವುದರಿಂದ ನಾನು ಸ್ವಂತವಾಗಿ ಆಮ್ಲಜನಕವನ್ನು ವ್ಯವಸ್ಥೆ ಮಾಡುತ್ತಿದ್ದೆ. ಆದರೆ ಇಂದು ಅದೂ ಸಾಧ್ಯವಾಗದೇ ನನ್ನ ಚಿಕ್ಕಮ್ಮ ಬಲಿಯಾದರು. ನನ್ನ ಚಿಕ್ಕಮ್ಮನನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕಳೆದ ರಾತ್ರಿ ನಮಗೆ ತಿಳಿಸಲಾಯಿತು” ಎಂದು ರೋಗಿಯ ಸಂಬಂಧಿಕರೇ ಆಗಿರುವ ವೈದ್ಯರೇ ಅಳುತ್ತಾರೆ.

ಉತ್ತರ ಪ್ರದೇಶದ ಎಲ್ಲಾ ಆಕ್ಸಿಜನ್ ಪೂರೈಕೆದಾರ ಏಜೆನ್ಸಿಗಳ ಎದುರು ಆಕ್ಸಿಜನ್ ಗಾಗಿ ವಾಹನಗಳು ಸಾಲುಗಟ್ಟಿ ನಿಂತಿದೆ. ಆಕ್ಸಿಜನ್ ಇಲ್ಲದೇ ಇರುವುದರಿಂದ ಐಸಿಯುನಲ್ಲಿರುವ ರೋಗಿಗಳನ್ನು ಹೊರ ಹಾಕುವ ನೋಟಿಸನ್ನು ಬಹಿರಂಗವಾಗಿ ಪ್ರದರ್ಶನ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಕೊರತೆ ಇದ್ದು ಎಲ್ಲಾ ರೋಗಿಗಳ ಸ್ಥಳಾಂತರಕ್ಕೆ ಸರ್ಕಾರಿ ಮುಖ್ಯ ವೈದ್ಯಾಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಮುಖ್ಯವೈದ್ಯಾಧಿಕಾರಿ ಪತ್ರ ಮತ್ತು ಖಾಸಗಿ ಆಸ್ಪತ್ರೆಯ ನೋಟಿಸ್ ನೋಡಿದ ಯಾವ ಮನುಷ್ಯನೂ ಮುಖ್ಯಮಂತ್ರಿ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರ. ಆದರೆ ಸಂತ, ಕಾವಿಧಾರಿ ಯೋಗಿ ಆದಿತ್ಯನಾಥ್ ಮಾತ್ರ ಮಹೇಶ್ ವಿಕ್ರಂ ಹೆಗಡೆ ಹೇಳಿದಂತೆ ಕೇಂದ್ರ ಸರ್ಕಾರದ ಬಳಿಯೂ ಆಕ್ಸಿಜನ್ ಕೇಳದೇ ತಾನು ಮನುಷ್ಯನಲ್ಲ ಎಂಬುದನ್ನು ಸಾಭೀತು ಮಾಡಿದ್ದಾರೆ.

(ಆಧಾರ : ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಯುಪಿ ಎಡಿಶನ್)

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...