Homeಕರೋನಾ ತಲ್ಲಣಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್...

ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

- Advertisement -
- Advertisement -

“ಮಹಾರಾಷ್ಟ್ರದ ಮುಖ್ಯಮಂತ್ರಿ ಆಕ್ಸಿಜನ್ ಪೂರೈಸುವಂತೆ ಪ್ರಧಾನಿಗೆ ಕೇಳಿಕೊಂಡರು. ದೆಹಲಿ ಮುಖ್ಯಮಂತ್ರಿ ಪ್ರಧಾನಿಯನ್ನು ಕೈಮುಗಿದು ಕೇಳಿಕೊಂಡರು. ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗರೂ ಕೇಳಿಕೊಂಡರು. ಅದರೆ ಉತ್ತರ ಪ್ರದೇಶ ಸಂತ ಕಾವಿಧಾರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಎಂಟರಿಂದ ಹತ್ತು ಆಕ್ಸಿಜನ್ ಘಟಕಗಳನ್ನೇ ಸ್ಥಾಪಿಸಿದರು” ಎಂದು ಪೋಸ್ಟ್ ಕಾರ್ಡ್ ಮಹೇಂದ್ರ ಹೆಗಡೆ ಪೋಸ್ಟರ್ ಮಾಡಿದ್ದಾರೆ. ಅನಕ್ಷರಸ್ಥ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಅದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ಆದರೆ ವಾಸ್ತವ ಬೇರೆಯೇ ಇದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಕ್ಸಿಜನ್ ಕೊಡಿ ಎಂದು ಕೇಂದ್ರವನ್ನು ಕೇಳದೇ ಇದ್ದರೆ ಅವರಂತಹ ಬೇಜವಾಬ್ದಾರಿ, ಅಮಾನವೀಯ, ಕ್ರೂರಿ ಮುಖ್ಯಮಂತ್ರಿ ಇನ್ನೊಬ್ಬರು ಇರಲು ಸಾಧ್ಯವಿಲ್ಲ. ಯಾಕೆಂದರೆ ದೇಶದ ಉಳಿದ ಭಾಗಗಳಿಗಿಂತ ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿ ಚಿಂತಾಜನಕವಾಗಿದೆ. ಎರಡು ಆಸ್ಪತ್ರೆಗಳಂತೂ ಉತ್ತರ ಪ್ರದೇಶದ ಸಿಎಂ ಕಾರ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ನೋಟಿಸ್ ಬೋರ್ಡಿನಲ್ಲಿ ನೋಟಿಸ್ ಅಂಟಿಸಿದೆ ಎಂದರೆ ವೈದ್ಯರ ಸಮೂಹ ಯಾವ ಪರಿ ಯೋಗಿ ಆದಿತ್ಯನಾಥ್ ಕಾರ್ಯನಿರ್ವಹಣೆಯ ಬಗ್ಗೆ ಅಸಮಾದಾನ ಹೊಂದಿದೆ ಎಂಬುದನ್ನು ಊಹಿಸಬಹುದು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಲಕ್ನೋದ ಮಯೋ ಆಸ್ಪತ್ರೆ ಮತ್ತು ಮೇಕ್ ವೆಲ್ ಆಸ್ಪತ್ರೆ ಒಂದೋ ಅಕ್ಸಿಜನ್ ಸಿಲಿಂಡರ್ ನೀಡಿ, ಇಲ್ಲಾಂದ್ರೆ ಕೊರೊನಾ ರೋಗಿಗಳನ್ನು ನಮ್ಮ ಆಸ್ಪತ್ರೆಯಿಂದ ಸ್ಥಳಾಂತರಿಸಿ ಎಂದು ನೋಟಿಸ್ ನೀಡಿದೆ.

ಮಾಯೊ ವೈದ್ಯಕೀಯ ಕೇಂದ್ರ ಮತ್ತು ಮೇಕ್‌ವೆಲ್ ಆಸ್ಪತ್ರೆಯಲ್ಲಿನ 160 ಕೊರೊದನಾ ರೋಗಿಗಳು ಆಮ್ಲಜನಕದ ಬೆಂಬಲದಿಂದ ಬದುಕಿದ್ದಾರೆ. ಆದರೆ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ರೋಗಿಗಳನ್ನು ಕರೆದೊಯ್ಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ರೋಗಿಗಳ ಮನೆಯವರಿಗೆ ಸೂಚಿಸಿದೆ.

ಆಸ್ಪತ್ರೆಯ ಗೋಡೆಯಲ್ಲಿ ಅಂಟಿಸಲಾಗಿರುವ ಅಧಿಕೃತ ನೋಟಿಸಿನಲ್ಲಿ “ಉತ್ತರ ಪ್ರದೇಶ ಸಿಎಂ ಮತ್ತು ಕೇಂದ್ರ ಸರ್ಕಾರಕ್ಕೆ ಪದೇ ಪದೇ ವಿನಂತಿಸಿದ ನಂತರವೂ ನಮಗೆ ಸಾಕಷ್ಟು ಆಮ್ಲಜನಕ ಪೂರೈಕೆ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ದಯವಿಟ್ಟು ರೋಗಿಗಳನ್ನು ಇಲ್ಲಿಂದ ವಾಪಸ್ ಕರೆದೊಯ್ಯಿರಿ ಎಂದು ನಾವು ಆಮ್ಲಜನಕ ಬೆಂಬಲದಲ್ಲಿರುವ ರೋಗಿಗಳ ಕುಟುಂಬ ಸದಸ್ಯರನ್ನು ವಿನಂತಿಸುತ್ತಿದ್ದೇವೆ. ಅನಾನುಕೂಲತೆಗಾಗಿ ನಾವು ತುಂಬಾ ವಿಷಾದಿಸುತ್ತೇವೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಲಖನೌ ಮುಖ್ಯ ವೈದ್ಯಕೀಯ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್ ಕಚೇರಿಗೆ ಬರೆದ ಪತ್ರದಲ್ಲಿ, “ಲಕ್ನೋದ ಗೋಯೋ ನಗರದ, ಮೇಯೊ ಕೇಂದ್ರವು ಆಮ್ಲಜನಕದ ಪೂರೈಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಇದು ಕೊರೊನಾ ರೋಗಿಯ ಚಿಕಿತ್ಸೆಗೆ ತೀವ್ರವಾಗಿ ಅಡ್ಡಿಪಡಿಸುತ್ತಿದೆ ಎಂದು ನಿಮ್ಮ ಗಮನಕ್ಕೆ ತರಲಾಗಿದೆ. ನಮ್ಮ ಪ್ರಯತ್ನಗಳ ಹೊರತಾಗಿಯೂ, ಲಕ್ನೋದಲ್ಲಿ ಎಲ್ಲಿಯೂ ಆಮ್ಲಜನಕ ಲಭ್ಯವಿಲ್ಲದ ಕಾರಣ ಅಸಹಾಯಕರಾಗಿದ್ದೇವೆ. ಸರ್ಕಾರಿ ಆರೋಗ್ಯ ಕೇಂದ್ರದ ನಮ್ಮ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳನ್ನು ತುರ್ತು ಸ್ಥಳಾಂತರಿಸಲು / ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ CMO ಗೆ ವಿನಂತಿಸಿದೆ” ಎಂದು ಬರೆಯಲಾಗಿದೆ. ಅದರ ಅರ್ಥ ಲಕ್ನೋದ ಯಾವ ಸರಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಇಲ್ಲದಾಗಿದೆ.

“ಕಳೆದ ಒಂದು ವಾರದಿಂದ ನಾವು ಆಮ್ಲಜನಕದ ಪೂರೈಕೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇಂದು, ನಮ್ಮ ವಾಹನಗಳು ಏಳು ಗಂಟೆಗಳ ಕಾಲ ಸರಬರಾಜುದಾರರ ಬಳಿ ನಿಂತಿದ್ದಾವೆ. ಆದರೂ ಒಂದೇ ಒಂದು ಸಿಲಿಂಡರ್ ನಮಗೆ ಸಿಕ್ಕಿಲ್ಲ. ಕೊನೆಗೆ ದಾರಿಯಿಲ್ಲದೆ, ನಾವು ಈ ನೋಟಿಸ್ ಅನ್ನು ಅಂಟಿಸಬೇಕಾಯಿತು” ಎಂದು ಗೋಮತಿ ನಗರದ ಮೇಕ್‌ವೆಲ್ ಆಸ್ಪತ್ರೆಯ ಮಾಲೀಕ ವಿನಯ್ ಪ್ರತಾಪ್ ಸಿಂಗ್ ಹೇಳುತ್ತಾರೆ.

ಲಕ್ನೋದ ಎಲ್ಲಾ ಆಸ್ಪತ್ರೆಯ ವಾಹನಗಳನ್ನು ವಿವಿಧ ಆಮ್ಲಜನಕ ಪೂರೈಕೆದಾರರು ಮತ್ತು ಏಜೆನ್ಸಿಗಳ ಎದುರು ನಿಲ್ಲಿಸಲಾಗಿದೆ. ಈ ಮಧ್ಯೆ ವಜೀರ್‌ಗಂಜ್‌ನ ಆಲ್ಮೈಟಿ ಆಸ್ಪತ್ರೆಗೆ ದಾಖಲಾದ 50 ವರ್ಷದ ಮಹಿಳೆ ಆಮ್ಲಜನಕದ ಕೊರತೆಯಿಂದಾಗಿ ಬುಧವಾರ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

“ಕಳೆದ ಕೆಲವು ದಿನಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕನಿಷ್ಠ 10-15 ಜನರು ಸಾವನ್ನಪ್ಪಿದ್ದಾರೆ. ಕಳೆದ 10 ದಿನಗಳಿಂದ, ನನ್ನ ಚಿಕ್ಕಮ್ಮ ವೆಂಟಿಲೇಟರ್ ಬೆಂಬಲದಲ್ಲಿದ್ದರು. ನಾನು ವೈದ್ಯನಾಗಿರುವುದರಿಂದ ನಾನು ಸ್ವಂತವಾಗಿ ಆಮ್ಲಜನಕವನ್ನು ವ್ಯವಸ್ಥೆ ಮಾಡುತ್ತಿದ್ದೆ. ಆದರೆ ಇಂದು ಅದೂ ಸಾಧ್ಯವಾಗದೇ ನನ್ನ ಚಿಕ್ಕಮ್ಮ ಬಲಿಯಾದರು. ನನ್ನ ಚಿಕ್ಕಮ್ಮನನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕಳೆದ ರಾತ್ರಿ ನಮಗೆ ತಿಳಿಸಲಾಯಿತು” ಎಂದು ರೋಗಿಯ ಸಂಬಂಧಿಕರೇ ಆಗಿರುವ ವೈದ್ಯರೇ ಅಳುತ್ತಾರೆ.

ಉತ್ತರ ಪ್ರದೇಶದ ಎಲ್ಲಾ ಆಕ್ಸಿಜನ್ ಪೂರೈಕೆದಾರ ಏಜೆನ್ಸಿಗಳ ಎದುರು ಆಕ್ಸಿಜನ್ ಗಾಗಿ ವಾಹನಗಳು ಸಾಲುಗಟ್ಟಿ ನಿಂತಿದೆ. ಆಕ್ಸಿಜನ್ ಇಲ್ಲದೇ ಇರುವುದರಿಂದ ಐಸಿಯುನಲ್ಲಿರುವ ರೋಗಿಗಳನ್ನು ಹೊರ ಹಾಕುವ ನೋಟಿಸನ್ನು ಬಹಿರಂಗವಾಗಿ ಪ್ರದರ್ಶನ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಕೊರತೆ ಇದ್ದು ಎಲ್ಲಾ ರೋಗಿಗಳ ಸ್ಥಳಾಂತರಕ್ಕೆ ಸರ್ಕಾರಿ ಮುಖ್ಯ ವೈದ್ಯಾಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಮುಖ್ಯವೈದ್ಯಾಧಿಕಾರಿ ಪತ್ರ ಮತ್ತು ಖಾಸಗಿ ಆಸ್ಪತ್ರೆಯ ನೋಟಿಸ್ ನೋಡಿದ ಯಾವ ಮನುಷ್ಯನೂ ಮುಖ್ಯಮಂತ್ರಿ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರ. ಆದರೆ ಸಂತ, ಕಾವಿಧಾರಿ ಯೋಗಿ ಆದಿತ್ಯನಾಥ್ ಮಾತ್ರ ಮಹೇಶ್ ವಿಕ್ರಂ ಹೆಗಡೆ ಹೇಳಿದಂತೆ ಕೇಂದ್ರ ಸರ್ಕಾರದ ಬಳಿಯೂ ಆಕ್ಸಿಜನ್ ಕೇಳದೇ ತಾನು ಮನುಷ್ಯನಲ್ಲ ಎಂಬುದನ್ನು ಸಾಭೀತು ಮಾಡಿದ್ದಾರೆ.

(ಆಧಾರ : ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಯುಪಿ ಎಡಿಶನ್)

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...