Homeಕರೋನಾ ತಲ್ಲಣಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್...

ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

- Advertisement -
- Advertisement -

“ಮಹಾರಾಷ್ಟ್ರದ ಮುಖ್ಯಮಂತ್ರಿ ಆಕ್ಸಿಜನ್ ಪೂರೈಸುವಂತೆ ಪ್ರಧಾನಿಗೆ ಕೇಳಿಕೊಂಡರು. ದೆಹಲಿ ಮುಖ್ಯಮಂತ್ರಿ ಪ್ರಧಾನಿಯನ್ನು ಕೈಮುಗಿದು ಕೇಳಿಕೊಂಡರು. ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗರೂ ಕೇಳಿಕೊಂಡರು. ಅದರೆ ಉತ್ತರ ಪ್ರದೇಶ ಸಂತ ಕಾವಿಧಾರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಎಂಟರಿಂದ ಹತ್ತು ಆಕ್ಸಿಜನ್ ಘಟಕಗಳನ್ನೇ ಸ್ಥಾಪಿಸಿದರು” ಎಂದು ಪೋಸ್ಟ್ ಕಾರ್ಡ್ ಮಹೇಂದ್ರ ಹೆಗಡೆ ಪೋಸ್ಟರ್ ಮಾಡಿದ್ದಾರೆ. ಅನಕ್ಷರಸ್ಥ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಅದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ಆದರೆ ವಾಸ್ತವ ಬೇರೆಯೇ ಇದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಕ್ಸಿಜನ್ ಕೊಡಿ ಎಂದು ಕೇಂದ್ರವನ್ನು ಕೇಳದೇ ಇದ್ದರೆ ಅವರಂತಹ ಬೇಜವಾಬ್ದಾರಿ, ಅಮಾನವೀಯ, ಕ್ರೂರಿ ಮುಖ್ಯಮಂತ್ರಿ ಇನ್ನೊಬ್ಬರು ಇರಲು ಸಾಧ್ಯವಿಲ್ಲ. ಯಾಕೆಂದರೆ ದೇಶದ ಉಳಿದ ಭಾಗಗಳಿಗಿಂತ ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿ ಚಿಂತಾಜನಕವಾಗಿದೆ. ಎರಡು ಆಸ್ಪತ್ರೆಗಳಂತೂ ಉತ್ತರ ಪ್ರದೇಶದ ಸಿಎಂ ಕಾರ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ನೋಟಿಸ್ ಬೋರ್ಡಿನಲ್ಲಿ ನೋಟಿಸ್ ಅಂಟಿಸಿದೆ ಎಂದರೆ ವೈದ್ಯರ ಸಮೂಹ ಯಾವ ಪರಿ ಯೋಗಿ ಆದಿತ್ಯನಾಥ್ ಕಾರ್ಯನಿರ್ವಹಣೆಯ ಬಗ್ಗೆ ಅಸಮಾದಾನ ಹೊಂದಿದೆ ಎಂಬುದನ್ನು ಊಹಿಸಬಹುದು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಲಕ್ನೋದ ಮಯೋ ಆಸ್ಪತ್ರೆ ಮತ್ತು ಮೇಕ್ ವೆಲ್ ಆಸ್ಪತ್ರೆ ಒಂದೋ ಅಕ್ಸಿಜನ್ ಸಿಲಿಂಡರ್ ನೀಡಿ, ಇಲ್ಲಾಂದ್ರೆ ಕೊರೊನಾ ರೋಗಿಗಳನ್ನು ನಮ್ಮ ಆಸ್ಪತ್ರೆಯಿಂದ ಸ್ಥಳಾಂತರಿಸಿ ಎಂದು ನೋಟಿಸ್ ನೀಡಿದೆ.

ಮಾಯೊ ವೈದ್ಯಕೀಯ ಕೇಂದ್ರ ಮತ್ತು ಮೇಕ್‌ವೆಲ್ ಆಸ್ಪತ್ರೆಯಲ್ಲಿನ 160 ಕೊರೊದನಾ ರೋಗಿಗಳು ಆಮ್ಲಜನಕದ ಬೆಂಬಲದಿಂದ ಬದುಕಿದ್ದಾರೆ. ಆದರೆ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ರೋಗಿಗಳನ್ನು ಕರೆದೊಯ್ಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ರೋಗಿಗಳ ಮನೆಯವರಿಗೆ ಸೂಚಿಸಿದೆ.

ಆಸ್ಪತ್ರೆಯ ಗೋಡೆಯಲ್ಲಿ ಅಂಟಿಸಲಾಗಿರುವ ಅಧಿಕೃತ ನೋಟಿಸಿನಲ್ಲಿ “ಉತ್ತರ ಪ್ರದೇಶ ಸಿಎಂ ಮತ್ತು ಕೇಂದ್ರ ಸರ್ಕಾರಕ್ಕೆ ಪದೇ ಪದೇ ವಿನಂತಿಸಿದ ನಂತರವೂ ನಮಗೆ ಸಾಕಷ್ಟು ಆಮ್ಲಜನಕ ಪೂರೈಕೆ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ದಯವಿಟ್ಟು ರೋಗಿಗಳನ್ನು ಇಲ್ಲಿಂದ ವಾಪಸ್ ಕರೆದೊಯ್ಯಿರಿ ಎಂದು ನಾವು ಆಮ್ಲಜನಕ ಬೆಂಬಲದಲ್ಲಿರುವ ರೋಗಿಗಳ ಕುಟುಂಬ ಸದಸ್ಯರನ್ನು ವಿನಂತಿಸುತ್ತಿದ್ದೇವೆ. ಅನಾನುಕೂಲತೆಗಾಗಿ ನಾವು ತುಂಬಾ ವಿಷಾದಿಸುತ್ತೇವೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಲಖನೌ ಮುಖ್ಯ ವೈದ್ಯಕೀಯ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್ ಕಚೇರಿಗೆ ಬರೆದ ಪತ್ರದಲ್ಲಿ, “ಲಕ್ನೋದ ಗೋಯೋ ನಗರದ, ಮೇಯೊ ಕೇಂದ್ರವು ಆಮ್ಲಜನಕದ ಪೂರೈಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಇದು ಕೊರೊನಾ ರೋಗಿಯ ಚಿಕಿತ್ಸೆಗೆ ತೀವ್ರವಾಗಿ ಅಡ್ಡಿಪಡಿಸುತ್ತಿದೆ ಎಂದು ನಿಮ್ಮ ಗಮನಕ್ಕೆ ತರಲಾಗಿದೆ. ನಮ್ಮ ಪ್ರಯತ್ನಗಳ ಹೊರತಾಗಿಯೂ, ಲಕ್ನೋದಲ್ಲಿ ಎಲ್ಲಿಯೂ ಆಮ್ಲಜನಕ ಲಭ್ಯವಿಲ್ಲದ ಕಾರಣ ಅಸಹಾಯಕರಾಗಿದ್ದೇವೆ. ಸರ್ಕಾರಿ ಆರೋಗ್ಯ ಕೇಂದ್ರದ ನಮ್ಮ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳನ್ನು ತುರ್ತು ಸ್ಥಳಾಂತರಿಸಲು / ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ CMO ಗೆ ವಿನಂತಿಸಿದೆ” ಎಂದು ಬರೆಯಲಾಗಿದೆ. ಅದರ ಅರ್ಥ ಲಕ್ನೋದ ಯಾವ ಸರಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಇಲ್ಲದಾಗಿದೆ.

“ಕಳೆದ ಒಂದು ವಾರದಿಂದ ನಾವು ಆಮ್ಲಜನಕದ ಪೂರೈಕೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇಂದು, ನಮ್ಮ ವಾಹನಗಳು ಏಳು ಗಂಟೆಗಳ ಕಾಲ ಸರಬರಾಜುದಾರರ ಬಳಿ ನಿಂತಿದ್ದಾವೆ. ಆದರೂ ಒಂದೇ ಒಂದು ಸಿಲಿಂಡರ್ ನಮಗೆ ಸಿಕ್ಕಿಲ್ಲ. ಕೊನೆಗೆ ದಾರಿಯಿಲ್ಲದೆ, ನಾವು ಈ ನೋಟಿಸ್ ಅನ್ನು ಅಂಟಿಸಬೇಕಾಯಿತು” ಎಂದು ಗೋಮತಿ ನಗರದ ಮೇಕ್‌ವೆಲ್ ಆಸ್ಪತ್ರೆಯ ಮಾಲೀಕ ವಿನಯ್ ಪ್ರತಾಪ್ ಸಿಂಗ್ ಹೇಳುತ್ತಾರೆ.

ಲಕ್ನೋದ ಎಲ್ಲಾ ಆಸ್ಪತ್ರೆಯ ವಾಹನಗಳನ್ನು ವಿವಿಧ ಆಮ್ಲಜನಕ ಪೂರೈಕೆದಾರರು ಮತ್ತು ಏಜೆನ್ಸಿಗಳ ಎದುರು ನಿಲ್ಲಿಸಲಾಗಿದೆ. ಈ ಮಧ್ಯೆ ವಜೀರ್‌ಗಂಜ್‌ನ ಆಲ್ಮೈಟಿ ಆಸ್ಪತ್ರೆಗೆ ದಾಖಲಾದ 50 ವರ್ಷದ ಮಹಿಳೆ ಆಮ್ಲಜನಕದ ಕೊರತೆಯಿಂದಾಗಿ ಬುಧವಾರ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

“ಕಳೆದ ಕೆಲವು ದಿನಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕನಿಷ್ಠ 10-15 ಜನರು ಸಾವನ್ನಪ್ಪಿದ್ದಾರೆ. ಕಳೆದ 10 ದಿನಗಳಿಂದ, ನನ್ನ ಚಿಕ್ಕಮ್ಮ ವೆಂಟಿಲೇಟರ್ ಬೆಂಬಲದಲ್ಲಿದ್ದರು. ನಾನು ವೈದ್ಯನಾಗಿರುವುದರಿಂದ ನಾನು ಸ್ವಂತವಾಗಿ ಆಮ್ಲಜನಕವನ್ನು ವ್ಯವಸ್ಥೆ ಮಾಡುತ್ತಿದ್ದೆ. ಆದರೆ ಇಂದು ಅದೂ ಸಾಧ್ಯವಾಗದೇ ನನ್ನ ಚಿಕ್ಕಮ್ಮ ಬಲಿಯಾದರು. ನನ್ನ ಚಿಕ್ಕಮ್ಮನನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕಳೆದ ರಾತ್ರಿ ನಮಗೆ ತಿಳಿಸಲಾಯಿತು” ಎಂದು ರೋಗಿಯ ಸಂಬಂಧಿಕರೇ ಆಗಿರುವ ವೈದ್ಯರೇ ಅಳುತ್ತಾರೆ.

ಉತ್ತರ ಪ್ರದೇಶದ ಎಲ್ಲಾ ಆಕ್ಸಿಜನ್ ಪೂರೈಕೆದಾರ ಏಜೆನ್ಸಿಗಳ ಎದುರು ಆಕ್ಸಿಜನ್ ಗಾಗಿ ವಾಹನಗಳು ಸಾಲುಗಟ್ಟಿ ನಿಂತಿದೆ. ಆಕ್ಸಿಜನ್ ಇಲ್ಲದೇ ಇರುವುದರಿಂದ ಐಸಿಯುನಲ್ಲಿರುವ ರೋಗಿಗಳನ್ನು ಹೊರ ಹಾಕುವ ನೋಟಿಸನ್ನು ಬಹಿರಂಗವಾಗಿ ಪ್ರದರ್ಶನ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಕೊರತೆ ಇದ್ದು ಎಲ್ಲಾ ರೋಗಿಗಳ ಸ್ಥಳಾಂತರಕ್ಕೆ ಸರ್ಕಾರಿ ಮುಖ್ಯ ವೈದ್ಯಾಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಮುಖ್ಯವೈದ್ಯಾಧಿಕಾರಿ ಪತ್ರ ಮತ್ತು ಖಾಸಗಿ ಆಸ್ಪತ್ರೆಯ ನೋಟಿಸ್ ನೋಡಿದ ಯಾವ ಮನುಷ್ಯನೂ ಮುಖ್ಯಮಂತ್ರಿ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರ. ಆದರೆ ಸಂತ, ಕಾವಿಧಾರಿ ಯೋಗಿ ಆದಿತ್ಯನಾಥ್ ಮಾತ್ರ ಮಹೇಶ್ ವಿಕ್ರಂ ಹೆಗಡೆ ಹೇಳಿದಂತೆ ಕೇಂದ್ರ ಸರ್ಕಾರದ ಬಳಿಯೂ ಆಕ್ಸಿಜನ್ ಕೇಳದೇ ತಾನು ಮನುಷ್ಯನಲ್ಲ ಎಂಬುದನ್ನು ಸಾಭೀತು ಮಾಡಿದ್ದಾರೆ.

(ಆಧಾರ : ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಯುಪಿ ಎಡಿಶನ್)

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...