Homeಕರೋನಾ ತಲ್ಲಣಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್...

ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

- Advertisement -
- Advertisement -

“ಮಹಾರಾಷ್ಟ್ರದ ಮುಖ್ಯಮಂತ್ರಿ ಆಕ್ಸಿಜನ್ ಪೂರೈಸುವಂತೆ ಪ್ರಧಾನಿಗೆ ಕೇಳಿಕೊಂಡರು. ದೆಹಲಿ ಮುಖ್ಯಮಂತ್ರಿ ಪ್ರಧಾನಿಯನ್ನು ಕೈಮುಗಿದು ಕೇಳಿಕೊಂಡರು. ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗರೂ ಕೇಳಿಕೊಂಡರು. ಅದರೆ ಉತ್ತರ ಪ್ರದೇಶ ಸಂತ ಕಾವಿಧಾರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಎಂಟರಿಂದ ಹತ್ತು ಆಕ್ಸಿಜನ್ ಘಟಕಗಳನ್ನೇ ಸ್ಥಾಪಿಸಿದರು” ಎಂದು ಪೋಸ್ಟ್ ಕಾರ್ಡ್ ಮಹೇಂದ್ರ ಹೆಗಡೆ ಪೋಸ್ಟರ್ ಮಾಡಿದ್ದಾರೆ. ಅನಕ್ಷರಸ್ಥ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಅದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ಆದರೆ ವಾಸ್ತವ ಬೇರೆಯೇ ಇದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಕ್ಸಿಜನ್ ಕೊಡಿ ಎಂದು ಕೇಂದ್ರವನ್ನು ಕೇಳದೇ ಇದ್ದರೆ ಅವರಂತಹ ಬೇಜವಾಬ್ದಾರಿ, ಅಮಾನವೀಯ, ಕ್ರೂರಿ ಮುಖ್ಯಮಂತ್ರಿ ಇನ್ನೊಬ್ಬರು ಇರಲು ಸಾಧ್ಯವಿಲ್ಲ. ಯಾಕೆಂದರೆ ದೇಶದ ಉಳಿದ ಭಾಗಗಳಿಗಿಂತ ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿ ಚಿಂತಾಜನಕವಾಗಿದೆ. ಎರಡು ಆಸ್ಪತ್ರೆಗಳಂತೂ ಉತ್ತರ ಪ್ರದೇಶದ ಸಿಎಂ ಕಾರ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ನೋಟಿಸ್ ಬೋರ್ಡಿನಲ್ಲಿ ನೋಟಿಸ್ ಅಂಟಿಸಿದೆ ಎಂದರೆ ವೈದ್ಯರ ಸಮೂಹ ಯಾವ ಪರಿ ಯೋಗಿ ಆದಿತ್ಯನಾಥ್ ಕಾರ್ಯನಿರ್ವಹಣೆಯ ಬಗ್ಗೆ ಅಸಮಾದಾನ ಹೊಂದಿದೆ ಎಂಬುದನ್ನು ಊಹಿಸಬಹುದು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಲಕ್ನೋದ ಮಯೋ ಆಸ್ಪತ್ರೆ ಮತ್ತು ಮೇಕ್ ವೆಲ್ ಆಸ್ಪತ್ರೆ ಒಂದೋ ಅಕ್ಸಿಜನ್ ಸಿಲಿಂಡರ್ ನೀಡಿ, ಇಲ್ಲಾಂದ್ರೆ ಕೊರೊನಾ ರೋಗಿಗಳನ್ನು ನಮ್ಮ ಆಸ್ಪತ್ರೆಯಿಂದ ಸ್ಥಳಾಂತರಿಸಿ ಎಂದು ನೋಟಿಸ್ ನೀಡಿದೆ.

ಮಾಯೊ ವೈದ್ಯಕೀಯ ಕೇಂದ್ರ ಮತ್ತು ಮೇಕ್‌ವೆಲ್ ಆಸ್ಪತ್ರೆಯಲ್ಲಿನ 160 ಕೊರೊದನಾ ರೋಗಿಗಳು ಆಮ್ಲಜನಕದ ಬೆಂಬಲದಿಂದ ಬದುಕಿದ್ದಾರೆ. ಆದರೆ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ರೋಗಿಗಳನ್ನು ಕರೆದೊಯ್ಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ರೋಗಿಗಳ ಮನೆಯವರಿಗೆ ಸೂಚಿಸಿದೆ.

ಆಸ್ಪತ್ರೆಯ ಗೋಡೆಯಲ್ಲಿ ಅಂಟಿಸಲಾಗಿರುವ ಅಧಿಕೃತ ನೋಟಿಸಿನಲ್ಲಿ “ಉತ್ತರ ಪ್ರದೇಶ ಸಿಎಂ ಮತ್ತು ಕೇಂದ್ರ ಸರ್ಕಾರಕ್ಕೆ ಪದೇ ಪದೇ ವಿನಂತಿಸಿದ ನಂತರವೂ ನಮಗೆ ಸಾಕಷ್ಟು ಆಮ್ಲಜನಕ ಪೂರೈಕೆ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ದಯವಿಟ್ಟು ರೋಗಿಗಳನ್ನು ಇಲ್ಲಿಂದ ವಾಪಸ್ ಕರೆದೊಯ್ಯಿರಿ ಎಂದು ನಾವು ಆಮ್ಲಜನಕ ಬೆಂಬಲದಲ್ಲಿರುವ ರೋಗಿಗಳ ಕುಟುಂಬ ಸದಸ್ಯರನ್ನು ವಿನಂತಿಸುತ್ತಿದ್ದೇವೆ. ಅನಾನುಕೂಲತೆಗಾಗಿ ನಾವು ತುಂಬಾ ವಿಷಾದಿಸುತ್ತೇವೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಲಖನೌ ಮುಖ್ಯ ವೈದ್ಯಕೀಯ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್ ಕಚೇರಿಗೆ ಬರೆದ ಪತ್ರದಲ್ಲಿ, “ಲಕ್ನೋದ ಗೋಯೋ ನಗರದ, ಮೇಯೊ ಕೇಂದ್ರವು ಆಮ್ಲಜನಕದ ಪೂರೈಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಇದು ಕೊರೊನಾ ರೋಗಿಯ ಚಿಕಿತ್ಸೆಗೆ ತೀವ್ರವಾಗಿ ಅಡ್ಡಿಪಡಿಸುತ್ತಿದೆ ಎಂದು ನಿಮ್ಮ ಗಮನಕ್ಕೆ ತರಲಾಗಿದೆ. ನಮ್ಮ ಪ್ರಯತ್ನಗಳ ಹೊರತಾಗಿಯೂ, ಲಕ್ನೋದಲ್ಲಿ ಎಲ್ಲಿಯೂ ಆಮ್ಲಜನಕ ಲಭ್ಯವಿಲ್ಲದ ಕಾರಣ ಅಸಹಾಯಕರಾಗಿದ್ದೇವೆ. ಸರ್ಕಾರಿ ಆರೋಗ್ಯ ಕೇಂದ್ರದ ನಮ್ಮ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳನ್ನು ತುರ್ತು ಸ್ಥಳಾಂತರಿಸಲು / ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ CMO ಗೆ ವಿನಂತಿಸಿದೆ” ಎಂದು ಬರೆಯಲಾಗಿದೆ. ಅದರ ಅರ್ಥ ಲಕ್ನೋದ ಯಾವ ಸರಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಇಲ್ಲದಾಗಿದೆ.

“ಕಳೆದ ಒಂದು ವಾರದಿಂದ ನಾವು ಆಮ್ಲಜನಕದ ಪೂರೈಕೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇಂದು, ನಮ್ಮ ವಾಹನಗಳು ಏಳು ಗಂಟೆಗಳ ಕಾಲ ಸರಬರಾಜುದಾರರ ಬಳಿ ನಿಂತಿದ್ದಾವೆ. ಆದರೂ ಒಂದೇ ಒಂದು ಸಿಲಿಂಡರ್ ನಮಗೆ ಸಿಕ್ಕಿಲ್ಲ. ಕೊನೆಗೆ ದಾರಿಯಿಲ್ಲದೆ, ನಾವು ಈ ನೋಟಿಸ್ ಅನ್ನು ಅಂಟಿಸಬೇಕಾಯಿತು” ಎಂದು ಗೋಮತಿ ನಗರದ ಮೇಕ್‌ವೆಲ್ ಆಸ್ಪತ್ರೆಯ ಮಾಲೀಕ ವಿನಯ್ ಪ್ರತಾಪ್ ಸಿಂಗ್ ಹೇಳುತ್ತಾರೆ.

ಲಕ್ನೋದ ಎಲ್ಲಾ ಆಸ್ಪತ್ರೆಯ ವಾಹನಗಳನ್ನು ವಿವಿಧ ಆಮ್ಲಜನಕ ಪೂರೈಕೆದಾರರು ಮತ್ತು ಏಜೆನ್ಸಿಗಳ ಎದುರು ನಿಲ್ಲಿಸಲಾಗಿದೆ. ಈ ಮಧ್ಯೆ ವಜೀರ್‌ಗಂಜ್‌ನ ಆಲ್ಮೈಟಿ ಆಸ್ಪತ್ರೆಗೆ ದಾಖಲಾದ 50 ವರ್ಷದ ಮಹಿಳೆ ಆಮ್ಲಜನಕದ ಕೊರತೆಯಿಂದಾಗಿ ಬುಧವಾರ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

“ಕಳೆದ ಕೆಲವು ದಿನಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕನಿಷ್ಠ 10-15 ಜನರು ಸಾವನ್ನಪ್ಪಿದ್ದಾರೆ. ಕಳೆದ 10 ದಿನಗಳಿಂದ, ನನ್ನ ಚಿಕ್ಕಮ್ಮ ವೆಂಟಿಲೇಟರ್ ಬೆಂಬಲದಲ್ಲಿದ್ದರು. ನಾನು ವೈದ್ಯನಾಗಿರುವುದರಿಂದ ನಾನು ಸ್ವಂತವಾಗಿ ಆಮ್ಲಜನಕವನ್ನು ವ್ಯವಸ್ಥೆ ಮಾಡುತ್ತಿದ್ದೆ. ಆದರೆ ಇಂದು ಅದೂ ಸಾಧ್ಯವಾಗದೇ ನನ್ನ ಚಿಕ್ಕಮ್ಮ ಬಲಿಯಾದರು. ನನ್ನ ಚಿಕ್ಕಮ್ಮನನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕಳೆದ ರಾತ್ರಿ ನಮಗೆ ತಿಳಿಸಲಾಯಿತು” ಎಂದು ರೋಗಿಯ ಸಂಬಂಧಿಕರೇ ಆಗಿರುವ ವೈದ್ಯರೇ ಅಳುತ್ತಾರೆ.

ಉತ್ತರ ಪ್ರದೇಶದ ಎಲ್ಲಾ ಆಕ್ಸಿಜನ್ ಪೂರೈಕೆದಾರ ಏಜೆನ್ಸಿಗಳ ಎದುರು ಆಕ್ಸಿಜನ್ ಗಾಗಿ ವಾಹನಗಳು ಸಾಲುಗಟ್ಟಿ ನಿಂತಿದೆ. ಆಕ್ಸಿಜನ್ ಇಲ್ಲದೇ ಇರುವುದರಿಂದ ಐಸಿಯುನಲ್ಲಿರುವ ರೋಗಿಗಳನ್ನು ಹೊರ ಹಾಕುವ ನೋಟಿಸನ್ನು ಬಹಿರಂಗವಾಗಿ ಪ್ರದರ್ಶನ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಕೊರತೆ ಇದ್ದು ಎಲ್ಲಾ ರೋಗಿಗಳ ಸ್ಥಳಾಂತರಕ್ಕೆ ಸರ್ಕಾರಿ ಮುಖ್ಯ ವೈದ್ಯಾಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಮುಖ್ಯವೈದ್ಯಾಧಿಕಾರಿ ಪತ್ರ ಮತ್ತು ಖಾಸಗಿ ಆಸ್ಪತ್ರೆಯ ನೋಟಿಸ್ ನೋಡಿದ ಯಾವ ಮನುಷ್ಯನೂ ಮುಖ್ಯಮಂತ್ರಿ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರ. ಆದರೆ ಸಂತ, ಕಾವಿಧಾರಿ ಯೋಗಿ ಆದಿತ್ಯನಾಥ್ ಮಾತ್ರ ಮಹೇಶ್ ವಿಕ್ರಂ ಹೆಗಡೆ ಹೇಳಿದಂತೆ ಕೇಂದ್ರ ಸರ್ಕಾರದ ಬಳಿಯೂ ಆಕ್ಸಿಜನ್ ಕೇಳದೇ ತಾನು ಮನುಷ್ಯನಲ್ಲ ಎಂಬುದನ್ನು ಸಾಭೀತು ಮಾಡಿದ್ದಾರೆ.

(ಆಧಾರ : ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಯುಪಿ ಎಡಿಶನ್)

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...