Homeಮುಖಪುಟಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ...

- Advertisement -
- Advertisement -

ಇತ್ತೀಚೆಗೆ “ಪ್ರಾಕೃತಿಕ ಗ್ಯಾಸ್ ಬೆಲೆಯಲ್ಲಿ 40% ಹೆಚ್ಚಳ” ಎಂಬ ಸುದ್ದಿ ನೀವೆಲ್ಲರೂ ದೃಶ್ಯಮಾಧ್ಯಮದಲ್ಲಿ ಕೇಳಿರುತ್ತೀರಿ ಅಥವಾ ವೃತ್ತಪತ್ರಿಕೆಗಳಲ್ಲಿ ಓದಿರುತ್ತೀರಿ. ಗ್ಯಾಸ್ ಬೆಲೆ ಯೂನಿಟ್ಟಿಗೆ 6.10 ಡಾಲರ್ ನಿಂದ 8.57 ಡಾಲರ್ ಆಗಲಿದೆ ಅಂದರೆ ಸುಮಾರು 40% ಹೆಚ್ಚಳ ಆಗಲಿದೆ ಮತ್ತು ಅದರಿಂದ ಸಿ.ಎನ್.ಜಿ. ಮತ್ತು ಪಿ.ಎನ್.ಜಿ. ಗ್ರಾಹಕರಿಗೆ ಅದರ ಬಿಸಿ ತಟ್ಟಲಿದೆ ಎಂಬ ವಿವರ ಸುದ್ದಿಯಲ್ಲಿತ್ತು. ಇದರಲ್ಲಿ ಗಮನಿಸಬೇಕಾದ ವಿಷಯ ಅಥವಾ ಕೇಳಬೇಕಾದ ಪ್ರಶ್ನೆ: ಮೊದಲನೆಯದು, ಭಾರತದಲ್ಲಿ ಇರುವ ತೈಲನಿಕ್ಷೇಪದಿಂದ ಭಾರತದ ಕಂಪನಿಗಳೇ ಉತ್ಪಾದಿಸುತ್ತಿರುವ ಗ್ಯಾಸ್ ಬೆಲೆ “ಡಾಲರ್”ನಲ್ಲಿ ಏಕಿದೆ ಮತ್ತು  ಎರಡನೆಯದು, ಉತ್ಪಾದನಾ ವೆಚ್ಚಕ್ಕಿಂತ ನಾಲ್ಕೈದು ಪಟ್ಟು ಹೆಚ್ಚು ಬೆಲೆಗೆ ಖಾಸಗಿ ಕಂಪನಿಗಳು ಭಾರತದ ಗ್ರಾಹಕರಿಗೆ ಗ್ಯಾಸ್ ಮಾರಾಟ ಮಾಡಲು ಸರಕಾರ ಏಕೆ ಅನುವು ಮಾಡಿಕೊಟ್ಟಿದೆ ಎಂಬುದು. ಗ್ಯಾಸ್ ಉತ್ಪಾದನೆ ಮತ್ತು ಮಾರಾಟವನ್ನು  ಅಂಬಾನಿ ಮತ್ತು ಅದಾನಿ ಅವರಿಗೆ ಗುತ್ತಿಗೆ ನೀಡಿರುವುದರಿಂದ ಎರಡನೆಯ ಪ್ರಶ್ನೆಗೆ ಉತ್ತರ ಸಿಕ್ಕಿದೆ ಎಂದುಕೊಂಡಿದ್ದೇನೆ. ಮೊದಲನೆಯ ಪ್ರಶ್ನೆಯ ಉತ್ತರಕ್ಕೆ ನಂತರ ಬರೋಣ.

ಗೃಹಬಳಕೆಯ 14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ ರೂ.1050 ದಾಟಿದೆ ಮತ್ತು 19ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಸುಮಾರು ರೂ.1900 ಇದೆ. ಅಂದರೆ ಗೃಹಬಳಕೆ ಗ್ಯಾಸ್ ರೂ.75/ಕೆಜಿ ಮತ್ತು ವಾಣಿಜ್ಯ ಗ್ಯಾಸ್ ರೂ.100/ಕೆಜಿ ಎಂದಾಯಿತು. ಗೃಹಬಳಕೆಯ ಸಿಲಿಂಡರ್ ಮೇಲೆ ಸರಕಾರ ಈಗಲೂ ಸಬ್ಸಿಡಿ ನೀಡುತ್ತಿದೆ ಎಂದು ಅವರ ವಾದ. ಆದರೆ ನಿಮ್ಮ ಖಾತೆಗೆ ಯಾವುದೇ ಹಣ ಬರುತ್ತಿಲ್ಲ ಎಂಬುದೂ ಸಹ  ಸತ್ಯ. ಸಿ.ಎನ್.ಜಿ. ಬೆಲೆ ರೂ.86/ಕೆಜಿ ಇದೆ. ಸರಕಾರ ಎಲ್ಲ ರೀತಿಯ ಸಬ್ಸಿಡಿ ನಿಲ್ಲಿಸಬೇಕೆಂದು ಪ್ರಯತ್ನ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಭಾರತದ ಮಹಾನಗರಗಳಲ್ಲಿ ಈಗಾಗಲೇ ಹೆಚ್ಚಿನ ಮನೆಗಳಿಗೆ ಪೈಪ್-ಗ್ಯಾಸ್ (ಪಿ.ಎನ್.ಜಿ.) ಸಂಪರ್ಕ ಬಂದಾಗಿದೆ. ಕರ್ನಾಟಕದಲ್ಲೂ ತುಮಕೂರು, ಮೈಸೂರು ನಗರಗಲ್ಲಿ ಪೈಪ್ ಜೋಡಣೆ ಕಾರ್ಯ ಪ್ರಾರಂಭವಾಗಿದೆ. ಈ ಪೈಪ್ ಡ್ರೀಂ ಮಾರಾಟಗಾರರ ವಾದ ಏನೆಂದರೆ ನಿಮ್ಮ ಗೃಹಬಳಕೆಯ ಸಿಲಿಂಡರ್ ಬೆಲೆಗಿಂತ ಪೈಪ್ ಗ್ಯಾಸ್ ಬೆಲೆ ಸುಮಾರು 20-30% ಕಡಿಮೆ ಆಗುತ್ತದೆ, ನಿಮಗೆ 24 ಗಂಟೆ ಗ್ಯಾಸ್ ಬರುತ್ತದೆ, ಮೀಟರ್ ಪಾರದರ್ಶಕವಾಗಿ ನಿಮ್ಮ ಮುಂದೆ ಕಾಣುವಂತೆ ಇರುತ್ತದೆ ಮತ್ತು ನಿಮ್ಮ ಶಕ್ತ್ಯಾನುಸಾರ ಗ್ಯಾಸ್ ಬಳಕೆ ಮಾಡಬಹುದು ಹಾಗೂ ಮುಖ್ಯವಾಗಿ ಸಿಲಿಂಡರ್ ನಂತೆ ಪೈಪ್ ಬ್ಲಾಸ್ಟ್ ಆಗುವ ಸಂಭವ ತೀರ ಕಡಿಮೆ, ಇತ್ಯಾದಿ ಇತ್ಯಾದಿ.. ಪಿ.ಎನ್.ಜಿ. ಬೆಲೆ ಯೂನಿಟ್ಟಿಗೆ ರೂ.55 ಇದೆ ಅಂದರೆ ಗೃಹಬಳಕೆ ಸಿಲಿಂಡರ್ ಬೆಲೆಗೆ (ರೂ. 75/ಕೆಜಿ) ಹೋಲಿಸಿದರೆ ನಿಮಗೆ 20-30% ಉಳಿತಾಯ ಎಂದು ನಿಮ್ಮನ್ನು ನಂಬಿಸಲು ಮುಂದಾಗಿದ್ದಾರೆ.

ಈಗ ಇತ್ತೀಚಿನ ಪಿ.ಎನ್.ಜಿ. ಬೆಲೆ 40% ಏರಿಕೆ ಬಗ್ಗೆ ಬರೋಣ ಅಂದರೆ. ಈಗಿರುವ ರೂ.55/ಕೆಜಿ ಏನಾಗುತ್ತದೆ? ಅದು ರೂ.77/ಕೆಜಿ ಆಗುತ್ತದೆ. ಅಂದರೆ ಈಗಿರುವ ಗೃಹಬಳಕೆ ಸಿಲಿಂಡರ್ ಸಮಸಮಕ್ಕೆ ಬರುತ್ತದೆ ಅಥವಾ ಇನ್ನೂ ಸ್ವಲ್ಪ ಹೆಚ್ಚು ಅನ್ನಬಹುದು. ಮೇಲೆ ಹೇಳಿದಂತೆ ಗೃಹ ಬಳಕೆ ಸಿಲಿಂಡರ್ ಮಾಯವಾದರೆ ನೀವು ಯಾವುದಕ್ಕೆ ಬೆಲೆ ಹೋಲಿಸುತ್ತೀರಿ, ವಾಣಿಜ್ಯ ಸಿಲಿಂಡರ್ (ರೂ.100/ಕೆಜಿ) ತಾನೇ? ಇನ್ನು ಹೊಸ ಪೈಪ್ ಗ್ಯಾಸ್ ಕನೆಕ್ಷನ್ ತೆಗೆದುಕೊಳ್ಳಲು, ಅದಕ್ಕೆ ನೀಡಬೇಕಾದ ಮುಂಗಡ, ಇನ್ಸ್ಟಲೇಷನ್ ವೆಚ್ಚ, ಸೆಕ್ಯುರಿಟಿ ಡಿಪಾಸಿಟ್, ಎಲ್ಲಾ ಸೇರಿ ಸುಮಾರು ರೂ.6000/-ದಷ್ಟು ಎಲ್ಲಾ ನಿಮ್ಮ ಜೇಬಿನಿಂದ ಹೋಗುತ್ತದೆ. ಗ್ಯಾಸ್ ಸಂಪರ್ಕ ಖಾಸಗಿ ಕಂಪನಿಯಾಗಿರುವುದರಿಂದ ನಿಮಗೆ ಯಾವುದೇ ರೀತಿಯ ಸಬ್ಸಿಡಿ ಇರುವುದಿಲ್ಲ. ಮುಂದೆ ಅವರು ಆಡಿದ್ದೇ ಆಟ. ಈಗಲಾದರೂ ಅರ್ಥವಾಯಿತೇ ಸರಕಾರ ಹೇಗೆ ನಿಮ್ಮ ಕಿವಿಗೆ ಹೂವು ಮುಡಿಸುತ್ತಿದೆ ಎಂದು.

ಇನ್ನು ನಮ್ಮ ಮೊದಲನೆಯ ಪ್ರಶ್ನೆಗೆ ಬರೋಣ. ಗ್ಯಾಸ್ ಉತ್ಪಾದನೆ ದೇಶದ ಕೆ.ಜಿ.ಬೇಸಿನ್ ಹಳೆಯ ಬಾವಿಗಳಿಂದ ಆಗುತ್ತಿದೆ. ಇದರಲ್ಲಿ ಸಿಗುವ ಗ್ಯಾಸ್ ನಮ್ಮ ದೇಶದ ಸೊತ್ತು, ಯಾವುದೇ ವಿದೇಶದಿಂದ ಆಮದು ಮಾಡಿಕೊಂಡಂತಹ ಅನಿಲವಲ್ಲ. ಕೆಜಿ ಬೇಸಿನ್ ಗ್ಯಾಸ್ ಅನ್ವೇಷಣೆಗೆ ಭಾರತ ಸರಕಾರ ರಿಲಯನ್ಸ್ ಕಂಪನಿಗೆ ಗುತ್ತಿಗೆ ನೀಡಿತ್ತು ಅದರ ಖರ್ಚನ್ನು ಭಾರತ ಸರಕಾರ ಭರಿಸಿತ್ತು. ರಿಲಯನ್ಸ್ ಕಂಪನಿ ಈ ಖರ್ಚನ್ನು ಎರಡು ಬಿಲಿಯನ್ ಡಾಲರ್ ಎಂದು ಹೇಳಿತ್ತು. ಆದರೆ ವೆಚ್ಚ ಒಂದು ಬಿಲಿಯನ್ ಡಾಲರ್ ಸಹ ಆಗಲಿಲ್ಲ ಎಂಬುದು ಹಲವು ತೈಲ-ತಜ್ಞರ ವಾದ. ಭಾರತ ಸರಕಾರವಾಗಲೀ, ರಿಲಯನ್ಸ್ ಕಂಪನಿಯಾಗಲೀ ವೆಚ್ಚದ ಸಿ.ಎ.ಜಿ. ಆಡಿಟ್ಟಿಗೆ ಒಪ್ಪಲೇ ಇಲ್ಲ. ಇನ್ನು ತೈಲವನ್ನು ಹೊರಗೆ ಎಳೆಯುವ ವೆಚ್ಚ ಒಂದು ಮಿಲಿಯನ್ ಬ್ರಿಟಿಷ್ ಥರ್ಮಲ್ ಯೂನಿಟ್ಟಿಗೆ ಎರಡು ಡಾಲರ್ ಸಹ ಆಗುವುದಿಲ್ಲ ಎಂಬುದು ತೈಲ-ತಜ್ಞರ ವಾದ. ಆದರೆ ಭಾರತ ಸರಕಾರ ಇದಕ್ಕೆ 6.10 ಡಾಲರ್ ನಿಗದಿ ಮಾಡಿತ್ತು ಮತ್ತು ಇದನ್ನು ಈಗ 8.57 ಡಾಲರ್ ಪ್ರತಿ ಎಂಬಿಟಿಯುಗೆ ಏರಿಸಲಾಗಿದೆ. ಏಕೆಂದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅನಿಲದ ಬೆಲೆ, ಯುಕ್ರೇನ್ ಯುದ್ಧ ಪ್ರಾರಂಭವಾದಾಗ ಇದಕ್ಕಿಂತ ಹೆಚ್ಚಾಗಿತ್ತು. (9.34ಡಾಲರ್/ಪ್ರತಿ ಯೂನಿಟ್ ವರೆಗೂ ಹೋಗಿತ್ತು) ಆದರೆ ಇಂದು ಬೆಲೆ 6.67ಡಾಲರ್/ಪ್ರತಿ ಯೂನಿಟ್ ಇದೆ. ಇಷ್ಟೇ ಅಲ್ಲ ಹಳೆಯ ಬಾವಿಗಳನ್ನು ಬಿಟ್ಟು, ಉತ್ಪಾದನೆ ಸ್ವಲ್ಪ ಕಷ್ಟಕರವಾದ ಸಮುದ್ರ ಮಧ್ಯದಲ್ಲಿರುವ ಡಿ6 ಬಾವಿಗಳಿಂದ ತೆಗೆಯುವ ಅನಿಲಕ್ಕೆ ಬೆಲೆಯನ್ನು 9.92ಡಾಲರ್/ಪ್ರತಿ ಎಂಬಿಟಿಯುಗೆ ನಿಂದ 12.6ಡಾಲರ್/ಪ್ರತಿ ಎಂಬಿಟಿಯುಗೆ ಹೆಚ್ಚಿಸಿದೆ. ಅನಿಲ ಬೆಲೆ ಏರಿಕೆ 2019ರಿಂದ ಇದು ಮೂರನೆಯದಾಗಿರುತ್ತದೆ. ರುಪಾಯಿ ಬೆಲೆ ಡಾಲರ್ ವಿರುದ್ಧ ಕುಸಿದಂತೆ ಡಾಲರ್ ಪಡೆಯುತ್ತಿರುವ ಕಂಪನಿಯ ಮಾಲೀಕರ ನಗು ಬಾಯಿ ತುಂಬಿ ಹೊರಸೂಸುತ್ತಿದೆ. ಮೋದಿಯವರು ತಮ್ಮ ಆಪ್ತಮಿತ್ರರಿಗೆ ಸಹಾಯ ಮಾಡಲು ಹೇಗೆ ಸರಕಾರದಿಂದ ಅನುವು ಮಾಡಿಕೊಡುತ್ತಿದ್ದಾರೆ ಎಂಬುದು ಬಹುಶಃ ಈಗಲಾದರೂ ತಮಗೆ ಅರ್ಥವಾಗಿರಬಹುದು.

ಜಿ.ಆರ್. ವಿದ್ಯಾರಣ್ಯ

(ಜಿ.ಆರ್ ವಿದ್ಯಾರಣ್ಯರವರು ಸುಮಾರು ಇಪ್ಪತ್ತೈದು ವರ್ಷ ವಾಣಿಜ್ಯ ಹಡಗುಗಳಲ್ಲಿ ಕಮ್ಯುನಿಕೇಷನ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದವರು. ಇದಲ್ಲದೆ ಕಂಪ್ಯೂಟರ್ ನೆಟವರ್ಕ್ ರೇಡಿಯೋ ಸುಪರಿಂಟೆಂಡೆಂಟ್ ಆಗಿ ಅಮೇರಿಕಾ, ಸಿಂಗಾಪುರ್, ಚೈನಾ, ಜಪಾನ್, ದೇಶಗಳಲ್ಲಿ ಕೆಲಸ ಮಾಡಿದ್ದಾರೆ. ನೂರಕ್ಕೂ ಹೆಚ್ಚು ದೇಶಗಳನ್ನು ಸುತ್ತಿ ಬಂದಿರುತ್ತಾರೆ. ಸಾಮಾಜಿಕ ಕಳಕಳಿಯುಳ್ಳ ಅವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಹಂಬಲದಿಂದ 2001 ರಲ್ಲಿ ಮುಂಬಯಿ ಬಿಟ್ಟು, ಮೈಸೂರಿನಲ್ಲಿ ನೆಲೆಸಿ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ)

ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬರೀ ರೈಲು ಬಿಟ್ಟಿದ್ದಾರೆ… ಜನಪರ ಕಾಳಜಿ ಅನ್ನೋ ಪದದಡಿ ಜನರನ್ನು ಹಾದಿತಾಪ್ಪಿಸುವ ಪ್ರಯತ್ನ…

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...