Homeಮುಖಪುಟಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ...

- Advertisement -
- Advertisement -

ಇತ್ತೀಚೆಗೆ “ಪ್ರಾಕೃತಿಕ ಗ್ಯಾಸ್ ಬೆಲೆಯಲ್ಲಿ 40% ಹೆಚ್ಚಳ” ಎಂಬ ಸುದ್ದಿ ನೀವೆಲ್ಲರೂ ದೃಶ್ಯಮಾಧ್ಯಮದಲ್ಲಿ ಕೇಳಿರುತ್ತೀರಿ ಅಥವಾ ವೃತ್ತಪತ್ರಿಕೆಗಳಲ್ಲಿ ಓದಿರುತ್ತೀರಿ. ಗ್ಯಾಸ್ ಬೆಲೆ ಯೂನಿಟ್ಟಿಗೆ 6.10 ಡಾಲರ್ ನಿಂದ 8.57 ಡಾಲರ್ ಆಗಲಿದೆ ಅಂದರೆ ಸುಮಾರು 40% ಹೆಚ್ಚಳ ಆಗಲಿದೆ ಮತ್ತು ಅದರಿಂದ ಸಿ.ಎನ್.ಜಿ. ಮತ್ತು ಪಿ.ಎನ್.ಜಿ. ಗ್ರಾಹಕರಿಗೆ ಅದರ ಬಿಸಿ ತಟ್ಟಲಿದೆ ಎಂಬ ವಿವರ ಸುದ್ದಿಯಲ್ಲಿತ್ತು. ಇದರಲ್ಲಿ ಗಮನಿಸಬೇಕಾದ ವಿಷಯ ಅಥವಾ ಕೇಳಬೇಕಾದ ಪ್ರಶ್ನೆ: ಮೊದಲನೆಯದು, ಭಾರತದಲ್ಲಿ ಇರುವ ತೈಲನಿಕ್ಷೇಪದಿಂದ ಭಾರತದ ಕಂಪನಿಗಳೇ ಉತ್ಪಾದಿಸುತ್ತಿರುವ ಗ್ಯಾಸ್ ಬೆಲೆ “ಡಾಲರ್”ನಲ್ಲಿ ಏಕಿದೆ ಮತ್ತು  ಎರಡನೆಯದು, ಉತ್ಪಾದನಾ ವೆಚ್ಚಕ್ಕಿಂತ ನಾಲ್ಕೈದು ಪಟ್ಟು ಹೆಚ್ಚು ಬೆಲೆಗೆ ಖಾಸಗಿ ಕಂಪನಿಗಳು ಭಾರತದ ಗ್ರಾಹಕರಿಗೆ ಗ್ಯಾಸ್ ಮಾರಾಟ ಮಾಡಲು ಸರಕಾರ ಏಕೆ ಅನುವು ಮಾಡಿಕೊಟ್ಟಿದೆ ಎಂಬುದು. ಗ್ಯಾಸ್ ಉತ್ಪಾದನೆ ಮತ್ತು ಮಾರಾಟವನ್ನು  ಅಂಬಾನಿ ಮತ್ತು ಅದಾನಿ ಅವರಿಗೆ ಗುತ್ತಿಗೆ ನೀಡಿರುವುದರಿಂದ ಎರಡನೆಯ ಪ್ರಶ್ನೆಗೆ ಉತ್ತರ ಸಿಕ್ಕಿದೆ ಎಂದುಕೊಂಡಿದ್ದೇನೆ. ಮೊದಲನೆಯ ಪ್ರಶ್ನೆಯ ಉತ್ತರಕ್ಕೆ ನಂತರ ಬರೋಣ.

ಗೃಹಬಳಕೆಯ 14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ ರೂ.1050 ದಾಟಿದೆ ಮತ್ತು 19ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಸುಮಾರು ರೂ.1900 ಇದೆ. ಅಂದರೆ ಗೃಹಬಳಕೆ ಗ್ಯಾಸ್ ರೂ.75/ಕೆಜಿ ಮತ್ತು ವಾಣಿಜ್ಯ ಗ್ಯಾಸ್ ರೂ.100/ಕೆಜಿ ಎಂದಾಯಿತು. ಗೃಹಬಳಕೆಯ ಸಿಲಿಂಡರ್ ಮೇಲೆ ಸರಕಾರ ಈಗಲೂ ಸಬ್ಸಿಡಿ ನೀಡುತ್ತಿದೆ ಎಂದು ಅವರ ವಾದ. ಆದರೆ ನಿಮ್ಮ ಖಾತೆಗೆ ಯಾವುದೇ ಹಣ ಬರುತ್ತಿಲ್ಲ ಎಂಬುದೂ ಸಹ  ಸತ್ಯ. ಸಿ.ಎನ್.ಜಿ. ಬೆಲೆ ರೂ.86/ಕೆಜಿ ಇದೆ. ಸರಕಾರ ಎಲ್ಲ ರೀತಿಯ ಸಬ್ಸಿಡಿ ನಿಲ್ಲಿಸಬೇಕೆಂದು ಪ್ರಯತ್ನ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಭಾರತದ ಮಹಾನಗರಗಳಲ್ಲಿ ಈಗಾಗಲೇ ಹೆಚ್ಚಿನ ಮನೆಗಳಿಗೆ ಪೈಪ್-ಗ್ಯಾಸ್ (ಪಿ.ಎನ್.ಜಿ.) ಸಂಪರ್ಕ ಬಂದಾಗಿದೆ. ಕರ್ನಾಟಕದಲ್ಲೂ ತುಮಕೂರು, ಮೈಸೂರು ನಗರಗಲ್ಲಿ ಪೈಪ್ ಜೋಡಣೆ ಕಾರ್ಯ ಪ್ರಾರಂಭವಾಗಿದೆ. ಈ ಪೈಪ್ ಡ್ರೀಂ ಮಾರಾಟಗಾರರ ವಾದ ಏನೆಂದರೆ ನಿಮ್ಮ ಗೃಹಬಳಕೆಯ ಸಿಲಿಂಡರ್ ಬೆಲೆಗಿಂತ ಪೈಪ್ ಗ್ಯಾಸ್ ಬೆಲೆ ಸುಮಾರು 20-30% ಕಡಿಮೆ ಆಗುತ್ತದೆ, ನಿಮಗೆ 24 ಗಂಟೆ ಗ್ಯಾಸ್ ಬರುತ್ತದೆ, ಮೀಟರ್ ಪಾರದರ್ಶಕವಾಗಿ ನಿಮ್ಮ ಮುಂದೆ ಕಾಣುವಂತೆ ಇರುತ್ತದೆ ಮತ್ತು ನಿಮ್ಮ ಶಕ್ತ್ಯಾನುಸಾರ ಗ್ಯಾಸ್ ಬಳಕೆ ಮಾಡಬಹುದು ಹಾಗೂ ಮುಖ್ಯವಾಗಿ ಸಿಲಿಂಡರ್ ನಂತೆ ಪೈಪ್ ಬ್ಲಾಸ್ಟ್ ಆಗುವ ಸಂಭವ ತೀರ ಕಡಿಮೆ, ಇತ್ಯಾದಿ ಇತ್ಯಾದಿ.. ಪಿ.ಎನ್.ಜಿ. ಬೆಲೆ ಯೂನಿಟ್ಟಿಗೆ ರೂ.55 ಇದೆ ಅಂದರೆ ಗೃಹಬಳಕೆ ಸಿಲಿಂಡರ್ ಬೆಲೆಗೆ (ರೂ. 75/ಕೆಜಿ) ಹೋಲಿಸಿದರೆ ನಿಮಗೆ 20-30% ಉಳಿತಾಯ ಎಂದು ನಿಮ್ಮನ್ನು ನಂಬಿಸಲು ಮುಂದಾಗಿದ್ದಾರೆ.

ಈಗ ಇತ್ತೀಚಿನ ಪಿ.ಎನ್.ಜಿ. ಬೆಲೆ 40% ಏರಿಕೆ ಬಗ್ಗೆ ಬರೋಣ ಅಂದರೆ. ಈಗಿರುವ ರೂ.55/ಕೆಜಿ ಏನಾಗುತ್ತದೆ? ಅದು ರೂ.77/ಕೆಜಿ ಆಗುತ್ತದೆ. ಅಂದರೆ ಈಗಿರುವ ಗೃಹಬಳಕೆ ಸಿಲಿಂಡರ್ ಸಮಸಮಕ್ಕೆ ಬರುತ್ತದೆ ಅಥವಾ ಇನ್ನೂ ಸ್ವಲ್ಪ ಹೆಚ್ಚು ಅನ್ನಬಹುದು. ಮೇಲೆ ಹೇಳಿದಂತೆ ಗೃಹ ಬಳಕೆ ಸಿಲಿಂಡರ್ ಮಾಯವಾದರೆ ನೀವು ಯಾವುದಕ್ಕೆ ಬೆಲೆ ಹೋಲಿಸುತ್ತೀರಿ, ವಾಣಿಜ್ಯ ಸಿಲಿಂಡರ್ (ರೂ.100/ಕೆಜಿ) ತಾನೇ? ಇನ್ನು ಹೊಸ ಪೈಪ್ ಗ್ಯಾಸ್ ಕನೆಕ್ಷನ್ ತೆಗೆದುಕೊಳ್ಳಲು, ಅದಕ್ಕೆ ನೀಡಬೇಕಾದ ಮುಂಗಡ, ಇನ್ಸ್ಟಲೇಷನ್ ವೆಚ್ಚ, ಸೆಕ್ಯುರಿಟಿ ಡಿಪಾಸಿಟ್, ಎಲ್ಲಾ ಸೇರಿ ಸುಮಾರು ರೂ.6000/-ದಷ್ಟು ಎಲ್ಲಾ ನಿಮ್ಮ ಜೇಬಿನಿಂದ ಹೋಗುತ್ತದೆ. ಗ್ಯಾಸ್ ಸಂಪರ್ಕ ಖಾಸಗಿ ಕಂಪನಿಯಾಗಿರುವುದರಿಂದ ನಿಮಗೆ ಯಾವುದೇ ರೀತಿಯ ಸಬ್ಸಿಡಿ ಇರುವುದಿಲ್ಲ. ಮುಂದೆ ಅವರು ಆಡಿದ್ದೇ ಆಟ. ಈಗಲಾದರೂ ಅರ್ಥವಾಯಿತೇ ಸರಕಾರ ಹೇಗೆ ನಿಮ್ಮ ಕಿವಿಗೆ ಹೂವು ಮುಡಿಸುತ್ತಿದೆ ಎಂದು.

ಇನ್ನು ನಮ್ಮ ಮೊದಲನೆಯ ಪ್ರಶ್ನೆಗೆ ಬರೋಣ. ಗ್ಯಾಸ್ ಉತ್ಪಾದನೆ ದೇಶದ ಕೆ.ಜಿ.ಬೇಸಿನ್ ಹಳೆಯ ಬಾವಿಗಳಿಂದ ಆಗುತ್ತಿದೆ. ಇದರಲ್ಲಿ ಸಿಗುವ ಗ್ಯಾಸ್ ನಮ್ಮ ದೇಶದ ಸೊತ್ತು, ಯಾವುದೇ ವಿದೇಶದಿಂದ ಆಮದು ಮಾಡಿಕೊಂಡಂತಹ ಅನಿಲವಲ್ಲ. ಕೆಜಿ ಬೇಸಿನ್ ಗ್ಯಾಸ್ ಅನ್ವೇಷಣೆಗೆ ಭಾರತ ಸರಕಾರ ರಿಲಯನ್ಸ್ ಕಂಪನಿಗೆ ಗುತ್ತಿಗೆ ನೀಡಿತ್ತು ಅದರ ಖರ್ಚನ್ನು ಭಾರತ ಸರಕಾರ ಭರಿಸಿತ್ತು. ರಿಲಯನ್ಸ್ ಕಂಪನಿ ಈ ಖರ್ಚನ್ನು ಎರಡು ಬಿಲಿಯನ್ ಡಾಲರ್ ಎಂದು ಹೇಳಿತ್ತು. ಆದರೆ ವೆಚ್ಚ ಒಂದು ಬಿಲಿಯನ್ ಡಾಲರ್ ಸಹ ಆಗಲಿಲ್ಲ ಎಂಬುದು ಹಲವು ತೈಲ-ತಜ್ಞರ ವಾದ. ಭಾರತ ಸರಕಾರವಾಗಲೀ, ರಿಲಯನ್ಸ್ ಕಂಪನಿಯಾಗಲೀ ವೆಚ್ಚದ ಸಿ.ಎ.ಜಿ. ಆಡಿಟ್ಟಿಗೆ ಒಪ್ಪಲೇ ಇಲ್ಲ. ಇನ್ನು ತೈಲವನ್ನು ಹೊರಗೆ ಎಳೆಯುವ ವೆಚ್ಚ ಒಂದು ಮಿಲಿಯನ್ ಬ್ರಿಟಿಷ್ ಥರ್ಮಲ್ ಯೂನಿಟ್ಟಿಗೆ ಎರಡು ಡಾಲರ್ ಸಹ ಆಗುವುದಿಲ್ಲ ಎಂಬುದು ತೈಲ-ತಜ್ಞರ ವಾದ. ಆದರೆ ಭಾರತ ಸರಕಾರ ಇದಕ್ಕೆ 6.10 ಡಾಲರ್ ನಿಗದಿ ಮಾಡಿತ್ತು ಮತ್ತು ಇದನ್ನು ಈಗ 8.57 ಡಾಲರ್ ಪ್ರತಿ ಎಂಬಿಟಿಯುಗೆ ಏರಿಸಲಾಗಿದೆ. ಏಕೆಂದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅನಿಲದ ಬೆಲೆ, ಯುಕ್ರೇನ್ ಯುದ್ಧ ಪ್ರಾರಂಭವಾದಾಗ ಇದಕ್ಕಿಂತ ಹೆಚ್ಚಾಗಿತ್ತು. (9.34ಡಾಲರ್/ಪ್ರತಿ ಯೂನಿಟ್ ವರೆಗೂ ಹೋಗಿತ್ತು) ಆದರೆ ಇಂದು ಬೆಲೆ 6.67ಡಾಲರ್/ಪ್ರತಿ ಯೂನಿಟ್ ಇದೆ. ಇಷ್ಟೇ ಅಲ್ಲ ಹಳೆಯ ಬಾವಿಗಳನ್ನು ಬಿಟ್ಟು, ಉತ್ಪಾದನೆ ಸ್ವಲ್ಪ ಕಷ್ಟಕರವಾದ ಸಮುದ್ರ ಮಧ್ಯದಲ್ಲಿರುವ ಡಿ6 ಬಾವಿಗಳಿಂದ ತೆಗೆಯುವ ಅನಿಲಕ್ಕೆ ಬೆಲೆಯನ್ನು 9.92ಡಾಲರ್/ಪ್ರತಿ ಎಂಬಿಟಿಯುಗೆ ನಿಂದ 12.6ಡಾಲರ್/ಪ್ರತಿ ಎಂಬಿಟಿಯುಗೆ ಹೆಚ್ಚಿಸಿದೆ. ಅನಿಲ ಬೆಲೆ ಏರಿಕೆ 2019ರಿಂದ ಇದು ಮೂರನೆಯದಾಗಿರುತ್ತದೆ. ರುಪಾಯಿ ಬೆಲೆ ಡಾಲರ್ ವಿರುದ್ಧ ಕುಸಿದಂತೆ ಡಾಲರ್ ಪಡೆಯುತ್ತಿರುವ ಕಂಪನಿಯ ಮಾಲೀಕರ ನಗು ಬಾಯಿ ತುಂಬಿ ಹೊರಸೂಸುತ್ತಿದೆ. ಮೋದಿಯವರು ತಮ್ಮ ಆಪ್ತಮಿತ್ರರಿಗೆ ಸಹಾಯ ಮಾಡಲು ಹೇಗೆ ಸರಕಾರದಿಂದ ಅನುವು ಮಾಡಿಕೊಡುತ್ತಿದ್ದಾರೆ ಎಂಬುದು ಬಹುಶಃ ಈಗಲಾದರೂ ತಮಗೆ ಅರ್ಥವಾಗಿರಬಹುದು.

ಜಿ.ಆರ್. ವಿದ್ಯಾರಣ್ಯ

(ಜಿ.ಆರ್ ವಿದ್ಯಾರಣ್ಯರವರು ಸುಮಾರು ಇಪ್ಪತ್ತೈದು ವರ್ಷ ವಾಣಿಜ್ಯ ಹಡಗುಗಳಲ್ಲಿ ಕಮ್ಯುನಿಕೇಷನ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದವರು. ಇದಲ್ಲದೆ ಕಂಪ್ಯೂಟರ್ ನೆಟವರ್ಕ್ ರೇಡಿಯೋ ಸುಪರಿಂಟೆಂಡೆಂಟ್ ಆಗಿ ಅಮೇರಿಕಾ, ಸಿಂಗಾಪುರ್, ಚೈನಾ, ಜಪಾನ್, ದೇಶಗಳಲ್ಲಿ ಕೆಲಸ ಮಾಡಿದ್ದಾರೆ. ನೂರಕ್ಕೂ ಹೆಚ್ಚು ದೇಶಗಳನ್ನು ಸುತ್ತಿ ಬಂದಿರುತ್ತಾರೆ. ಸಾಮಾಜಿಕ ಕಳಕಳಿಯುಳ್ಳ ಅವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಹಂಬಲದಿಂದ 2001 ರಲ್ಲಿ ಮುಂಬಯಿ ಬಿಟ್ಟು, ಮೈಸೂರಿನಲ್ಲಿ ನೆಲೆಸಿ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ)

ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬರೀ ರೈಲು ಬಿಟ್ಟಿದ್ದಾರೆ… ಜನಪರ ಕಾಳಜಿ ಅನ್ನೋ ಪದದಡಿ ಜನರನ್ನು ಹಾದಿತಾಪ್ಪಿಸುವ ಪ್ರಯತ್ನ…

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...