Homeಮುಖಪುಟಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ...

- Advertisement -
- Advertisement -

ಇತ್ತೀಚೆಗೆ “ಪ್ರಾಕೃತಿಕ ಗ್ಯಾಸ್ ಬೆಲೆಯಲ್ಲಿ 40% ಹೆಚ್ಚಳ” ಎಂಬ ಸುದ್ದಿ ನೀವೆಲ್ಲರೂ ದೃಶ್ಯಮಾಧ್ಯಮದಲ್ಲಿ ಕೇಳಿರುತ್ತೀರಿ ಅಥವಾ ವೃತ್ತಪತ್ರಿಕೆಗಳಲ್ಲಿ ಓದಿರುತ್ತೀರಿ. ಗ್ಯಾಸ್ ಬೆಲೆ ಯೂನಿಟ್ಟಿಗೆ 6.10 ಡಾಲರ್ ನಿಂದ 8.57 ಡಾಲರ್ ಆಗಲಿದೆ ಅಂದರೆ ಸುಮಾರು 40% ಹೆಚ್ಚಳ ಆಗಲಿದೆ ಮತ್ತು ಅದರಿಂದ ಸಿ.ಎನ್.ಜಿ. ಮತ್ತು ಪಿ.ಎನ್.ಜಿ. ಗ್ರಾಹಕರಿಗೆ ಅದರ ಬಿಸಿ ತಟ್ಟಲಿದೆ ಎಂಬ ವಿವರ ಸುದ್ದಿಯಲ್ಲಿತ್ತು. ಇದರಲ್ಲಿ ಗಮನಿಸಬೇಕಾದ ವಿಷಯ ಅಥವಾ ಕೇಳಬೇಕಾದ ಪ್ರಶ್ನೆ: ಮೊದಲನೆಯದು, ಭಾರತದಲ್ಲಿ ಇರುವ ತೈಲನಿಕ್ಷೇಪದಿಂದ ಭಾರತದ ಕಂಪನಿಗಳೇ ಉತ್ಪಾದಿಸುತ್ತಿರುವ ಗ್ಯಾಸ್ ಬೆಲೆ “ಡಾಲರ್”ನಲ್ಲಿ ಏಕಿದೆ ಮತ್ತು  ಎರಡನೆಯದು, ಉತ್ಪಾದನಾ ವೆಚ್ಚಕ್ಕಿಂತ ನಾಲ್ಕೈದು ಪಟ್ಟು ಹೆಚ್ಚು ಬೆಲೆಗೆ ಖಾಸಗಿ ಕಂಪನಿಗಳು ಭಾರತದ ಗ್ರಾಹಕರಿಗೆ ಗ್ಯಾಸ್ ಮಾರಾಟ ಮಾಡಲು ಸರಕಾರ ಏಕೆ ಅನುವು ಮಾಡಿಕೊಟ್ಟಿದೆ ಎಂಬುದು. ಗ್ಯಾಸ್ ಉತ್ಪಾದನೆ ಮತ್ತು ಮಾರಾಟವನ್ನು  ಅಂಬಾನಿ ಮತ್ತು ಅದಾನಿ ಅವರಿಗೆ ಗುತ್ತಿಗೆ ನೀಡಿರುವುದರಿಂದ ಎರಡನೆಯ ಪ್ರಶ್ನೆಗೆ ಉತ್ತರ ಸಿಕ್ಕಿದೆ ಎಂದುಕೊಂಡಿದ್ದೇನೆ. ಮೊದಲನೆಯ ಪ್ರಶ್ನೆಯ ಉತ್ತರಕ್ಕೆ ನಂತರ ಬರೋಣ.

ಗೃಹಬಳಕೆಯ 14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ ರೂ.1050 ದಾಟಿದೆ ಮತ್ತು 19ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಸುಮಾರು ರೂ.1900 ಇದೆ. ಅಂದರೆ ಗೃಹಬಳಕೆ ಗ್ಯಾಸ್ ರೂ.75/ಕೆಜಿ ಮತ್ತು ವಾಣಿಜ್ಯ ಗ್ಯಾಸ್ ರೂ.100/ಕೆಜಿ ಎಂದಾಯಿತು. ಗೃಹಬಳಕೆಯ ಸಿಲಿಂಡರ್ ಮೇಲೆ ಸರಕಾರ ಈಗಲೂ ಸಬ್ಸಿಡಿ ನೀಡುತ್ತಿದೆ ಎಂದು ಅವರ ವಾದ. ಆದರೆ ನಿಮ್ಮ ಖಾತೆಗೆ ಯಾವುದೇ ಹಣ ಬರುತ್ತಿಲ್ಲ ಎಂಬುದೂ ಸಹ  ಸತ್ಯ. ಸಿ.ಎನ್.ಜಿ. ಬೆಲೆ ರೂ.86/ಕೆಜಿ ಇದೆ. ಸರಕಾರ ಎಲ್ಲ ರೀತಿಯ ಸಬ್ಸಿಡಿ ನಿಲ್ಲಿಸಬೇಕೆಂದು ಪ್ರಯತ್ನ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಭಾರತದ ಮಹಾನಗರಗಳಲ್ಲಿ ಈಗಾಗಲೇ ಹೆಚ್ಚಿನ ಮನೆಗಳಿಗೆ ಪೈಪ್-ಗ್ಯಾಸ್ (ಪಿ.ಎನ್.ಜಿ.) ಸಂಪರ್ಕ ಬಂದಾಗಿದೆ. ಕರ್ನಾಟಕದಲ್ಲೂ ತುಮಕೂರು, ಮೈಸೂರು ನಗರಗಲ್ಲಿ ಪೈಪ್ ಜೋಡಣೆ ಕಾರ್ಯ ಪ್ರಾರಂಭವಾಗಿದೆ. ಈ ಪೈಪ್ ಡ್ರೀಂ ಮಾರಾಟಗಾರರ ವಾದ ಏನೆಂದರೆ ನಿಮ್ಮ ಗೃಹಬಳಕೆಯ ಸಿಲಿಂಡರ್ ಬೆಲೆಗಿಂತ ಪೈಪ್ ಗ್ಯಾಸ್ ಬೆಲೆ ಸುಮಾರು 20-30% ಕಡಿಮೆ ಆಗುತ್ತದೆ, ನಿಮಗೆ 24 ಗಂಟೆ ಗ್ಯಾಸ್ ಬರುತ್ತದೆ, ಮೀಟರ್ ಪಾರದರ್ಶಕವಾಗಿ ನಿಮ್ಮ ಮುಂದೆ ಕಾಣುವಂತೆ ಇರುತ್ತದೆ ಮತ್ತು ನಿಮ್ಮ ಶಕ್ತ್ಯಾನುಸಾರ ಗ್ಯಾಸ್ ಬಳಕೆ ಮಾಡಬಹುದು ಹಾಗೂ ಮುಖ್ಯವಾಗಿ ಸಿಲಿಂಡರ್ ನಂತೆ ಪೈಪ್ ಬ್ಲಾಸ್ಟ್ ಆಗುವ ಸಂಭವ ತೀರ ಕಡಿಮೆ, ಇತ್ಯಾದಿ ಇತ್ಯಾದಿ.. ಪಿ.ಎನ್.ಜಿ. ಬೆಲೆ ಯೂನಿಟ್ಟಿಗೆ ರೂ.55 ಇದೆ ಅಂದರೆ ಗೃಹಬಳಕೆ ಸಿಲಿಂಡರ್ ಬೆಲೆಗೆ (ರೂ. 75/ಕೆಜಿ) ಹೋಲಿಸಿದರೆ ನಿಮಗೆ 20-30% ಉಳಿತಾಯ ಎಂದು ನಿಮ್ಮನ್ನು ನಂಬಿಸಲು ಮುಂದಾಗಿದ್ದಾರೆ.

ಈಗ ಇತ್ತೀಚಿನ ಪಿ.ಎನ್.ಜಿ. ಬೆಲೆ 40% ಏರಿಕೆ ಬಗ್ಗೆ ಬರೋಣ ಅಂದರೆ. ಈಗಿರುವ ರೂ.55/ಕೆಜಿ ಏನಾಗುತ್ತದೆ? ಅದು ರೂ.77/ಕೆಜಿ ಆಗುತ್ತದೆ. ಅಂದರೆ ಈಗಿರುವ ಗೃಹಬಳಕೆ ಸಿಲಿಂಡರ್ ಸಮಸಮಕ್ಕೆ ಬರುತ್ತದೆ ಅಥವಾ ಇನ್ನೂ ಸ್ವಲ್ಪ ಹೆಚ್ಚು ಅನ್ನಬಹುದು. ಮೇಲೆ ಹೇಳಿದಂತೆ ಗೃಹ ಬಳಕೆ ಸಿಲಿಂಡರ್ ಮಾಯವಾದರೆ ನೀವು ಯಾವುದಕ್ಕೆ ಬೆಲೆ ಹೋಲಿಸುತ್ತೀರಿ, ವಾಣಿಜ್ಯ ಸಿಲಿಂಡರ್ (ರೂ.100/ಕೆಜಿ) ತಾನೇ? ಇನ್ನು ಹೊಸ ಪೈಪ್ ಗ್ಯಾಸ್ ಕನೆಕ್ಷನ್ ತೆಗೆದುಕೊಳ್ಳಲು, ಅದಕ್ಕೆ ನೀಡಬೇಕಾದ ಮುಂಗಡ, ಇನ್ಸ್ಟಲೇಷನ್ ವೆಚ್ಚ, ಸೆಕ್ಯುರಿಟಿ ಡಿಪಾಸಿಟ್, ಎಲ್ಲಾ ಸೇರಿ ಸುಮಾರು ರೂ.6000/-ದಷ್ಟು ಎಲ್ಲಾ ನಿಮ್ಮ ಜೇಬಿನಿಂದ ಹೋಗುತ್ತದೆ. ಗ್ಯಾಸ್ ಸಂಪರ್ಕ ಖಾಸಗಿ ಕಂಪನಿಯಾಗಿರುವುದರಿಂದ ನಿಮಗೆ ಯಾವುದೇ ರೀತಿಯ ಸಬ್ಸಿಡಿ ಇರುವುದಿಲ್ಲ. ಮುಂದೆ ಅವರು ಆಡಿದ್ದೇ ಆಟ. ಈಗಲಾದರೂ ಅರ್ಥವಾಯಿತೇ ಸರಕಾರ ಹೇಗೆ ನಿಮ್ಮ ಕಿವಿಗೆ ಹೂವು ಮುಡಿಸುತ್ತಿದೆ ಎಂದು.

ಇನ್ನು ನಮ್ಮ ಮೊದಲನೆಯ ಪ್ರಶ್ನೆಗೆ ಬರೋಣ. ಗ್ಯಾಸ್ ಉತ್ಪಾದನೆ ದೇಶದ ಕೆ.ಜಿ.ಬೇಸಿನ್ ಹಳೆಯ ಬಾವಿಗಳಿಂದ ಆಗುತ್ತಿದೆ. ಇದರಲ್ಲಿ ಸಿಗುವ ಗ್ಯಾಸ್ ನಮ್ಮ ದೇಶದ ಸೊತ್ತು, ಯಾವುದೇ ವಿದೇಶದಿಂದ ಆಮದು ಮಾಡಿಕೊಂಡಂತಹ ಅನಿಲವಲ್ಲ. ಕೆಜಿ ಬೇಸಿನ್ ಗ್ಯಾಸ್ ಅನ್ವೇಷಣೆಗೆ ಭಾರತ ಸರಕಾರ ರಿಲಯನ್ಸ್ ಕಂಪನಿಗೆ ಗುತ್ತಿಗೆ ನೀಡಿತ್ತು ಅದರ ಖರ್ಚನ್ನು ಭಾರತ ಸರಕಾರ ಭರಿಸಿತ್ತು. ರಿಲಯನ್ಸ್ ಕಂಪನಿ ಈ ಖರ್ಚನ್ನು ಎರಡು ಬಿಲಿಯನ್ ಡಾಲರ್ ಎಂದು ಹೇಳಿತ್ತು. ಆದರೆ ವೆಚ್ಚ ಒಂದು ಬಿಲಿಯನ್ ಡಾಲರ್ ಸಹ ಆಗಲಿಲ್ಲ ಎಂಬುದು ಹಲವು ತೈಲ-ತಜ್ಞರ ವಾದ. ಭಾರತ ಸರಕಾರವಾಗಲೀ, ರಿಲಯನ್ಸ್ ಕಂಪನಿಯಾಗಲೀ ವೆಚ್ಚದ ಸಿ.ಎ.ಜಿ. ಆಡಿಟ್ಟಿಗೆ ಒಪ್ಪಲೇ ಇಲ್ಲ. ಇನ್ನು ತೈಲವನ್ನು ಹೊರಗೆ ಎಳೆಯುವ ವೆಚ್ಚ ಒಂದು ಮಿಲಿಯನ್ ಬ್ರಿಟಿಷ್ ಥರ್ಮಲ್ ಯೂನಿಟ್ಟಿಗೆ ಎರಡು ಡಾಲರ್ ಸಹ ಆಗುವುದಿಲ್ಲ ಎಂಬುದು ತೈಲ-ತಜ್ಞರ ವಾದ. ಆದರೆ ಭಾರತ ಸರಕಾರ ಇದಕ್ಕೆ 6.10 ಡಾಲರ್ ನಿಗದಿ ಮಾಡಿತ್ತು ಮತ್ತು ಇದನ್ನು ಈಗ 8.57 ಡಾಲರ್ ಪ್ರತಿ ಎಂಬಿಟಿಯುಗೆ ಏರಿಸಲಾಗಿದೆ. ಏಕೆಂದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅನಿಲದ ಬೆಲೆ, ಯುಕ್ರೇನ್ ಯುದ್ಧ ಪ್ರಾರಂಭವಾದಾಗ ಇದಕ್ಕಿಂತ ಹೆಚ್ಚಾಗಿತ್ತು. (9.34ಡಾಲರ್/ಪ್ರತಿ ಯೂನಿಟ್ ವರೆಗೂ ಹೋಗಿತ್ತು) ಆದರೆ ಇಂದು ಬೆಲೆ 6.67ಡಾಲರ್/ಪ್ರತಿ ಯೂನಿಟ್ ಇದೆ. ಇಷ್ಟೇ ಅಲ್ಲ ಹಳೆಯ ಬಾವಿಗಳನ್ನು ಬಿಟ್ಟು, ಉತ್ಪಾದನೆ ಸ್ವಲ್ಪ ಕಷ್ಟಕರವಾದ ಸಮುದ್ರ ಮಧ್ಯದಲ್ಲಿರುವ ಡಿ6 ಬಾವಿಗಳಿಂದ ತೆಗೆಯುವ ಅನಿಲಕ್ಕೆ ಬೆಲೆಯನ್ನು 9.92ಡಾಲರ್/ಪ್ರತಿ ಎಂಬಿಟಿಯುಗೆ ನಿಂದ 12.6ಡಾಲರ್/ಪ್ರತಿ ಎಂಬಿಟಿಯುಗೆ ಹೆಚ್ಚಿಸಿದೆ. ಅನಿಲ ಬೆಲೆ ಏರಿಕೆ 2019ರಿಂದ ಇದು ಮೂರನೆಯದಾಗಿರುತ್ತದೆ. ರುಪಾಯಿ ಬೆಲೆ ಡಾಲರ್ ವಿರುದ್ಧ ಕುಸಿದಂತೆ ಡಾಲರ್ ಪಡೆಯುತ್ತಿರುವ ಕಂಪನಿಯ ಮಾಲೀಕರ ನಗು ಬಾಯಿ ತುಂಬಿ ಹೊರಸೂಸುತ್ತಿದೆ. ಮೋದಿಯವರು ತಮ್ಮ ಆಪ್ತಮಿತ್ರರಿಗೆ ಸಹಾಯ ಮಾಡಲು ಹೇಗೆ ಸರಕಾರದಿಂದ ಅನುವು ಮಾಡಿಕೊಡುತ್ತಿದ್ದಾರೆ ಎಂಬುದು ಬಹುಶಃ ಈಗಲಾದರೂ ತಮಗೆ ಅರ್ಥವಾಗಿರಬಹುದು.

ಜಿ.ಆರ್. ವಿದ್ಯಾರಣ್ಯ

(ಜಿ.ಆರ್ ವಿದ್ಯಾರಣ್ಯರವರು ಸುಮಾರು ಇಪ್ಪತ್ತೈದು ವರ್ಷ ವಾಣಿಜ್ಯ ಹಡಗುಗಳಲ್ಲಿ ಕಮ್ಯುನಿಕೇಷನ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದವರು. ಇದಲ್ಲದೆ ಕಂಪ್ಯೂಟರ್ ನೆಟವರ್ಕ್ ರೇಡಿಯೋ ಸುಪರಿಂಟೆಂಡೆಂಟ್ ಆಗಿ ಅಮೇರಿಕಾ, ಸಿಂಗಾಪುರ್, ಚೈನಾ, ಜಪಾನ್, ದೇಶಗಳಲ್ಲಿ ಕೆಲಸ ಮಾಡಿದ್ದಾರೆ. ನೂರಕ್ಕೂ ಹೆಚ್ಚು ದೇಶಗಳನ್ನು ಸುತ್ತಿ ಬಂದಿರುತ್ತಾರೆ. ಸಾಮಾಜಿಕ ಕಳಕಳಿಯುಳ್ಳ ಅವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಹಂಬಲದಿಂದ 2001 ರಲ್ಲಿ ಮುಂಬಯಿ ಬಿಟ್ಟು, ಮೈಸೂರಿನಲ್ಲಿ ನೆಲೆಸಿ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ)

ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬರೀ ರೈಲು ಬಿಟ್ಟಿದ್ದಾರೆ… ಜನಪರ ಕಾಳಜಿ ಅನ್ನೋ ಪದದಡಿ ಜನರನ್ನು ಹಾದಿತಾಪ್ಪಿಸುವ ಪ್ರಯತ್ನ…

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....