Homeಮುಖಪುಟಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ...

- Advertisement -
- Advertisement -

ಇತ್ತೀಚೆಗೆ “ಪ್ರಾಕೃತಿಕ ಗ್ಯಾಸ್ ಬೆಲೆಯಲ್ಲಿ 40% ಹೆಚ್ಚಳ” ಎಂಬ ಸುದ್ದಿ ನೀವೆಲ್ಲರೂ ದೃಶ್ಯಮಾಧ್ಯಮದಲ್ಲಿ ಕೇಳಿರುತ್ತೀರಿ ಅಥವಾ ವೃತ್ತಪತ್ರಿಕೆಗಳಲ್ಲಿ ಓದಿರುತ್ತೀರಿ. ಗ್ಯಾಸ್ ಬೆಲೆ ಯೂನಿಟ್ಟಿಗೆ 6.10 ಡಾಲರ್ ನಿಂದ 8.57 ಡಾಲರ್ ಆಗಲಿದೆ ಅಂದರೆ ಸುಮಾರು 40% ಹೆಚ್ಚಳ ಆಗಲಿದೆ ಮತ್ತು ಅದರಿಂದ ಸಿ.ಎನ್.ಜಿ. ಮತ್ತು ಪಿ.ಎನ್.ಜಿ. ಗ್ರಾಹಕರಿಗೆ ಅದರ ಬಿಸಿ ತಟ್ಟಲಿದೆ ಎಂಬ ವಿವರ ಸುದ್ದಿಯಲ್ಲಿತ್ತು. ಇದರಲ್ಲಿ ಗಮನಿಸಬೇಕಾದ ವಿಷಯ ಅಥವಾ ಕೇಳಬೇಕಾದ ಪ್ರಶ್ನೆ: ಮೊದಲನೆಯದು, ಭಾರತದಲ್ಲಿ ಇರುವ ತೈಲನಿಕ್ಷೇಪದಿಂದ ಭಾರತದ ಕಂಪನಿಗಳೇ ಉತ್ಪಾದಿಸುತ್ತಿರುವ ಗ್ಯಾಸ್ ಬೆಲೆ “ಡಾಲರ್”ನಲ್ಲಿ ಏಕಿದೆ ಮತ್ತು  ಎರಡನೆಯದು, ಉತ್ಪಾದನಾ ವೆಚ್ಚಕ್ಕಿಂತ ನಾಲ್ಕೈದು ಪಟ್ಟು ಹೆಚ್ಚು ಬೆಲೆಗೆ ಖಾಸಗಿ ಕಂಪನಿಗಳು ಭಾರತದ ಗ್ರಾಹಕರಿಗೆ ಗ್ಯಾಸ್ ಮಾರಾಟ ಮಾಡಲು ಸರಕಾರ ಏಕೆ ಅನುವು ಮಾಡಿಕೊಟ್ಟಿದೆ ಎಂಬುದು. ಗ್ಯಾಸ್ ಉತ್ಪಾದನೆ ಮತ್ತು ಮಾರಾಟವನ್ನು  ಅಂಬಾನಿ ಮತ್ತು ಅದಾನಿ ಅವರಿಗೆ ಗುತ್ತಿಗೆ ನೀಡಿರುವುದರಿಂದ ಎರಡನೆಯ ಪ್ರಶ್ನೆಗೆ ಉತ್ತರ ಸಿಕ್ಕಿದೆ ಎಂದುಕೊಂಡಿದ್ದೇನೆ. ಮೊದಲನೆಯ ಪ್ರಶ್ನೆಯ ಉತ್ತರಕ್ಕೆ ನಂತರ ಬರೋಣ.

ಗೃಹಬಳಕೆಯ 14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ ರೂ.1050 ದಾಟಿದೆ ಮತ್ತು 19ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಸುಮಾರು ರೂ.1900 ಇದೆ. ಅಂದರೆ ಗೃಹಬಳಕೆ ಗ್ಯಾಸ್ ರೂ.75/ಕೆಜಿ ಮತ್ತು ವಾಣಿಜ್ಯ ಗ್ಯಾಸ್ ರೂ.100/ಕೆಜಿ ಎಂದಾಯಿತು. ಗೃಹಬಳಕೆಯ ಸಿಲಿಂಡರ್ ಮೇಲೆ ಸರಕಾರ ಈಗಲೂ ಸಬ್ಸಿಡಿ ನೀಡುತ್ತಿದೆ ಎಂದು ಅವರ ವಾದ. ಆದರೆ ನಿಮ್ಮ ಖಾತೆಗೆ ಯಾವುದೇ ಹಣ ಬರುತ್ತಿಲ್ಲ ಎಂಬುದೂ ಸಹ  ಸತ್ಯ. ಸಿ.ಎನ್.ಜಿ. ಬೆಲೆ ರೂ.86/ಕೆಜಿ ಇದೆ. ಸರಕಾರ ಎಲ್ಲ ರೀತಿಯ ಸಬ್ಸಿಡಿ ನಿಲ್ಲಿಸಬೇಕೆಂದು ಪ್ರಯತ್ನ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಭಾರತದ ಮಹಾನಗರಗಳಲ್ಲಿ ಈಗಾಗಲೇ ಹೆಚ್ಚಿನ ಮನೆಗಳಿಗೆ ಪೈಪ್-ಗ್ಯಾಸ್ (ಪಿ.ಎನ್.ಜಿ.) ಸಂಪರ್ಕ ಬಂದಾಗಿದೆ. ಕರ್ನಾಟಕದಲ್ಲೂ ತುಮಕೂರು, ಮೈಸೂರು ನಗರಗಲ್ಲಿ ಪೈಪ್ ಜೋಡಣೆ ಕಾರ್ಯ ಪ್ರಾರಂಭವಾಗಿದೆ. ಈ ಪೈಪ್ ಡ್ರೀಂ ಮಾರಾಟಗಾರರ ವಾದ ಏನೆಂದರೆ ನಿಮ್ಮ ಗೃಹಬಳಕೆಯ ಸಿಲಿಂಡರ್ ಬೆಲೆಗಿಂತ ಪೈಪ್ ಗ್ಯಾಸ್ ಬೆಲೆ ಸುಮಾರು 20-30% ಕಡಿಮೆ ಆಗುತ್ತದೆ, ನಿಮಗೆ 24 ಗಂಟೆ ಗ್ಯಾಸ್ ಬರುತ್ತದೆ, ಮೀಟರ್ ಪಾರದರ್ಶಕವಾಗಿ ನಿಮ್ಮ ಮುಂದೆ ಕಾಣುವಂತೆ ಇರುತ್ತದೆ ಮತ್ತು ನಿಮ್ಮ ಶಕ್ತ್ಯಾನುಸಾರ ಗ್ಯಾಸ್ ಬಳಕೆ ಮಾಡಬಹುದು ಹಾಗೂ ಮುಖ್ಯವಾಗಿ ಸಿಲಿಂಡರ್ ನಂತೆ ಪೈಪ್ ಬ್ಲಾಸ್ಟ್ ಆಗುವ ಸಂಭವ ತೀರ ಕಡಿಮೆ, ಇತ್ಯಾದಿ ಇತ್ಯಾದಿ.. ಪಿ.ಎನ್.ಜಿ. ಬೆಲೆ ಯೂನಿಟ್ಟಿಗೆ ರೂ.55 ಇದೆ ಅಂದರೆ ಗೃಹಬಳಕೆ ಸಿಲಿಂಡರ್ ಬೆಲೆಗೆ (ರೂ. 75/ಕೆಜಿ) ಹೋಲಿಸಿದರೆ ನಿಮಗೆ 20-30% ಉಳಿತಾಯ ಎಂದು ನಿಮ್ಮನ್ನು ನಂಬಿಸಲು ಮುಂದಾಗಿದ್ದಾರೆ.

ಈಗ ಇತ್ತೀಚಿನ ಪಿ.ಎನ್.ಜಿ. ಬೆಲೆ 40% ಏರಿಕೆ ಬಗ್ಗೆ ಬರೋಣ ಅಂದರೆ. ಈಗಿರುವ ರೂ.55/ಕೆಜಿ ಏನಾಗುತ್ತದೆ? ಅದು ರೂ.77/ಕೆಜಿ ಆಗುತ್ತದೆ. ಅಂದರೆ ಈಗಿರುವ ಗೃಹಬಳಕೆ ಸಿಲಿಂಡರ್ ಸಮಸಮಕ್ಕೆ ಬರುತ್ತದೆ ಅಥವಾ ಇನ್ನೂ ಸ್ವಲ್ಪ ಹೆಚ್ಚು ಅನ್ನಬಹುದು. ಮೇಲೆ ಹೇಳಿದಂತೆ ಗೃಹ ಬಳಕೆ ಸಿಲಿಂಡರ್ ಮಾಯವಾದರೆ ನೀವು ಯಾವುದಕ್ಕೆ ಬೆಲೆ ಹೋಲಿಸುತ್ತೀರಿ, ವಾಣಿಜ್ಯ ಸಿಲಿಂಡರ್ (ರೂ.100/ಕೆಜಿ) ತಾನೇ? ಇನ್ನು ಹೊಸ ಪೈಪ್ ಗ್ಯಾಸ್ ಕನೆಕ್ಷನ್ ತೆಗೆದುಕೊಳ್ಳಲು, ಅದಕ್ಕೆ ನೀಡಬೇಕಾದ ಮುಂಗಡ, ಇನ್ಸ್ಟಲೇಷನ್ ವೆಚ್ಚ, ಸೆಕ್ಯುರಿಟಿ ಡಿಪಾಸಿಟ್, ಎಲ್ಲಾ ಸೇರಿ ಸುಮಾರು ರೂ.6000/-ದಷ್ಟು ಎಲ್ಲಾ ನಿಮ್ಮ ಜೇಬಿನಿಂದ ಹೋಗುತ್ತದೆ. ಗ್ಯಾಸ್ ಸಂಪರ್ಕ ಖಾಸಗಿ ಕಂಪನಿಯಾಗಿರುವುದರಿಂದ ನಿಮಗೆ ಯಾವುದೇ ರೀತಿಯ ಸಬ್ಸಿಡಿ ಇರುವುದಿಲ್ಲ. ಮುಂದೆ ಅವರು ಆಡಿದ್ದೇ ಆಟ. ಈಗಲಾದರೂ ಅರ್ಥವಾಯಿತೇ ಸರಕಾರ ಹೇಗೆ ನಿಮ್ಮ ಕಿವಿಗೆ ಹೂವು ಮುಡಿಸುತ್ತಿದೆ ಎಂದು.

ಇನ್ನು ನಮ್ಮ ಮೊದಲನೆಯ ಪ್ರಶ್ನೆಗೆ ಬರೋಣ. ಗ್ಯಾಸ್ ಉತ್ಪಾದನೆ ದೇಶದ ಕೆ.ಜಿ.ಬೇಸಿನ್ ಹಳೆಯ ಬಾವಿಗಳಿಂದ ಆಗುತ್ತಿದೆ. ಇದರಲ್ಲಿ ಸಿಗುವ ಗ್ಯಾಸ್ ನಮ್ಮ ದೇಶದ ಸೊತ್ತು, ಯಾವುದೇ ವಿದೇಶದಿಂದ ಆಮದು ಮಾಡಿಕೊಂಡಂತಹ ಅನಿಲವಲ್ಲ. ಕೆಜಿ ಬೇಸಿನ್ ಗ್ಯಾಸ್ ಅನ್ವೇಷಣೆಗೆ ಭಾರತ ಸರಕಾರ ರಿಲಯನ್ಸ್ ಕಂಪನಿಗೆ ಗುತ್ತಿಗೆ ನೀಡಿತ್ತು ಅದರ ಖರ್ಚನ್ನು ಭಾರತ ಸರಕಾರ ಭರಿಸಿತ್ತು. ರಿಲಯನ್ಸ್ ಕಂಪನಿ ಈ ಖರ್ಚನ್ನು ಎರಡು ಬಿಲಿಯನ್ ಡಾಲರ್ ಎಂದು ಹೇಳಿತ್ತು. ಆದರೆ ವೆಚ್ಚ ಒಂದು ಬಿಲಿಯನ್ ಡಾಲರ್ ಸಹ ಆಗಲಿಲ್ಲ ಎಂಬುದು ಹಲವು ತೈಲ-ತಜ್ಞರ ವಾದ. ಭಾರತ ಸರಕಾರವಾಗಲೀ, ರಿಲಯನ್ಸ್ ಕಂಪನಿಯಾಗಲೀ ವೆಚ್ಚದ ಸಿ.ಎ.ಜಿ. ಆಡಿಟ್ಟಿಗೆ ಒಪ್ಪಲೇ ಇಲ್ಲ. ಇನ್ನು ತೈಲವನ್ನು ಹೊರಗೆ ಎಳೆಯುವ ವೆಚ್ಚ ಒಂದು ಮಿಲಿಯನ್ ಬ್ರಿಟಿಷ್ ಥರ್ಮಲ್ ಯೂನಿಟ್ಟಿಗೆ ಎರಡು ಡಾಲರ್ ಸಹ ಆಗುವುದಿಲ್ಲ ಎಂಬುದು ತೈಲ-ತಜ್ಞರ ವಾದ. ಆದರೆ ಭಾರತ ಸರಕಾರ ಇದಕ್ಕೆ 6.10 ಡಾಲರ್ ನಿಗದಿ ಮಾಡಿತ್ತು ಮತ್ತು ಇದನ್ನು ಈಗ 8.57 ಡಾಲರ್ ಪ್ರತಿ ಎಂಬಿಟಿಯುಗೆ ಏರಿಸಲಾಗಿದೆ. ಏಕೆಂದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅನಿಲದ ಬೆಲೆ, ಯುಕ್ರೇನ್ ಯುದ್ಧ ಪ್ರಾರಂಭವಾದಾಗ ಇದಕ್ಕಿಂತ ಹೆಚ್ಚಾಗಿತ್ತು. (9.34ಡಾಲರ್/ಪ್ರತಿ ಯೂನಿಟ್ ವರೆಗೂ ಹೋಗಿತ್ತು) ಆದರೆ ಇಂದು ಬೆಲೆ 6.67ಡಾಲರ್/ಪ್ರತಿ ಯೂನಿಟ್ ಇದೆ. ಇಷ್ಟೇ ಅಲ್ಲ ಹಳೆಯ ಬಾವಿಗಳನ್ನು ಬಿಟ್ಟು, ಉತ್ಪಾದನೆ ಸ್ವಲ್ಪ ಕಷ್ಟಕರವಾದ ಸಮುದ್ರ ಮಧ್ಯದಲ್ಲಿರುವ ಡಿ6 ಬಾವಿಗಳಿಂದ ತೆಗೆಯುವ ಅನಿಲಕ್ಕೆ ಬೆಲೆಯನ್ನು 9.92ಡಾಲರ್/ಪ್ರತಿ ಎಂಬಿಟಿಯುಗೆ ನಿಂದ 12.6ಡಾಲರ್/ಪ್ರತಿ ಎಂಬಿಟಿಯುಗೆ ಹೆಚ್ಚಿಸಿದೆ. ಅನಿಲ ಬೆಲೆ ಏರಿಕೆ 2019ರಿಂದ ಇದು ಮೂರನೆಯದಾಗಿರುತ್ತದೆ. ರುಪಾಯಿ ಬೆಲೆ ಡಾಲರ್ ವಿರುದ್ಧ ಕುಸಿದಂತೆ ಡಾಲರ್ ಪಡೆಯುತ್ತಿರುವ ಕಂಪನಿಯ ಮಾಲೀಕರ ನಗು ಬಾಯಿ ತುಂಬಿ ಹೊರಸೂಸುತ್ತಿದೆ. ಮೋದಿಯವರು ತಮ್ಮ ಆಪ್ತಮಿತ್ರರಿಗೆ ಸಹಾಯ ಮಾಡಲು ಹೇಗೆ ಸರಕಾರದಿಂದ ಅನುವು ಮಾಡಿಕೊಡುತ್ತಿದ್ದಾರೆ ಎಂಬುದು ಬಹುಶಃ ಈಗಲಾದರೂ ತಮಗೆ ಅರ್ಥವಾಗಿರಬಹುದು.

ಜಿ.ಆರ್. ವಿದ್ಯಾರಣ್ಯ

(ಜಿ.ಆರ್ ವಿದ್ಯಾರಣ್ಯರವರು ಸುಮಾರು ಇಪ್ಪತ್ತೈದು ವರ್ಷ ವಾಣಿಜ್ಯ ಹಡಗುಗಳಲ್ಲಿ ಕಮ್ಯುನಿಕೇಷನ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದವರು. ಇದಲ್ಲದೆ ಕಂಪ್ಯೂಟರ್ ನೆಟವರ್ಕ್ ರೇಡಿಯೋ ಸುಪರಿಂಟೆಂಡೆಂಟ್ ಆಗಿ ಅಮೇರಿಕಾ, ಸಿಂಗಾಪುರ್, ಚೈನಾ, ಜಪಾನ್, ದೇಶಗಳಲ್ಲಿ ಕೆಲಸ ಮಾಡಿದ್ದಾರೆ. ನೂರಕ್ಕೂ ಹೆಚ್ಚು ದೇಶಗಳನ್ನು ಸುತ್ತಿ ಬಂದಿರುತ್ತಾರೆ. ಸಾಮಾಜಿಕ ಕಳಕಳಿಯುಳ್ಳ ಅವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಹಂಬಲದಿಂದ 2001 ರಲ್ಲಿ ಮುಂಬಯಿ ಬಿಟ್ಟು, ಮೈಸೂರಿನಲ್ಲಿ ನೆಲೆಸಿ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ)

ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬರೀ ರೈಲು ಬಿಟ್ಟಿದ್ದಾರೆ… ಜನಪರ ಕಾಳಜಿ ಅನ್ನೋ ಪದದಡಿ ಜನರನ್ನು ಹಾದಿತಾಪ್ಪಿಸುವ ಪ್ರಯತ್ನ…

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...